Author: AIN Author

ಕಲಘಟಗಿ: ತಾಲೂಕಿನ ದೇವಿಕೊಪ್ಪ ಹಾಗೂ 3 ತಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿ ಕಡೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಅಧ್ಯಕ್ಷರಾದ ಎಸ್.ಆರ್ ಪಾಟೀಲ ಚಾಲನೆ ನೀಡಿ ಮಾತನಾಡಿದರು. https://ainkannada.com/union-minister-prahlad-joshi-warns-e-commerce-sites/ ಅರ್ಹ ಗ್ರಾಮದಲ್ಲಿ ಇರುವ ಪ್ರತಿಯೊಬ್ಬ ಫಲಾನುಭವಿಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಪಂಚ್ ಗ್ಯಾರಂಟಿ ಯೋಜನೆಯ ಉಪಯೋಗಗಳನ್ನು ಸಮರ್ಪಕವಾಗಿ ಪಡೆದುಕೊಳ್ಳಬೇಕು ಯಾರು ಗ್ಯಾರೆಂಟಿ ಯೋಜನೆಯ ಸೌಲಭ್ಯಗಳಿಂದ ವಂಚಿತರಾಗಬಾರದು. ಸರಕಾರ ಎಲ್ಲಾ ಬಡತನ ರೇಖೆ, ಜಾತಿ ಜನಾಂಗ, ಬಡವರ ಶೋಷಿತರ ಪರವಾಗಿದೆ ಎಂದು ಸಾಬೀತುಪಡಿಸಿದೆ ಎಂದು ಹೇಳಿದರು. ಗ್ರಾಮದ ಮಹಿಳೆಯರೊಂದಿಗೆ ಚರ್ಚಿಸಿ ಗೃಹಲಕ್ಷ್ಮಿಯ ಮೊತ್ತವನ್ನು ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ತಪಾಸಣೆ, ಹೈನುಗಾರಿಕೆ, ಹೊಲಿಗೆ ಯಂತ್ರ ಖರೀದಿಸಿ ಸಾವಲಂಬಿ ಬದುಕು ಕಟ್ಟಿಕೊಳ್ಳಿ, ಕಾರ್ಯಕ್ರಮ ಉದ್ದೇಶಿಸಿ ತಾಲೂಕು ಅನುಷ್ಠಾನದ ಅಧ್ಯಕ್ಷರಾದ ಬಸವರಾಜ ಬಾವುಕಾರ್ ಮಾತನಾಡಿ ತಾಂತ್ರಿಕ ದೋಷ ಇದ್ದರೆ ಸಮಿತಿಯ ಗಮನಕ್ಕೆ ಪ್ರತಿಯೊಬ್ಬರು ತರಬೇಕು, ಈಗಾಗಲೇ ತಾಲೂಕಿನ ಅತ್ಯಂತ ಶೇಕಡ…

Read More

ಹುಬ್ಬಳ್ಳಿ:- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇ-ಕಾಮರ್ಸ್‌ ತಾಣಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಇ-ಕಾಮರ್ಸ್‌ ತಾಣಗಳಲ್ಲಿ ಪಾಕ್‌ ಸರಕು ಮಾರಿದರೆ ಹುಷಾರ್‌ ಎಂದಿದ್ದಾರೆ. https://ainkannada.com/hubballi-unfounded-allegations-against-modi-are-not-correct-somanna/ ಪಾಕಿಸ್ತಾನದ ಸರಕುಗಳ ಮಾರಾಟ ಮಾಡದಂತೆ ಎಲ್ಲಾ ವಾಣಿಜ್ಯ ಕಂಪನಿಗಳು ಮತ್ತು ಕಾರ್ಪೋರೇಷನ್‌ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಈ ಹಿಂದೆಯೇ ನೋಟಿಸ್‌ ಜಾರಿ ಮಾಡಿದೆ. ಆದರೂ ಕೆಲ ಇ-ಕಾಮರ್ಸ್‌ ತಾಣಗಳು, ಸಂಸ್ಥೆಗಳು ಸರಕು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಂದ್ರ ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಸಚಿವರು ಹೇಳಿದ್ದಾರೆ. ಅಮೇಜಾನ್‌, ಫ್ಲಿಪ್‌ಕಾರ್ಟ್‌, ಯು ಬೈ ಇಂಡಿಯಾ, Etsy, ದಿ ಫ್ಲ್ಯಾಗ್ ಕಂಪನಿ ಮತ್ತು ಕಾರ್ಪೊರೇಷನ್‌ಗಳಿಗೆ ಸರಕು ಮಾರಾಟ ಮಾಡದಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಆದರೂ ಈ ಆದೇಶ ಉಲ್ಲಂಘಿಸುತ್ತಿರುವುದು ಗೊತ್ತಾಗಿದೆ. ದೇಶದ ಹಿತದೃಷ್ಟಿಯಿಂದ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಜೋಶಿ ಹೇಳಿದ್ದಾರೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಪಾಕಿಸ್ತಾನ ಸಂಬಂಧಿತ ಎಲ್ಲಾ ವಸ್ತುಗಳನ್ನು ತಕ್ಷಣವೇ ತೆಗೆದುಹಾಕಬೇಕು ಮತ್ತು ರಾಷ್ಟ್ರೀಯ ಕಾನೂನನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸಚಿವರು ಕಟ್ಟುನಿಟ್ಟಿನ…

Read More

ಹುಬ್ಬಳ್ಳಿ: ಗದಗ-ವಾಡಿ ರೈಲು ಮಾರ್ಗ ಹಾಗೂ ಕುಷ್ಟಗಿಯಿಂದ ಹುಬ್ಬಳ್ಳಿಗೆ ನೂತನ ಪ್ಯಾಸೆಂಜ‌ರ್ ರೈಲನ್ನು ಮೇ.೧೫ (ಗುರುವಾರ) ರಂದು ಲೋಕಾರ್ಪಣೆ ಮಾಡಲಿದ್ದೇವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. https://ainkannada.com/chamarajanagar-students-who-excelled-in-the-sslc-exams-were-felicitated-by-the-district-in-charge-minister/ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಧನೂರು ವಾಡಿ ಉತ್ತರ ಕರ್ನಾಟಕ ಭಾಗದ ಮಹತ್ವದ ರೈಲು ಮಾರ್ಗಗಳಲ್ಲಿ ಒಂದಾಗಿದೆ. ಇದು ಮುಂಬಯಿ ಕರ್ನಾಟಕದಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ನೇರವಾಗಿ ರೈಲು ಸಂಪರ್ಕ ಕಲ್ಪಿಸುವ ಯೋಜನೆಯಾಗಿದೆ. ಈ ಮಾರ್ಗವು ಮುಂದಿನ ದಿನಮಾನಗಳಲ್ಲಿ ಉತ್ತಮವಾದ ವಾಣಿಜ್ಯ ರೈಲು ಮಾರ್ಗಗಳಿಗೆ ಸಂಪರ್ಕ ಕೊಂಡಿಯಾಗಲಿದ್ದು, ಹುಬ್ಬಳ್ಳಿಯಿಂದ ಸೋಲಾಪುರ, ಹುಬ್ಬಳ್ಳಿಯಿಂದ ಬೀದ‌ರ್ ರೈಲು ಮಾರ್ಗಕ್ಕೆ ಇದು ಪರ್ಯಾಯ ಮಾರ್ಗ ಆಗಲಿದೆ. ಗದಗ ವಾಡಿ ರೈಲು ಮಾರ್ಗದ ತಳಕಲ್ ನಿಂದ ಕುಕನೂರು, ಯಲಬುರ್ಗಾ, ಕುಷ್ಟಗಿವರೆಗೆ ಸುಮಾರು ೫೮ ಕಿ.ಮೀ. ವರೆಗೆ ಕಾಮಗಾರಿ ಪೂರ್ಣಗೊಂಡಿದೆ ಎಂದರು. ವಾಡಿಯಿಂದ ಶಹಪುರ ವರೆಗೆ ರೈಲು ಮಾರ್ಗವು ೩ ರಿಂದ ೬ ತಿಂಗಳಲ್ಲಿ ಮುಕ್ತಾಯವಾಗಲಿದೆ. ಗದಗ ವಾಡಿ ರೈಲ್ವೆ ಯೋಜನೆಯಡಿ ಪೂರ್ಣಗೊಂಡಿರುವ ಗದಗ-…

Read More

ಚಾಮರಾಜನಗರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ 10 ವಿದ್ಯಾರ್ಥಿಗಳನ್ನು ನಗರದಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸನ್ಮಾನಿಸಿದರು. https://ainkannada.com/hunt-for-the-corrupt-lokayukta-raids-across-the-state-including-bengaluru/ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವರು ಎಸ್.ಎಸ್.ಎಲ್.ಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಹಾರ ಹಾಕಿ, ಫಲ ತಾಂಬೂಲ ನೀಡಿ ಗೌರವಿಸಿದರು. ಮುಂದಿನ ವಿದ್ಯಾರ್ಥಿ ಜೀವನದಲ್ಲಿಯೂ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಸಚಿವರು ಹಾರೈಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಇತರರು ಇದ್ದರು. ಗುಂಡ್ಲುಪೇಟೆ ತಾಲೂಕಿನ ಆದರ್ಶ ವಿದ್ಯಾಲಯದ ಹರ್ಷಿಣಿ.ಎಂ, ರಾಜೇಶ್ವರಿ, ಕೊಳ್ಳೇಗಾಲದ ಶ್ರೀ ವಾಸವಿ ವಿದ್ಯಾ ಕೇಂದ್ರ ಇಂಗ್ಲೀಷ್ ಮಾಧ್ಯಮದ…

Read More

ಬೆಂಗಳೂರು:- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ವಿವಿಧೆಡೆ ಭ್ರಷ್ಟರ ಬೇಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 12 ಕಡೆ ಲೋಕಾಯುಕ್ತ ದಾಳಿ ಮಾಡಿದೆ. ತುಮಕೂರಿನಲ್ಲಿ 7, ಬೆಂಗಳೂರು ಗ್ರಾಮಾಂತರ 8, ಯಾದಗಿರಿ 5, ಮಂಗಳೂರು 4, ವಿಜಯಪುರದಲ್ಲಿ 4 ಕಡೆಗಳಲ್ಲಿ ಲೋಕಾಯುಕ್ತ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಎಲ್ಲೆಲ್ಲಿ? 1.ತುಮಕೂರು, ರಾಜಶೇಖರ್, ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ.. 2.ಮಂಗಳೂರು: ಮಂಜುನಾಥ್, ಸರ್ವೆ ಮೇಲ್ವಿಚಾರಕರು, ದ.ಕ..‌ 3.ವಿಜಯಪುರ : ಶ್ರೀಮತಿ ರೇಣುಕಾ. ಸಾತರ್ಲೆ, ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ.. 4 ಬೆಂಗಳೂರು ನಗರ : ಮುರಳಿ ಟಿವಿ, ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ..‌ 5.ಬೆಂಗಳೂರು: ಎಚ್ ಆರ್ ನಟರಾಜ್, ಇನ್ಸ್‌ಪೆಕ್ಟರ್, ಕಾನೂನು ಮಾಪನಶಾಸ್ತ್ರ..‌ 6.ಬೆಂಗಳೂರು ಗ್ರಾಮಾಂತರ, ಅನಂತ್ ಕುಮಾರ್ SDA, ಹೊಸಕೋಟೆ ತಾಲೂಕು ಕಛೇರಿ.. 7.ಯಾದಗಿರಿ: ಉಮಾಕಾಂತ್,…

Read More

ಚಾಮರಾಜನಗರ:- ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಕುಡಿಯುವ ನೀರು ನಿರ್ವಹಣೆ, ಜಾನುವಾರುಗಳಿಗೆ ಮೇವು ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ನಡೆಸಿದ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. https://ainkannada.com/gunfight-in-manipurs-chandel-indian-army-kills-10-terrorists/ ಸದ್ಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ, ಆದರೆ ಮುಂಬರುವ ದಿನಗಳಲ್ಲಿ ಸಮರ್ಪಕವಾಗಿ ಮಳೆಯಾಗದಿದ್ದಲ್ಲಿ ಜಿಲ್ಲೆಯ 154 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆಯಿದೆ ಎಂದು ವಿವರಿಸಿದರು. ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕು ಅಗತ್ಯ ಇರುವ ಕಡೆ ಬೋರ್‌ವೆಲ್‌ಗಳನ್ನು ಕೊರೆಸಬೇಕು. ಹಾಗೂ ಕೆಟ್ಟು ಹೋಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ದುರಸ್ತಿಪಡಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Read More

ಭಾರತೀಯ ಸೇನೆ ನಡೆಸಿದ ಗುಂಡಿನ ಚಕಮಕಿಯಲ್ಲಿ 10 ಉಗ್ರರು ಎನ್ಕೌಂಟರ್ ಆಗಿರುವ ಘಟನೆ ಮಣಿಪುರದ ಚಾಂದೆಲ್‌ ಜಿಲ್ಲೆಯಲ್ಲಿ ಜರುಗಿದೆ. https://ainkannada.com/minister-venkatesh-pilots-vehicle-overturned-what-happened-next/ ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂದೆಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಹೊಂದಿದ್ದ ವ್ಯಕ್ತಿಗಳ ಚಲನವಲನಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಸ್ಪಿಯರ್ ಕಾರ್ಪ್ಸ್ ಅಡಿಯಲ್ಲಿ ಅಸ್ಸಾಂ ರೈಫಲ್ಸ್ ಘಟಕವು ಮೇ 14 ರಂದು ಕಾರ್ಯಾಚರಣೆ ನಡೆಸಿತು ಎಂದು ಸೇನೆಯ ಪೂರ್ವ ಕಮಾಂಡ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಕಾರ್ಯಾಚರಣೆಯ ಸಮಯದಲ್ಲಿ ಉಗ್ರರು, ಪಡೆಗಳ ಮೇಲೆ ಗುಂಡು ಹಾರಿಸಿದರು. ಅದಕ್ಕೆ ಸೇನಾಪಡೆ ತ್ವರಿತವಾಗಿ ಪ್ರತಿಕ್ರಿಯಿಸಿದೆ. ಗುಂಡಿನ ಚಕಮಕಿಯಲ್ಲಿ 10 ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

Read More

ಚಾಮರಾಜನಗರ:- ಇಲ್ಲಿನ ಬಿಳಿಗಿರಿರಂಗನ ಬೆಟ್ಟಕ್ಕೆ ಬುಧವಾರ ಸಚಿವ ವೆಂಕಟೇಶ್ ಭೇಟಿ ನೀಡಿದರು. ಈ ವೇಳೆ ಸಚಿವರ ಅಡ್ವಾನ್ಸ್ ಪೈಲಟ್ ವಾಹನ ಪಲ್ಟಿ ಹೊಡೆದಿದೆ. ಘಟನೆಯಿಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹಾಗೂ ಚಾಲಕನಿಗೆ ಗಾಯವಾಗಿದೆ. https://ainkannada.com/monsoon-heavy-rain-in-these-districts-for-a-week-where/ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ತಿರುವಿನಲ್ಲಿ ಈ ಘಟನೆ ಜರುಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಕಾಶ್ ಹಾಗೂ ಚಾಲಕನಿಗೆ ಗಂಭೀರ ಗಾಯವಾಗಿದೆ. ಇಬ್ಬರಿಗೂ ಗಂಭೀರ ಗಾಯ ಹಿನ್ನಲೆ, ಚಿಕಿತ್ಸೆಗೆ ಮೈಸೂರಿಗೆ ರವಾನೆ ಮಾಡಲಾಗಿದೆ.

Read More

ಬೆಂಗಳೂರು:- ರಾಜ್ಯದಲ್ಲಿ ಇಂದು ಉತ್ತರ ಕನ್ನಡ ಭಾಗದ ಜಿಲ್ಲೆಗಳಲ್ಲಿ ಹೆಚ್ಚು ಗುಡುಗು, ಸಿಡಿಲು ಹಾಗೂ ಗಾಳಿಯೊಂದಿಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. https://ainkannada.com/heavy-rain-in-nelamangala-national-highway-flooded-traffic-disrupted-in-many-places/ ಇನ್ನು ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿಂದತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್‌, ಚಿತ್ರದುರ್ಗ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಿಕ್ಕಮಗಳೂರು ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಮೇ 15 ರಂದು ದಕ್ಷಿಣ ಕನ್ನಡ,ಉಡುಪಿ, ಬೆಳಗಾವಿ ಧಾರವಾಡ, ಗದಗ,ಹಾವೇರಿ ಚಾಮರಾಜನಗರ, ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ…

Read More

ನೆಲಮಂಗಲ:- ನೆಲಮಂಗಲ ನಗರದ ಸುತ್ತಮುತ್ತ ಬುಧವಾರ ರಾತ್ರಿ ಬಾರಿ ಮಳೆಯಾಗಿದೆ. ಸತತ ಅರ್ಧ ಗಂಟೆಯಿಂದ ಸುರಿದ ಮಳೆಗೆ ನೆಲಮಂಗಲ ನಗರದ ಅರಿಶಿನಕುಂಟೆ ಬೈಪಾಸ್ ಗೆ ಮಳೆಯ ನೀರು ನುಗ್ಗಿದೆ. ಬೈಪಾಸ್ ಗೆ ಮಳೆಯ ನೀರು ನುಗ್ಗಿದ ಹಿನ್ನೆಲೆ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಮಳೆಯ ನೀರು ನುಗ್ಗಿದ ಪರಿಣಾಮ ವಾಹನಗಳು ಕೆಟ್ಟು ನಿಂತಿವೆ. https://ainkannada.com/cricket-ball-controversy-youth-beats-teacher-with-beer-bottle/ ಜಿಲ್ಲೆಯ ನಾನಾ ಭಾಗಗಳಲ್ಲಿ ನಿನ್ನೆ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡು ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಇಂದು ರಾತ್ರಿ ಸತತ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದ್ದು, ಒಂದು ಅಡಿ ನೀರು ರಸ್ತೆ ಮೇಲೆ ನಿಂತಿದೆ. ಇದರಿಂದ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಇನ್ನು ಅರಿಶಿನಕುಂಟೆ ಬೈಪಾಸ್ ಗೆ ಮಳೆ ನೀರು ನುಗ್ಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನು ಮಳೆ ನೀರು ಹೊಕ್ಕು ಕಾರು, ಬೈಕ್, ಆಟೋ ಗಳು ಕೆಟ್ಟು ನಿಂತಿದ್ದು, ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.

Read More