ಉಡುಪಿ: ಅಪರಿಚಿತ ವಾಹನವೊಂದು ತಡರಾತ್ರಿ ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ,ಪಾದಚಾರಿ ಮೃತಪಟ್ಟ ಘಟನೆ ಸಂಭವಿಸಿದೆ. ನಿಟ್ಟೂರು ಸಮೀಪ ರಾಷ್ಟ್ರೀಯ ಹೆದ್ದಾರಿ ಗಣೇಶ್ ಮಾರ್ಬಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಕುಂದಾಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದ್ದು, ಸಂಚಾರ ಪೋಲಿಸ್ ಠಾಣೆಯ ಪೋಲಿಸರು ಸ್ಥಳಕ್ಕಾಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. https://ainkannada.com/instead-of-pumping-our-share-of-water-instead-of-a-novel-parallel-dam/ ಪೋಲಿಸರು ಸಾವಿಗೆ ಕಾರಣವಾಗಿರುವ ವಾಹನದ ಪತ್ತೆ ಕಾರ್ಯ, ಸಿ ಸಿ ಕ್ಯಾಮರಾ ಪರೀಶೀಲನೆ ನಡೆಸುತ್ತಿದ್ದಾರೆ. ಡಿಕ್ಕಿ ಹೊಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಗಾಯಾಳುವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಪರೀಕ್ಷಿಸಿದ ವೈದ್ಯರು ಗಾಯಾಳು ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮೃತ ಪಾದಚಾರಿ ಯುವಕನ ಹೆಸರು ವಿಳಾಸ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: AIN Author
ಹೊಸಪೇಟೆ:- “ತುಂಗಭದ್ರಾ ಅಣೆಕಟ್ಟಿನ ಹೂಳು ತೆಗೆಯುವುದು ಕಾರ್ಯಸಾಧುವಲ್ಲ. ಇದರ ಬದಲಾಗಿ ನವಲಿ ಬಳಿ ಸಮನಾಂತರ ಅಣೆಕಟ್ಟು ನಿರ್ಮಾಣ ಅಥವಾ ನಮ್ಮ ಪಾಲಿನ 27 ರಿಂದ 30 ಟಿಎಂಸಿ ನೀರನ್ನು ಬಸವಸಾಗರದಿಂದ ಪಂಪ್ ಮಾಡಿ ಮೇಲಿನ ಕೆರೆಗಳನ್ನು ತುಂಬಿಸುವ ಬಗ್ಗೆ ರಾಜ್ಯದ ತಾಂತ್ರಿಕ ಸಮಿತಿ ವರದಿ ನೀಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. https://ainkannada.com/greater-bangalore-elections-in-the-next-four-months-dcm-dk-shivakumar/ ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ಹಮ್ಮಿಕೊಂಡಿರುವ ಸಾಧನಾ ಸಮಾವೇಶದ ಪೂರ್ವ ಸಿದ್ಧತೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ ಅವರು ಶುಕ್ರವಾರ ಪರಿಶೀಲಿಸಿದರು. ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದರು. “ಈ ಪ್ರಸ್ತಾವನೆಯನ್ನು ತುಂಗಭದ್ರಾ ನಿಗಮದ ಮುಂದಿಟ್ಟಿದ್ದೇವೆ. ಇದರ ಬಗ್ಗೆ ಚರ್ಚೆ ನಡೆಸಲು ಆಂಧ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಸಮಯ ಕೇಳಿದ್ದೇನೆ. ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇನ್ನು ಸಮಯ ನೀಡಿಲ್ಲ. ಈ ಭಾಗದ ಜನರಿಗೆ ನವಲಿ ಅಣೆಕಟ್ಟು ಕಟ್ಟುವುದಾಗಿ ನಾವು ಬಜೆಟ್…
ಮೈಸೂರು, ಮೇ 16: “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. https://ainkannada.com/dakshina-kannada-district-will-soon-become-a-podimukta-district-cm-siddaramaiah/ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್…
ಮಂಗಳೂರು ಮೇ 16: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. https://ainkannada.com/bidadi-town-ship-scheme-is-a-plan-to-be-plundered-by-congress-leaders-r-ashoka/ ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ ಕಟ್ಟಡವನ್ನು ಪ್ರಜಾರ್ಪಣೆಗೊಳಿಸಿ ಮಾತನಾಡಿದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗುದ್ದಲಿ ಪೂಜೆ ನೆರವೇರಿಸಿ ಮೊದಲ ಹಂತದ ಕಾಮಗಾರಿಗೆ ಹಣ ಬಿಡುಗಡೆ ಮಾಡಿದ್ದೆವು. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧದ ಕೆಲಸ ನಿಂತು ಹೋಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ಮುಂದುವರೆಯಲೇ ಇಲ್ಲ. ಇದನ್ನು ಪೂರ್ಣಗೊಳಿಸಲು ಮತ್ತೆ ನಾವೇ ಅಧಿಕಾರಕ್ಕೆ ಬರಬೇಕಾಯಿತು. ಬಿಜೆಪಿ ಅವಧಿಯಲ್ಲಿ ಉದ್ಘಾಟನೆ ಆಗಲಿಲ್ಲ ಏಕೆ ಎಂದು ವೇದಿಕೆಯಲ್ಲೇ ಇದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4.5 ಲಕ್ಷ…
ಬೆಂಗಳೂರು:- ಬಿಡದಿ ಟೌನ್ ಶಿಪ್ ಯೋಜನೆ ಎಂಬುದು ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ. ಇದರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. https://ainkannada.com/prisoners-fight-in-parappana-agrahara-prison-sacrifice-from-bath-room-tiles/ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಮಾಡುತ್ತಿರುವ ಭೂ ಸ್ವಾಧೀನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಿಂದಾಗಿ ಬೆಂಗಳೂರಿಗೆ ಹಾನಿಯಾಗಲಿದೆ. ನಗರದ ಸುತ್ತಮುತ್ತಲಿನ ಜಮೀನುಗಳ ಬೆಲೆ ಹೆಚ್ಚಿಸಲು ಈ ರೀತಿ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಭೂ ಸ್ವಾಧೀನ ಎನ್ನುವುದೇ ದೊಡ್ಡ ಮಾರಿ. ಈ ಮನೆಹಾಳು ಬುದ್ಧಿ ಕಾಂಗ್ರೆಸ್ ನಾಯಕರಿಗೆ ಬಂದಿದೆ ಎಂದರು. ಈಗ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಆರೋಪ ಮಾಡಲಾಗುತ್ತಿದೆ. ನಾನು ಕೂಡ ಕಂದಾಯ ಸಚಿವನಾಗಿದ್ದೆ. ಆಗ ಎಂದೂ ನಾನು ಭೂ ಸ್ವಾಧೀನ ಮಾಡಲು ಬರಲಿಲ್ಲ. ರೈತರು ಬೇಡ ಎಂದಾಗಲೇ ಸ್ವಾಧೀನ ಕೈ ಬಿಡಲಾಗಿತ್ತು. ಕಾಂಗ್ರೆಸ್ ಎಂದರೆ ರಿಯಲ್ ಎಸ್ಟೇಟ್ ಸರ್ಕಾರ ಎಂದರು. ಗ್ಯಾರಂಟಿಗಳ ಹೆಸರಲ್ಲಿ ಕಾಂಗ್ರೆಸ್ ಸರ್ಕಾರ 2…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಬಾತ್ ರೂಂನ ಟೈಲ್ನಿಂದ ಸಹ ಕೈದಿಗಳಿಬ್ಬರಿಗೆ ಹಲ್ಲೆ ಮಾಡಿಕೊಂಡಿದ್ದಾರೆ. https://ainkannada.com/kolar-i-did-not-speak-disrespectfully-about-soldiers-mla-kottur-manjunath/ ಹಲ್ಲೆಯಿಂದ ಓರ್ವ ಕೈದಿಗೆ ತಲೆಗೆ ಗಂಭೀರ ಗಾಯವಾಗಿದೆ. ಆತನನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಕೈದಿಗೆ ಜೈಲು ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿದೆ. ಆನಂದ್ ಹಾಗೂ ಹುಸೇನ್ ಇಬ್ಬರು ಗಾಯಗೊಂಡಿರುವ ಕೈದಿಗಳಾಗಿದ್ದು, ಸೂರ್ಯಪ್ರಕಾಶ್ (24) ಹಲ್ಲೆ ಮಾಡಿರುವ ವಿಚಾರಣಾದೀನ ಕೈದಿ ಆಗಿದ್ದಾನೆ. ಈ ಘಟನೆ ಬುಧವಾರ ನಡೆದಿದೆ. ಮಧ್ಯಾಹ್ನ ಊಟದ ವೇಳೆ ಸೂರ್ಯ ಪ್ರಕಾಶ್ ಹಾಗೂ ಆನಂದ ನಡುವೆ ಸಣ್ಣ ಕಾರಣಕ್ಕೆ ಜಗಳ ಶುರುವಾಗಿದೆ. ಆ ಸಮಯದಲ್ಲಿ ಸೂರ್ಯಪ್ರಕಾಶ್ ಸಮೀಪದ ಬಾತ್ರೂಮ್ನಲ್ಲಿ ಅಳವಡಿಸಿದ್ದ ಟೈಲ್ಸ್ ತೆಗೆದುಕೊಂಡು ಆನಂದ್ ಮೇಲೆ ಹಲ್ಲೆ ಮಾಡಿದ್ದಾನೆ. ಇದೇ ಸಮಯದಲ್ಲಿ ಹೊಡೆದಾಟ ಬಿಡಿಸಲು ಬಂದಿದ್ದ ಮತ್ತೊಬ್ಬ ಕೈದಿ ಹುಸೇನ್ ಎಂಬಾತನ ಮೇಲೆ ಕೂಡ ಟೈಲ್ಸ್ನಿಂದ ಹಲ್ಲೆ ಮಾಡಿದ್ದು, ಸದ್ಯ ಆನಂದ್ಗೆ ಗಂಭೀರ ಗಾಯಗಳಾಗಿವೆ. ಹುಸೇನ್ನನ್ನು ಜೈಲಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದು,…
ಕೋಲಾರ – ನಾನು ಸೈನಿಕರ ಬಗ್ಗೆ ಅಪಮಾನ ರೀತಿಯಲ್ಲಿ ಮಾತನಾಡಿಲ್ಲ, ಯಾರನ್ನು ದೂಷಣೆ ಮಾಡುವ ರೀತಿ ಮಾತನಾಡಿಲ್ಲ. ದೇಶದ ಒಳಗೆ ಬಂದು 26 ಜನ ಜನ ಅಮಾಯಕರನ್ನು ಕೊಂದರು, ಅವರನ್ನು ಫಸ್ಟ್ ಹುಡುಕಿ ಆ ಹೆಣ್ಣುಕ್ಕಳಿಗೆ ಒಪ್ಪಿಸಿ ಎಂದು ಹೇಳಿರುವೆ ಅಷ್ಟೇ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವ್ರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ರು, ಪಹಲ್ಗಾಮ್ ನಲ್ಲಿ ನಡೆದ ಘಟನೆಯಿಂದ ಹೆಣ್ಣು ಮಕ್ಕಳು ಎಷ್ಟು ತೊಂದರೆ ನೋವು ಅನುಭವಿಸುತ್ತಿದ್ದಾರೆ, https://ainkannada.com/hubballi-journalists-should-develop-professional-loyalty-raju-anantha-sa-nayakwadi-advises/ ದೇಶದಲ್ಲಿ ಮೂರು, ಆರು ತಿಂಗಳೊಮ್ಮೆ ಇಂತಹ ಕೃತ್ಯಗಳು ನಡೆಯುತ್ತಿದೆ, ಇದಕ್ಕೆ ಕೊನೆ ಇಲ್ಲವಾ? ಭಾರತೀಯರು ಬಲಿಯಾಗುತ್ತಿರುಬೇಕಾ? ನಾನು ಯಾವುದೇ ಪಕ್ಷದಿಂದ ಮಾತನಾಡುತ್ತಿಲ್ಲ, ಕಾಂಗ್ರೆಸ್ ಶಾಸಕನಾಗಿದ್ದರೂ ಒಬ್ಬ ದೇಶದ ಪ್ರಜೆಯಾಗಿ ಮಾತನಾಡುತ್ತಿದ್ದೇನೆ, ಪಬ್ಲಿಕ್ ಮಾತನಾಡುತ್ರಿರುವ ಬಗ್ಗೆ ಮಾತನಾಡಿರುವೆ, ಹೆಣ್ಣು ಮಕ್ಕಳಿಗೆ ಆಗಿರುವ ಅನ್ಯಾಯಕ್ಕೆ ತೃಪ್ತಿಕರವಾಗಿಲ್ಲ, ಭಾರತ ಇನ್ನಷ್ಟು ಪ್ರತಿಕಾರ ತೀರಿಸಿಕೊಳ್ಳಬೇಕಾಗಿತ್ತು, ಭಾರತಕ್ಕೆ ಒಳ್ಳೆ ಅವಕಾಶವಿತ್ತು ಎಂದು ಹೇಳಿದರು.
ಹುಬ್ಬಳ್ಳಿ: ಇಂದಿನ ದಿನಗಳಲ್ಲಿ ಪತ್ರಿಕೆಗಳು ಪ್ರಭಾವಶಾಲಿಯಾಗಿದ್ದು ಪತ್ರಕರ್ತರು ವೃತ್ತಿ ನಿಷ್ಠೆ ಬೆಳೆಸಿಕೊಳ್ಳಲು ಸಾಮಾಜಿಕ ಹೋರಾಟಗಾರರು ರಾಜು ಅನಂತ ಸಾ ನಾಯಕವಾಡಿ ಹೇಳಿದರು. https://ainkannada.com/second-puc-2-results-announced-31-27-students-pass/ ನಗರದಲ್ಲಿಂದು ಶ್ರೀ ಸಿದ್ಧಾರೂಢ ಮರದ ಆವರಣದಲ್ಲಿ ಸತ್ಯದರ್ಪಣ ಮತ್ತು ಕನ್ನಡ ಧ್ವಜ ಪತ್ರಿಕಾ ಕಾರ್ಯಾಲಯ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು, ಪತ್ರಿಕೆಗಳಿಗೆ ತನ್ನದೇ ಜವಾಬ್ದಾರಿ ಇರುತ್ತದೆ. ಕಾರ್ಯಾಯಾಂಗ ಶಾಸಕಾಂಗ ಹಾಗೂ ನ್ಯಾಯಾಂಗದಂತೆ ಪತ್ರಿಕಾರಂಗ ಸಹ ಇಂದು ಅಂಗ ಆಗಿದೆ. ಪ್ರತಿಯೊಬ್ಬರು ಪತ್ರಿಕೆ ರಂಗವನ್ನ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಶ್ರೀ ಸಿದ್ಧಾರೂಢ ಮಠದ ಟ್ರಸ್ಟ್ ಸಮಿತಿ ಅಧ್ಯಕ್ಷ ಚನ್ನವೀರ ಮುಂಗರವಾಡಿ, ಕಾಂಗ್ರೆಸ್ ನಾಯಕ ಶರಣಪ್ಪ ಕೊಟಗಿ, ರಮೇಶ ಬೆಳಗಾವಿ, ಪತ್ರಿಕಾ ಸಂಪಾದಕರಾದ ಎಂ.ಎನ್.ಮೇಟಿಯವರ, ವಸಂತ ಹಬೀಬ್ ಮುಂತಾದವರು ಭಾಗವಹಿಸಿದ್ದರು.
ಬೆಂಗಳೂರು:- ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಶೇಕಡಾ 31.27ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. https://ainkannada.com/sexual-assault-on-minor-three-including-stepmother-sentenced-to-life-imprisonment/ ಎಸ್, ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1ರಲ್ಲಿ ಫಲಿತಾಂಶ ಪೂರ್ಣಗೊಂಡಿರದ 1,53,620 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದರು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಏಪ್ರಿಲ್ 24ರಿಂದ ಮೇ 8ರವರೆಗೆ ನಡೆದಿದ್ದ ಎರಡನೇ ದ್ವಿತೀಯ ಪಿಯು ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ಹಾಜರಾಗಿದ್ದರು. 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಉತ್ತೀರ್ಣರ್ಣಾಗಿದ್ದಾರೆ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿದ್ದ 71,964 ವಿದ್ಯಾರ್ಥಿಗಳು ಪರೀಕ್ಷೆ-2 ಅನ್ನೂ ಬರೆದಿದ್ದಾರೆ. ಇವರಲ್ಲಿ 41,719 ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ. ಜೂನ್ 9ರಿಂದ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ-3 ನಡೆಯಲಿದೆ. ದ್ವಿತೀಯ ಪಿಯು ಪರೀಕ್ಷೆ-3 ತೆಗೆದುಕೊಳ್ಳುವವರಿಗೂ ಕೂಡ ಶುಲ್ಕ ಇರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.…
ತುಮಕೂರು:- ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಸತ್ರ ನ್ಯಾಯಾಲಯದ ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ. https://ainkannada.com/proposal-to-the-government-to-provide-two-more-kps-schools-to-maddur-constituency-mla-k-m-uday/ ಅಪರಾಧಿ ಅರುಣ್ ಕುಮಾರ್ಗೆ ಶಿಕ್ಷೆ ಜೊತೆಗೆ 1 ಲಕ್ಷ 50 ಸಾವಿರ ರೂ. ದಂಡ ವಿಧಿಸಿದೆ. ಹಾಗೇ, ಅಜ್ಜಿ ಗಂಗಮ್ಮ, ಹಾಗೂ ಮಲತಾಯಿ ರತ್ನಮ್ಮಗೂ ಕೂಡ ತಲಾ 1 ಲಕ್ಷ ರೂ. ದಂಡ ಸಹಿತ ಶಿಕ್ಷೆ ನೀಡಿದೆ. ಇನ್ನು ಅಪ್ರಾಪ್ತೆಗೆ ಕಾನೂನು ಸೇವಾ ಪ್ರಾಧಿಕಾರದ ಪರಿಹಾರ ಸೇರಿ 13 ಲಕ್ಷ 50 ಸಾವಿರ ರೂ. ಹಣ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಘಟನೆ ವಿವರ:- ಮೊದಲ ಪತ್ನಿಗೆ ಐವರು ಹೆಣ್ಣು ಮಕ್ಕಳು ಅನ್ನೋ ಕಾರಣಕ್ಕೆ ಪತಿ ಮತ್ತೊಂದು ಮದುವೆಯಾಗಿದ್ದನು. ಆದರೆ, ಎರಡನೇ ಪತ್ನಿಗೆ ಮಕ್ಕಳಾಗಿರಲಿಲ್ಲ. ಈ ಹೊಟ್ಟೆ ಕಿಚ್ಚಿನಿಂದ ಮಲತಾಯಿ ರತ್ನಮ್ಮ ಹಾಗೂ ಅಜ್ಜಿ ಗಂಗಮ್ಮ ಸಂತ್ರಸ್ತೆಯನ್ನು ಕೂಲಿ ಕೆಲಸಕ್ಕೆ ಕರೆದೊಯ್ದಿದ್ದರು. ಬಳಿಕ, ಶೆಡ್ನಲ್ಲಿ ಕೂಡಿ ಹಾಕಿ ಅಪರಾಧಿ ಅರುಣ್…