Author: AIN Author

ಹಾಲಿವುಡ್‌ನ ಸ್ಪೈ, ಆಕ್ಷನ್ ಥ್ರಿಲ್ಲರ್‌ಗಳು ಭಾರತದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ ಉದಾಹರಣೆಗಳು ಸಾಕಷ್ಟಿವೆ. ಅದರಲ್ಲೂ ಹಾಲಿವುಡ್ ಸೂಪರ್‌ಸ್ಟಾರ್ ಟಾಮ್ ಕ್ರೂಸ್ ನಟನೆಯ ‘ಮಿಷನ್ ಇಂಪಾಸಿಬಲ್’ ಸೀರಿಸ್‌ಗಳೇ ಸಾಕ್ಷಿ. ಮೇ 17 ಹಾಲಿವುಡ್ ಸಿನಿಮಾ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಮಿಷನ್ ಇಂಪಾಸಿಬಲ್ ಕೊನೆಯ ಸರಣಿ ಕೊನೆಗೂ ರಿಲೀಸ್ ಆಗಿದೆ. ಟ್ರೇಡ್ ಎಕ್ಸ್‌ಪರ್ಟ್‌ಗಳ ಪ್ರಕಾರ ಈ ಸಿನಿಮಾ ಭಾರತದಲ್ಲಿ ಸಿಕ್ಕಾಪಟ್ಟೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. https://ainkannada.com/around-25-people-killed-in-america/ ಇನ್ನೂ ಭಾರತದ ಬಾಕ್ಸ್ ಆಫೀಸ್​ನಲ್ಲಿ ಹಾಲಿವುಡ್ ಸಿನಿಮಾ ಮಿಷನ್ ಇಂಪಾಸಿಬಲ್ ದಾಖಲೆ ಬರೆದಿದೆ. ವಿಶ್ವದ ನಂಬರ್ 1 ಜನಪ್ರಿಯ ನಟ ಟಾಮ್ ಕ್ರೂಸ್ ನಟನೆಯ ‘ಮಿಷನ್ ಇಂಪಾಸಿಬಲ್: ಫೈನಲ್ ರೆಕನಿಂಗ್’ ಸಿನಿಮಾ ನಿನ್ನೆ ಭಾರತದಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದವು. ಅದಕ್ಕೆ ತಕ್ಕಂತೆ ‘ಮಿಷನ್ ಇಂಪಾಸಿಬಲ್’ ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡಿದೆ. ಮಾತ್ರವಲ್ಲದೆ, ಭಾರತದಲ್ಲಿ ಮೊದಲ ದಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಾಲಿವುಡ್ ಸಿನಿಮಾ ಎಂಬ ಹೆಗ್ಗಳಿಕೆಗೆ ಮಾತ್ರವಾಗಿದೆ. ಮಿಷನ್…

Read More

ವಾಷಿಂಗ್ಟನ್:- ಬಿರುಗಾಳಿ ಅಬ್ಬರಕ್ಕೆ ಕನಿಷ್ಠ 35 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡ ಘಟನೆ ಅಮೆರಿಕದಲ್ಲಿ ಜರುಗಿದೆ. https://ainkannada.com/onion-brings-tears-to-farmers-eyes-price-drops-sharply/ ಶುಕ್ರವಾರ ತಡರಾತ್ರಿಯಿಂದ ಈ ಪ್ರದೇಶಗಳಲ್ಲಿ ಬಿರುಗಾಳಿ ಬೀಸುತ್ತಿದ್ದು, ಸುಮಾರು 5,000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮವಾಗಿದೆ. ಇಲ್ಲಿಯವರೆಗೆ 25 ಮಂದಿ ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದೆ. ಸೇಂಟ್ ಲೂಯಿಸ್‌ನ ಮೃಗಾಲಯ ಮತ್ತು ಐತಿಹಾಸಿಕ ಸ್ಮಾರಕಗಳು ಇರುವ ಫಾರೆಸ್ಟ್ ಪಾರ್ಕ್‌ನಲ್ಲಿ ಬಿರುಗಾಳಿ ಬೀಸಿದ ಪರಿಣಾಮ ಕಟ್ಟಡಗಳು ಹಾನಿಯಾಗಿವೆ. ಬಿರುಗಾಳಿ ಅಬ್ಬರಕ್ಕೆ ಗ್ರೇಟ್ ಲೇಕ್ಸ್‌ನ ಲಕ್ಷಾಂತರ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಬಿರುಗಾಳಿಯಿಂದಾಗಿ ಸೆಂಟಿನಿಯಲ್ ಕ್ರಿಶ್ಚಿಯನ್ ಚರ್ಚ್‌ನ ಒಂದು ಭಾಗ ಕುಸಿದು ಬಿದ್ದಿದೆ. ಮಿಡ್‌ವೆಸ್ಟ್ ಹಾಗೂ ಮಧ್ಯ ಅಟ್ಲಾಂಟಿಕ್‌ನಲ್ಲಿ ಸಂಭವಿಸಿದ ಚಂಡಮಾರುತ ಪರಿಣಾಮ ಬಿರುಗಾಳಿ ಬೀಸುತ್ತಿದೆ ಎನ್ನಲಾಗಿದೆ.

Read More

ವಿಜಯಪುರ:- ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಇಳಿಕೆಯಾಗಿದ್ದು, ಬೆಳೆಗಾರರನ್ನು ಕಂಗಾಲು ಮಾಡಿದೆ. ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಈರುಳ್ಳಿ ಬೆಳೆದ ರೈತರ ಗೋಳು ಕೋಳೋರು ಯಾರು ಎಂಬಂತಾಗಿದೆ. https://ainkannada.com/sp-prithvik-shankar-gets-dgigp-disc-award/ ಪ್ರತಿ ಈರುಳ್ಳಿ ಕ್ವಿಂಟಾಲ್ ರೂಪಾಯಿ ನಾಲ್ಕು ನೂರು ಇದೆ. ಬಿತ್ತನೆ ಬೀಜ, ಗೊಬ್ಬರ,ಕೂಲಿ ಆಳಿನ ಸಂಬಳ ಹೆಚ್ಚಾಗಿದೆ. ಈರುಳ್ಳಿ ಬೆಲೆ ಕುಸಿತ ಆಗಿರೋದ್ರಿಂದ ಸಾಲದ ಹೊರೆ ಹೆಚ್ಚಾಗಿದೆ ಎಂದು ರೈತ ನವಾಬ್ ಬಳಗಾನೂರ ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಕೇಂದ್ರ ರಾಜ್ಯ ಸರ್ಕಾರ ಈರುಳ್ಳಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

Read More

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗೈದ ಅಧಿಕಾರಿಗಳಿಗೆ ಕೊಡಮಾಡುವ ಅತ್ಯುನ್ನತ ಡಿಜಿ &ಐಜಿಪಿ ಪ್ರಶಸ್ತಿಗೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಭಾಜನಾರಾಗಿದ್ದಾರೆ. https://ainkannada.com/that-pakistan-munde-can-be-squeezed-like-a-lemon-but-cm-ibrahim/ 2024- 25ನೇ ಸಾಲಿನ ಡಿಜಿ& ಐಜಿಪಿ ಕಮನ್ಡೇಶನ್ ಡಿಸ್ಕ್ ಪ್ರಶಸ್ತಿಗೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಭಾಜನರಾಗಿದ್ದು, ಪೊಲೀಸ್ ಅಧಿಕಾರಿಯ ಅತ್ಯುತ್ತಮ ಕಾರ್ಯಕ್ಷಮತೆ, ಸಮರ್ಪಣೆ ಹಾಗೂ ಶೌರ್ಯ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಈ ಹಿಂದೆ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ದಂಧೆಗೆ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಕಡಿವಾಣ ಹಾಕಿ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಎಸ್ಪಿ ಪೃಥ್ವಿಕ್ ಶಂಕರ್ ಜಿಲ್ಲೆಗೂ ಬರುವ ಮೊದಲು ಜಿಲ್ಲೆಯಾಧ್ಯಂತ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ‌ನಡೆಯುತ್ತಿದ್ದವು. ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಇಸ್ಪೀಟು, ಮಟಕಾ, ಮರಳು ದಂಧೆ ಸೇರಿ ಅಕ್ರಮ ದಂಧೆಗೆ ಸಂಪೂರ್ಣ ಕಡಿವಾಣ ಹಾಕುವ‌ ಮೂಲಕ ಜನಮಣನೆ ಗಳಿಸಿದ್ದಾರೆ. ಇದೆಲ್ಲವನ್ನೂ ಗುರುತಿಸಿ ಪೊಲೀಸ್ ಇಲಾಖೆ ಅತ್ಯುನ್ನತ ಪ್ರಶಸ್ತಿ ನೀಡಿರುವುದು ಎಸ್ಪಿ ಪೃಥ್ವಿಕ್ ಶಂಕರ್ ಅವರ ಶ್ರಮಕ್ಕೆ ಸಿಕ್ಕ ಗೌರವವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ…

Read More

ರಾಮನಗರ:- ಆ ಪಾಕಿಸ್ತಾನ ಮುಂಡೇವನ್ನು ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು ಎಂದು ಈಗ ಒಬ್ಬ ನರಪಿಳ್ಳೆಯನ್ನೂ ಹಿಡಿದಿಲ್ಲ ಎಂದು ಕೇಂದ್ರದ ವಿರುದ್ಧ ಮಾಜಿ ಸಚಿವ ಸಿಎಂ ಇಬ್ರಾಹಿಂ ಕಿಡಿಕಾರಿದ್ದಾರೆ. https://ainkannada.com/wearing-a-copper-ring-will-change-the-luck-of-these-3-zodiac-signs-money-will-flow-in/ ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಕಾಂಗ್ರೆಸ್ಸಿಗರಿಗೆ ಮಾತ್ರ ಅಲ್ಲ, ದೇಶಕ್ಕೆ ಅನುಮಾನ ಇದೆ. ಪಹಲ್ಗಾಮ್‌ಗೆ ಉಗ್ರರು ಬಂದು ಅವರ ಕೆಲಸ ಮುಗಿಸಿ ಸುಸೂತ್ರವಾಗಿ ವಾಪಸ್ ಹೋಗಿದ್ದಾರೆ. ದೇಶದ ಭದ್ರತಾ ವ್ಯವಸ್ಥೆ ಏನು ಮಾಡುತ್ತಿತ್ತು? ಪುಲ್ವಾಮ ದಾಳಿ ಸೇರಿ ಸಾಕಷ್ಟು ದಾಳಿ ಆಗಿದೆ. ಅದನ್ನು ಮಾಡಿದ್ಯಾರು, ಅವರು ದೇಶದ ಒಳಗೆ ಹೇಗೆ ಬಂದರು? ಕಾಶ್ಮೀರದ ಭದ್ರತಾ ವ್ಯವಸ್ಥೆ ಕಾಶ್ಮೀರಿ ಪೊಲೀಸರ ಕೈಯಲಿಲ್ಲ, ಲೆಫ್ಟಿನೆಂಟ್ ಗವರ್ನರ್ ಕೈಯಲ್ಲಿದೆ. ಇದಕ್ಕೆ ಲೆಫ್ಟಿನೆಂಟ್ ಗವರ್ನರ್ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು. ದೇಶದ ಸೈನಿಕರಿಂದಲೇ ಈ ದೇಶ ಉಳಿದಿದೆ. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯತೆ ಎದ್ದು ಕಾಣಿಸುತ್ತಿದೆ. ಯುದ್ಧ ಆರಂಭವಾದಾಗ ಇಡೀ ದೇಶದ ಜನ ಮೋದಿಗೆ ಸಂಪೂರ್ಣ ಬೆಂಬಲ ಕೊಟ್ಟರು. ಆದರೆ ಇದ್ದಕ್ಕಿದ್ದಂತೆ ಟ್ರಂಪ್ ಹೇಳಿದ…

Read More

ಈಗಿನ ಕಾಲದಲ್ಲಿ ನಾವು ಯಾರಾದರೂ ಜ್ಯೋತಿಷಿಗಳ ಬಳಿ ಹೋದರೆ ಅವರು ನಮ್ಮ ಜಾತಕವನ್ನು ಪರಿಶೀಲಿಸಿ ನೋಡಿ ನಮ್ಮ ಕೈಗಳ ಯಾವುದಾದರೂ ಬೆರಳುಗಳಿಗೆ ಉಂಗುರಗಳನ್ನು ಹಾಕಿಕೊಳ್ಳಲು ಸೂಚಿಸುತ್ತಾರೆ. ಸಾಮಾನ್ಯವಾಗಿ ಅವರು ಹೇಳುವ ಉಂಗುರ ಮಧ್ಯಮ ವರ್ಗದ ಕುಟುಂಬದವರನ್ನು ಗಮನವಿಟ್ಟುಕೊಂಡು ಹೇಳುವ ತಾಮ್ರದ ಉಂಗುರವೇ ಆಗಿರುತ್ತದೆ. https://ainkannada.com/these-fruits-are-the-best-for-thyroid-control-those-with-this-problem-must-try-them/ ತಾಮ್ರದ ಉಂಗುರ ಧರಿಸುವುದರಿಂದ ಹಲವು ಪ್ರಯೋಜನಗಳಿವೆ. ತಾಮ್ರದ ಉಂಗುರ ಧರಿಸುವುದರಿಂದ ವಿವಿಧ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಜ್ಯೋತಿಷ್ಯ ಹೇಳುತ್ತದೆ . ಕೆಲವು ರಾಶಿಚಕ್ರ ಚಿಹ್ನೆಗಳಿಗೆ, ತಾಮ್ರದ ಉಂಗುರವು ದುಬಾರಿ ರತ್ನದ ಕಲ್ಲುಗಳಿಗಿಂತ ಹೆಚ್ಚು ಉತ್ತಮವಾಗಿದೆ, ಇದು ಅದೃಷ್ಟವನ್ನು ತರುವ ಮೂಲಕ ಜೀವನವನ್ನು ಬದಲಾಯಿಸುತ್ತದೆ. ಆದಾಗ್ಯೂ, ತಾಮ್ರದ ಉಂಗುರವು ಎಲ್ಲರಿಗೂ ಒಳ್ಳೆಯದನ್ನು ಮಾಡುವುದಿಲ್ಲ. ಕೆಲವು ರಾಶಿಚಕ್ರ ಚಿಹ್ನೆಗಳ ಜನರು ತಾಮ್ರದ ಉಂಗುರವನ್ನು ಧರಿಸುವುದು ತುಂಬಾ ಪ್ರಯೋಜನಕಾರಿ. ಆದಾಗ್ಯೂ, ಕೆಲವು ರಾಶಿಚಕ್ರ ಚಿಹ್ನೆಗಳು ನಷ್ಟವನ್ನು ಅನುಭವಿಸುತ್ತವೆ. ತಾಮ್ರದ ಉಂಗುರವನ್ನು ಯಾರು ಧರಿಸಬೇಕು, ಅದರಿಂದ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಮತ್ತು ತಾಮ್ರದ ಉಂಗುರವನ್ನು ಧರಿಸುವಾಗ ಯಾವ ನಿಯಮಗಳನ್ನು ಪಾಲಿಸಬೇಕು? ತಿಳಿಯಲು…

Read More

ಥೈರಾಯ್ಡ್ ಸಮಸ್ಯೆಯ ಬಗ್ಗೆ ಕೇಳದವರಿಲ್ಲ, ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿ ಮಾಡುವಂತಹ ಥೈರಾಯ್ಡ್ ಗ್ರಂಥಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದೆ ಇದ್ದಾಗ ಥೈರಾಯ್ಡ್ ಸಮಸ್ಯೆಗಳು ಕಾಣಿಸಿಕೊಳ್ಳುವುದು. ಥೈರಾಯ್ಡ್ ಗ್ರಂಥಿಗಳು ಹೃದಯಬಡಿತ, ಜೀರ್ಣಕ್ರಿಯೆ ಇತ್ಯಾದಿಗಳನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದು. https://ainkannada.com/former-prime-minister-hd-deve-gowdas-birthday-best-wishes-from-political-dignitaries/ ಇದೇ ಥೈರಾಯ್ಡ್ ಗ್ರಂಥಿಗಳು ಸರಿಯಾಗಿ ಹಾರ್ಮೋನ್ ಗಳನ್ನು ಬಿಡುಗಡೆ ಮಾಡದೆ ಇರುವ ಸಂದರ್ಭದಲ್ಲಿ ಅದರಿಂದ ಹೈಪೋಥೈರಾಯ್ಡಿಸಮ್ ಎನ್ನುವ ಸಮಸ್ಯೆಯು ಉಂಟಾಗುವುದು. ಇದನ್ನು ನಿರ್ವಹಿಸಲು ಹಾಗೂ ಸಂಪೂರ್ಣ ಆರೋಗ್ಯ ಕಾಪಾಡಿಕೊಳ್ಳಲು ಸರಿಯಾದ ಆಹಾರ ಕ್ರಮವು ಅಗತ್ಯವಾಗಿರುವುದು. ಪೌಷ್ಟಿಕ ಆಹಾರದ ಮೂಲಕ ಥೈರಾಯ್ಡ್ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಕೆಲವು ಹಣ್ಣುಗಳು ಥೈರಾಯ್ಡ್‌ಗೆ ಅಮೃತದಂತೆ ಕಾರ್ಯನಿರ್ವಹಿಸುತ್ತವೆ. ಅಂತಹ ಮೂರು ಪ್ರಮುಖ ಹಣ್ಣುಗಳೆಂದರೆ ಸೇಬು, ಬೆರಿಹಣ್ಣುಗಳು ಮತ್ತು ಕಿತ್ತಳೆ. 1. ಸೇಬು: ಸೇಬು ಥೈರಾಯ್ಡ್ ಆರೋಗ್ಯಕ್ಕೆ ಅತ್ಯಂತ ಉಪಯುಕ್ತವಾಗಿದೆ. ಇದರಲ್ಲಿ ಫೈಬರ್, ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್‌ಗಳು ಸಮೃದ್ಧವಾಗಿವೆ. ಸೇಬಿನಲ್ಲಿರುವ ಪೆಕ್ಟಿನ್ ಎಂಬ ಫೈಬರ್ ದೇಹದಿಂದ ಟಾಕ್ಸಿನ್‌ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ, ಇದು ಥೈರಾಯ್ಡ್ ಗ್ರಂಥಿಯ ಕಾರ್ಯವನ್ನು ಸುಧಾರಿಸುತ್ತದೆ. ಜೊತೆಗೆ,…

Read More

ಬೆಂಗಳೂರು:- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 92ನೇ ವರ್ಷದ ಬರ್ತಡೇ ಸೆಲೆಬ್ರೇಷನ್ ನಲ್ಲಿರುವ ದೇವೇಗೌಡರಿಗೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. https://ainkannada.com/rcb-match-fans-of-white-jersey-virat-kohli/ ನರೇಂದ್ರ ಮೋದಿ:- ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಸೇವೆಗಾಗಿ ಹೆಚ್‌ಡಿಡಿ ಎಲ್ಲೆಡೆ ಗೌರವಾನ್ವಿತರಾಗಿದ್ದಾರೆ. ಹಲವಾರು ವಿಷಯಗಳ ಕುರಿತು ಅವರ ಬುದ್ಧಿವಂತಿಕೆ ಮತ್ತು ಒಳನೋಟಗಳು ಹೆಚ್ಚಿನ ಶಕ್ತಿಯ ಮೂಲವಾಗಿದೆ. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಕರುಣಿಸಲಿ ಎಂದು ಹಾರೈಸುತ್ತೇನೆಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ:- ನನ್ನ ಪೂಜ್ಯ ತಂದೆಯವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಮಣ್ಣಿನಮಗ ಹೆಚ್‌ಡಿ ದೇವೇಗೌಡ ಅವರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ನನ್ನ ಶಕ್ತಿ, ನನ್ನ ಧೈರ್ಯ, ನನ್ನ ಸ್ಫೂರ್ತಿ ನನ್ನ ತಂದೆಯವರೇ ಆಗಿದ್ದಾರೆ. ಅವರ ಸಂಘರ್ಷದ ಹಾದಿ, ಸಾಧನೆ, ಸೇವಾ ತತ್ಪರತೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ. ಇಡೀ…

Read More

ರಾಯಚೂರು:- ಬೆಳ್ಳಂಬೆಳಿಗ್ಗೆ ಇಡ್ಲಿ ಬಂಡಿ ವಿಚಾರಕ್ಕೆ ಯುವಕನಿಗೆ ನಡುರಸ್ತೆಯಲ್ಲಿ ಚಾಕು ಚುಚ್ಚಿ ಕೊಲೆ ಮಾಡಿದ ಘಟನೆ ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ನಡೆದಿದೆ. https://ainkannada.com/the-second-wedding-yoga-for-the-divorced-by-this-pile-will-be-completed-soon-sundays-rashi-future-18-may-2025/ ರಾಯಚೂರು ನಗರದ ಏಕ್ ಮಿನಾರ್ ರಸ್ತೆಯಲ್ಲಿರಯವ ಜಾಕೀರ್ ಹುಸೇನ್ ವೃತ್ತದಲ್ಲಿ ಬೆಳೆಗಿನ ಜಾವ ಇಡ್ಲಿ ಬಂಡಿ ವಿಚಾರಕ್ಕೆ ಜಗಳ ಆರಂಭವಾಗಿ, ಜಗಳ ತಾರಕಕ್ಕೆ ಏರಿ ಸಾಜಿದ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ನಗರದ ಜಹೀರಾಬಾದ್‌ ನಿವಾಸಿ ಸಾದಿಕ್ (30) ಕೊಲೆಯಾದ ವ್ಯಕ್ತಿ‌ ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಂಭಿರವಾಗಿ ಗಾಯಗೊಂಡ ಸಾಧಿಕ್ ನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಹಳೇ ವೈಷಮ್ಯ ಹಿನ್ನೆಲೆ ಚಾಕುವಿನಿಂದ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಕರೀಂ ಮತ್ತು ಗ್ಯಾಂಗ್ ನಿಂದ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸದರ ಬಜಾರ್ ಪೊಲೀಸರು ಘಟನೆ ಬಗ್ಗೆ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ.

Read More

ಹುಬ್ಬಳ್ಳಿ: ಸರಕಾರಕ್ಕೆ ಎರಡು ವರ್ಷಗಳು ತುಂಬಿದ್ದು ವಿಜಯನಗರದ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ. https://ainkannada.com/leopard-allah-is-a-wild-cat-in-hubli-sub-territory-forest-officer-rangappa-k-chicken-clear/ ಈ ಪತ್ರಿಕಾ ಹೇಳಿಕೆ ನೀಡಿರುವ ಅವರು, ಎರಡು ವರ್ಷದ ಆಡಳಿತ, ನುಡಿದಂತೆ ನಡೆದಿದ್ದೇವೆ. 20ರಂದು ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧೀ, ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಎಲ್ಲ ಸಚಿವರು, ಶಾಸಕರು, ಮುಖಂಡರು, 3 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ.‌ ಈಗಾಗಲೇ ಕಾರ್ಯಕ್ರಮದ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ ಎಂದಿದ್ದಾರೆ.

Read More