Author: AIN Author

ಮಂಡ್ಯ:- ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ-2025 ರ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆಯಲಿದ್ದು, ಅಧಿಕಾರದ ಗದ್ದುಗೆ ‘ಕೈ’ ವಶವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ. https://ainkannada.com/crpf-jawan-fatally-attacked-with-machete/ 11 ನಿರ್ದೇಶಕ ಸ್ಥಾನದಲ್ಲಿ ಈಗಾಗಲೇ 6 ಕೈ ಬೆಂಬಲಿತರು, 2 ಪಕ್ಷೇತರು ಸೇರಿದಂತೆ 5 ಅಧಿಕಾರಿಗಳು ಸೇರಿ ಕೈಗೆ ನಿಚ್ಚಳ ಬಹುಮತ ಸಿಗಲಿದೆ. ಕಾಂಗ್ರೇಸ್ ನಲ್ಲಿ ಇಬ್ಬರ ನಡುವೆ ಅಧ್ಯಕ್ಷಗಾಗಿ ಪೈಪೋಟಿ ನಡೆದಿದ್ದು, ವರಿಷ್ಟರ ಬಳಿ ಲಾಬಿ ಕೂಡ ನಡೆದಿದೆ. ಕೈ ಬೆಂಬಲಿತ ನಿರ್ದೇಶಕರಾದ ಅಪ್ಪಾಜಿ ಗೌಡ ಮತ್ತು ಉಮ್ಮಡಹಳ್ಳಿ ಶಿವಪ್ಪ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಜೆಡಿಎಸ್ ನಲ್ಲಿದ್ದ ಅಪ್ಪಾಜಿಗೌಡ ರನ್ನು ಕಾಂಗ್ರೆಸ್ ಗೆ ಕರೆ ತಂದು ಪಕ್ಷದಲ್ಲಿ ಅಧಿಕಾರ ಕೊಡಿಸುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಅಭಯ ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಪರವಾಗಿ ಕೆಲಸ ಮಾಡಿ ಅವರ ಗೆಲುವಿಗೆ ಅಪ್ಪಾಜಿಗೌಡ ಶ್ರಮ ಪಟ್ಟಿದ್ದಾರೆ. ಈ ಕಾರಣಕ್ಕೆ ಅಪ್ಪಾಜಿಗೌಡಗೆ ಮನ್ಮುಲ್ ಅಧ್ಯಕ್ಷ ಸ್ಥಾನದ ಪಟ್ಟ ಕಟ್ಟಲು…

Read More

ರಾಯಚೂರು:- ಲಿಂಗಸುಗೂರಿನ ಕಸಬಾದಲ್ಲಿ ಸಿಆರ್‌ಪಿಎಫ್ ಯೋಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜರುಗಿದೆ. https://ainkannada.com/heavy-rains-in-bengaluru-till-may-26-red-alert-for-rains-in-these-districts-of-karnataka/ ಸಿಆರ್‌ಪಿಎಫ್ ಎಎಸ್‌ಐ ಚನ್ನಬಸಪ್ಪ ಹಲ್ಲೆಗೊಳಗಾದವ. ದೆಹಲಿಯಿಂದ ಆಸ್ಸಾಂಗೆ ವರ್ಗಾವಣೆಯಾದ ಹಿನ್ನೆಲೆ ರಜೆ ಮೇಲೆ ಊರಿಗೆ ಬಂದಿದ್ದ ಯೋಧನ ಮೇಲೆ ಹಲ್ಲೆ ನಡೆದಿದೆ. ಅಕ್ಕನ ಜಮೀನಿನ ಬದುವಿನ ವಿಚಾರದಲ್ಲಿ ಅಕ್ಕನ ಪರ ನ್ಯಾಯ ಕೇಳಿದ್ದರಿಂದ ಜಗಳವಾಗಿದ್ದು, ಪಕ್ಕದ ಜಮೀನಿನ ಅಮರೇಶ್, ಮಂಜುನಾಥ ಎಂಬುವವರು ಹಲ್ಲೆ ನಡೆಸಿದ್ದಾರೆ. ವಾಕಿಂಗ್ ಮಾಡುತ್ತಿದ್ದಾಗ ಏಕಾಏಕಿ ಬಂದ ಅಮರೇಶ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಚನ್ನಬಸಪ್ಪ ತಪ್ಪಿಸಿಕೊಂಡು ಓಡಿದ್ದು, ಆದರೂ ಬಿಡದೇ ಬೆನ್ನಟ್ಟಿ ಹಲ್ಲೆಗೆ ಮುಂದಾಗಿದ್ದಾರೆ. ಆಗ ಸ್ಥಳೀಯರು ಸಹಾಯಕ್ಕೆ ಮುಂದಾಗಿದ್ದಾರೆ. ಸದ್ಯ ಗಾಯಾಳು ಯೋಧನನ್ನ ಲಿಂಗಸುಗೂರಿನ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಘಟನೆ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು:- ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆಯಾಗುತ್ತಿದೆ. https://ainkannada.com/cm-visits-inspection-to-areas-damaged-by-rain/ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಗದಗ,ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಒಟ್ಟಿನಲ್ಲಿ ಮೇ 26ರವರೆಗೆ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಧಾರವಾಡದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.7 ಡಿಗ್ರಿ…

Read More

ಬೆಂಗಳೂರು, ಮೇ 19: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು  ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಳಿದ್ದು ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ  ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ಕೊಡಲಾಗುವುದು ಎಂದರು. *ಈವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ* ನಗರದಲ್ಲಿ  ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿರುವುದಲ್ಲದೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ. 859.90 ಕಿ. ಮಿ ಉದ್ದದ ರಾಜಕಾಲುವೆಗಳು ಇವೆ. ಇಲ್ಲಿಯವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. 195 ಉದ್ದದಲ್ಲಿ ತಡೆಗೋಡೆ…

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಹಲವು ಪ್ರದೇಶಗಳು ಹಾನಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ ಕೆ ಶಿವಕುಮಾರ್ ಅವರು ಇಂದು ಬಿಬಿಎಂಪಿ ವಾರ್ ರೂಂಗೆ  ಭೇಟಿ ನೀಡಿ ಆಡಳಿತಗಾರ ತುಷಾರ್ ಗಿರಿನಾಥ್ ಅವರಿಂದ ವಿವರ ಮಾಹಿತಿ ಪಡೆದುಕೊಂಡರು. ಅನಂತದ ವರ್ಚ್ಯುವಲ್ ಸಭೆ (VC) ಮೂಲಕ ಸಾಯಿ ಲೇಔಟ್, ಮಾನ್ಯತಾ ಟೆಕ್ ಪಾರ್ಕ್ ಹಾಗೂ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಆಗಿರುವ ಸಮಸ್ಯೆಗಳನ್ನು ವೀಕ್ಷಿಸಿ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳಿಂದ ಮೂಲಕ ಮಾಹಿತಿ ಪಡೆದುಕೊಂಡರು. <span;>* ಮೊದಲಿಗೆ, ಸಾಯಿ ಲೇಔಟ್ ನಲ್ಲಿ ಆಗಿರುವ ಸಮಸ್ಯೆಗಳನ್ನು ಆಲಿಸಿ, ಗೆದ್ದಲಹಳ್ಳಿ ರೈಲ್ವೆ ಸೇತುವೆಯ ಅಗಲೀಕರಣ ಮಾಡಲಾಗುವುದು. ಜೊತೆಗೆ ಸದ್ಯ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು ಎಂದು ಸ್ಥಳೀಯ ನಿವಾಸಿಗಳಿಗೆ ಭರವಸೆ ನೀಡಿದರು. <span;>* ಮಾನ್ಯತಾ ಟೆಕ್ ಪಾರ್ಕ್ ಪ್ರದೇಶದಲ್ಲಿನ ರಾಜಕಾಲುವೆಗೆ ನೇರವಾಗಿ ಸಂಪರ್ಕಿಸುವ ಪ್ರತ್ಯೇಕ ಮತ್ತೊಂದು ರಾಜಕಾಲುವೆಯನ್ನು…

Read More

ಬೆಂಗಳೂರು:- “ಮಳೆ ನೀರಿನಿಂದ ಉಂಟಾಗುವ ಅವಘಡಗಳನ್ನು ತಪ್ಪಿಸಲು ಮೊದಲೇ ಸಜ್ಜಾಗಿದ್ದೆವು. ನಾವು ಶೇ. 70 ರಷ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ. ಈಗಾಗಲೇ ಇಡೀ ಬೆಂಗಳೂರಿನಾದ್ಯಂತ 197 ಕಿಮೀ ಉದ್ದದ ಮಳೆನೀರುಗಾಲುವೆ ನಿರ್ಮಾಣದ ಕೆಲಸ ನಡೆಯುತ್ತಿದೆ.” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. https://ainkannada.com/the-old-man-who-saved-his-life-in-the-shirur-tragedy/ ಬಿಬಿಎಂಪಿ ಮುಖ್ಯ ಕಚೇರಿಯ ವಾರ್ ರೂಮಲ್ಲಿ ಮಾಧ್ಯಮದವರ ಜತೆ ಸೋಮವಾರ ಮಾತನಾಡಿದರು. “ನಾನು ಬೆಂಗಳೂರಿನ ಜವಾಬ್ದಾರಿ ತೆಗೆದುಕೊಂಡ ನಂತರ ಮಳೆ ನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 210 ಪ್ರದೇಶಗಳನ್ನು ಗುರುತಿಸಲಾಯಿತು. 166 ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ ‌ಮಾಡಲಾಗಿದೆ. ಇನ್ನು 44 ಪ್ರದೇಶಗಳಲ್ಲಿ ಕೆಲಸ ಬಾಕಿಯಿದ್ದು ಇದರಲ್ಲಿ 24  ಪ್ರದೇಶಗಳಲ್ಲಿ ಕೆಲಸ ನಡೆಯುತ್ತಿದೆ. ಸಂಚಾರಿ ಪೊಲೀಸರು ಮಳೆ ಬಂದಾಗ ಸಮಸ್ಯೆ ಉಂಟಾಗುವ 132 ಪ್ರದೇಶಗಳನ್ನು ಗುರುತಿಸಿದ್ದಾರೆ. ಇದರಲ್ಲಿ ಏಪ್ರಿಲ್ ವೇಳೆಗೆ 82 ಪ್ರದೇಶಗಳಲ್ಲಿ ಸಮಸ್ಯೆ ನಿವಾರಣೆ ಮಾಡಿದ್ದೇವೆ. 41 ಕೆಲಸಗಳು ಬಾಕಿ ಉಳಿದಿವೆ. ಮಳೆನೀರುಗಾಲುವೆಗೆ ಎಂದೇ 2 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ” ಎಂದು ಹೇಳಿದರು. “ಮಳೆ ಎಂಬುದು…

Read More

ಕಾರವಾರ:- ಸಿಡಿಲು ಬಡಿದು 65 ವರ್ಷಸ ವೃದ್ಧಿ ದುರ್ಮರಣ ಹೊಂದಿರುವ ಘಟನೆ ಉತ್ತರ ಕನ್ನಡದ ಅಂಕೋಲ ತಾಲೂಕಿನ ಉಳವರೆಯಲ್ಲಿ ಜರುಗಿದೆ. https://ainkannada.com/hit-and-run-bike-rider-deaths-on-the-spot/ ತಮ್ಮಣ್ಣಿ ಅನಂತ ಗೌಡ ಮೃತ ವೃದ್ಧ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಂಕೋಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ. ಶವವನ್ನು ಅಂಕೋಲ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Read More

ನೆಲಮಂಗಲ:- ಹಿಟ್ ಆ್ಯಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನೆಲಮಂಗಲದ ಬಿನ್ನಮಂಗಲ ಟೋಲ್ ಬಳಿ ನಡೆದಿದೆ. https://ainkannada.com/hyderabads-great-victory-lucknow-out-of-the-playoffs/ ಟಿಟಿ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಟಿಟಿ ವಾಹನ ಚಾಲಕ ಡಿಕ್ಕಿ ಹೊಡೆದು ಹಾಗೆಯೇ ಎಸ್ಕೇಪ್ ಆಗಿದ್ದಾನೆಂದು ಮಾಹಿತಿ ಲಭ್ಯವಾಗಿದೆ. ಸದ್ಯ ಘಟನೆ ಸಂಬಂಧ ನೆಲಮಂಗಲ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Read More

ಲಕ್ನೋ ಸೂಪರ್‌ ಜೈಂಟ್ಸ್‌ 18ನೇ ಆವೃತ್ತಿಯ ಐಪಿಎಲ್‌ನ ಪ್ಲೇ ಆಫ್‌ರೇಸ್‌ನಿಂದಲೇ ಹೊರಬಿದ್ದಿದೆ. ಅಭಿಷೇಕ್‌ ಶರ್ಮಾ ಸ್ಫೋಟಕ ಅರ್ಧಶತಕದ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ ಏಕನಾ ಕ್ರೀಡಾಂಗಣದಲ್ಲಿ 200+ ರನ್‌ ಚೇಸಿಂಗ್‌ ಮಾಡಿ ಐತಿಹಾಸಿಕ ಗೆಲುವು ದಾಖಲಿಸಿದೆ. https://ainkannada.com/disruption-and-delay-in-the-sale-of-this-pile-of-property-the-future-of-tuesday-is-20-may-2025/ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರಂಭಿಕ ಆಟಗಾರರ ಉತ್ತಮ ಪ್ರದರ್ಶನದ ನೆರವಿನಿಂದ 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು. 206 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್‌ 18.2 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 2೦6 ರನ್‌ ಗಳಿಸಿ ಗೆಲುವು ಸಾಧಿಸಿತು.‌ ಸನ್‌ ರೈಸರ್ಸ್ ಪರ ಅಭಿಷೇಕ್‌ ಶರ್ಮಾ 20 ಎಸೆತಗಳಲ್ಲಿ 6 ಸಿಕ್ಸರ್‌, 4 ಬೌಂಡರಿ ನೆರವಿಂದ 59 ರನ್‌, ಇಶನ್‌ ಕಿಶನ್‌ 28 ಎಸೆತಗಳಲ್ಲಿ 35 ರನ್, ಹೆನ್ರಿಕ್ ಕ್ಲಾಸೆನ್ 28 ಎಸೆತಗಳಲ್ಲಿ 47…

Read More

ಸೂರ್ಯೋದಯ – 5:46 ಬೆ. ಸೂರ್ಯಾಸ್ತ – 6:39ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಸಪ್ತಮಿ ನಕ್ಷತ್ರ – ಧನಿಷ್ಥೆ ಯೋಗ – ಐಂದ್ರ ಕರಣ – ಬವ 5:51 ಮಳೆ ನಕ್ಷತ್ರ :ಕೃತಿಕ ರಾಹು ಕಾಲ – 03:00 ದಿಂದ 04:30 ವರೆಗೆ ಯಮಗಂಡ -09:00 ದಿಂದ 10:30 ವರೆಗೆ ಗುಳಿಕ ಕಾಲ – 10:30 ದಿಂದ 12:00 ವರೆಗೆ ಬ್ರಹ್ಮ ಮುಹೂರ್ತ – 4:10 ಬೆ. ದಿಂದ 4:58 ಬೆ.ವರೆಗೆ ಅಮೃತ ಕಾಲ – 9:15ಬೆ. ದಿಂದ 10:52 ಬೆ. ವರೆಗೆ ಅಭಿಜಿತ್ ಮುಹುರ್ತ – 11:47ಬೆ. ದಿಂದ 12:38 ಮ.ವರೆಗೆ ಮೇಷ ರಾಶಿ: ಜೂಜಾಟದಲ್ಲಿ ಧನ ಲಾಭ,ಇಂದು ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ, ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುವಿರಿ, ನಿಮ್ಮ ಪ್ರಿಯತಮೆ ಜೊತೆ ವಾದಗಳಿಗೆ ಕಾರಣರಾಗುವಿರಿ, ವಿವದಾತ್ಮಕ…

Read More