ನವದೆಹಲಿ:- ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಸನ್ನಿವೇಶ ದಿನೇ-ದಿನೇ ಗಾಢವಾಗುತ್ತಿದ್ದು, ಮೇ 8ರ ಗುರುವಾರ ಪಾಕಿಸ್ತಾನದಿಂದ ಭಾರತದ ಕಡೆಗೆ ಭಾರೀ ಕ್ಷಿಪಣಿಗಳು ಉಡಾವಣೆಯಾಗಿವೆ. ಜೊತೆಗೆ, ಎಫ್ 16 , ಎಫ್ 17 ಯುದ್ಧ ವಿಮಾನಗಳನ್ನು ಕಳುಹಿಸಲಾಗಿದ್ದು ಅವೆಲ್ಲವನ್ನೂ ಭಾರತ ಹೊಡೆದುರುಳಿಸಿದೆ. ಈ ನಡುವೆ ಫೈಟರ್ ಜೆಟ್ ನಲ್ಲಿದ್ದ ಪೈಲಟ್ ಒಬ್ಬನ್ನು ಭಾರತೀಯ ಸೇನಾ ಪಡೆಗಳು ಸೆರೆ ಹಿಡಿದಿವೆ. https://ainkannada.com/operation-sindoor-pakistani-prime-minister-of-india/ ಭಾರತದ ಆಪರೇಷನ್ ಸಿಂಧೂರ್ ಗೆ ಪ್ರತ್ಯುತ್ತರವಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ಮಾಡಲಾರಂಭಿಸಿದೆ. ಮೇ 8ರ ರಾತ್ರಿಯಿಂದಲೇ ಪಾಕಿಸ್ತಾನದ ಕಡೆಯಿಂದ ಅನೇಕ ಕ್ಷಿಪಣಿಗಳು ಭಾರತದ ಜಮ್ಮು ಕಡೆಗೆ ಹಾರಿಬಂದಿದ್ದು ಅವುಗಳನ್ನು ಭಾರತದಲ್ಲಿರುವ ಕ್ಷಿಪಣಿ ನಿಗ್ರಹ ವ್ಯವಸ್ಥೆಯ ಸಹಾಯದಿಂದ ಮಾರ್ಗಮಧ್ಯದಲ್ಲೇ ಹೊಡೆದುರುಳಿಸಲಾಗಿದೆ. ಈ ದಾಳಿಗಳಲ್ಲಿ ಹಮಾಸ್ ಮಾದರಿಯ ಕ್ಷಿಪಣಿಗಳನ್ನು ಪಾಕಿಸ್ತಾನ ಉಡಾಯಿಸಿದೆ ಎಂದು ಹೇಳಲಾಗಿದೆ. ಜಮ್ಮುವನ್ನು ಗುರಿಯಾಗಿಸಿಕೊಂಡು ಮತ್ತೆ ಪಾಕಿಸ್ತಾನ ದಾಳಿ ನಡೆಸಿದ್ದು, ಕ್ಷಿಪಣಿಗಳನ್ನು ಬಳಸಿಕೊಂಡು ಹಮಾಸ್ ಸ್ಟೈಲ್ನಲ್ಲಿ ಪಾಕ್ ಆರ್ಮಿ ಆಟ್ಯಾಕ್ ಆರಂಭಿಸಿದೆ. ಆದರೆ ಭಾರತದ ಏರ್ ಡಿಫೆನ್ಸ್ ಯೂನಿಟ್ನಿಂದ ಪಾಕ್ನ…
Author: AIN Author
ಇಸ್ಲಾಮಾಬಾದ್:- ಭಾರತದ ಮಿಸೈಲ್ ದಾಳಿಗೆ ಪಾಕ್ ಪ್ರಧಾನಿ ಶೇಕ್ ಆಗಿದ್ದು, ಶೆಹಬಾಜ್ ಶರೀಫ್ ಮನೆ ಬಳಿಯೇ ದಾಳಿ ನಡೆದಿದೆ. ಪಾಕ್ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಶೆಹಬಾಜ್ ಶರೀಫ್ ಅವರ ಮನೆಯಿದೆ. ಮನೆಗೆ 20 ಕಿಮೀ ದೂರದಲ್ಲೇ ಸ್ಫೋಟದ ಸದ್ದಾಗಿದೆ. https://ainkannada.com/ipl-match-is-banned-what-is-minister-santosh-lad-demand/ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಆರಂಭವಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ʼಆಪರೇಷನ್ ಸಿಂದೂರ್ʼ ಕಾರ್ಯಾಚರಣೆ ಕೈಗೊಂಡಿದೆ. ಈಗಾಗಲೇ ಪಾಕಿಸ್ತಾನದ ಉಗ್ರರ ನೆಲೆಗಳನ್ನ ಉಡಿಸ್ ಮಾಡಿರುವ ಭಾರತ ಇಂದು ಪಾಕಿಸ್ತಾನದ ಪ್ರಮುಖ ನಗರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಭಾರತೀಯ ಸೇನಾಪಡೆ ಪಾಕಿಸ್ತಾನ ಹಲವು ನಗರಗಳಿಗೆ ನುಗ್ಗಿ ಹೊಡೆಯುತ್ತಿದೆ. ಪಾಕ್ ರಾಜಧಾನಿ ಇಸ್ಲಾಮಾದಾದ್, ಲಾಹೋರ್, ರಾವಲ್ಪಿಂಡಿ, ಸಿಯಾಲ್ಕೋಟ್, ಪೇಶಾವರ ಸೇರಿದಂತೆ ಹಲವು ನಗರಗಳ ಮೇಲೆ ದಾಳಿ ನಡೆಸಿದೆ. ಭಾರತೀಯ ನೌಕಾಪಡೆಯೂ ಕೂಡ INS ವಿಕ್ರಾಂತ್ ಮೂಲಕ ಆರ್ಭಟಿಸಿದ್ದು, ಕರಾಚಿ ಬಂದರಿನ ಮೇಲೆ ದಾಳಿ ಮಾಡುವ ಮೂಲಕ ಧ್ವಂಸ ಮಾಡಿದೆ ಪಾಕಿಸ್ತಾನದಲ್ಲಿ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ.…
ಬೆಂಗಳೂರು:- ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಆಗ್ರಹಿಸಿದ್ದಾರೆ. https://ainkannada.com/if-you-get-married-with-this-pile-there-is-no-lucky-like-you-fridays-rashi-future-09-may-2025/ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಹೆಸರಿನ ಕಾರ್ಯಾಚರಣೆ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ದಾಳಿ ನಡೆಸುತ್ತಿದೆ. ಇದರಿಂದ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಇದೆ. ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ನಿಲ್ಲಿಸಬೇಕು ಎಂದು ಅವರು ಹೇಳಿದ್ದಾರೆ. ಆಪರೇಷನ್ ಸಿಂಧೂರ ನಂತರ ಕೆಲವು ಐಪಿಎಲ್ ಪಂದ್ಯಗಳನ್ನು ಸ್ಥಳಾಂತರ ಮಾಡಲಾಗಿದೆ. ಇದೀಗ ಎಲ್ಲಾ ಪಂದ್ಯಗಳನ್ನು ಸ್ಥಗಿತಗೊಳಿಸಿದರೆ ಒಳ್ಳೆಯದು. ಕ್ರಿಕೆಟ್ ವೀಕ್ಷಿಸಲು ಸಾಕಷ್ಟು ಜನರು ಬರುತ್ತಾರೆ. ಆದ್ದರಿಂದ ಬಿಸಿಸಿಐ ಇನ್ನು ಮುಂದಿನ ಎಲ್ಲಾ ಪಂದ್ಯಗಳನ್ನು ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಬಿಸಿಸಿಐ ಗೆ ಸೂಚನೆ ನೀಡಬೇಕು…
ಈ ರಾಶಿಯವರಿಗೆ ಕಂಪನಿ ವತಿಯಿಂದ ವಿದೇಶ ಪ್ರವಾಸ ಯೋಗ ಕೂಡಿ ಬರಲಿದೆ, ಸೂರ್ಯೋದಯ – 5:50 ಬೆ. ಸೂರ್ಯಾಸ್ತ – 6:35 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ದ್ವಾದಶಿ ನಕ್ಷತ್ರ – ಹಸ್ತ ಯೋಗ – ವಜ್ರ ಕರಣ – ಬಾಲವ ಮಳೆ ನಕ್ಷತ್ರ: ಭರಣಿ ರಾಹು ಕಾಲ – 10:30 ದಿಂದ 12:00 ವರೆಗೆ ಯಮಗಂಡ – 03:00 ದಿಂದ 04:30 ವರೆಗೆ ಗುಳಿಕ ಕಾಲ – 07:30 ದಿಂದ 09:00 ವರೆಗೆ ಬ್ರಹ್ಮ ಮುಹೂರ್ತ – 4:14 ಬೆ. ದಿಂದ 5:02 ಬೆ. ವರೆಗೆ ಅಮೃತ ಕಾಲ – 5:34 ಸಾ.ದಿಂದ 7:22 ರಾ. ವರೆಗೆ ಅಭಿಜಿತ್ ಮುಹುರ್ತ – 11:47 ಬೆ. ದಿಂದ 12:38 ಮ. ವರೆಗೆ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಾಳೆ ಹೈವೋಲ್ಟೇಜ್ ಮ್ಯಾಚ್ ನಡೆಯಲಿದೆ. https://ainkannada.com/ipl-2025-delhi-punjab-match-cancels/ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಕ್ರಮಾಂಕವನ್ನು ಹೊಂದಿರುವುದರಿಂದ ಈ ಪಂದ್ಯವು ಹೆಚ್ಚಿನ ಸ್ಕೋರಿಂಗ್ ಆಗುವ ನಿರೀಕ್ಷೆಯಿದೆ. ಒಂದೆಡೆ ಆರ್ಸಿಬಿ ಸತತ ಗೆಲುವುಗಳೊಂದಿಗೆ ಬರುತ್ತಿದ್ದರೆ, ಇತ್ತ ಲಕ್ನೋ ತಂಡ ಸೋಲಿನೊಂದಿಗೆ ಪಂದ್ಯಕ್ಕೆ ಕಾಲಿಡುತ್ತಿದೆ. ಈ ಪಂದ್ಯವನ್ನು ಆರ್ಸಿಬಿ ಗೆದ್ದರೆ ಅದು ಪ್ಲೇಆಫ್ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಇತ್ತ ಲಕ್ನೋ ಸೋತರೆ ಅದರ ಪ್ಲೇಆಫ್ ಕನಸು ಭಗ್ನವಾಗಲಿದೆ. ಲಕ್ನೋ ಹಾಗೂ ಆರ್ಸಿಬಿ ನಡುವಿನ ಐಪಿಎಲ್ 59ನೇ ಪಂದ್ಯ ಮೇ 9 ರಂದು ನಡೆಯಲಿದೆ. ಲಕ್ನೋ ಹಾಗೂ ಆರ್ಸಿಬಿ ನಡುವಿನ ಐಪಿಎಲ್ 59ನೇ ಪಂದ್ಯ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ ಲಕ್ನೋ ಹಾಗೂ ಆರ್ಸಿಬಿ ನಡುವಿನ ಐಪಿಎಲ್ 59ನೇ ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದೆ. ಲಕ್ನೋ ಹಾಗೂ ಆರ್ಸಿಬಿ ನಡುವಿನ ಐಪಿಎಲ್ 59ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ನ ವಿವಿದ ಚಾನೆಲ್ಗಳಲ್ಲಿ ವೀಕ್ಷಿಸಬಹುದಾಗಿದೆ.
ಧರ್ಮಶಾಲಾದಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ನಿಲ್ಲಿಸಲಾಗಿದೆ. https://ainkannada.com/operation-sindoora-this-is-just-the-beginning-rajnath-singh-gives-an-important-hint/ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಟೀಮ್ ಉತ್ತಮ ಆರಂಭವನ್ನು ಪಡೆದುಕೊಂಡಿತ್ತು. ಓಪನರ್ ಆಗಿ ಕ್ರೀಸ್ಗೆ ಬಂದಿದ್ದ ಪ್ರಿಯಾಂಶ್ ಆರ್ಯ ಹಾಗೂ ಪ್ರಭಸಿಮ್ರನ್ ಸಿಂಗ್ ಅದ್ಭುತ ಬ್ಯಾಟಿಂಗ್ ಮಾಡಿದ್ದರು. ತಂಡದ ಮೊತ್ತ 122 ರನ್ ಆಗಿದ್ದಾಗ ಪ್ರಿಯಾಂಶ್ ಆರ್ಯ ವಿಕೆಟ್ ಒಪ್ಪಿಸಿದ್ದರು. ಪಂಜಾಬ್ ಪರ ಅಬ್ಬರದ ಬ್ಯಾಟಿಂಗ್ ಮಾಡಿದ್ದ ಪ್ರಿಯಾಂಶ್ ಆರ್ಯ ಕೇವಲ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ಗಳಿಂದ 70 ರನ್ ಗಳಿಸಿ ಔಟ್ ಆಗಿದ್ದರು. ಆದ್ರೆ ಇನ್ನೊಂದೆಡೆ ಕ್ರೀಸ್ನಲ್ಲಿ ಆಡುತ್ತಿದ್ದ ಪ್ರಭಸಿಮ್ರನ್ ಕೂಡ ಭರ್ಜರಿ ಬ್ಯಾಟಿಂಗ್ ಮಾಡಿದ್ದರು. ಹೀಗಾಗಿಯೇ ಕೇವಲ 28 ಎಸೆತಗಳಲ್ಲಿ 7 ಬೌಂಡರಿ ಸಮೇತ 50 ರನ್ಗಳನ್ನು ಪೂರೈಸಿದ್ದರು. ಪಂಜಾಬ್ ತಂಡ 1 ವಿಕೆಟ್ಗೆ 122 ರನ್ ಗಳಿಸಿ ಬ್ಯಾಟಿಂಗ್ ಮಾಡುವಾಗ ಸ್ಟೇಡಿಯಂನಲ್ಲಿದ್ದ ಫ್ಲಡ್…
ನವದೆಹಲಿ:- ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ ಎಂದು ರಾಜನಾಥ್ ಸಿಂಗ್ ಅವರು ಮಹತ್ವದ ಸುಳಿವು ಕೊಟ್ಟಿದ್ದಾರೆ. https://ainkannada.com/do-you-know-why-the-water-is-not-cold-in-the-new-clay-pot/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, 25 ನಿಮಿಷದ ಪ್ರತೀಕಾರದ ವೈಮಾನಿಕ ದಾಳಿಯಲ್ಲಿ ಪಾಕಿಸ್ತಾನ ಉಗ್ರರ ನೆಲೆಗಳು ಉಡೀಸ್ ಆಗಿದ್ದು, ಆಪರೇಷನ್ ಸಿಂಧೂರ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳ ಬುಡಕ್ಕೆ ಬೆಂಕಿ ಹಚ್ಚಿ ಬಿಸಿ ಮುಟ್ಟಿಸಿದೆ. ಇದರ ಬೆನ್ನಲ್ಲೇ ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರೋ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ. ಪಿಕ್ಚರ್ ಅಭಿ ಬಾಕಿ ಹೇ ಎಂದರು.
ಧಾರವಾಡ :-ನ್ಯಾಯಮೂರ್ತಿ ಡಾ.ಎಚ್.ಎನ್. ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯದ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಮಾಡುವುದು. ಈ ಸಮೀಕ್ಷೆಯ ಉದ್ದೇಶವಾಗಿದೆ. ಸಮೀಕ್ಷೆದಾರರು ಜಿಲ್ಲೆಯ ಯಾವ ಪರಿಶಿಷ್ಟ ಜಾತಿಯ ಕುಟುಂಬಗಳು ಈ ಸಮೀಕ್ಷೆಯಿಂದ ಹೊರಗುಹಿಯದಂತೆ ಮುಂಜಾಗ್ರತೆ ವಹಿಸಿ, ನಿಯಮಾನುಸಾರ ಸಮೀಕ್ಷೆ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಧಾರವಾಡ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯದ ಪ್ರಗತಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಹಾಜರಿದ್ದ ವಿವಿಧ ಸಮೀಕ್ಷೆದಾರರು, ಸಂಪನ್ಮೂಲ ವ್ಯಕ್ತಿಗಳು, ಮೇಲ್ವಿಚಾರಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿಭಿನ್ನ ಸ್ಥಳಗಳಲ್ಲಿ ವಾಸವಾಗಿರುವ ಅಥವಾ ವಿಭಿನ್ನ ವೃತ್ತಿಗಳನ್ನು ತೊಡಗಿರುವ ವ್ಯಕ್ತಿಗಳು ಹಾಗೂ ಜನ ಸಮೂಹಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡಲು ಮತ್ತು ಸ್ಥಾನಮಾನ ಸೌಲಭ್ಯ ಹಾಗೂ ಅವಕಾಶಗಳಲ್ಲಿ ತಾರತಮ್ಯವನ್ನು ತೊಡೆದು ಹಾಕಲು ಕಾರ್ಯಕ್ರಮ ರೂಪಿಸುವುದಕ್ಕಾಗಿ ಸಾಮಾಜಿಕ…
ಉಗ್ರರ ಮೇಲಿನ ಭಾರತದ ದಾಳಿ ಖುಷಿ ಪಡುವ ವಿಚಾರ ಎಂದು ಡಾಲಿ ಧನಂಜಯ್ ಅವರು ಹೇಳಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತದ ‘ಆಪರೇಷನ್ ಸಿಂಧೂರದ ಬಗ್ಗೆ ಮಾತನಾಡಿದ ಧನಂಜಯ್, ಇದು ಎಲ್ಲರೂ ಖುಷಿಪಡುವಂತಹ ವಿಚಾರ ಎಂದು ಭಾರತ ಸೇನೆಯ ಬಗ್ಗೆ ಮೆಚ್ಚಿಗೆಯ ಮಾತುಗಳನ್ನಾಡಿದ್ದಾರೆ ಡಾಲಿ. ಉಗ್ರರಿಗೆ ಉತ್ತರ ಕೊಡಲೇಬೇಕು. ಪ್ರತಿ ಬಾರಿಯೂ ಉತ್ತರ ಕೊಟ್ಟಿದ್ದೇವೆ. ಇದೀಗ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದ ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ. ಇದು ಎಲ್ಲರೂ ಖುಷಿಪಡುವಂತದ್ದು ಎಂದಿದ್ದಾರೆ. https://ainkannada.com/ipl-2025-shocking-news-for-cricket-lovers-ipl-cancel/ ಇದೇ ವೇಳೆ ಸೋನು ನಿಗಮ್ ಅವರ ಕನ್ನಡ ವಿವಾದದ ಬಗ್ಗೆಯೂ ಡಾಲಿ ಮಾತನಾಡಿ, ನಾಡು ನುಡಿ ಅಂತ ಬಂದಾಗ ಎಲ್ಲರೂ ನಿಂತುಕೊಳ್ಳಲೇಬೇಕು. ಸೋನು ನಿಗಮ್ ಕೂಡ ಕನ್ನಡದ ಬಗ್ಗೆ ಕಾಳಜಿಯಿರುವ ಕಲಾವಿದ. ಅವರು ಒಳ್ಳೆಯ ಸಿಂಗರ್, ಚಿತ್ರರಂಗಕ್ಕೆ ಅವರು ಕೊಡುಗೆ ಕೊಟ್ಟಿದ್ದಾರೆ. ನಾವು ಅವರು ಹಾಡಿರುವ ಹಾಡುಗಳನ್ನು ಕೇಳಿ ಎಂಜಾಯ್ ಮಾಡಿದ್ದೇವೆ. ಅಂದಿನ ಸಂದರ್ಭದಲ್ಲಿ ಅವರ ಪ್ರತಿಕ್ರಿಯೆ ಬೇರೆ ತರಹ ಕಾಣಿಸಿರಬಹುದು. ಅಥವಾ…
ಐಪಿಎಲ್ ವಿಶ್ವದ ಅತ್ಯಂತ ದೊಡ್ಡ ಲೀಗ್ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ ತನ್ನ ನರಿ ಬುದ್ಧಿ ತೋರಿಸಲು ಮುಂದಾಯಿತು. https://ainkannada.com/argentadru-urine-so-you-should-see-this-news/ ಭಾರತದ 15 ಸ್ಥಳಗಳನ್ನು ಗರಿಯಾಗಿಸಿಕೊಂಡು ದಾಳಿ ಡ್ರೋನ್ ಮತ್ತು ಕ್ಷಿಪಣಿ ದಾಳಿ ಮಾಡಲು ಪಾಕಿಸ್ತಾನ ಪ್ಲಾನ್ ಮಾಡಿಕೊಂಡಿದ್ದು, ಈ ಪ್ಲಾನ್ ಅನ್ನು ಭಾರತೀಯ ಸೇನೆ ಉಲ್ಟಾ ಮಾಡಿ ಅವರ ದೇಶಕ್ಕೆ ನುಗ್ಗಿ ಅಲ್ಲಿನ 12ಕ್ಕೂ ಹೆಚ್ಚು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿ ಗೂಸಾ ನೀಡಿತು. ಇದರ ಬೆನ್ನಲ್ಲೇ ದೇಶದ ಪ್ರಮುಖ ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕಾವಾಗಿ ಬಂದ್ ಮಾಡಲಾಗಿದೆ. ಇದರಿಂದ ಐಪಿಎಲ್ ರದ್ದಾಗುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಯಾಕೆಂದ್ರೆ,…