ಗೋಡೆಗಳ ಮೇಲೆ ಹರಿದಾಡುವ ಹಲ್ಲಿಗಳನ್ನು ಕಂಡರೆ ಹಲವರಿಗೆ ಭಯ. ಅನೇಕ ಮಂದಿ ಮುಟ್ಟುವುದಿರಲಿ ನೋಡಲು ಸಹ ಇಷ್ಟಪಡುವುದಿಲ್ಲ. ಹಲ್ಲಿಯೊಂದು ವಿಷಕಾರಿ ಪ್ರಾಣಿ ಎಂದು ಅನೇಕ ಮಂದಿ ಭಾವಿಸಿದ್ದಾರೆ. ಇನ್ನೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಹಲ್ಲಿಗಳು ಮೈ ಮೇಲೆ ಬಿದ್ದರೆ ಅಥವಾ ಸ್ಪರ್ಶಿಸಿದರೆ ತಕ್ಷಣ ಸ್ನಾನ ಮಾಡಬೇಕು ಎಂದು ಮನೆಯಲ್ಲಿ ಹಿರಿಯರು ಹೇಳುವುದನ್ನು ನೀವು ಆಗಾಗ ಕೇಳಿರಬಹುದು. https://ainkannada.com/countdown-to-rcb-vs-kkr-clash-three-changes-in-kkr-playing-11/ ದೇಹದ ಮೇಲೆ ಬೀಳುವ ಹಲ್ಲಿಗಳು ಪುರುಷರು ಮತ್ತು ಮಹಿಳೆಯರಿಗೆ ವಿಭಿನ್ನ ಮಂಗಳಕರ ದಿನಗಳಿವೆ ಎಂದು ಹೇಳಲಾಗುತ್ತದೆ. ಉದಾಹರಣೆಗೆ, ಹಲ್ಲಿ ಪುರುಷರ ಬಲಭಾಗದಲ್ಲಿ ಬಿದ್ದರೆ ಶುಭವೆಂದು ಪರಿಗಣಿಸಲಾಗುತ್ತದೆ ಮತ್ತು ಅದು ಅವನ ಎಡಭಾಗದಲ್ಲಿ ಬಿದ್ದರೆ ಅಶುಭವೆಂದು ಪರಿಗಣಿಸಲಾಗುತ್ತದೆ. ಅದೇ ರೀತಿ, ಮಹಿಳೆಯರಿಗೆ ಹಲ್ಲಿ ಎಡಭಾಗಕ್ಕೆ ಬಿದ್ದರೆ ಶುಭ ಮತ್ತು ಬಲಭಾಗಕ್ಕೆ ಬಿದ್ದರೆ ಅಶುಭ ಎಂದು ಹೇಳಲಾಗುತ್ತದೆ. ಹಲ್ಲಿ ಬೀಳುವ ಸ್ಥಳವನ್ನು ಅವಲಂಬಿಸಿ ಫಲಿತಾಂಶಗಳು ಅವಲಂಬಿತವಾಗಿರುತ್ತದೆ ಎಂದು ಹೇಳಲಾಗುತ್ತದೆ. ಹಲ್ಲಿ ದೇಹದ ಯಾವ ಭಾಗಗಳ ಮೇಲೆ ಬಿದ್ದರೆ ಏನರ್ಥ? ನಿಮ್ಮ ತಲೆಯ ಮೇಲೆ ಹಲ್ಲಿ ಬಿದ್ದರೆ,…
Author: AIN Author
ಬೆಂಗಳೂರು:- ಪತಿಯಿಂದಲೇ ಪತ್ನಿ ಭೀಕರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕಲೈವಾಣಿ ಹತ್ಯೆಯಾದ ಮಹಿಳೆ. ರಮೇಶ್ ಹೆಂಡತಿ ಕೊಂದ ಪಾಪಿ ಗಂಡ. https://ainkannada.com/rcb-match-tomorrow-in-bengaluru-tight-security-at-chinnaswamy-stadium/ ಇಬ್ಬರೂ ಕೂಡ ಕಳೆದ ಕೆಲ ವರ್ಷದ ಹಿಂದೆ ಎರಡನೇ ವಿವಾಹವಾಗಿದ್ದರು. ಆರೋಪಿ ರಮೇಶ್ ಮರಗೆಲಸ ಮಾಡಿಕೊಂಡಿದ್ದ. ಆರೋಪಿ ರಮೇಶ್ ಗೆ ಅದಾಗಲೇ ಇಬ್ಬರು ಮಕ್ಕಳಿದ್ದರು. ಮಕ್ಕಳ ವಿಷಯವಾಗಿ ಕಳೆದ ಒಂದು ವರ್ಷದಿಂದ ಇಬ್ಬರ ನಡುವೆ ಗಲಾಟೆಯಿತ್ತು. ಗಲಾಟೆ ಜೋರಾಗಿ ಪತ್ನಿಯನ್ನ ರಮೇಶ್ ಮರಗೆಲಸದ ಉಳಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು:- ಪಾಕಿಸ್ತಾನ ಹಾಗೂ ಭಾರತ ವಿರುದ್ಧದ ಯುದ್ಧದ ಸಂಘರ್ಷದಲ್ಲಿ ಸ್ಥಗಿತಗೊಂಡಿದ್ದ ಐಪಿಎಲ್ ಮತ್ತೆ ಪುನರಾರಂಭ ಆಗುತ್ತಿದೆ. https://ainkannada.com/is-your-house-plagued-by-cockroaches-then-try-this-simple-home-remedy/ ಆರ್ಸಿಬಿ ಹಾಗೂ ಕೆಕೆಆರ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಘರ್ಷಣೆಯ ಬಳಿಕ ಐಪಿಎಲ್ ಪುನರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ನಡೆಯದಂತೆ ಚಿನ್ನಸ್ವಾಮಿ ಮೈದಾನದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೆಕೆಆರ್ ಮತ್ತು ಆರ್ಸಿಬಿ ನಡುವಿನ ಈ ಮಹತ್ವದ ಐಪಿಎಲ್ ಪಂದ್ಯಕ್ಕೆ 1,600 ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ನಾಲ್ವರು ಡಿಸಿಪಿ ಅಧಿಕಾರಿಗಳು, 12 ಎಸಿಪಿ, 28 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್ ಸೇರಿ 1600 ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. ಇಷ್ಟೇ ಅಲ್ಲದೇ ಕ್ಯೂಆರ್ಟಿ, ವಾಟರ್ ಜೆಟ್, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ನಿಯೋಜನೆ ಮಾಡಲಾಗಿರುತ್ತದೆ. 4 ಕೆಎಸ್ಆರ್ಪಿ ತುಕಡಿ, ಹೋಂಗಾರ್ಡ್ಸ್ ಕೂಡ ಭದ್ರತೆ ನೀಡಲಿದ್ದಾರೆ.
ಮನೆಯಲ್ಲಿ ಜಿರಳೆ ಅತ್ತಿಂದಿತ್ತ ಓಡಾಡುತ್ತಿದ್ದರೆ ನಿಮಗೆ ಒಂಥರಾ ಅನಿಸೋದಿಲ್ಲವೇ? . ಅದರಲ್ಲೂ ನೀವು ನಿಮ್ಮ ಮನೆಯನ್ನು ಅಡುಗೆ ಮನೆಯನ್ನು ಎಷ್ಟೇ ಶುಚಿಯಾಗಿಟ್ಟರೂ ಜಿರಳೆಗಳ ಕಾಟ ತಪ್ಪಿದ್ದಲ್ಲ. ಈ ಜಿರಳೆಗಳ ಕಾಟದಿಂದ ಮುಕ್ತಿ ಪಡೆಯಲು ಹಲವಾರು ಸ್ಪ್ರೇಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ಅದರ ಘಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಅದಕ್ಕಾಗಿ ನಾವಿಂದು ಕೆಲವೊಂದು ಮನೆಮದ್ದನ್ನು ತಿಳಿಸಲಿದ್ದೇವೆ. ಇವುಗಳನ್ನು ಬಳಸಿ ಮನೆಯಿಂದ ಜಿರಳೆಗಳನ್ನು ಓಡಿಸಬಹುದು. ಯಾವುದಕ್ಕೂ ಹೆದರದ ಕೆಲವರು ಜಿರಳೆಗೆ ಭಯ ಪಡುತ್ತಾರೆ. ಅದರಲ್ಲಿಯೂ ಜಿರಳೆ ಅಂದ್ರೆ ಸಾಕು ಹೆಣ್ಮಕ್ಕಳಂತೂ ಎದ್ದು, ಬಿದ್ದು ಓಡಿ ಹೋಗ್ತಾರೆ. ಮೈ ಮೇಲೆ ಜಿರಣೆ ಹರಿಯುತ್ತಿದ್ದಂತೆಯೇ ಅದನ್ನು ಸಾಯಿಸಲು ಪೊರಕೆಯನ್ನು ಹುಡುಕುತ್ತಾರೆ. https://ainkannada.com/mumbai-team-gets-a-boost-another-explosive-batter-enters-in-place-of-will-jacks/ ಅಲ್ಲದೇ ಮನೆಯಲ್ಲಿ ಜಿರಳೆಗಳು ಹೆಚ್ಚಾದರೆ ಕಾಯಿಲೆ ಕೂಡ ಹೆಚ್ಚಾದಂತೆ. ಮನೆಯಲ್ಲಿ ಮಕ್ಕಳು ಮತ್ತು ವಯಸ್ಸಾದವರು ಇದ್ದರೆ ಅವರ ಬಗ್ಗೆ ಎಚ್ಚರಿಕೆ ವಹಿಸಬೇಕು. ಜಿರಳೆಗಳು ಅಡ್ಡಾಡಿದ ಜಾಗದಲ್ಲಿದ್ದ ಆಹಾರ ಸೇವಿಸಬಾರದು. ಏಕೆಂದರೆ ಇದರಿಂದ ನಾನಾ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಜಿರಳೆಗಳ ಕಾಟದಿಂದ ಮುಕ್ತಿ ಪಡೆಯಲು ಹಲವರು…
IPL ಮರು ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಮುಂಬೈ ತಂಡಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಐಪಿಎಲ್ 18 ನೇ ಋತುವಿನಲ್ಲಿ, ವಿಲ್ ಜ್ಯಾಕ್ಸ್ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಫ್ರಾಂಚೈಸಿ ಈಗ ಜ್ಯಾಕ್ಸ್ ಬದಲಿಗೆ ಮತ್ತೋರ್ವ ಸ್ಫೋಟಕ ಬ್ಯಾಟರ್ ಇಂಗ್ಲೆಂಡ್ನ ಜಾನಿ ಬೈರ್ಸ್ಟೋವ್ ಅವರನ್ನು ತಮ್ಮ ತಂಡಕ್ಕೆ ಸೇರಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಇಎಸ್ಪಿಎನ್ ಕ್ರಿಕ್ಇನ್ಫೋ ವರದಿಯ ಪ್ರಕಾರ, ಬೈರ್ಸ್ಟೋವ್ ಮತ್ತು ಫ್ರಾಂಚೈಸಿ ನಡುವಿನ ಮಾತುಕತೆ ಅಂತಿಮ ಹಂತದಲ್ಲಿದೆ. ಉಳಿದ ಎರಡು ಲೀಗ್ ಪಂದ್ಯಗಳ ನಂತರ ಮುಂಬೈ ಇಂಡಿಯನ್ಸ್ ಪರ ಬೈರ್ಸ್ಟೋವ್ ಆಡುವ ಸಾಧ್ಯತೆ ಇದೆ. ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ 14 ಅಂಕಗಳನ್ನು ಗಳಿಸಿದೆ. https://ainkannada.com/pakistan-pm-shehbaz-ready-to-talk-to-india-for-peace/ ಜಾನಿ ಬೈರ್ಸ್ಟೋವ್ ಮುಂಬೈ ಇಂಡಿಯನ್ಸ್ ಸೇರುವುದನ್ನು ಅಧಿಕೃತವಾಗಿ ಘೋಷಿಸಲಾಗಿಲ್ಲ. ಮಾತುಕತೆ ಬಹುತೇಕ ಅಂತಿಮಗೊಂಡಿದೆ. ವಾಸ್ತವವಾಗಿ, ಮುಂಬೈ ಇಂಡಿಯನ್ಸ್ ತಂಡವು ಲೀಗ್ ಹಂತದಲ್ಲಿ ಇನ್ನೂ ಎರಡು ಪಂದ್ಯಗಳನ್ನು ಆಡಬೇಕಾಗಿದೆ. ಈ ಎರಡೂ ಪಂದ್ಯಗಳು ತಂಡಕ್ಕೆ ಬಹಳ ಮುಖ್ಯ.…
ಇಸ್ಲಾಮಾಬಾದ್:- ಭಾರತದೊಂದಿಗೆ ‘ಶಾಂತಿ ಮಾತುಕತೆ’ಗೆ ಸಿದ್ಧ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. https://ainkannada.com/rain-alert-heavy-rain-likely-in-the-capital-bengaluru-tomorrow/ ಭಾರತದೊಂದಿಗಿನ ಸಂಘರ್ಷದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹಾಗೂ ಸೈನಿಕರನ್ನು ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಭಾರತದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮೇ 6 ಮತ್ತು 7 ರ ಮಧ್ಯರಾತ್ರಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಹಲವಾರು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಭಾರತೀಯ ಸಶಸ್ತ್ರ ಪಡೆಗಳು ರಫೀಕಿ, ಮುರಿಯದ್, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಚುನಿಯನ್ ಸೇರಿದಂತೆ ಹಲವಾರು…
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಭರ್ಜರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದಾದ್ಯಂತ ಮೇ 17ರಿಂದ ಮಳೆ ಚುರುಕುಗೊಳ್ಳಲಿದ್ದು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. https://ainkannada.com/is-the-rat-infestation-increasing-in-your-house-if-so-do-this-and-get-rid-of-it/ ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದರೂ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್…
ಅನೇಕರ ಮನೆಯಲ್ಲಿ ಇಲಿಗಳ ಕಾಟವಿರುತ್ತದೆ ಆದರೆ ಅದನ್ನು ಕಡೆಗಣಿಸುತ್ತಾರೆ. ಕೆಲವೊಮ್ಮೆ ಇಲಿಗಳು ಅಡುಗೆ ಮನೆಯ ಸಾಮಗ್ರಿಗಳು, ಬಟ್ಟೆ ಬರೆಗಳನ್ನೆಲ್ಲಾ ತಿಂದು ಹಾಕುತ್ತದೆ. ಇದು ಬರೀ ಅಷ್ಟಕ್ಕೆ ಸೀಮಿತವಾಗಿಲ್ಲ. ಇಲಿಗಳಿಂದಾಗಿ ಹಲವಾರು ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. https://ainkannada.com/good-news-government-increases-honorarium-for-guest-teachers-and-lecturers/ ಇಲಿಗಳು ಮನೆಗೆ ಬರೋದು ಯಾರಿಗೂ ಇಷ್ಟವಿರೋದಿಲ್ಲ. ಯಾಕಂದ್ರೆ ಅವುಗಳಿಂದ ಆಗೋ ಉಪದ್ರ ಒಂದಾ, ಎರಡಾ? ಬಟ್ಟೆ ಕಟ್ ಮಾಡುತ್ತೆ, ದಿನಸಿ, ತರಕಾರಿಗಳನ್ನು ತಿನ್ನುತ್ತೆ ಹೀಗೆ ನಾನಾ ರೀತಿಯ ತೊಂದರೆಗಳೇ ಹೊರತು, ಒಂದೂ ಉಪಯೋಗವಂತು ಇಲ್ಲ. ಹಾಗಾದ್ರೆ ಹೀಗೆ ಉಪದ್ರ ಕೊಡೋ ಇಲಿ ಮನೆಗೆ ಯಾಕೆ ಬರುತ್ತೆ? ಹಾಗೂ ಅದನ್ನು ಈಸಿಯಾಗಿ ಓಡಿಸೋದು ಹೇಗೆ? ಇದಕ್ಕೆಲ್ಲಾ ಪರಿಹಾರ ಇಲ್ಲಿದೆ ನೋಡಿ. ಮೊದಲಿಗೆ, ನೀವು ಮನೆಯಲ್ಲಿ ತಂಡಿಟ್ಟ ತಿಂಡಿಗಳ ಪರಿಮಳವನ್ನು ಮೂಸಿ ಅಥವಾ ಜಿಡ್ಡಿನಾಂಶ ಇರೋದ್ರಿಂದ ಇಲಿಗಳು ಅಟೋಮ್ಯಾಟಿಕ್ ಆಗಿ ನಿಮ್ಮ ಮನೆಗೆ ಎಂಟ್ರಿ ಕೊಡುತ್ತದೆ. ಹಾಗೆ ಅಲ್ಲಿಯೇ ಜಾಂಡ ಊರುತ್ತವೆ. ಇದನ್ನು ಓಡಿಸಲು ಇಷ್ಟು ಮಾಡಿ ಸಾಕು. ರಾತ್ರಿ ಮಲಗುವ ಮುನ್ನ ಮನೆಯ ಎಲ್ಲಾ…
ಬೆಂಗಳೂರು:- ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವ ಧನ ಹೆಚ್ಚಿಸಿ ಆದೇಶ ಹೊರಡಿಸಿದೆ. https://ainkannada.com/two-young-women-who-went-to-a-well-to-wash-clothes/ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆಯನ್ನು ತಲಾ 2,000 ರೂಪಾಯಿಗಳಷ್ಟು ಹೆಚ್ಚಳ ಮಾಡಿದೆ. ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ರೂಪಾಯಿ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ಗೌರವ ಸಂಭಾವನೆ ನಿಗದಿಪಡಿಸಿತ್ತು. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2,000 ರೂಪಾಯಿಗಳು ಸೇರ್ಪಡೆ ಆಗಿದೆ. ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12,000 ರೂಪಾಯಿ ಸಿಗಲಿದೆ. ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂಪಾಯಿ ಸಿಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ 2,000 ಗಳಷ್ಟು ಗೌರವಧನ ಹೆಚ್ಚಳವಾಗಿದೆ
ಯಾದಗಿರಿ:- ಬಟ್ಟೆ ತೊಳೆಯಲು ಬಾವಿಗೆ ಹೋದ ಇಬ್ಬರು ಯುವತಿಯರು ಸಾವನ್ನಪ್ಪಿರುವ ಘಟನೆ ಯಾದಗಿರಿಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ಜರುಗಿದೆ. https://ainkannada.com/dikeshi-bartade-african-lion-adopted-state-youth-congress/ ವೈಶಾಲಿ (17), ನವೀತಾ (16) ಮೃತರು. ಇಬ್ಬರು ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳೀಯರು ಶವವನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.