ತುಮಕೂರು:- ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಸತ್ರ ನ್ಯಾಯಾಲಯದ ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ. https://ainkannada.com/proposal-to-the-government-to-provide-two-more-kps-schools-to-maddur-constituency-mla-k-m-uday/ ಅಪರಾಧಿ ಅರುಣ್ ಕುಮಾರ್ಗೆ ಶಿಕ್ಷೆ ಜೊತೆಗೆ 1 ಲಕ್ಷ 50 ಸಾವಿರ ರೂ. ದಂಡ ವಿಧಿಸಿದೆ. ಹಾಗೇ, ಅಜ್ಜಿ ಗಂಗಮ್ಮ, ಹಾಗೂ ಮಲತಾಯಿ ರತ್ನಮ್ಮಗೂ ಕೂಡ ತಲಾ 1 ಲಕ್ಷ ರೂ. ದಂಡ ಸಹಿತ ಶಿಕ್ಷೆ ನೀಡಿದೆ. ಇನ್ನು ಅಪ್ರಾಪ್ತೆಗೆ ಕಾನೂನು ಸೇವಾ ಪ್ರಾಧಿಕಾರದ ಪರಿಹಾರ ಸೇರಿ 13 ಲಕ್ಷ 50 ಸಾವಿರ ರೂ. ಹಣ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಘಟನೆ ವಿವರ:- ಮೊದಲ ಪತ್ನಿಗೆ ಐವರು ಹೆಣ್ಣು ಮಕ್ಕಳು ಅನ್ನೋ ಕಾರಣಕ್ಕೆ ಪತಿ ಮತ್ತೊಂದು ಮದುವೆಯಾಗಿದ್ದನು. ಆದರೆ, ಎರಡನೇ ಪತ್ನಿಗೆ ಮಕ್ಕಳಾಗಿರಲಿಲ್ಲ. ಈ ಹೊಟ್ಟೆ ಕಿಚ್ಚಿನಿಂದ ಮಲತಾಯಿ ರತ್ನಮ್ಮ ಹಾಗೂ ಅಜ್ಜಿ ಗಂಗಮ್ಮ ಸಂತ್ರಸ್ತೆಯನ್ನು ಕೂಲಿ ಕೆಲಸಕ್ಕೆ ಕರೆದೊಯ್ದಿದ್ದರು. ಬಳಿಕ, ಶೆಡ್ನಲ್ಲಿ ಕೂಡಿ ಹಾಕಿ ಅಪರಾಧಿ ಅರುಣ್…
Author: AIN Author
ಮಂಡ್ಯ :- ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೆಲ ದಿನಗಳಲ್ಲೇ ಮಂಜೂರಾತಿ ಸಿಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಭರವಸೆ ನೀಡಿದರು. https://ainkannada.com/attention-motorists-no-parking-around-chinnaswamy-tomorrow/ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ₹ 72 ಲಕ್ಷ ರೂ ವೆಚ್ಚದಲ್ಲಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಕೊಠಡಿಗಳ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರದಿಂದ ಹೊಸ ಶೈಕ್ಷಣಿಕ ನೀತಿ ರೂಪಿತವಾಗಿದೆ. ಕ್ಷೇತ್ರದ ಕೆಲವು ಕಡೆ ಸರ್ಕಾರಿ ಶಾಲೆಗಳಿಗೆ ಉತ್ತಮ ಕಟ್ಟಡಗಳಿವೆ, ಶಿಕ್ಷಕರಿದ್ದಾರೆ. ಆದರೆ ಮಕ್ಕಳ ಕೊರತೆ ಕಾಡುತ್ತಿದೆ. ಹೀಗಾಗಿ ಕ್ಷೇತ್ರದಲ್ಲಿ ಕೆಪಿಎಸ್ ಶಾಲೆಗಳನ್ನು ತೆರೆಯುವ ಮೂಲಕ ಖಾಸಗಿ ಶಾಲೆಗಳ ಕಡೆ ಮುಖ ಮಾಡಿರುವ ಪೋಷಕರು ತಮ್ಮ ಮಕ್ಕಳನ್ನು ಕೆಪಿಎಸ್ ಶಾಲೆಗಳಿಗೆ ದಾಖಲು ಮಾಡಬೇಕೆಂದರು. ವಿದ್ಯಾರ್ಥಿಗಳು ಬೆಳಿಗ್ಗೆಯಿಂದ ಸಂಜೆವರೆಗೆ ಶಾಲೆಗೆ ಬಂದು ಪುಸ್ತಕ ನೋಡಿ ಹೋದರೆ ಸಾಲದು. ಶಾಲೆಯಲ್ಲಿ ಉತ್ತಮ ಸ್ನೇಹಮಯ ವಾತಾವರಣ ಬೆಳೆಸಬೇಕು. ಉನ್ನತ ಶೈಕ್ಷಣಿಕ…
ಬೆಂಗಳೂರು:- ಭಾರತ-ಪಾಕ್ ಉದ್ವಿಗ್ನತೆಯಿಂದಾಗಿ ಮೇ 8ರಂದು ಸ್ಥಗಿತಗೊಂಡಿದ್ದ ಐಪಿಎಲ್ ದ್ವಿತಿಯಾರ್ಧ ನಾಳೆಯಿಂದ ಶುರುವಾಗಲಿದೆ. ಮೇ 17ರಂದು ಅಂದ್ರೆ ನಾಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿವೆ. https://ainkannada.com/rcb-vs-kkr-high-voltage-match-tomorrow-do-you-know-what-the-playing-11-of-the-bengaluru-team-is-like/ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರಿ ಪೊಲೀಸರು ಅಲರ್ಟ್ ಘೋಷಿಸಿದ್ದು, ಟ್ರಾಫಿಕ್ ತಡೆಗಟ್ಟಲು ಹಲವು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸುಗಮ ಸಂಚಾರಕ್ಕಾಗಿ ವ್ಯವಸ್ಥೆ ಮಾಡಿದ್ದು, ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಪಂದ್ಯ ವೀಕ್ಷಿಸಲು ಬರುವವರಿಗೆ ಪಾರ್ಕಿಂಗ್ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್ಗಳು ಪಿಕ್ಪ್ ಮತ್ತು ಡ್ರಾಪ್ ಮಾಡಲು ಪ್ರತ್ಯೇಕ ಸ್ಥಳ ನಿಗದಿ ಮಾಡಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಪಾರ್ಕಿಂಗ್ ಕೊರತೆಯಿರುವುದರಿಂದ ಬಿಎಂಟಿಸಿ, ಮೆಟ್ರೋ ಬಳಸಲು ಮನವಿ ಮಾಡಲಾಗಿದೆ. ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ? 1. ಕ್ವೀನ್ಸ್ ರಸ್ತೆ- ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ 2. ಎಂ.ಜಿ ರಸ್ತೆ- ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ…
ನಾಳೆ ಅಂದ್ರೆ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಹೈವೋಲ್ಟೇಜ್ ಮ್ಯಾಚ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಬಿಕ್ಕಟ್ಟು ಹಿನ್ನೆಲೆ ಐಪಿಎಲ್ 2025 ಟೂರ್ನಿಯನ್ನು ಅರ್ಧಕ್ಕೆ ರದ್ದುಗೊಳಿಸಿ ಒಂದು ವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಆಟಗಾರರು ಹಾಗೂ ಅಭಿಮಾನಿಗಳ ಹಿತದೃಷ್ಟಿಯಿಂದ ಪ್ರಾಂಚೈಸಿಗಳ ಮನವಿ ಮೇರೆಗೆ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ ಇದೀಗ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಐಪಿಎಲ್ ಉಳಿದ ಪಂದ್ಯಗಳಿಗೆ ಮತ್ತೆ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. https://ainkannada.com/what-does-it-mean-if-a-lizard-bites-on-any-part-of-the-body-astrology-says-this/ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ಈ ಹಿನ್ನೆಲೆ ಅವರವರ ದೇಶಗಳಿಗೆ ವಾಪಸ್ ತೆರಳಿದ್ದ ಆಟಗಾರರು ಮತ್ತೆ ತಮ್ಮ ಐಪಿಎಲ್ ತಂಡವನ್ನು ಸೇರ್ಪಡೆ ಆಗಿದ್ದಾರೆ. ಆದರೆ, ವೆಸ್ಟ್ ಇಂಡಿಸ್ ಹಾಗೂ ಇಂಗ್ಲೆಂಡ್ ತಂಡದ ಆಟಗಾರರು ಅವರ ದೇಶದಲ್ಲಿ ಪಂದ್ಯಗಳು ಇರುವುದರಿಂದ ಕೆಲವು ದಿನಗಳಷ್ಟೇ ಐಪಿಎಲ್ ಆಡಲಿದ್ದಾರೆ. ಕೊನೆಯಲ್ಲಿ ಅಲಭ್ಯರಾಗುವ ಸಾಧ್ಯತೆಯಿದೆ. ಆದರೆ,…
ಗೋಡೆಗಳ ಮೇಲೆ ಹರಿದಾಡುವ ಹಲ್ಲಿಗಳನ್ನು ಕಂಡರೆ ಹಲವರಿಗೆ ಭಯ. ಅನೇಕ ಮಂದಿ ಮುಟ್ಟುವುದಿರಲಿ ನೋಡಲು ಸಹ ಇಷ್ಟಪಡುವುದಿಲ್ಲ. ಹಲ್ಲಿಯೊಂದು ವಿಷಕಾರಿ ಪ್ರಾಣಿ ಎಂದು ಅನೇಕ ಮಂದಿ ಭಾವಿಸಿದ್ದಾರೆ. ಇನ್ನೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಹಲ್ಲಿಗಳು ಮೈ ಮೇಲೆ ಬಿದ್ದರೆ ಅಥವಾ ಸ್ಪರ್ಶಿಸಿದರೆ ತಕ್ಷಣ ಸ್ನಾನ ಮಾಡಬೇಕು ಎಂದು ಮನೆಯಲ್ಲಿ ಹಿರಿಯರು ಹೇಳುವುದನ್ನು ನೀವು ಆಗಾಗ ಕೇಳಿರಬಹುದು. https://ainkannada.com/countdown-to-rcb-vs-kkr-clash-three-changes-in-kkr-playing-11/ ದೇಹದ ಮೇಲೆ ಬೀಳುವ ಹಲ್ಲಿಗಳು ಪುರುಷರು ಮತ್ತು ಮಹಿಳೆಯರಿಗೆ ವಿಭಿನ್ನ ಮಂಗಳಕರ ದಿನಗಳಿವೆ ಎಂದು ಹೇಳಲಾಗುತ್ತದೆ. ಉದಾಹರಣೆಗೆ, ಹಲ್ಲಿ ಪುರುಷರ ಬಲಭಾಗದಲ್ಲಿ ಬಿದ್ದರೆ ಶುಭವೆಂದು ಪರಿಗಣಿಸಲಾಗುತ್ತದೆ ಮತ್ತು ಅದು ಅವನ ಎಡಭಾಗದಲ್ಲಿ ಬಿದ್ದರೆ ಅಶುಭವೆಂದು ಪರಿಗಣಿಸಲಾಗುತ್ತದೆ. ಅದೇ ರೀತಿ, ಮಹಿಳೆಯರಿಗೆ ಹಲ್ಲಿ ಎಡಭಾಗಕ್ಕೆ ಬಿದ್ದರೆ ಶುಭ ಮತ್ತು ಬಲಭಾಗಕ್ಕೆ ಬಿದ್ದರೆ ಅಶುಭ ಎಂದು ಹೇಳಲಾಗುತ್ತದೆ. ಹಲ್ಲಿ ಬೀಳುವ ಸ್ಥಳವನ್ನು ಅವಲಂಬಿಸಿ ಫಲಿತಾಂಶಗಳು ಅವಲಂಬಿತವಾಗಿರುತ್ತದೆ ಎಂದು ಹೇಳಲಾಗುತ್ತದೆ. ಹಲ್ಲಿ ದೇಹದ ಯಾವ ಭಾಗಗಳ ಮೇಲೆ ಬಿದ್ದರೆ ಏನರ್ಥ? ನಿಮ್ಮ ತಲೆಯ ಮೇಲೆ ಹಲ್ಲಿ ಬಿದ್ದರೆ,…
ಬೆಂಗಳೂರು:- ಪತಿಯಿಂದಲೇ ಪತ್ನಿ ಭೀಕರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕಲೈವಾಣಿ ಹತ್ಯೆಯಾದ ಮಹಿಳೆ. ರಮೇಶ್ ಹೆಂಡತಿ ಕೊಂದ ಪಾಪಿ ಗಂಡ. https://ainkannada.com/rcb-match-tomorrow-in-bengaluru-tight-security-at-chinnaswamy-stadium/ ಇಬ್ಬರೂ ಕೂಡ ಕಳೆದ ಕೆಲ ವರ್ಷದ ಹಿಂದೆ ಎರಡನೇ ವಿವಾಹವಾಗಿದ್ದರು. ಆರೋಪಿ ರಮೇಶ್ ಮರಗೆಲಸ ಮಾಡಿಕೊಂಡಿದ್ದ. ಆರೋಪಿ ರಮೇಶ್ ಗೆ ಅದಾಗಲೇ ಇಬ್ಬರು ಮಕ್ಕಳಿದ್ದರು. ಮಕ್ಕಳ ವಿಷಯವಾಗಿ ಕಳೆದ ಒಂದು ವರ್ಷದಿಂದ ಇಬ್ಬರ ನಡುವೆ ಗಲಾಟೆಯಿತ್ತು. ಗಲಾಟೆ ಜೋರಾಗಿ ಪತ್ನಿಯನ್ನ ರಮೇಶ್ ಮರಗೆಲಸದ ಉಳಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು:- ಪಾಕಿಸ್ತಾನ ಹಾಗೂ ಭಾರತ ವಿರುದ್ಧದ ಯುದ್ಧದ ಸಂಘರ್ಷದಲ್ಲಿ ಸ್ಥಗಿತಗೊಂಡಿದ್ದ ಐಪಿಎಲ್ ಮತ್ತೆ ಪುನರಾರಂಭ ಆಗುತ್ತಿದೆ. https://ainkannada.com/is-your-house-plagued-by-cockroaches-then-try-this-simple-home-remedy/ ಆರ್ಸಿಬಿ ಹಾಗೂ ಕೆಕೆಆರ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಘರ್ಷಣೆಯ ಬಳಿಕ ಐಪಿಎಲ್ ಪುನರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ನಡೆಯದಂತೆ ಚಿನ್ನಸ್ವಾಮಿ ಮೈದಾನದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೆಕೆಆರ್ ಮತ್ತು ಆರ್ಸಿಬಿ ನಡುವಿನ ಈ ಮಹತ್ವದ ಐಪಿಎಲ್ ಪಂದ್ಯಕ್ಕೆ 1,600 ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ನಾಲ್ವರು ಡಿಸಿಪಿ ಅಧಿಕಾರಿಗಳು, 12 ಎಸಿಪಿ, 28 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್ ಸೇರಿ 1600 ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. ಇಷ್ಟೇ ಅಲ್ಲದೇ ಕ್ಯೂಆರ್ಟಿ, ವಾಟರ್ ಜೆಟ್, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ನಿಯೋಜನೆ ಮಾಡಲಾಗಿರುತ್ತದೆ. 4 ಕೆಎಸ್ಆರ್ಪಿ ತುಕಡಿ, ಹೋಂಗಾರ್ಡ್ಸ್ ಕೂಡ ಭದ್ರತೆ ನೀಡಲಿದ್ದಾರೆ.
ಮನೆಯಲ್ಲಿ ಜಿರಳೆ ಅತ್ತಿಂದಿತ್ತ ಓಡಾಡುತ್ತಿದ್ದರೆ ನಿಮಗೆ ಒಂಥರಾ ಅನಿಸೋದಿಲ್ಲವೇ? . ಅದರಲ್ಲೂ ನೀವು ನಿಮ್ಮ ಮನೆಯನ್ನು ಅಡುಗೆ ಮನೆಯನ್ನು ಎಷ್ಟೇ ಶುಚಿಯಾಗಿಟ್ಟರೂ ಜಿರಳೆಗಳ ಕಾಟ ತಪ್ಪಿದ್ದಲ್ಲ. ಈ ಜಿರಳೆಗಳ ಕಾಟದಿಂದ ಮುಕ್ತಿ ಪಡೆಯಲು ಹಲವಾರು ಸ್ಪ್ರೇಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ಅದರ ಘಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಅದಕ್ಕಾಗಿ ನಾವಿಂದು ಕೆಲವೊಂದು ಮನೆಮದ್ದನ್ನು ತಿಳಿಸಲಿದ್ದೇವೆ. ಇವುಗಳನ್ನು ಬಳಸಿ ಮನೆಯಿಂದ ಜಿರಳೆಗಳನ್ನು ಓಡಿಸಬಹುದು. ಯಾವುದಕ್ಕೂ ಹೆದರದ ಕೆಲವರು ಜಿರಳೆಗೆ ಭಯ ಪಡುತ್ತಾರೆ. ಅದರಲ್ಲಿಯೂ ಜಿರಳೆ ಅಂದ್ರೆ ಸಾಕು ಹೆಣ್ಮಕ್ಕಳಂತೂ ಎದ್ದು, ಬಿದ್ದು ಓಡಿ ಹೋಗ್ತಾರೆ. ಮೈ ಮೇಲೆ ಜಿರಣೆ ಹರಿಯುತ್ತಿದ್ದಂತೆಯೇ ಅದನ್ನು ಸಾಯಿಸಲು ಪೊರಕೆಯನ್ನು ಹುಡುಕುತ್ತಾರೆ. https://ainkannada.com/mumbai-team-gets-a-boost-another-explosive-batter-enters-in-place-of-will-jacks/ ಅಲ್ಲದೇ ಮನೆಯಲ್ಲಿ ಜಿರಳೆಗಳು ಹೆಚ್ಚಾದರೆ ಕಾಯಿಲೆ ಕೂಡ ಹೆಚ್ಚಾದಂತೆ. ಮನೆಯಲ್ಲಿ ಮಕ್ಕಳು ಮತ್ತು ವಯಸ್ಸಾದವರು ಇದ್ದರೆ ಅವರ ಬಗ್ಗೆ ಎಚ್ಚರಿಕೆ ವಹಿಸಬೇಕು. ಜಿರಳೆಗಳು ಅಡ್ಡಾಡಿದ ಜಾಗದಲ್ಲಿದ್ದ ಆಹಾರ ಸೇವಿಸಬಾರದು. ಏಕೆಂದರೆ ಇದರಿಂದ ನಾನಾ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಜಿರಳೆಗಳ ಕಾಟದಿಂದ ಮುಕ್ತಿ ಪಡೆಯಲು ಹಲವರು…
IPL ಮರು ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಮುಂಬೈ ತಂಡಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಐಪಿಎಲ್ 18 ನೇ ಋತುವಿನಲ್ಲಿ, ವಿಲ್ ಜ್ಯಾಕ್ಸ್ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಫ್ರಾಂಚೈಸಿ ಈಗ ಜ್ಯಾಕ್ಸ್ ಬದಲಿಗೆ ಮತ್ತೋರ್ವ ಸ್ಫೋಟಕ ಬ್ಯಾಟರ್ ಇಂಗ್ಲೆಂಡ್ನ ಜಾನಿ ಬೈರ್ಸ್ಟೋವ್ ಅವರನ್ನು ತಮ್ಮ ತಂಡಕ್ಕೆ ಸೇರಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಇಎಸ್ಪಿಎನ್ ಕ್ರಿಕ್ಇನ್ಫೋ ವರದಿಯ ಪ್ರಕಾರ, ಬೈರ್ಸ್ಟೋವ್ ಮತ್ತು ಫ್ರಾಂಚೈಸಿ ನಡುವಿನ ಮಾತುಕತೆ ಅಂತಿಮ ಹಂತದಲ್ಲಿದೆ. ಉಳಿದ ಎರಡು ಲೀಗ್ ಪಂದ್ಯಗಳ ನಂತರ ಮುಂಬೈ ಇಂಡಿಯನ್ಸ್ ಪರ ಬೈರ್ಸ್ಟೋವ್ ಆಡುವ ಸಾಧ್ಯತೆ ಇದೆ. ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ 14 ಅಂಕಗಳನ್ನು ಗಳಿಸಿದೆ. https://ainkannada.com/pakistan-pm-shehbaz-ready-to-talk-to-india-for-peace/ ಜಾನಿ ಬೈರ್ಸ್ಟೋವ್ ಮುಂಬೈ ಇಂಡಿಯನ್ಸ್ ಸೇರುವುದನ್ನು ಅಧಿಕೃತವಾಗಿ ಘೋಷಿಸಲಾಗಿಲ್ಲ. ಮಾತುಕತೆ ಬಹುತೇಕ ಅಂತಿಮಗೊಂಡಿದೆ. ವಾಸ್ತವವಾಗಿ, ಮುಂಬೈ ಇಂಡಿಯನ್ಸ್ ತಂಡವು ಲೀಗ್ ಹಂತದಲ್ಲಿ ಇನ್ನೂ ಎರಡು ಪಂದ್ಯಗಳನ್ನು ಆಡಬೇಕಾಗಿದೆ. ಈ ಎರಡೂ ಪಂದ್ಯಗಳು ತಂಡಕ್ಕೆ ಬಹಳ ಮುಖ್ಯ.…
ಇಸ್ಲಾಮಾಬಾದ್:- ಭಾರತದೊಂದಿಗೆ ‘ಶಾಂತಿ ಮಾತುಕತೆ’ಗೆ ಸಿದ್ಧ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. https://ainkannada.com/rain-alert-heavy-rain-likely-in-the-capital-bengaluru-tomorrow/ ಭಾರತದೊಂದಿಗಿನ ಸಂಘರ್ಷದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹಾಗೂ ಸೈನಿಕರನ್ನು ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಭಾರತದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮೇ 6 ಮತ್ತು 7 ರ ಮಧ್ಯರಾತ್ರಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಹಲವಾರು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಭಾರತೀಯ ಸಶಸ್ತ್ರ ಪಡೆಗಳು ರಫೀಕಿ, ಮುರಿಯದ್, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಚುನಿಯನ್ ಸೇರಿದಂತೆ ಹಲವಾರು…