Author: AIN Author

ಕಿಡ್ನಿ ಸ್ಟೋನ್‌ ಅಥವಾ ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆ ಹೊಂದಿರುವ ಜನರ ಸಂಖ್ಯೆ ದೊಡ್ಡದಿದೆ. ಇದಕ್ಕೆ ನೀರಿನ ಕೊರತೆಯಿಂದಾಗುವ ನಿರ್ಜಲೀಕರಣ ಪ್ರಮುಖ ಕಾರಣ ಎಂದು ಹೇಳಲಾಗುತ್ತದೆ. ದೇಹಕ್ಕೆ ಸೂಕ್ತ ಪ್ರಮಾಣದಲ್ಲಿ ದ್ರವ ರೂಪದ ಆಹಾರ ಸಿಗದಿದ್ದಾಗ ವ್ಯಕ್ತಿಯು ನಿರ್ಜಲೀಕರಣಕ್ಕೊಳಗಾಗುತ್ತಾನೆ. ಆಗ ದೇಹದ ನಿಯಮಿತ ಚಟುವಟಿಕೆಗಳನ್ನು ನಿರ್ವಹಿಸಲು ಅಗತ್ಯ ಪ್ರಮಾಣದ ದ್ರವ ಸಿಗುವುದಿಲ್ಲ. ಈ ದ್ರವದ ಕೊರತೆಯಿಂದಾಗಿ ಮೂತ್ರಪಿಂಡದಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು. ಮೂತ್ರಪಿಂಡಕ್ಕೆ ರಕ್ತದ ಹರಿವು ಕಡಿಮೆಯಾಗುವುದು, ಮೂತ್ರಪಿಂಡದ ಕಲ್ಲಿನ ಅಪಾಯ, ಮೂತ್ರಪಿಂಡದ ಗಾಯ ಸೇರಿದಂತೆ ಬೇರೆ ಬೇರೆ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಯೂರಿಕ್ ಆಸಿಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ದೇಹದಲ್ಲಿ ಪ್ಯೂರಿನ್ ಎಂಬ ವಸ್ತುವು ವಿಭಜನೆಯಾದಾಗ ಇದು ರೂಪುಗೊಳ್ಳುತ್ತದೆ. ಈ ವಸ್ತುವು ರಕ್ತದ ಜೊತೆಗೆ ಮೂತ್ರಪಿಂಡಗಳನ್ನು ತಲುಪುತ್ತದೆ. ಇದು ಸಾಮಾನ್ಯವಾಗಿ ಮೂತ್ರದ ಮೂಲಕ ಹೊರಹಾಕಲ್ಪಡುತ್ತದೆ. ಆದರೆ ಅದು ದೇಹದಿಂದ ಸಂಪೂರ್ಣವಾಗಿ ಹೊರಹಾಕಲ್ಪಡದಿದ್ದರೆ, ಕಿಡ್ನಿ ಸ್ಟೋನ್‌ ಸಮಸ್ಯೆಗೆ ಕಾರಣವಾಗಬಹುದು. ಯೂರಿಕ್ ಆಮ್ಲದ ಮಟ್ಟ ಹೆಚ್ಚಾದಾಗ ದೇಹದ ಕೀಲುಗಳಲ್ಲಿ ನೋವು…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದ ಸಿಟಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಒಂದೆಡೆ ಮಹಾಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿ ಹೋದ್ರೆ, ಈ ನಡುವೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಾಧನಾ ಸಮಾವೇಶದ ಸಿದ್ಧತೆಯಲ್ಲಿದ್ದಾರೆ. ಈ ಬಗ್ಗೆ ಪರಿಷತ್ ಶಾಸಕ ಟಿಎ ಶರವಣ ಅವರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. https://ainkannada.com/are-you-worried-that-you-are-too-fat-then-boil-this-leaf-in-water-results-in-a-week/ ಈ ಸಂಬಂಧ ಮಾತನಾಡಿದ ಟಿಎ ಶರವಣ ಅವರು, ಮಹಾಮಳೆಯಿಂದ ರಾಜಧಾನಿ ಬೆಂಗಳೂರು ತತ್ತರಿಸಿ, ಗ್ರೇಟರ್ ಬೆಂಗಳೂರು ಕಲ್ಪನೆಯೇ ಕೊಚ್ಚಿ ಹೋಗುವಂತಹ ಸ್ಥಿತಿಯ ನಡುವೆ ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ ಕೆ ಶಿವಕುಮಾರ್ ನೀರೋ ದೊರೆಯಂತೆ ಸಾಧನಾ ಸಮಾವೇಶದ ಸಿದ್ಧತೆಯಲ್ಲಿ ಇರುವುದು ಮಾನವೀಯತೆಯ ಲಕ್ಷಣ ಎಂದು ವಿಧಾನಪರಿಷತ್ ಹಿರಿಯ ಸದಸ್ಯ ಮತ್ತು ಜೆಡಿಎಸ್ ಹಿರಿಯ ನಾಯಕ ಟಿ. ಎ.ಶರವಣ ಟೀಕಿಸಿದ್ದಾರೆ. ಬೆಂಗಳೂರಲ್ಲಿ ಮಹಾಮಳೆಗೆ ಅಮಾಯಕರ ಪ್ರಾಣಗಳೇ ಕೊಚ್ಚಿ ಹೋಗಿದ್ದು, ಅವುಗಳಿಗೆ ಬೆಲೆಯೇ ಇಲ್ಲದೆ…

Read More

ಅಧಿಕ ಆಹಾರ ಸೇವಿಸಿದ ನಂತರವೂ ತೂಕ ಹೆಚ್ಚಾಗುತ್ತಿಲ್ವಾ? ದೇಹಕ್ಕೆ ಶಕ್ತಿ ದೊರೆಯುತ್ತಿಲ್ವಾ? ಹಾಗಾದ್ರೆ ನೀವು ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕು. ನಿಮ್ಮ ದೇಹಕ್ಕೆ ಮಾಂಸವನ್ನು ಸೇರಿಸಲು, ನಿಮ್ಮ ದೇಹಕ್ಕೆ ಪ್ರೋಟೀನ್ ನಿಂದ ಸಮೃದ್ಧವಾಗಿರುವ ಆಹಾರದ ಅಗತ್ಯವಿದೆ. https://ainkannada.com/ipl-kannadigas-kl-rahul-confirmed-for-t20-team/ ತೂಕ ಹೆಚ್ಚಾಗುವುದು ಇಂದು ಹಲವಾರು ಜನರನ್ನು ಕಾಡುತ್ತಿರುವ ಒಂದು ಸಮಸ್ಯೆಯಾಗಿದೆ. ಬೊಜ್ಜು ಸಮಸ್ಯೆ ಎಲ್ಲರಿಗೂ ಕಾಡುತ್ತಿದೆ. ಇದರಿಂದಾಗಿ ಜನರು ಮುಜುಗರವನ್ನು ಎದುರಿಸಬೇಕಾಗುತ್ತದೆ. ನೀವು ಸಹ ಬೊಜ್ಜು ಸಮಸ್ಯೆಯಿಂದ ತೊಂದರೆಗೊಳಗಾಗಿದ್ದರೆ ಚಿಂತಿಸಬೇಕಾಗಿಲ್ಲ. ನೀವು ಪುದೀನ ಚಹಾವನ್ನು ಸೇವಿಸಬಹುದು. ಇದು ಅನೇಕ ರೀತಿಯ ಸಮಸ್ಯೆಗಳಿಂದ ನಿಮ್ಮನ್ನು ಮುಕ್ತಗೊಳಿಸಲು ಕೆಲಸ ಮಾಡುವ ಅಂಶಗಳನ್ನು ಒಳಗೊಂಡಿದೆ. ಹೆಚ್ಚುತ್ತಿರುವ ತೂಕವನ್ನು ಪುದೀನಾ ಸಹಾಯದಿಂದ ನೀವು ಹೇಗೆ ನಿಯಂತ್ರಿಸಬಹುದು ಮತ್ತು ಪುದೀನ ಚಹಾದ ಪ್ರಯೋಜನಗಳೇನು ಎಂದು ಇಲ್ಲಿ ತಿಳಿಯೋಣ. ತೂಕ ಕಡಿಮೆಯಾಗುತ್ತದೆ – ಅರಿಶಿನ-ಪುದೀನ ಚಹಾ ಕುಡಿಯುವುದರಿಂದ ತೂಕ ಕಡಿಮೆಯಾಗುತ್ತದೆ. ಅರಿಶಿನ ಮತ್ತು ಪುದೀನ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲವಾಗಿಡಲು ಸಹ ಸಹಾಯ…

Read More

ಟಿ20 ಮಾದರಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ರಾಹುಲ್ ಮತ್ತೊಮ್ಮೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳುವ ಸಮಯ ಸನಿಹವಾಗಿದೆ. https://ainkannada.com/bidadi-divyang-girls-death-case-sp-reveals-explosive-information/ ಕೆಎಲ್ ರಾಹುಲ್ ಐಪಿಎಲ್ 2025 ರಲ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೀಗಾಗಿ ಅವರನ್ನು ಬಾಂಗ್ಲಾದೇಶ ಪ್ರವಾಸಕ್ಕೆ ತಂಡದಲ್ಲಿ ಆಯ್ಕೆ ಮಾಡಬಹುದು. ವಾಸ್ತವವಾಗಿ, ಟೀಂ ಇಂಡಿಯಾ ಆಗಸ್ಟ್‌ನಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಏಕದಿನ ಮತ್ತು ಟಿ20 ಸರಣಿಗಳು ನಡೆಯಲಿವೆ. ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ರಾಹುಲ್ ತಂಡಕ್ಕೆ ಆಯ್ಕೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಆಯ್ಕೆ ಮಂಡಳಿ ಕೂಡ ರಾಹುಲ್ ಮೇಲೆ ಒಲವು ತೋರಿಸಿದೆ ಎಂದು ವರದಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಟಿ20 ಕ್ರಿಕೆಟ್‌ನಲ್ಲಿ ರಾಹುಲ್ ತಮ್ಮ ಸ್ಟ್ರೈಕ್ ರೇಟ್‌ನಿಂದಾಗಿ ಟೀಕೆಗಳನ್ನು ಎದುರಿಸಿದ್ದರು. ಆದರೆ ಐಪಿಎಲ್ 2025 ರಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡುತ್ತಿರುವ ರಾಹುಲ್ ಅವರ ಸ್ಟ್ರೈಕ್ ರೇಟ್‌ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಸ್ತುತ ಐಪಿಎಲ್​ನಲ್ಲಿ ಅವರು ಇಲ್ಲಿಯವರೆಗೆ 11 ಪಂದ್ಯಗಳನ್ನು ಆಡಿದ್ದು 61.62…

Read More

ರಾಮನಗರ:- ಬಿಡದಿ ದಿವ್ಯಾಂಗ ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/did-we-say-we-would-give-grihalakshmi-money-every-month-dkshi-spoke-the-opposite/ ಈ ಸಂಬಂಧ ನಗರದಲ್ಲಿ ಲ ಮಾತನಾಡಿದ ಅವರು, ಬಾಲಕಿ ಸಾವಿನ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗಿದೆ. ಹೆಡ್ ಇಂಜೂರಿಯಿಂದ ಮೃತಪಟ್ಟಿರುವುದಾಗಿ ವರದಿಯಲ್ಲಿ ಉಲ್ಲೇಖವಾಗದೆ. ಎಫ್‌ಎಸ್‌ಎಲ್‌, ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ರೈಲ್ವೆ ಇಲಾಖೆಯ ಸಿಸಿ ಕ್ಯಾಮರಾದ ವಿಡಿಯೋ ಪಡೆದುಕೊಂಡಿದ್ದೇವೆ. ಎರಡು ಸಿಸಿ ಕ್ಯಾಮರಾದಲ್ಲಿ ಬಾಲಕಿಯ ಚಲನವಲನ ಕಂಡು ಬಂದಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಿದಾಗ ರೈಲ್ವೆ ಅಪಘಾತ ಎಂಬುದು ಕಂಡುಬಂದಿದೆ. 6 ಗಂಟೆ 7 ನಿಮಿಷದಿಂದ 6 ಗಂಟೆ 8 ನಿಮಿಷದ ಮಧ್ಯೆ ಘಟನೆ ನಡೆದಿದೆ ಎಂದು ಮಾಹಿತಿ ನೀಡಿದರು. ರೈಲ್ವೆ ಇಲಾಖೆಯ ಸಿಸಿ ಕ್ಯಾಮರಾದ ಕಂಪ್ಲೀಟ್ ಬ್ಯಾಕಪ್‌ ಸಹ ಪಡೆದಿದ್ದೇವೆ. ರೈಲಿನಲ್ಲೂ ಪರಿಶೀಲನೆ ಮಾಡಿ ಸ್ಯಾಂಪಲ್ಸ್‌ ಸಂಗ್ರಹಿಸಿದ್ದೇವೆ, FSLಗೆ ಕಳಿಸುತ್ತೇವೆ. ವರದಿ ಬರುವ ಮುನ್ನ ಸೋಶಿಯಲ್ ಮೀಡಿಯಾಗಳಲ್ಲಿ ತಪ್ಪು ಮಾಹಿತಿ ಹರಡಿದ್ರು. ಇದೆಲ್ಲವೂ ಸುಳ್ಳು, ಇನ್ನಷ್ಟು ಅನುಮಾನಗಳ…

Read More

ವಿಜಯನಗರ:- 2023ರ ವಿಧಾನಸಭಾ ಚುನಾವಣೆ ಮುನ್ನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಹೆಸರೇಳಿ ಅಧಿಕಾರಕ್ಕೆ ಬಂದಿತ್ತು. ಆ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದು. ಆದರೆ ಕಳೆದ ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ದುಡ್ಡು ಬಂದಿಲ್ಲ. ಇದಕ್ಕೆ ಮಹಿಳೆಯರು ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ. https://ainkannada.com/rain-havoc-bangalore-is-embarrassing-itself-internationally-city-ravi/ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಡಿಕೆಶಿ, ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್‌ ಕಟ್ಟುತ್ತಾ ಇರಬೇಕು.. ನಾವು ದುಡ್ಡು ಕೊಡ್ತಾ ಇರಬೇಕು. ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆನೇ ಹಣ ಬಂದುಬಿಡುತ್ತಾ? 2, 3, 5 ವರ್ಷ ಆಗುತ್ತೆ ಅಲ್ವಾ.. ಅದೇ ರೀತಿ ಇದೂ ಕೂಡ ಬಂದಾಗ ಬರುತ್ತೆ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್‌ ಅವರ ಗೃಹಲಕ್ಷ್ಮಿ ಯೋಜನೆ ಬಗೆಗಿನ ಹೇಳಿಕೆಯ ಬಗ್ಗೆ ಜೆಡಿಎಸ್‌ ಕಿಡಿಕಾರಿದೆ. ಯೋಜನೆ ಆರಂಭದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರತಿ ತಿಂಗಳು ಹಣ ಖಾತೆಗೆ ಜಮೆಯಾಗುತ್ತದೆ ಎಂದು ಹೇಳಿರುವ ವಿಡಿಯೋ ಹಂಚಿಕೊಂಡು…

Read More

ಬೆಂಗಳೂರು:- ನಗರದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ಇದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ತಲೆತಗ್ಗಿಸುವ ವಿಚಾರ ಎಂದಿದ್ದಾರೆ. https://ainkannada.com/do-your-eyes-water-while-cutting-onions-if-so-follow-these-tricks/ ರಾಜ್ಯ-ದೇಶದ ಬೊಕ್ಕಸಕ್ಕೆ ಬೆಂಗಳೂರಿಗರಿಂದ ದೊಡ್ಡ ಪ್ರಮಾಣದ ಹಣ ಬರುತ್ತದೆ. ಆದರೆ, ಬೆಂಗಳೂರಿಗರ ಬದುಕನ್ನ ನಾವು ಮುಳುಗಿಸುತ್ತಿದ್ದೇವೆ. ಕೆಂಪೇಗೌಡರ ಕಾಲ ಹಾಗೂ ಮದ್ಯದಲ್ಲಿ ಪ್ಲ್ಯಾನಡ್ ಬೆಂಗಳೂರು ಇತ್ತು. ಈಗ ಅನ್ ಪ್ಲ್ಯಾನಡ್ ಬೆಂಗಳೂರಾಗಿದೆ ಎಂದು ಕಿಡಿಕಾರಿದ್ದಾರೆ. ಕಂದಾಯ ನಿವೇಶನ, ಲೂಟಿ ಹೊಡೆಯಲು ರಾಜಕಾಲುವೆ, ಕೆರೆಗಳನ್ನೇ ನುಂಗಿರೋದು, ರಾಜಕಾಲುವೆ ಒತ್ತುವರಿ ಕೂಡ ದಂಧೆಯಾಗಿದೆ. ಇದೇನಾ ಬ್ರಾಂಡ್ ಬೆಂಗಳೂರು? ಪ್ರತಿವರ್ಷ ಸಾವಿರಾರು ಕೋಟಿ ರೂ. ಹಣ ಹಾಕ್ತೀವಿ, ಈ ಹಣ ಎಲ್ಲಿ ಹೋಗ್ತಿದೆ? ಎಂದು ಪ್ರಶ್ನಿಸಿದ್ದಾರೆ.

Read More

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯ ಅಡುಗೆ ಮನೆಯಲ್ಲಿ ಈರುಳ್ಳಿ ಇದ್ದೇ ಇರುತ್ತೆ. ಈರುಳ್ಳಿ ಇಲ್ಲದೆ ಯಾವುದೇ ಅಡುಗೆ ಪೂರ್ಣಗೊಳ್ಳುವುದಿಲ್ಲ. ಬಹಳಷ್ಟು ಜನರು ಈ ತರಕಾರಿಯನ್ನು ಹಸಿಯಾಗಿ ತಿನ್ನುತ್ತಾರೆ. ಇತರರು ಇದನ್ನು ಸಲಾಡ್‌ಗಳಲ್ಲಿ ಬೆರೆಸಿ ಸೇವಿಸಲು ಇಷ್ಟಪಡುತ್ತಾರೆ. ಈರುಳ್ಳಿ ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ ಅಂತ ಈಗಾಗಲೇ ನಿಮಗೆ ತಿಳಿದಿದೆ. https://ainkannada.com/heavy-rains-in-karnataka-next-week-yellow-alert-issued-for-bengaluru/ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಲು ಈರುಳ್ಳಿಯ ಒಳಗಿರುವ ಕಿಣ್ವಗಳೇ ಕಾರಣ. ಈರುಳ್ಳಿಯನ್ನು ಕತ್ತರಿಸಿದಾಗ, ಅದರೊಳಗೆ ಇರುವ ಈ ಅನಿಲಗಳಲ್ಲಿ ಒಂದು ಹೊರಬರುತ್ತದೆ. ಇದರಿಂದ ಇದನ್ನು ಸೈ ಪ್ರೊಪನೆಥಿಯಲ್ ಆಕ್ಸೈಡ್ ಎಂದು ಕರೆಯಲಾಗುತ್ತದೆ. ಇದು ಮೂಗಿನ ಮೂಲಕ ಕಣ್ಣುಗಳ ಪೊರೆಯನ್ನು ಕೆರಳಿಸುತ್ತದೆ ಮತ್ತು ಕಣ್ಣುಗಳಿಂದ ಕಣ್ಣೀರು ಬರುತ್ತದೆ. ಈರುಳ್ಳಿ ಸಿಪ್ಪೆ ತೆಗೆದ ನಂತರ ಅದನ್ನು ಮಧ್ಯದಿಂದ ಎರಡು ತುಂಡುಗಳಾಗಿ ಕತ್ತರಿಸಿ. ನಂತರ ಅದನ್ನು ನೀರಿನಲ್ಲಿ ಹಾಕಿ ಸ್ವಲ್ಪ ಹೊತ್ತು ಇಡಿ. ನೀವು ಕನಿಷ್ಟ 15 ರಿಂದ 20 ನಿಮಿಷಗಳ ಕಾಲ ನೀರಿನಲ್ಲಿ ಬಿಡಿ. ನೀವು ಈ ನೀರಿಗೆ ಬಿಳಿ ವಿನೆಗರ್ ಅನ್ನು…

Read More

ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ ವಾರ ಭಾರೀ ಮಳೆ ಆಗಲಿದ್ದು, ರಾಜಧಾನಿ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. https://ainkannada.com/annigeri-town-municipality-a-blow-to-congress-independent-candidates-elected-as-president-and-vice-president/ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸೋಮವಾರ ಮತ್ತು ಮಂಗಳವಾರ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನ ರೆಡ್ ಅಲರ್ಟ್, ನಂತರದ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More

ಧಾರವಾಡ:- ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 2ನೇ ಅವಧಿಗೆ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಈ ಮೂಲಕ ಅಧಿಕಾರದ ಆಸೆಯಲ್ಲಿದ್ದ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ. https://ainkannada.com/state-congress-government-to-provide-land-guarantee-to-people-dcm-d-k-shivakumar-2/ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲು ಇದ್ದ ಹಿನ್ನೆಲೆ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೆಚ್ಚು ಪೈಪೋಟಿ ನೀಡಿತಾದರೂ ಪ್ರಯೋಜನವಾಗಲಿಲ್ಲ. ಕ್ರಮೇಣ ಪಕ್ಷೇತರ ಅಭ್ಯರ್ಥಿ ನಾಗಪ್ಪ ದಳವಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 23ಜನ ಸದಸ್ಯರಿರುವ ಪುರಸಭೆ ಇದಾಗಿದ್ದು 12ಜನ ಕಾಂಗ್ರೆಸ್, 5ಜನ ಬಿಜೆಪಿ ಹಾಗೂ 6ಜನ ಪಕ್ಷೇತರ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅಲ್ಲದೇ ಕಾಂಗ್ರೆಸ್ ಸದಸ್ಯರನ್ನ ಉಪಾಧ್ಯಕ್ಷ ಮಾಡುವ ಉತ್ಸಾಹಕ್ಕೆ ಸ್ಥಳೀಯ ಸದಸ್ಯರು ಬ್ರೇಕ್ ಹಾಕಿದರು. ಒಟ್ಟಾರೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಚುನಾವಣೆ ನಡೆದಿದ್ದು, ಪಕ್ಷೇತರ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಅಧಿಕಾರದ ಗದ್ದುಗೆ ಏರಿದ್ದಾರೆ.

Read More