ಯಾದಗಿರಿ: ಹುಣಸಗಿ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ಸಾಲದ ವಿಚಾರಕ್ಕೆ ಮಾವ ಅಳಿಯನನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. 28 ವರ್ಷದ ಲಕ್ಷ್ಮಣ ಚಿಗರಿಹಾಳ ಮೃತ ದುರ್ದೈವಿ. https://ainkannada.com/tata-ace-overturns-31-people-injured-a-tragedy-that-was-avoided/ ಸೋದರ ಮಾವ ಮಾನಪ್ಪ ಕೊಲೆ ಮಾಡಿದ ಆರೋಪಿ. ಕೊಟ್ಟ ಸಾಲ ವಾಪಸ್ ಕೊಡುವಂತೆ ಕೇಳಿದ್ದಕ್ಕೆ ಲಕ್ಷ್ಮಣ ಚಿಗರಿಹಾಳ ಮಾವ ಮಾನಪ್ಪಗೆ ಕೇಳಿದ್ದರು. ಇಷ್ಟಕ್ಕೆ ಬಹಿರ್ದೆಸೆಗೆ ತೆರಳುತ್ತಿದ್ದ ಅಳಿಯ ಲಕ್ಷ್ಮಣ ಚಿಗರಿಹಾಳನನ್ನು ಕೊಡಲಿಯಿಂದ ಕೊಚ್ಚಿ ಮಾವ ಮಾನಪ್ಪ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್, ಡಿವೈಎಸ್ಪಿ ಜಾವೀದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಾನಪ್ಪನನ್ನು ಪೋಲಿಸರು ಬಂಧಿಸಿದ್ದಾರೆ.
Author: AIN Author
ಕೊಪ್ಪಳ:- ಟಾಟಾ ಏಸ್ ಪಲ್ಟಿಯಾದ ಪರಿಣಾಮ 31 ಜನ ಗಾಯಗೊಂಡಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಬರಗೂರು ಕ್ರಾಸ್ ಬಳಿ ನಡೆದಿದೆ. https://ainkannada.com/countdown-to-ipl-second-half-bcci-changes-the-rules-what-is-it/ ನರೇಗಾ ಕಾರ್ಮಿಕರು ಕೆಲಸಕ್ಕಾಗಿ ಟಾಟಾ ಏಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬರಗೂರು ಕ್ರಾಸ್ ಬಳಿ ವಾಹನ ಪಲ್ಟಿಯಾಗಿದೆ. ಘಟನೆ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದು, 28 ಜನರಿಗೆ ಸಣ್ಣಪುಟ್ಟಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರನ್ನ ಹುಬ್ಬಳ್ಳಿ ಹಾಗೂ ಕೊಪ್ಪಳದ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಇನ್ನುಳಿದವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ವಿಷಯ ತಿಳಿದು ಸಚಿವ ಶಿವರಾಜ ತಂಗಡಗಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ ಅರ್ಧಕ್ಕೆ ನಿಂತಿದ್ದ ಐಪಿಎಲ್ ಮೇ 17 ರಿಂದ ಮತ್ತೆ ಆರಂಭವಾಗುತ್ತಿದೆ. ಅನೇಕ ವಿದೇಶಿ ಆಟಗಾರರು ಲಭ್ಯವಿಲ್ಲದಿರುವುದರಿಂದ, ಬಿಸಿಸಿಐ ಬದಲಿ ಆಟಗಾರರ ನಿಯಮವನ್ನು ಸಡಿಲಗೊಳಿಸಿದೆ. https://ainkannada.com/attempted-attack-on-real-estate-businessman-with-gun-video-of-attack-goes-viral/ ಮಾರ್ಚ್ 22 ರಂದು ಪ್ರಾರಂಭವಾದ ಐಪಿಎಲ್ನ 18 ನೇ ಸೀಸನ್ ಅನ್ನು ಬಿಸಿಸಿಐ ಮೇ 9 ರಂದು ತಾತ್ಕಾಲಿಕವಾಗಿ ರದ್ದುಗೊಳಿಸಿತ್ತು. ಹೀಗಾಗಿ ಹೆಚ್ಚಿನ ವಿದೇಶಿ ಆಟಗಾರರು ತಮ್ಮ ದೇಶಗಳಿಗೆ ಮರಳಿದ್ದರು. ನಂತರ ಮೇ 12 ರಂದು, ಬಿಸಿಸಿಐ ಉಳಿದ 17 ಪಂದ್ಯಗಳಿಗೆ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತು, ಅದರ ಅಡಿಯಲ್ಲಿ ಪಂದ್ಯಾವಳಿ ಮೇ 17 ರಿಂದ ಜೂನ್ 3 ರವರೆಗೆ ನಡೆಯಲಿದೆ. ಆದರೆ ಈ ಪರಿಸ್ಥಿತಿಯಲ್ಲಿ, ಅನೇಕ ವಿದೇಶಿ ಆಟಗಾರರು ಹಿಂತಿರುಗಲು ಸಿದ್ಧರಿಲ್ಲ, ಆದರೆ ಇನ್ನೂ ಅನೇಕರು ತಮ್ಮ ರಾಷ್ಟ್ರೀಯ ಕರ್ತವ್ಯದಿಂದಾಗಿ ಪಂದ್ಯಾವಳಿಯ ಅನೇಕ ಪಂದ್ಯಗಳನ್ನು ಆಡಲು ಸಾಧ್ಯವಾಗುವುದಿಲ್ಲ ಇದನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ಈಗ ಎಲ್ಲಾ ಫ್ರಾಂಚೈಸಿಗಳಿಗೆ ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಅನುಮತಿ ನೀಡಿದೆ. ಇಎಸ್ಪಿಎನ್-ಕ್ರಿಕ್ಇನ್ಫೋ ವರದಿಯ ಪ್ರಕಾರ, ಐಪಿಎಲ್ ನಿಯಮಗಳಲ್ಲಿ…
ಬೆಂಗಳೂರು:- ಕಾಂಗ್ರೆಸ್ ಅವಧಿಯಲ್ಲಿ ಉಗ್ರರ ವಿರುದ್ಧ ಕ್ರಮ ಯಾಕೆ ಆಗಿಲ್ಲ? ಎಂದು ರವಿಕುಮಾರ್ ಪ್ರಶ್ನೆ ಮಾಡಿದ್ದಾರೆ. https://ainkannada.com/want-to-get-slim-without-going-to-the-gym-if-so-just-drink-1-glass-of-this-fruit-juice-in-the-morning-results-in-a-week/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ಭಾರತದಲ್ಲಿ ಉಗ್ರರನ್ನು ಸಾಕ್ತಿದ್ದಾರೆ. ಐಎಂಎಫ್ನಿಂದ ಪಡೆದ ಸಾಲದ ಹಣದಲ್ಲಿ ಪಾಕಿಸ್ತಾನದ ಸರ್ಕಾರ ಮಸೂದ್ ಅಜರ್ಗೆ ಪರಿಹಾರ ಕೊಟ್ಟಿದೆ. ಆ ಮೂಲಕ ಪಾಕಿಸ್ತಾನ ಉಗ್ರರನ್ನ ಸಾಕ್ತಿದೆ. ಇಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಮಾಡಿದ ಆದಿಲ್ಗೆ ಸುಪಾರಿ ಹಣ ಎಲ್ಲಿಂದ ಬಂತು? ಇದೇ ಕಾಂಗ್ರೆಸ್ ಸರ್ಕಾರ ಕೊಟ್ಟ ಪರಿಹಾರದಿಂದ ಬಂದಿದೆ. ಅಲ್ಲಿಗೆ ಕಾಂಗ್ರೆಸ್ನವ್ರೂ ಭಯೋತ್ಪಾದಕರನ್ನು ಸಾಕ್ತಿದ್ದಾರೆ ಅಂತಾ ಆಯ್ತು ಅಲ್ವಾ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನಾಯಕರು ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕೆ ಮಾಡ್ತಿದ್ದಾರೆ. ಪಹಲ್ಗಾಮ್ ಕೃತ್ಯ ನಡೆಯುವಾಗ ಮೋದಿಯವ್ರು ಎಲ್ಲಿದ್ರು ಅಂತ ಪ್ರಿಯಾಂಕ್ ಖರ್ಗೆ ಕೇಳಿದ್ದಾರೆ. ಆ ಸಂದರ್ಭದಲ್ಲಿ ಮೋದಿ ಎಲ್ಲಿದ್ರು, ಏನು ಮಾಡಿದ್ರು ಅಂತ ದೇಶದ ಎಲ್ಲ ಪ್ರಜೆಗಳಿಗೆ ಗೊತ್ತಿದೆ. ಎಲ್ಲರಿಗೂ ಗೊತ್ತಿರುವ ವಿಷಯ ಪ್ರಿಯಾಂಕ್ ಖರ್ಗೆಗೆ ಯಾಕೆ ಗೊತ್ತಿಲ್ಲ. ಇದೇನು ಪ್ರಿಯಾಂಕ್…
ಸ್ಲಿಮ್ ಮತ್ತು ಫಿಟ್ ಆಗಿ ಕಾಣಲು ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ? ತೂಕವನ್ನು ಹೆಚ್ಚಿಸಿಕೊಳ್ಳುವುದು ಬಹಳ ಸುಲಭ, ಆದರೆ ತೂಕವನ್ನು ಕಳೆದುಕೊಳ್ಳುವುದು ತುಂಬಾ ಕಷ್ಟ, ಆದರೆ ನಿಯಮಿತವಾಗಿ ಆಹಾರ ಕ್ರಮ ಮತ್ತು ವ್ಯಾಯಾಮ ಮಾಡುವುದರ ಮೂಲಕ ತೂಕವನ್ನು ಕಳೆದುಕೊಳ್ಳಬಹುದು. ಆದರೆ ನೀವು ಬೇಗನೆ ತೂಕ ಇಳಿಸಿಕೊಳ್ಳಲು ಬಯಸಿದರೆ, ಈ ಎರಡು ವಿಷಯಗಳನ್ನು ಮಾತ್ರ ಫಾಲೋ ಮಾಡಿದರೆ ಸಾಲದು. ಕೆಲವು ಸುಲಭವಾದ ಕೆಲಸವನ್ನು ಮಾಡುವ ಮೂಲಕ ನೀವು ಖಂಡಿತವಾಗಿಯೂ ನಿಮ್ಮ ಈ ಕನಸನ್ನು ನನಸಾಗಿಸಿ ಕೊಳ್ಳಬಹುದು. https://ainkannada.com/just-because-someone-is-a-rowdy-sheeter-dont-assume-that-everyone-is-a-rowdy-city-ravi/ ತೂಕ ಹೆಚ್ಚಿಸಿಕೊಳ್ಳುವುದು ಸುಲಭವಾದರೂ, ಕಳೆದುಕೊಳ್ಳುವುದು ತುಂಬಾ ಕಷ್ಟ ಅಂತ ಹೇಳುತ್ತಾರೆ. ಅದಕ್ಕಾಗಿಯೇ ತೂಕ ಹೆಚ್ಚಿಸಿಕೊಂಡ ಅನೇಕ ಜನರು ತೂಕ ಇಳಿಸಿಕೊಳ್ಳಲು ತಮ್ಮ ಕೈಲಾದಷ್ಟು ಪ್ರಯತ್ನ ಮಾಡ್ತಾರೆ. ತೂಕ ಇಳಿಸಿಕೊಳ್ಳಲು ಕೆಲವು ಸರಳ ಮಾರ್ಗಗಳಿದ್ದರೂ, ಹೆಚ್ಚಿನ ಜನರಿಗೆ ಅವುಗಳ ಬಗ್ಗೆ ಮಾಹಿತಿ ಇರುವುದಿಲ್ಲ. ತೂಕ ಇಳಿಸಿಕೊಳ್ಳಲು ಬಯಸುವವರು ಖಂಡಿತವಾಗಿಯೂ ತಮ್ಮ ಆಹಾರದಲ್ಲಿ ಕೆಲವು ಆಹಾರಗಳನ್ನು ಸೇರಿಸಿಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ನಿಮ್ಮ ದೈನಂದಿನ ಆಹಾರದಲ್ಲಿ ಹಿಪ್ಪುನೇರಳೆ…
ಇತ್ತೀಚೆಗೆ, ಟೆಸ್ಟ್ ಕ್ರಿಕೆಟ್ ಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯವರು ನಿವೃತ್ತಿ ಘೋಷಿಸಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಸುಭದ್ರ ಟೆಸ್ಟ್ ತಂಡವೊಂದನ್ನು ಕಟ್ಟುವ ಜವಾಬ್ದಾರಿ ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರ ಮೇಲಿದೆ. ಅವರ ಆಲೋಚನೆಯಲ್ಲಿ ಈಗ ಯಾರಿದ್ದಾರೆ ಎಂಬುದು ಈಗ ಕುತೂಹಲದ ವಿಚಾರ. ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಎರಡು ಆಧಾರ ಸ್ತಂಭಗಳೀಗ ನೇಪಥ್ಯಕ್ಕೆ ಸರಿದಿವೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯವರು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈಗ, ತಂಡದ ಮುಖ್ಯ ತರಬೇತುದಾರರಾದ ಗೌತಮ್ ಗಂಭೀರ್ ಅವರಿಗೆ ಈ ಇಬ್ಬರೂ ಓಪನರ್ ಗಳ ಸ್ಥಾನಕ್ಕೆ ಯಾರನ್ನು ತಂದು ಕೂರಿಸುವುದು ಎಂಬ ಚಿಂತೆ ಕಾಡತೊಡಗಿದೆ. ಅದನ್ನೀಗ ಸವಾಲಾಗಿ ಸ್ವೀಕರಿಸಿರುವ ಗಂಭೀರ್, ಒಂದು ಮಜಬೂತಾದ ತಂಡವನ್ನು ಕಟ್ಟಲು ಮುಂದಾಗಿದ್ದಾರೆ https://ainkannada.com/actor-rishab-shettys-absence-at-rakesh-poojaris-funeral-sparks-outrage/ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಇಬ್ಬರು ಟೆಸ್ಟ್ ಕ್ರಿಕೆಟ್ನಲ್ಲಿ ಕಳಪೆ ಫಾರ್ಮ್ನಲ್ಲಿದ್ದರಿಂದ ತಾವಾಗಿಯೇ ನಿವೃತ್ತಿ ಘೋಷಿಸಿದ್ದಾರೆ. ಕೊಹ್ಲಿಗೆ ನಿರ್ಧಾರ ವಾಪಸ್ ತೆಗೆದುಕೊಳ್ಳುವಂತೆ…
ಬೆಂಗಳೂರು:- ನಗರದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ರಸ್ತೆಗಳು ಜಲಾವೃತಗೊಂಡರೆ, ಸಿಲಿಕಾನ್ ಸಿಟಿಯಲ್ಲಿ ಅಲ್ಲಾಲ್ಲಿ ಮರಗಳು ಧರೆಗುರುಳಿವೆ. ಇದರಿಂದ ಸಾರ್ವಜನಿಕರು ಪರದಾಡಿದ್ದಾರೆ. https://ainkannada.com/techie-andar-raised-his-voice-in-support-of-pakistan-during-the-victory-celebration-of-operation-sindhur/ ಹೆಚ್ಬಿಆರ್ ಲೇಔಟ್ನಲ್ಲಿ ಬೃಹತ್ ಮರಗಳು ಧರೆಗುರುಳಿವೆ. ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವಾಹನಗಳು ಜಖಂ ಆಗಿದೆ. ಯಲಚೇನಹಳ್ಳಿ ಬಳಿ ಮೂರು ಮರಗಳು ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂಗೊಂಡಿವೆ. ಬೆಂಗಳೂರಿನ ಕೆ.ಆರ್ ಮಾರ್ಕೆಟ್, ಹೆಬ್ಬಾಳ, ಮೆಖ್ರೀ ಸರ್ಕಲ್, ಮೆಜೆಸ್ಟಿಕ್, ಶಾಂತಿನಗರ, ಬಸವನಗುಡಿ, ಮಲ್ಲೇಶ್ವರಂ, ಶಿವನಾಂದ, ಆರ್ಟಿ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ವಿಧಾನಸೌಧ ಸೇರಿದಂತೆ ಇಡೀ ನಗರದ್ಯಾಂತ ವರುಣ ಆರ್ಭಟಿಸಿದ್ದಾನೆ. ಇದರಿಂದ ರಸ್ತೆಗಳೆಲ್ಲಾ ಜಲಾವೃತ ಆಗಿದ್ದವು. ಬೆಂಗಳೂರಿನ ಇಂದಿರಾನಗರದಲ್ಲಿ ಭಾರೀ ಮಳೆ ಜೊತೆಗೆ ಗಾಳಿ ಬೀಸಿದ್ದು, ಎಸ್ವಿ ರಸ್ತೆ ಮೆಟ್ರೋ ಬಳಿ ಇರುವ ಓಎಂಆರ್ ರಸ್ತೆಯ ಮೇಲೆ ಮರದ ಕೊಂಬೆಗಳು ಬಿದ್ದಿವೆ. 80 ಫೀಟ್ ರೋಡ್ನಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆ ಆಗಿತ್ತು. ಇನ್ನು ಬಿಬಿಎಂಪಿಯ 8…
ಬೆಂಗಳೂರು:-ಬೆಂಗಳೂರಿನ ವೈಟ್ ಫೀಲ್ಡ್ನ ಪ್ರಶಾಂತ್ ಲೇಔಟ್ ನಲ್ಲಿ ಇತ್ತೀಚೆಗೆ ನಡೆದಿದ್ದ ʻಆಪರೇಷನ್ ಸಿಂಧೂರʼ ವಿಜಯೋತ್ಸವದ ವೇಳೆ ಟೆಕ್ಕಿಯೋರ್ವ ಪಾಕ್ ಪರ ಘೋಷಣೆ ಕೂಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಟೆಕ್ಕಿಯನ್ನು ಅರೆಸ್ಟ್ ಮಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. https://ainkannada.com/the-act-of-the-sinful-son-who-murdered-his-father-and-faked-an-electric-shock-is-revealed-on-cctv/ ಛತ್ತಿಸ್ಗಢ ಮೂಲದ ಶುಭಾಂಶು ಶುಕ್ಲಾ(26) ಬಂಧಿತ ಆರೋಪಿ. ಈತ ಬೆಂಗಳೂರಿನಲ್ಲಿ ಟೆಕ್ಕಿ ಆಗಿ ಕೆಲಸ ಮಾಡಿಕೊಂಡಿದ್ದ, ವೈಟ್ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ವಾಸಿಸುತ್ತಿದ್ದ. ಮೇ 9ರಂದು ಈ ಬಡಾವಣೆಯಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ ಆಚರಿಸಲಾಗುತ್ತಿತ್ತು. ಈ ವೇಳೆ ಶುಭಾಂಶು ಶುಕ್ಲಾ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ. ಬಡಾವಣೆ ನಿವಾಸಿಗಳು ಸಂಭ್ರಮಾಚರಣೆ ನಡೆಸುವ ವೇಳೆ ಪಿಜಿಯಲ್ಲೇ ಇದ್ದ ಶುಭಾಂಶು ಬಾಲ್ಕನಿಗೆ ಬಂದು ಪಾಕಿಸ್ತಾನ ಪರ ಜೋರಾಗಿ ಘೋಷಣೆ ಕೂಗಿದ್ದಾನೆ. ಈ ವೇಳೆ ಆತಂಕಗೊಂಡ ಕೆಲ ಪಿಜಿ ಯುವಕರು ಹೊರಬಂದು ನೋಡಿದಾಗ ಶುಭಾಂಶು ಬಾಲ್ಕನಿಯಲ್ಲಿ ನಿಂತು ಘೋಷಣೆ ಕೂಗುತ್ತಿರುವುದು ಕಂಡುಬಂದಿದೆ. ಬಳಿಕ ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ…
ತುಮಕೂರು:- ಹೆತ್ತಪ್ಪನನ್ನ ಕೊಲೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪಾಪಿ ಮಗನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ನಲ್ಲಿ ಜರುಗಿದೆ. https://ainkannada.com/couple-threatens-delivery-boy-with-money-only-if-he-speaks-marathi/ ಎಸ್, ಈ ಖತರ್ನಾಕ್ ಮಗನ ಕೊಲೆಯ ಅಸಲಿಯತ್ತು ಬಟಾ ಬಯಲಾಗಿದ್ದು, ತಂದೆಯನ್ನೇ ಪರಲೋಕಕ್ಕೆ ಕಳಿಸಿ ಏನು ಗೊತ್ತಿಲ್ಲದಂತಿದ್ದವ ಇದೀಗ ಜೈಲು ಪಾಲಾಗಿದ್ದಾನೆ. ಈ ಪಾಪಿ ಮಗನ ನೀಚ ಕೃತ್ಯವನ್ನು ಸಿಸಿ ಕ್ಯಾಮೆರಾ ಬಯಲು ಮಾಡಿದೆ. ಹೌದು, ಮೇ.11 ರಂದು ಕುಣಿಗಲ್ ನ ಅಪೋಲೋ ಐಸ್ ಕ್ರೀಂ ಫ್ಯಾಕ್ಟರಿಯಲ್ಲಿ ನಾಗೇಶ್(55) ಮೃತದೇಹ ಪತ್ತೆಯಾಗಿತ್ತು. ಬೆರಳಿಗೆ ಕರೆಂಟ್ ಶಾಕ್ ಹೊಡೆದು ಸತ್ತ ರೀತಿಯಲ್ಲಿ ನಾಗೇಶ್ ಶವ ಪತ್ತೆಯಾಗಿತ್ತು. ಅಲ್ಲದೇ ಅಸಹಜ ಸಾವು ಎಂದು ಎಲ್ಲಾ ಅಂತ್ಯ ಕ್ರಿಯೆ ಮುಗಿಸಲಾಗಿತ್ತು. ಆದರೆ ಸಹೋದರಿ ಸವಿತ ಈ ಬಗ್ಗೆ ಕೊಂಚ ಅನುಮಾನದಿಂದ ಪೊಲೀಸರಿಗೆ ದೂರು ಕೊಟ್ಟಿದ್ದರು. ಅಲ್ಲದೇ ಸಿಸಿಟಿವಿ ಪರಿಶೀಲನೆ ಮಾಡುವಂತೆ ಹೇಳಿದರು. ಈ ವೇಳೆ ತನಿಖೆ ಕೈಗೊಂಡ ಪೊಲೀಸರು, ಐಸ್ ಕ್ರೀಂ ಫ್ಯಾಕ್ಟರಿಯಲ್ಲಿದ್ದ ಸಿಸಿ ಕ್ಯಾಮೆರಾದ ಡಿವಿಆರ್ ವಶಪಡಿಸಿಕೊಂಡಿದ್ದರು.…
ಮುಂಬೈ:- ಮರಾಠಿ ಗೊತ್ತಿರದ ಡೆಲಿವರಿ ಬಾಯ್ ಗೆ ದಂಪತಿ ಧಮ್ಕಿ ಹಾಕಿರುವ ಘಟನೆ ಮುಂಬೈನ ಭಾಂಡಪ್ನಲ್ಲಿರುವ ಸಾಯಿ ರಾಧೆ ಕಟ್ಟಡದಲ್ಲಿ ಜರುಗಿದೆ. https://ainkannada.com/torrential-rain-man-goes-missing-after-slipping-into-drain-during-oil-spill/ ಪಿಜ್ಜಾ ಡೆಲಿವರಿ ಬಾಯ್ ಆರ್ಡರ್ ಕೊಡಲು, ರೋಹಿತ್ ಲಾವಾರೆ ಅವರ ಮನೆ ಬಾಗಿಲಿಗೆ ಬಂದಾಗ ‘ಮರಾಠಿಯಲ್ಲಿ ಮಾತನಾಡು ಇಲ್ಲ ಅಂದ್ರ ಹಣ ಕೊಡಲ್ಲ ಎಂದು ಬೆದರಿಸಿದ್ದಾರೆ. ಮರಾಠಿಯಲ್ಲಿ ಮಾತನಾಡಲೇಬೇಕು ಅಂತ ಕಡ್ಡಾಯ ಇದೆಯೇ? ಏಕೆ? ಎಂದು ಪಿಜ್ಜಾ ಡೆಲಿವರಿ ಬಾಯ್ ಕೇಳಿದ್ದಾನೆ. ಅದಕ್ಕೆ ಮರಾಠಿ ದಂಪತಿ, ಹೌದು ಇಲ್ಲಿ ಹಾಗೆಯೇ ಇದೆ ಎಂದು ಹೇಳುತ್ತಾರೆ. ಹೀಗೆ ಮರಾಠಿ ಭಾಷಾ ವಿಷಯವಾಗಿ ಡೆಲಿವರಿ ಬಾಯ್ ಜೊತೆ ದಂಪತಿ ಜಗಳ ತೆಗೆದಿದ್ದಾರೆ. ಈ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.