ಬೆಂಗಳೂರು:- ಕರ್ನಾಟಕದಲ್ಲಿ ನಾಳೆಯಿಂದ ಭಾರೀ ಮಳೆ ಆಗಲಿದ್ದು, ಒಂಭತ್ತು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. https://ainkannada.com/plane-crash-miraculously-one-person-survived-is-this-luck-2/ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಚ್ಎಎಲ್ನಲ್ಲಿ31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Author: AIN Author
ಆರೋಗ್ಯಕಾರಿ ತೂಕದ ವಿಚಾರಕ್ಕೆ ಬಂದರೆ ಆಗ ಅದರಲ್ಲಿ ಬಾದಾಮಿಯು ಪ್ರಮುಖ ಸ್ಥಾನ ಪಡೆಯುವುದು ಎನ್ನುವುದರಲ್ಲಿ ಸಂಶಯವೇ ಇಲ್ಲ. ಯಾಕೆಂದರೆ ಇದರಲ್ಲಿ ಹಲವಾರು ಬಗೆಯ ಪೋಷಕಾಂಶಗಳಿದ್ದು, ಆರೋಗ್ಯವನ್ನು ರಕ್ಷಿಸಲು ಸಹಕಾರಿ ಆಗಿದೆ. ಹೀಗಾಗಿ ನಿತ್ಯವೂ ಬೆಳಗ್ಗೆ ಮೂರು ಬಾದಾಮಿ ತಿಂದರೆ ಅದರಿಂದ ಹಲವಾರು ರೀತಿಯ ಆರೋಗ್ಯ ಲಾಭಗಳು ದೇಹಕ್ಕೆ ಸಿಗುವುದು. ಮೂರು ಬಾದಾಮಿ ನಿತ್ಯವೂ ಸೇವನೆ ಮಾಡಿದರೆ ಆಗ ದೇಹಕ್ಕೆ ಯಾವೆಲ್ಲಾ ಲಾಭಗಳು ಸಿಗುವುದು ಎಂದು ನಾವು ನಿಮಗೆ ತಿಳಿಯದೆ ಇರುವ ವಿಚಾರಗಳನ್ನು ತಿಳಿಸಿಕೊಡಲಿದ್ದೇವೆ. https://ainkannada.com/plane-crash-miraculously-one-person-survived-is-this-luck/ ಭಾರತದಲ್ಲಿ ರಾತ್ರಿ ನೆನೆಸಿಟ್ಟ್ ಬಾದಾಮಿಯನ್ನು ತಿನ್ನುವುದು ಒಂದು ಸಂಪ್ರದಾಯದಂತೆ ಬಹುತೇಕ ಎಲ್ಲಾ ಕುಟುಂಬಗಳಲ್ಲಿಯೂ ನಡೆಸಿಕೊಂಡು ಬರಲಾಗುತ್ತಿದೆ. ನಮ್ಮ ಅಮ್ಮಂದಿರು ಮತ್ತು ಅಜ್ಜಿಯಂದಿರು ಈ ವಿಧಾನವನ್ನು ಹಿಂದಿನವರಿಂದ ಕಲಿತು ಬಂದು ತಮ್ಮ ಕುಟುಂಬದ ಕಿರಿಯರಿಗೂ ತಿನ್ನಿಸುವ ಮೂಲಕ ಈ ಸಂಪ್ರದಾಯವನ್ನು ಜೀವಂತವಾಗಿ ಇರಿಸಿದ್ದಾರೆ. ಆದರೆ ಏಕಾಗಿ ನೆನೆಸಿಟ್ಟು ತಿನ್ನಬೇಕು? ಹುರಿದು ಅಥವಾ ಕರಿದು ತಿಂದರೆ ಇದರ ರುಚಿ ಹೆಚ್ಚುವುದಲ್ಲವೇ? ಒಣಗಿದ್ದಂತೆಯೇ ತಿಂದರೆ ಏನು ನಷ್ಟ? ಇಂತಹ ಕೆಲವು…
ಅಹಮ್ಮದಾಬಾದ್:- ಅಹಮ್ಮದಾಬಾದ್ ನಲ್ಲಿ ಇಂದು ಸಂಭವಿಸಿದ್ದ ವಿಮಾನ ದುರಂತದಲ್ಲಿ 241 ಜನ ಸಾವನ್ನಪ್ಪಿದ್ದರೆ, ಓರ್ವ ವ್ಯಕ್ತಿ ಪವಾಡದ ರೀತಿ ಪಾರಾಾಗಿದ್ದಾನೆ. ಗುಜರಾತ್ನ ಏರ್ ಇಂಡಿಯಾ ವಿಮಾನ ಪತನವಾದ ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಆದರೆ ಪವಾಡಸದೃಶವಾಗಿ ಒಬ್ಬ ವ್ಯಕ್ತಿ ವಿಮಾನದಿಂದ ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ https://ainkannada.com/ahmedabad-plane-crash-tata-group-announces-rs-1-crore-compensation-for-the-families-of-the-deceased/ ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ವಿಶ್ವಾಸ್ ಕುಮಾರ್ ರಮೇಶ್ ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ವಿಮಾನ ನಿಲ್ದಾಣದ ಟೇಕಾಫ್ ಆದ 30 ಸೆಕೆಂಡ್ಗಳ ನಂತರ ದೊಡ್ಡ ಶಬ್ಧ ಕೇಳಿ ಬಂತು ನಂತರ ವಿಮಾನ ಪತನ ಹೊಂದಿತು ಎಂದು ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಪಾರಾದ ವಿಶ್ವಾಸ್ ಅವರು ತುರ್ತು ನಿರ್ಗಮನ ಡೋರ್ ಬಳಿಯ 11A ಸೀಟಿನಲ್ಲಿ ಕುಳಿತುಕೊಂಡಿದ್ದರು. ಪತನಗೊಳ್ಳುವ ಕೊನೆ ಕ್ಷಣದಲ್ಲಿ ವಿಮಾನದಿಂದ ಅವರು ಹಾರಿದ್ದರಿಂದ ಪಾರಾಗಿದ್ದಾರೆ. ವಿಶ್ವಾಸ್ ಅವರ ಎದೆ , ಕಣ್ಣು, ಪಾದಗಳು ಗಾಯಗೊಂಡಿದ್ದು ಅವರು…
ನವದೆಹಲಿ:- ಅಹಮದಾಬಾದ್ ವಿಮಾನ ದುರಂತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಗಳಿಗೆ 1 ಕೋಟಿ ಪರಿಹಾರವನ್ನು ಟಾಟಾ ಗ್ರೂಪ್ ಘೋಷಿಸಿದೆ. ಕಂಪನಿಯ ಅಧ್ಯಕ್ಷ ಎನ್ ಚಂದ್ರಶೇಖರನ್ ಈ ಘೋಷಣೆ ಮಾಡಿದ್ದಾರೆ. https://ainkannada.com/plane-crash-condolences-from-many-cricketers-including-kohli-rohit/ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಟಾಟಾ ಗ್ರೂಪ್ ಭರಿಸಲಿದೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದರು. ವಿಮಾನ ಪತನಗೊಂಡು ಬಿದ್ದ ಬಿ ಜೆ ಮೆಡಿಕಲ್ಸ್ ಹಾಸ್ಟೆಲ್ ನಿರ್ಮಾಣಕ್ಕೆ ನಾವು ಸಹಾಯ ಮಾಡುತ್ತೇವೆ ಎಂದು ಅವರು ತಿಳಿಸಿದರು. ಈ ಕ್ಷಣದಲ್ಲಿ ನಾವು ಅನುಭವಿಸುತ್ತಿರುವ ದುಃಖವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಮತ್ತು ಗಾಯಗೊಂಡವರ ಜೊತೆ ನಾವಿದ್ದೇವೆ ಎಂದು ಹೇಳಿದರು. ಏನಿದು ಘಟನೆ? ಟೇಕಾಫ್ ನಂತರ ಎಂಜಿನ್ನಲ್ಲಿ ತಾಂತ್ರಿಕದೋಷ ಉಂಟಾದ ಪರಿಣಾಮ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ನ ವಿಮಾನ ನಿಲ್ದಾಣದ ಬಳಿಯ ಬಿಜೆ ಮೆಡಿಕಲ್ ಕಾಲೇಜಿನ ಮೇಲೆ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಕೇವಲ 2 ಕಿ.ಮೀ ದೂರದ ಮೇಘಾನಿ…
ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 241 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ. https://ainkannada.com/plane-crash-karnataka-born-co-pilot-dies/ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಸೇರಿದಂತೆ ಕ್ರಿಕೆಟ್ ಜಗತ್ತು ಕೂಡ ಈ ಅವಘಡದ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದೆ. ಈ ದುರಂತ ಇಡೀ ಭಾರತವನ್ನು ಬೆಚ್ಚಿಬೀಳಿಸಿದ್ದು, ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಶ್ರೀಸಾಮಾನ್ಯನವರೆಗೆ ಎಲ್ಲರೂ ಈ ಅಪಘಾತಕ್ಕೆ ಕಂಬನಿ ಮಿಡಿದಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಏಕದಿನ ನಾಯಕ ಮತ್ತು ಸ್ಟಾರ್ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಈ ಘಟನೆಯನ್ನು ಹೃದಯವಿದ್ರಾವಕ ಎಂದು ಬಣ್ಣಿಸಿದ್ದಾರೆ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕೂಡ ಈ ದುರಂತದಿಂದ ತುಂಬಾ ದುಃಖಿತರಾಗಿದ್ದು, ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಅಹಮದಾಬಾದ್ನಲ್ಲಿ ನಡೆದ ಅಪಘಾತದಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಕೊಹ್ಲಿ ಬರೆದುಕೊಂಡಿದ್ದಾರೆ. ಅದೇ ಸಮಯದಲ್ಲಿ, ಮಾಜಿ ಸ್ಟಾರ್ ಬ್ಯಾಟ್ಸ್ಮನ್ ಶಿಖರ್ ಧವನ್…
ಮಂಗಳೂರು:- ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಇಂದು ಅಪಘಾತಕ್ಕೀಡಾಗಿದ್ದು, ಇದರಲ್ಲಿ ಕರ್ನಾಟಕ ಮೂಲದ ಕೋ ಪೈಲಟ್ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. https://ainkannada.com/bagalkot-confusion-in-kari-harivalli-celebrations-by-gosevaks/ ಕರ್ನಾಟಕ ಮೂಲದ ಸಹ ಪೈಲಟ್ ಕ್ಲೈವ್ ಕುಂದರ್ ಮೃತಪಟ್ಟಿದ್ದಾರೆ. ಕರ್ನಾಟಕದ ಕರಾವಳಿ ಮೂಲದವಾರದ ಕ್ಲೈವ್ ಕುಂದರ್ ಅವರು ಮುಂಬೈನಲ್ಲಿ ವಾಸವಾಗಿದ್ದರು. ಕ್ಲೈವ್ ಕುಂದರ್ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕ್ಲೈವ್ ಕುಂದರ್ ಅವರಿಗೆ 1100 ಗಂಟೆ ವಿಮಾನ ಹಾರಾಟ ನಡೆಸಿದ ಅನುಭವವಿತ್ತು. ಕ್ಲೈವ್ ಕುಂದರ್ ಅವರು ಪತನಗೊಂಡ ಏರ್ ಇಂಡಿಯಾದ AI-171 ವಿಮಾನದ ಕೋ ಪೈಲಟ್ ಆಗಿದ್ದರು ಎಂದು ತಿಳಿದು ಬಂದಿದೆ. ಆಗಿದ್ದೇನು? ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ನಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 242 ಮಂದಿ ಇದ್ದರು. ವಿಮಾನ ಟೇಕ್ ಆಫ್ ಆಗುವ ಸಮಯದಲ್ಲಿ ಅವಘಡ ಸಂಭವಿಸಿದೆ. ವಿಮಾನದ ಹಿಂಭಾಗವು ಮರಕ್ಕೆ ಡಿಕ್ಕಿ ಹೊಡೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಮುಖ್ಯರಸ್ತೆಯಲ್ಲಿ ಕರಿ ನಿಮಿತ್ಯ ಗೋಸೇವಕರಿಂದ ನಡೆದ ಮರಿ ಹೋರಿಗಳ ಮೂಲಕ ಕರಿ ಆಚರಣೆ ನಡೆಯಿತು. ಉತ್ತರ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಪರಂಪರಾಗತವಾಗಿ ಕರಿ ಹರಿಯುವ ಕಾರ್ಯಕ್ರಮ ಪ್ರತಿವರ್ಷ ಅವ್ಯಾಹತವಾಗಿ ಸಾಗುತ್ತಿದೆ. https://ainkannada.com/do-you-always-watch-a-lot-of-mobile-and-tv-if-so-your-sex-life-is-difficult-difficult/ ಸುಮಾರು ಇನ್ನೂರು-ಮುನ್ನೂರು ವರ್ಷಗಳ ಇತಿಹಾಸವಿರುವ ಈ ಸಂಪ್ರದಾಯಕ್ಕೆ ರಬಕವಿ ನಗರದಲ್ಲಿ ಬುಧವಾರ ಸಂಜೆ ೫ ಗಂಟೆಯಿಂದ ಕರಿ ಹರಿಯುವ ಕಾರ್ಯದಲ್ಲಿ ಭಾಗಿಯಾಗಲು ಸಾವಿರಾರು ನಾಗರಿಕರು ಮುಖ್ಯ ರಸ್ತೆಯಲ್ಲಿ ಜಮಾಯಿಸಿದ್ದರು. ನಗರದ ಎಲ್ಲ ಧಾರ್ಮಿಕ, ಪಾರಂಪರಿಕ ಸಂಪ್ರದಾಯಗಳನ್ನು ಆಚರಿಸುವ ಶ್ರೀಶಂಕರಲಿಂಗ ಟ್ರಸ್ಟ್ ಕಮೀಟಿ ಹುಣ್ಣಿಮೆ, ಕರಿ ಆಚರಣೆ ಬಗ್ಗೆ ಮೊದಲೇ ಸಾರ್ವಜನಿಕರಿಗೆ ತಿಳುವಳಿಕೆ ನೀಡಿತ್ತು. ರಾತ್ರಿಯಾದರೂ ಗೌಡರ ಮತ್ತು ನಾಯಕರ ಎತ್ತುಗಳು ಕರಿ ಹರಿಯಲು ಬಾರದ್ದರಿಂದ ನಾಗರಿಕರಲ್ಲಿ ಗೊಂದಲ ಶುರುವಾಯ್ತು. ಟ್ರಸ್ಟ್ ಕಮಿಟಿ ಸಮ್ಮುಖದಲ್ಲಿ ಗೌಡರ ಮತ್ತು ನಾಯಕರ ಎತ್ತುಗಳು ವರ್ಷದ ಸರದಿಯಂತೆ ಪ್ರತ್ಯೇಕವಾಗಿ ಕರಿ ಹರಿಯಲು ಒಪ್ಪಂದವಾಗಿತ್ತು. ಆದರೆ ಗೌಡರಿಂದ ತಕರಾರು ಬಂದ ಹಿನ್ನೆಲೆಯಲ್ಲಿ ಟ್ರಸ್ಟ್ ಕಮೀಟಿ ಕರಿ ಆಚರಣೆಗೆ…
ಮೊಬೈಲ್ ಬಳಕೆಯಿಂದ ಇಂದು ಮಕ್ಕಳು, ಹಿರಿಯರು ಸೇರಿದಂತೆ ಇಂದು ಅನೇಕರು ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮೊಬೈಲ್ ಗ್ಯಾಜೆಟ್ಗಳ ಅನಗತ್ಯ ಬಳಕೆಯನ್ನು ತಪ್ಪಿಸಲು, ಡಿಜಿಟಲ್ ಡಿಟಾಕ್ಸ್ ಮಾಡುವುದು ಹೇಗೆ ಎಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು https://ainkannada.com/ahmedabad-air-india-plane-crash-heartbreaking-rahul-gandhi/ ಮೊಬೈಲ್ ಬಳಕೆಯಿಂದ ಇಂದು ಮಕ್ಕಳು, ಹಿರಿಯರು ಸೇರಿದಂತೆ ಇಂದು ಅನೇಕರು ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮೊಬೈಲ್ ಗ್ಯಾಜೆಟ್ಗಳ ಅನಗತ್ಯ ಬಳಕೆಯನ್ನು ತಪ್ಪಿಸಲು, ಡಿಜಿಟಲ್ ಡಿಟಾಕ್ಸ್ ಮಾಡುವುದು ಹೇಗೆ ಎಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಇನ್ನೂ ಲೈಂಗಿಕ ಕ್ರಿಯೆಯು ವಯೋಸಹಜ ಪ್ರಕ್ರಿಯೆ. ಎರಡು ದೇಹಗಳು ಪರಸ್ಪರ ಮನದಾಳದಿಂದ ಮಿಲನ ಹೊಂದುವುದು ನಿಸರ್ಗದ ನಿಯಮ. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲೆಲ್ಲೂ ಗೆಜೆಟ್ಗಳದ್ದೇ ಕಹಾನಿ. ಮಕ್ಕಳಿಂದ ಹಿಡಿದು ಮುದುಕರರೆಗೂ ಮೊಬೈಲ್, ಟಿವಿಯೊಂದಿಗೆ ಸಮಯ ಕಳೆಯದವರಿಲ್ಲ. ಅದರಲ್ಲೂ ಯುವ ಜನಾಂಗಕ್ಕೆ ಮೊಬೈಲ್ ಎಂಬುದು ಗೀಳಾಗಿಬಿಟ್ಟಿದೆ. ನಿಮ್ಮ ಈ ಅಭ್ಯಾಸವೇ ಲೈಂಗಿಕ ಜೀವನಕ್ಕೆ ತೊಡಕುಂಟು ಮಾಡಲಿದೆ ಎಂದು ಸಂಶೋಧನೆಯಿಂದ ದೃಢಪಟ್ಟಿದೆ. https://ainkannada.com/ahmedabad-air-india-plane-crash-heartbreaking-rahul-gandhi/ ನೀವು 5 ಗಂಟೆಗಿಂತ ಹೆಚ್ಚು ಹೊತ್ತು ಟಿವಿ ಅಥವಾ ಮೊಬೈಲ್ನಲ್ಲಿ…
ಬೆಂಗಳೂರು:- ಕಾಲ್ತುಳಿತ ಕೇಸ್ ಗೆ ಸಂಬಂಧಿಸಿದಂತೆ ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ ಸೇರಿ ನಾಲ್ವರಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. https://ainkannada.com/narendra-modi-pm-modi-condoles-air-india-plane-crash/ ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಷರತ್ತು ಬದ್ಧ ಜಾಮೀನು ನೀಡಿದೆ. ಅಲ್ಲದೆ, ಶಮಂತ್ ಮಾವಿನಕೆರೆಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ನ್ಯಾಯಪೀಠ ಆದೇಶಿದೆ. ಆರೋಪಿಗಳು ದೇಶ ಬಿಟ್ಟು ತೆರಳದಂತೆ ನಿರ್ಬಂಧಿಸಿರುವ ಹೈಕೋರ್ಟ್, ಪಾಸ್ ಪೋರ್ಟ್ ಸರಂಡರ್ ಮಾಡುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ.
ನವದೆಹಲಿ:- ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. https://ainkannada.com/agriculture-sector-is-key-to-eliminating-unemployment-minister-n-chaluvarayaswamy/ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು X ಮಾಡಿರುವ ಮೋದಿ, ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಲ್ಲದೇ ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ. ಇನ್ನೂ ಅವಘಡದ ಕುರಿತು ಅವರು, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದು, ವಿಮಾನ ಅಪಘಾತದ ಕುರಿತು ಮಾಹಿತಿ ಪಡೆದಿದ್ದಾರೆ.