ಹೊಸಪೇಟೆ, ಮೇ 19: “ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ ಯೋಜನೆ ಮೂಲಕ 1 ಕೋಟಿಗೂ ಹೆಚ್ಚು ಜನರಿಗೆ ಭೂ ದಾಖಲಾತಿ ಪತ್ರ ನೀಡಿ ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. https://ainkannada.com/do-you-know-how-many-benefits-eating-soaked-almonds-has-for-your-skin/ ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ನಡೆಯಲಿರುವ ಸಾಧನೆ ಸಮಾವೇಶದ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು. “ನೂರು ವರ್ಷಗಳಲ್ಲಿ ಮಾಡಲಾಗದ ಕೆಲಸವನ್ನು ನಮ್ಮ ಸರ್ಕಾರ ಕಂದಾಯ ಇಲಾಖೆ ಮೂಲಕ ಮಾಡಿ, ಹೊಸ ಇತಿಹಾಸ ಬರೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಲೋಪದೋಷಗಳಿವೆಯೇ ಇಲ್ಲವೇ ಎಂದು ಅಧಿಕಾರಿಗಳ ಜತೆ ಭಾನುವಾರ ನಡೆಸಿದ ಸಭೆಯಲ್ಲಿ ಪರಿಶೀಲನೆ ಮಾಡಲಾಗಿದೆ. ಕಂದಾಯ ಇಲಾಖೆಯ ಮೂಲಕ ನೀಡುತ್ತಿರುವ ಈ ಭೂ ಗ್ಯಾರಂಟಿ ಇತಿಹಾಸದ ಪುಟ ಸೇರಲಿದೆ. ಪ್ರತಿಯೊಬ್ಬ ವ್ಯಕ್ತಿಗೂ ತಾನು ವಾಸವಿರುವ ಜಾಗವನ್ನು ತನ್ನದಾಗಿಸಿಕೊಳ್ಳುವ ಆಸೆ ಇರುತ್ತದೆ.…
Author: AIN Author
ಆರೋಗ್ಯಕಾರಿ ತೂಕದ ವಿಚಾರಕ್ಕೆ ಬಂದರೆ ಆಗ ಅದರಲ್ಲಿ ಬಾದಾಮಿಯು ಪ್ರಮುಖ ಸ್ಥಾನ ಪಡೆಯುವುದು ಎನ್ನುವುದರಲ್ಲಿ ಸಂಶಯವೇ ಇಲ್ಲ. ಯಾಕೆಂದರೆ ಇದರಲ್ಲಿ ಹಲವಾರು ಬಗೆಯ ಪೋಷಕಾಂಶಗಳಿದ್ದು, ಆರೋಗ್ಯವನ್ನು ರಕ್ಷಿಸಲು ಸಹಕಾರಿ ಆಗಿದೆ. ಹೀಗಾಗಿ ನಿತ್ಯವೂ ಬೆಳಗ್ಗೆ ಮೂರು ಬಾದಾಮಿ ತಿಂದರೆ ಅದರಿಂದ ಹಲವಾರು ರೀತಿಯ ಆರೋಗ್ಯ ಲಾಭಗಳು ದೇಹಕ್ಕೆ ಸಿಗುವುದು. ಮೂರು ಬಾದಾಮಿ ನಿತ್ಯವೂ ಸೇವನೆ ಮಾಡಿದರೆ ಆಗ ದೇಹಕ್ಕೆ ಯಾವೆಲ್ಲಾ ಲಾಭಗಳು ಸಿಗುವುದು ಎಂದು ನಾವು ನಿಮಗೆ ತಿಳಿಯದೆ ಇರುವ ವಿಚಾರಗಳನ್ನು ತಿಳಿಸಿಕೊಡಲಿದ್ದೇವೆ. https://ainkannada.com/house-wall-collapses-due-to-rain-4-people-survive-by-a-hairs-breadth/ ಬಾದಾಮಿ ಪೋಷಕಾಂಶವುಳ್ಳ ಪದಾರ್ಥ. ಬಾದಾಮಿಯಿಂದ ನಮ್ಮ ಚರ್ಮಕ್ಕೆ ಹಲವು ಪ್ರಯೋಜನಕಾರಿ ಅಂಶಗಳಿವೆ. ಇದರಲ್ಲಿರು ವಿಟಮಿನ್ ಇ, ಆಂಟಿಆಕ್ಸಿಡೆಂಟ್ಸ್, ಆರೋಗ್ಯಕರ ಕೊಬ್ಬು ನಿಮ್ಮ ಚರ್ಮವನ್ನು ಕಾಪಾಡುವಲ್ಲಿ ಸಹಾಯ ಮಾಡುತ್ತದೆ. ಬಾದಾಮಿ ಚರ್ಮವನ್ನು ತೇವಗೊಳಿಸಲು ಮತ್ತು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ, ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ ಮತ್ತು ಆಕ್ಸಿಡೇಟಿವ್ ಹಾನಿಯಿಂದ ರಕ್ಷಿಸುತ್ತದೆ. ಬಾದಾಮಿಯನ್ನು ಹಾಗೇ ತಿನ್ನುವುದಕ್ಕಿಂತ ನೆನೆಸಿಟ್ಟು ತಿನ್ನುವುದರಿಂದ ಅತ್ಯುತ್ತಮ ಪ್ರಯೋಜನಗಳನ್ನು ಪಡೆಯಬಹುದು. ನೆನೆಸಿದ ಬಾದಾಮಿ ಸೇವಿಸಿದರೆ ಅದರಲ್ಲಿರುವಪೋಷಕಾಂಶಭರಿತ…
2025ರ ಐಪಿಎಲ್ ನಲ್ಲಿ ಕನ್ನಡಿಗ KL ರಾಹುಲ್ ಅವರು ಹೊಸ ದಾಖಲೆ ನಿರ್ಮಿಸಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಹುಲ್ ಆಕರ್ಷಕ ಶತಕ ಬಾರಿಸಿದ್ದರು. https://ainkannada.com/attur-vishwanath-temple-in-yelahanka-is-inundated-with-water-the-temple-is-half-submerged-in-water/ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ಆರ್ 65 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ ಅಜೇಯ 112 ರನ್ ಬಾರಿಸಿದರು. ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೂರು ತಂಡಗಳ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯೊಂದು ಕನ್ನಡಿಗನ ಪಾಲಾಗಿದೆ. ಅಂದರೆ ಐಪಿಎಲ್ನಲ್ಲಿ ಮೂರು ತಂಡಗಳ ಪರ ಕಣಕ್ಕಿಳಿದು ಶತಕ ಸಿಡಿಸಿರುವುದು ಕೆಎಲ್ ರಾಹುಲ್ ಒಬ್ಬರೇ. ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ 2 ಶತಕ ಬಾರಿಸಿದ್ದರು. 2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 64 ಎಸೆತಗಳಲ್ಲಿ 100 ರನ್ ಬಾರಿಸಿದ್ದ ಕೆಎಲ್ಆರ್, ಆ ಬಳಿಕ 2020 ರಲ್ಲಿ ಆರ್ಸಿಬಿ ವಿರುದ್ಧ 69 ಎಸೆತಗಳಲ್ಲಿ 132 ರನ್ ಸಿಡಿಸಿದ್ದರು.…
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದೂವರೆ ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹೆಬ್ಬಾಳ, ಮಲ್ಲೇಶ್ವರಂ, ವಿಜಯನಗರ, ಯಶವಂತಪುರ, ಮೆಜೆಸ್ಟಿಕ್, ನಾಗವಾರ, ಕಾರ್ಪೊರೇಷನ್, ಚಾಮರಾಜಪೇಟೆ, ಶಿವಾಜಿನಗರ, ಕೆ.ಆರ್. ಮಾರುಕಟ್ಟೆ, ಜಯನಗರ, ಚಂದ್ರಲೇಔಟ್, ರಾಜಾಜಿನಗರ, ಆರ್.ಟಿ. ನಗರ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಪೀಣ್ಯ, ಬೊಮ್ಮನಹಳ್ಳಿ, ನಾಯಂಡಹಳ್ಳಿ, ಆರ್.ಆರ್. ನಗರ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. https://ainkannada.com/heavy-rain-in-chamarajanagar-life-disrupted/ ಇನ್ನೂ ಭಾರೀ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳಲ್ಲಿ ಮಾತ್ರ ಅವಾಂತರ ಸೃಷ್ಟಿಯಾಗಿಲ್ಲ. ಯಲಹಂಕದ ಜನರಿಗೂ ಮಳೆ ಬಿಸಿ ತಟ್ಟಿದೆ. ಅಟ್ಟೂರಿನ ಇತಿಹಾಸ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಜಲ ದಿಗ್ಭಂಧನವಾಗಿದೆ. ದೇವಸ್ಥಾನ ಕಲ್ಯಾಣಿ ತುಂಬಿ ಹರಿದು ದೇವಸ್ಥಾನ ಅರ್ಧದಷ್ಟು ಮುಳುಗಡೆಯಾಗಿದೆ. ಸೋಮವಾರ ವಿಶ್ವನಾಥ ಪೂಜೆಗೆ ಅಂತ ಭಕ್ತರು ದೇವಸ್ಥಾನ ಮುಳುಗಿರುವುದನ್ನ ಕಂಡು ಕಂಗಾಲಾಗಿದ್ದಾರೆ.
,ಚಾಮರಾಜನಗರ:- ನಗರದಲ್ಲಿ ಭಾನುವಾರ ಪೂರ್ತಿ ಭಾರೀ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಾಮರಾಜನಗರ ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗಿದೆ. https://ainkannada.com/goon-behavior-in-government-office-deputy-tahsildar-suspended/ ಭಾನುವಾರ ರಾತ್ರಿ ಧಾರಾಕಾರ ಮಳೆ ಆಗಿದೆ. ಸಂಜೆ 5 ಗಂಟೆಗೆ ಪ್ರಾರಂಭವಾದ ಮಳೆ ಸೋಮವಾರ ಮುಂಜಾನೆ 4 ಗಂಟೆವರೆಗೂ ಸುರಿದಿದೆ. ಪೂರ್ವ ಮುಂಗಾರು ಮಳೆಗೆ ರೈತಾಪಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಬಹುತೇಕ ಕೆರೆಕಟ್ಟೆಗಳು ನೀರಿನಿಂದ ಆವೃತ್ತವಾಗಿದೆ.
ಗದಗ:- ಯುವಕನ ಮೇಲೆ ಹಲ್ಲೆ ಮಾಡಿದ ಹಿನ್ನೆಲೆ ಗದಗದ ಉಪ ತಹಶೀಲ್ದಾರ್ ದೇವಾನಂದ ವಾಲ್ಮೀಕಿ ಅವರನ್ನು ಅಮಾನತು ಮಾಡಲಾಗಿದೆ. ಸರ್ಕಾರಿ ಕಚೇರಿಯಲ್ಲಿ ಗೂಂಡಾ ವರ್ತನೆ ತೋರಿದ್ದ ಉಪ ತಹಶೀಲ್ದಾರ್ ದೇವಾನಂದ ವಾಲ್ಮೀಕಿಯವರನ್ನು ಗದಗ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. https://ainkannada.com/heavy-rain-in-karnataka-yellow-alert-for-capital-bengaluru-today/ ಉಪ ತಹಶೀಲ್ದಾರ ದೇವಾನಂದ ವಾಲ್ಮೀಕಿ ಮತ್ತು ಅವರ ಸಹಚರ, ಕಾಂಗ್ರೆಸ್ ಮುಖಂಡ ವಿದ್ಯಾಧರ ದೊಡ್ಡಮನಿಯ ಗೂಂಡಾಗಿರಿ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಗದಗನ ಉಪ ತಹಶೀಲ್ದಾರ ದೇವಾನಂದ ವಾಲ್ಮೀಕಿ ಎಂಬುವರ ಸಂಬಂಧಿಕರ ಕಾರು ಶಿವು ಎಂಬುವರ ಬೈಕ್ಗೆ ಡಿಕ್ಕಿಯಾಗಿದೆ. ಆಗ ಶಿವು ಅವರ ಸ್ನೇಹಿತ ಅಕ್ಷಯ್ ನ್ಯಾಯ ಕೇಳಲು ತಹಶೀಲ್ದಾರ ಕಚೇರಿಗೆ ಹೋಗಿದ್ದಾರೆ. ಆಗ ಉಪ ತಹಶೀಲ್ದಾರ ದೇವಾನಂದ ಹಾಗೂ ಅವರ ಸಹಚರು ಅಕ್ಷಯ ಅವರಿಗೆ ಥಳಿಸಿದ್ದರು.ಗದಗನ ಉಪ ತಹಶೀಲ್ದಾರ ದೇವಾನಂದ ವಾಲ್ಮೀಕಿ ಎಂಬುವರ ಸಂಬಂಧಿಕರ ಕಾರು ಶಿವು ಎಂಬುವರ ಬೈಕ್ಗೆ ಡಿಕ್ಕಿಯಾಗಿದೆ. ಆಗ ಶಿವು ಅವರ ಸ್ನೇಹಿತ ಅಕ್ಷಯ್…
ಬೆಂಗಳೂರು:- ಕರ್ನಾಟಕದಲ್ಲಿ ಕಳೆದ 1 ವಾರಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/nelamangala-national-highway-flooded-due-to-heavy-rain-riders-in-a-panic/ ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾತ್ರಿ ಅಥವಾ ಸಂಜೆ ಬಳಿಕ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನೆಲಮಂಗಲ: ನಗರದಲ್ಲಿ ಸುರಿದ ಭಾರೀ ಮಳೆಗೆ ಸಾಕಷ್ಟು ಅವಾಂತರವೇ ಸೃಷ್ಟಿ ಆಗಿದೆ. ನೆಲಮಂಗಲ ಸುತ್ತಮುತ್ತ ಮಂಜಾನೆ ಸುರಿದ ಜೋರು ಮಳೆಗೆ ಹೆದ್ದಾರಿಗೆ ನೀರು ನುಗ್ಗಿದೆ. https://ainkannada.com/varunas-storm-in-bengaluru-slow-traffic-on-these-roads/ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಜಲಾವೃತವಾಗಿದೆ. ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಜೈನ್ ಟೆಂಪಲ್ ಮುಂದೆ ರಸ್ತೆ ಜಲಾವೃತವಾಗಿದೆ. ರಸ್ತೆ ಜಲಾವೃತದಿಂದ ವಾಹನ ಸವಾರರ ಪರದಾಟ ನಡೆಸಿದ್ದಾರೆ. ರಸ್ತೆಯಲ್ಲಿ ಎರಡು ನೀರು ತುಂಬಿ ಸವಾರರು ಪರದಾಟ ನಡೆಸಿದ್ದಾರೆ. ಭಾರೀ ಮಳೆ ಹಿನ್ನೆಲೆ ಟ್ರಾಫಿಕ್ ಜಾಮ್ ಆಗಿದ್ದು, ಸವಾರರು ಪರದಾಟ ನಡೆಸಿದ್ದಾರೆ.
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಸಂಜೆ ಹಾಗೂ ರಾತ್ರಿ ಸುರಿದ ಮಳೆಗೆ ಸಿಟಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ. ಚಾಮರಾಜಪೇಟೆ, ಜಯನಗರ, ವಿಜಯನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಅಷ್ಟೇ ಅಲ್ಲದೆ, ರಾತ್ರಿಯಿಡೀ ಮಳೆ ಸುರಿದಿರುವುದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. https://ainkannada.com/heavy-rains-wreak-havoc-in-bengaluru-ccb-office-submerged-in-water-the-premises-look-like-a-lake/ ಧಾರಾಕಾರ ಮಳೆಗೆ ಬೆಂಗಳೂರು ತತ್ತರವಾಗಿದ್ದು, ಮೆಜೆಸ್ಟಿಕ್, ಕೆ ಆರ್ ಮಾರುಕಟ್ಟೆ, ಜಯನಗರ, ವಿಜಯನಗರ, ಚಂದ್ರಲೇಔಟ್, ರಾಜಾಜಿನಗರ, ಆರ್ ಟಿ ನಗರ, ಹೆಬ್ಬಾಳ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಯಶವಂತಪುರ, ಪೀಣ್ಯ, ಬೊಮ್ಮನ ಹಳ್ಳಿ, ನಾಯಂಡಹಳ್ಳಿ, ಕುಮಾರಸ್ವಾಮಿ ಲೇಔಟ್, ಆರ್ ಆರ್ ನಗರ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ನಗರದ ಹೊರ ಹೋಗುವ ಮತ್ತು ಒಳ ಬರುವ ಕಡೆಗೆ ನಿಧಾನಗತಿಯ ಸಂಚಾರ ಇದೆ. ವಿದ್ಯಾಶಿಲ್ಪ ರೈಲ್ವೆ ಅಂಡರ್ಪಾಸ್ ನಿಂದ ಏರ್ಪೋರ್ಟ್ ಕಡೆಗೂ ಸಂಚಾರ ನಿಧಾನ ಇದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಇಷ್ಟೇ ಅಲ್ಲದೆ, ಇನ್ನೂ…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಹಾಗೂ ಇಂದು ನಸುಕಿನ ಜಾವ ಸುರಿಯುತ್ತಿರುವ ಭಾರೀ ಮಳೆಗೆ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಅದರಂತೆ ಮಳೆ ನೀರಿನ ಹೊಳೆತಕ್ಕೆ ಸಿಸಿಬಿ ಕಚೇರಿ ಮುಳುಗಡೆ ಆಗಿದೆ. ಕಚೇರಿ ಆವರಣದಲ್ಲಿ ಕೆರೆಯಂತ ಪರಿಸ್ಥಿತಿ ನಿರ್ಮಾಣ ಆಗಿದೆ. ಕಚೇರಿ ಮುಂಭಾಗದ ರಸ್ತೆ ತುಂಬಾ ಚರಂಡಿ ನೀರು ಮತ್ತು ಮೋರಿ ನೀರು ನಿಂತಿದೆ. ಸಿಸಿಬಿ ಕಛೇರಿ ಒಳಗಡೆ ಮಳೆ ನೀರು ನುಗ್ಗಿದ್ದು, ಗ್ರೌಂಡ್ ಫ್ಲೋರ್ ನಲ್ಲಿ ಮಳೆ ನೀರು ನುಗ್ಗಿ ದಾಖಲೆಗಳು ಹಾನಿಯಾಗಿದೆ. https://ainkannada.com/heavy-rain-in-bengaluru-water-from-rajakaluve-enters-houses-city-residents-panic/ ಗ್ರೌಂಡ್ ಫ್ಲೋರ್ ನಲ್ಲಿ ರುವ ಸುಮಾರು 8 ಕ್ಕೂ ಹೆಚ್ಚು ರೋಮ್ ಗಳಲ್ಲಿರೋ ಕೇಸ್ ಫೈಲ್ ಗಳ ನಾಶವಾಗಿದೆ. ಇನ್ನೂ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿದೆ. ಭಾನುವಾರ ಸಂಜೆ ಹಾಗೂ ರಾತ್ರಿ ಕೂಡ ಚಾಮರಾಜಪೇಟೆ, ಜಯನಗರ, ವಿಜಯನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಅಷ್ಟೇ ಅಲ್ಲದೆ, ರಾತ್ರಿಯಿಡೀ ಮಳೆ ಸುರಿದಿದೆ. ಶನಿವಾರ ರಾತ್ರಿ ಸುರಿದಿದ್ದ…