Author: AIN Author

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಿರತೆ ಕಂಡುಬಂದಿರುವುದು ವದಂತಿ, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮತ್ತು ಹೆಜ್ಜೆ ಗುರುತು ಚಿರತೆಯದ್ದು ಅಲ್ಲ, ಅದು ಕಾಡು ಬೆಕ್ಕಿನದ್ದು ಎಂದು ಉಪವಲಯ ಅರಣ್ಯ ಅಧಿಕಾರಿ ರಂಗಪ್ಪ ಕೆ ಕೋಳಿ ಮಾಹಿತಿ ನೀಡಿದರು. https://ainkannada.com/have-pakistanis-set-foot-in-the-twin-cities-suspicious-movement-in-mosques-bellad-demands-investigation/ ಮಾಧ್ಯಮದ ಮೂಲಕ ಮಾಹಿತಿ ನೀಡಿದ ಅವರು, ಬೆಳಗಿನ ಜಾವ 4 ಗಂಟೆಗೆ ನಮಗೆ ಮಾಹಿತಿ ಬಂದಿತ್ತು. ನಾವು ಹಾಗೂ ನಮ್ಮ ಆರ್ ಎಫ್ ಒ ಹಾಗೂ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ವಿ, ಅಲ್ಲಿ ಪರಿಶೀಲನೆ ಮಾಡಿದಾಗ ಹೆಜ್ಜೆ ಗುರುತು ಸೇರಿ ಯಾವುದೇ ಕುರುಹು ಕಂಡು ಬಂದಿಲ್ಲ. ಸಿಸಿ ಟಿವಿ ಕ್ಯಾಮರಾದಲ್ಲಿ ಕ್ಲ್ಯಾರಿಟಿ ಇಲ್ಲಾ, ಅಲ್ಲಿ ಕಂಡು ಬಂದ ಹೆಜ್ಜೆ ಗುರುತಿಗೂ ಚಿರತೆ ಹೆಜ್ಜೆ ಗುರುತಿಗೂ ವ್ಯತ್ಯಾಸ ಇದೆ.‌ ಕಾಡು ಬೇಕಿಗೆ ಈ ಹೆಜ್ಜೆ ಗುರುತು ಹೋಲಿಕೆ ಆಗ್ತಿದೆ. ಕಾಡು ಬೆಕ್ಕು ಜನರ ಮೇಲೆ ದಾಳಿ ಮಾಡೋದಿಲ್ಲ ಜನರು ಆತಂಕ ಪಡುವ ಅವಶ್ಯಕತೆ ಇಲ್ಲಾ. ನಾಯಿ ಹೊತ್ತೋಯ್ದಿದ್ರೆ ಕುರುಹು ಸಿಗ್ತಿತ್ತು. ಜನರ ಜೊತೆ ನಾವು…

Read More

ಹುಬ್ಬಳ್ಳಿ:- ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ನಡೆಸುತ್ತಿರುವ ಹಿನ್ನೆಲೆ ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಅರವಿಂದ್ ಬೆಲ್ಲದ್ ಪತ್ರ ಬರೆದಿದ್ದಾರೆ. ಅಪರಿಚಿತರ ಓಡಾಟ ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಶಾಸಕರು ಪತ್ರ ಬರೆದಿದ್ದಾರೆ. https://ainkannada.com/mysterious-death-of-a-young-woman-from-dharmasthala-what-was-in-punjab/ ಅಪರಿಚಿತ ಹಾಗೂ ಅನುಮಾನಾಸ್ಪದವಾಗಿ ಬೇರೆ ದೇಶದ ವ್ಯಕ್ತಿಗಳು ಹುಬ್ಬಳ್ಳಿ-ಧಾರವಾಡ ಮಹಾನಗರದ ಕೆಲ ಮಸೀದಿಗಳಲ್ಲಿ ಓಡಾಟ ನಡೆಸುತ್ತಿದ್ದು, ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಶಾಸಕ ಅರವಿಂದ್ ಬೆಲ್ಲದ್ ಪತ್ರ ಬರೆದಿದ್ದಾರೆ. ಅಪರಿಚಿತರ ಓಡಾಟ ಪರಿಶೀಲಿಸುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಬೆಲ್ಲದ್ ಪತ್ರ ಬರೆದಿದ್ದಾರೆ. ಮೇ 17ರಂದು ಬೆಲ್ಲದ್ ಪತ್ರ ಬರೆದಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಮಸೀದಿಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಹೀಗೆ ಓಡಾಡುತ್ತಿರುವವರಲ್ಲಿ ಹೊಸ ಮುಖ, ಅಪರಿಚಿತ, ಅನುಮಾನಾಸ್ಪದ ವ್ಯಕ್ತಿಗಳೇ ಹೆಚ್ಚಾಗಿದ್ದಾರೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ. ಅವಳಿ ನಗರದ ವಿವಿಧ ಕೊಳಚೆ ಪ್ರದೇಶದಲ್ಲಿ ವಾಸವಾಗಿದ್ದಾರೆಂಬ ಮಾಹಿತಿಯೂ ಇದೆ. ಅದಕ್ಕಾಗಿ ಈ ಕುರಿತು ಪೊಲೀಸ್…

Read More

ಮಂಗಳೂರು/ಚಂಡೀಗಢ:- ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್‌ನಲ್ಲಿ ಮೇ 17ರಂದು ನಿಗೂಢ ಸಾವನ್ನಪ್ಪಿರುವ ಘಟನೆ ಜರುಗಿದೆ. ಆಕಾಂಕ್ಷ ಮೃತ ಯುವತಿ. ಸದ್ಯ ಆಕಾಂಕ್ಷ ಮನೆಯವರು ಪಂಜಾಬ್‌ಗೆ ತೆರಳಿದ್ದಾರೆ. https://ainkannada.com/kolar-electricity-transport-corporation/ ಧರ್ಮಸ್ಥಳದ ಬೋಳಿಯಾರ್ ನಿವಾಸಿಗಳಾದ ಸುರೇಂದ್ರ ಹಾಗೂ ಸಿಂದೂದೇವಿ ದಂಪತಿ ಮಗಳಾದ ಆಕಾಂಕ್ಷ ಪಂಜಾಬಿನ ಫಗ್ವಾಡಾ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪೂರೈಸಿ ಆರು ಹಿಂಗಳ ಹಿಂದೆ ದೆಹಲಿಯಲ್ಲಿ ಏರೋಸ್ಪೇಸ್ ಎಂಜಿನಿಯರ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು ಜಪಾನಿನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಆಕಾಂಕ್ಷ ಶೈಕ್ಷಣಿಕ ಪ್ರಮಾಣ ಪತ್ರ ಪಡೆಯಲು ಪಂಜಾಬ್‌ಗೆ ತೆರಳಿದ್ದರು. ಶೈಕ್ಷಣಿಕ ಪ್ರಮಾಣ ಪತ್ರ ಪಡೆದ ನಂತರ ಆಕಾಂಕ್ಷ ಮನೆಯವರಿಗೆ ಕರೆ ಮಾಡಿ ಮಾತನಾಡಿದ್ದರು. ನಂತರ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

Read More

ಕೋಲಾರ:- ವಿದ್ಯುತ್ ತಗುಲಿ ಸಾರಿಗೆ ಸಂಸ್ಥೆ ನೌಕರ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಜೇಂದ್ರ ಹಳ್ಳಿಯಲ್ಲಿ ಜರುಗಿದೆ. ರೆಡ್ಡಪ್ಪ ೫೮ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಸಾರಿಗೆ ನೌಕರ. https://ainkannada.com/gs-suit-hotel-seege-of-koramangala-manager-arrest-what-is-it/ ಇಂದು ಮುಂಜಾನೆ ಎದ್ದು ತೋಟಕ್ಕೆ ತೆರಳುವ ವೇಳೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ರಾತ್ರಿ ಸುರಿದ ಮಳೆ ಗಾಳಿಗೆ ವಿದ್ಯುತ್ ಕಂಬಗಳು ನೆಲ ಕಚ್ಚಿದೆ. ನೋಡದೆ ವಿದ್ಯುತ್ ತಂತಿಗೆ ಬೈಕ್ ಸ್ಪರ್ಶವಾಗಿ ರೆಡ್ಡಪ್ಪ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಮುಳಬಾಗಿಲು ಕೆ ಎಸ್ ಅರ್ ಟಿಸಿ ಘಟಕದಲ್ಲಿ ಸಂಚಾರಿ ನಿಯಂತ್ರಕರಾಗಿದ್ದರು. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿ ವಿದ್ಯುತ್ ತಂತಿಗಳ ತೆರವು ಕಾರ್ಯ ನಡೆದಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೋರಮಂಗಲದ ಪ್ರತಿಷ್ಟಿತ ಜಿ.ಎಸ್‌ ಸೂಟ್‌ ಹೋಟೆಲ್ ಸೀಜ್ ಮಾಡಲಾಗಿದೆ. ಕನ್ನಡಿಗರಿಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಡಿವಾಳ ಪೊಲೀಸರು ಸೀಜ್ ಮಾಡಿದ್ದಾರೆ. ಅಲ್ಲದೇ ಹೋಟೆಲ್ ಮ್ಯಾನೇಜರ್ ನನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತ ಮ್ಯಾನೇಜರ್ ಅನ್ನು ಸರ್ಫಜ್ ಎಂದು ಗುರುತಿಸಲಾಗಿದೆ https://ainkannada.com/heavy-rain-in-hubballi-from-late-night-to-early-morning-normal-life-disrupted/ ಮ್ಯಾನೇಜರ್ ಅರೆಸ್ಟ್ ಮಾಡಿ ಜಿ.ಎಸ್ ಸೂಟ್ ಹೋಟೆಲ್‌ಗೆ ಮಡಿವಾಳ ಪೊಲೀಸರು ಬೀಗ ಹಾಕಿದ್ದಾರೆ. ಹೊಟೇಲ್ ಮಾಲೀಕ ಜಮ್‌ಶದ್‌ ಮೇಲೂ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಹೋಟೆಲ್‌ ಮಾಲೀಕ ಕೇರಳದಲ್ಲಿದ್ದಾರೆ. ಜಿ.ಎಸ್‌ ಸೂಟ್‌ ಹೋಟೆಲ್‌ನ ಹೊರಭಾಗದ ಎಲ್‌ಇಡಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಅವಹೇಳನಕಾರಿ ಬರಹ ಪ್ರದರ್ಶಿಸಲಾಗಿತ್ತು. ಸ್ಥಳೀಯರು ಅದನ್ನು ಗಮನಿಸಿ ವೀಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದರು. ಹೋಟೆಲ್‌ನ ಈ ನಡೆಗೆ ಕನ್ನಡಿಗರು ಅಸಮಾಧಾನ ಹೊರಹಾಕಿದ್ದರು.‌ ಸಧ್ಯ ಹೋಟೆಲ್ ಮಾಲೀಕ ಕೇರಳದಲ್ಲಿದ್ದು, ಶೀಘ್ರದಲ್ಲೇ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

Read More

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜೋರಾಗಿ ಮಳೆ ಸುರಿದಿದ್ದು ತಡರಾತ್ರಿಯಿಂದ ಹಿಡಿದು ಬೆಳಗಿನ ಜಾವದವರೆಗೂ ಭಾರೀ ಮಳೆ ಬಿದ್ದಿದೆ. https://ainkannada.com/heavy-rain-in-hubballi-trees-uprooted/ ಮಳೆನೀರಿನಂದಾಗಿ ಜನತಾ ಬಜಾರ್, ಹಳೇಹುಬ್ಬಳ್ಳಿ, ಆನಂದನಗರದ ಕೆಲವು ತಗ್ಗು ಪ್ರದೇಶಗಳಲ್ಲಿ ಮತ್ತು ಬಿ.ಆರ್.ಟಿ.ಎಸ್.‌ ರಸ್ತೆಯಲ್ಲಿ ನೀರು ನಿಂತಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣ ಇನ್ನು ನಗರದ ಲ್ಯಾಮಿಂಗ್ಟನ್ ರಸ್ತೆ, ದಾಜೀಬಾನಪೇಟೆ, ಸಂಗೊಳ್ಳಿ ರಾಯಣ್ಣ ಸರ್ಕಲ್ ಹಾಗೂ ಚೆನ್ನಮ್ಮ ವೃತ್ತದ ಸುತ್ತಲೂ ಮಳೆ ನೀರು ನಿಂತ ಪರಿಣಾಮವಾಗಿ ಜನರಿಗೆ ಹಾಗೂ ವ್ಯಾಪಾರಸ್ಥರಿಗೆ ತೀವ್ರ ಸ್ವರೂಪದ ತೊಂದರೆ ಆಗಿದೆ.

Read More

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜೋರಾಗಿ ಮಳೆ ಸುರಿದಿದ್ದು ಭಾರೀ ಮಳೆ ಮತ್ತು ಗಾಳಿಗೆ ಬೃಹತ್ ಪ್ರಮಾಣದ ಮರಗಳು ನೆಲಕ್ಕೆ ಉರುಳಿವೆ. https://ainkannada.com/heavy-rains-in-karnataka-today-yellow-alert-declared-in-these-districts/ ನಗರದ ದೇಶಪಾಂಡೆ ನಗರ, ನವನಗರದ ಪಂಚಾಕ್ಷರಿ ಕಾಲೋನಿ ಸೇರಿದಂತೆ ಮುಂತಾದ ಕಡೆಗಳಲ್ಲಿ ಮರಗಳು ನೆಲಕ್ಕೆ ಉರುಳಿದರೆ ಸಾಕಷ್ಟು ಕಡೆಗಳಲ್ಲಿ ರಸ್ತೆಗೆ ನೀರು ನುಗ್ಗಿದ್ದರಿಂದ ಜನಜೀವನದ ಅಸ್ತವ್ಯಸ್ತವಾಗಿದೆ.

Read More

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. https://ainkannada.com/ipl-2025-rcb-vs-kkr-match-in-bangalore-kolkata-out-of-the-tournament/ ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಣೆಯಾಗಿದೆ.

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್‌ನ 58 ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಪಂದ್ಯದ ಟಾಸ್ ಕೂಡ ನಡೆಯಲು ಸಾಧ್ಯವಾಗಲಿಲ್ಲ. ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿದೆ. ಇದರೊಂದಿಗೆ, ರಜತ್ ಪಾಟಿದಾರ್ ನೇತೃತ್ವದ ತಂಡವು 17 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ 12 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಹೀಗಾಗಿ ಕೆಕೆಆರ್ ತಂಡದ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. https://ainkannada.com/rainstorm-around-chinnaswamy-stadium-rcb-vs-kkr-match-cancelled-fans-are-upset/ ಕೆಕೆಆರ್‌ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಮಳೆಯಿಂದ ಪಂದ್ಯವೇ ರದ್ದಾಗಿರುವುದರಿಂದ ಟೂರ್ನಿಯಿಂದ ಹೊರಬಿದ್ದಿದೆ. ಪಂದ್ಯ ಮಳೆಯಿಂದ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದು ಪಾಯಿಂಟ್ ಸಿಕ್ಕಿದೆ. ಕೆಕೆಆರ್ ತಂಡ 12 ಪಂದ್ಯಗಳಲ್ಲಿ 5 ಗೆಲುವು, 6 ಸೋಲು ಮತ್ತು ಒಂದು ರದ್ದಾದ ಪಂದ್ಯದೊಂದಿಗೆ ಪ್ರಸ್ತುತ 12 ಅಂಕಗಳನ್ನು ಹೊಂದಿದೆ. ಇನ್ನು ಆರ್ ಸಿಬಿ ಆಡಿರುವ 11 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.…

Read More

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಬೇಕಾಗಿದ್ದ RCB Vs KKR ಪಂದ್ಯ ಮಳೆಗಾಹುತಿಯಾಗಿದೆ. ಒಂದೆಡೆ ಮ್ಯಾಚ್ ರದ್ದಾಗಿರೋ ಬೇಸರ, ಮತ್ತೊಂದೆಡೆ ತಮ್ಮ ನೆಚ್ಚಿನ ವಿರಾಟ್ ಕೊಹ್ಲಿಗೆ ಬಿಗ್ ಸರ್ಪ್ರೈಸ್ ಕೊಡಬೇಕು ಅಂದುಕೊಂಡಿಿದ್ದ RCB ಫ್ಯಾನ್ಸ್ ಗೆ ಮಳೆ ಅಡ್ಡಿ ಮಾಡಿತು. ಆದರೂ ತೊಂದ್ರೆ ಇಲ್ಲ. ಏಕೆಂದರೆ ಚಿನ್ನಸ್ವಾಮಿ ಕ್ರೀಡಾಂಗಣ ಪೂರ್ತಿ ವೈಟ್ ಜರ್ಸಿಯಲ್ಲಿ ಮಿಂದೆದ್ದಿದೆ. ಮಳೆಯ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಆಗಮಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿಯನ್ನು ತಾವೆಷ್ಟು ಪ್ರೀತಿಸುತ್ತಿದ್ದೇವು ಎಂಬುದನ್ನು ಅಭಿಮಾನಿಗಳು ಸಾರಿ ಹೇಳಿದ್ದರು. ಇತ್ತ ಇಂತಹದೊಂದು ಅಭಿಮಾನವನ್ನು ನೋಡಿದ ವಿರಾಟ್ ಕೊಹ್ಲಿ ಭಾವುಕರಾಗಿ ಕಂಡು ಬಂದರು. ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ ರಾರಾಜಿಸುತ್ತಿರುವುದು ಬಿಗ್ ಸ್ಕ್ರೀನ್​ನಲ್ಲಿ ತೋರಿಸುತ್ತಿದ್ದಂತೆ, ಇತ್ತ ಕೊಹ್ಲಿ ಏಕಾಂತವಾಗಿ ಭಾವುಕತೆಯಿಂದ ನೋಡುತ್ತಾ ಕೂತಿದ್ದರು. ಆದರೆ ವಿಧಿಯಾಟ,…

Read More