ಮೂತ್ರ ವಿಸರ್ಜನೆ ಎನ್ನುವುದು ಒಂದು ನೈಸರ್ಗಿಕ ಕರೆ. ಅದನ್ನು ತಡೆ ಹಿಡಿಯುವುದು ತುಂಬಾ ಕಷ್ಟದ ವಿಚಾರ. ಆದರೆ ಕೆಲವರಿಗೆ ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗಬೇಕಾಗುತ್ತದೆ. ಇದರಿಂದ ಯಾವುದೇ ಕಾರ್ಯಕ್ರಮ ಮತ್ತು ಸಭೆ ಸಮಾರಂಭಗಳಲ್ಲಿ ಕೂಡ ಅವರಿಗೆ ದೊಡ್ಡ ಮಟ್ಟದ ಮುಜುಗರ ಉಂಟಾಗುವುದು. ದಿನದಲ್ಲಿ ಏನಿಲ್ಲವೆಂದರೂ 7-8 ಸಲ ಮೂತ್ರ ವಿಸರ್ಜನೆಗೆ ಹೋಗುವರು. https://ainkannada.com/air-strike-highlights-the-importance-of-indian-vermilion-mahesh-tenginakai/ ಅನೇಕ ವೇಳೆ ಪ್ರಯಾಣದ ಸಮಯದಲ್ಲಿ ಅಥವಾ ಆಫಿಸ್ ಮಿಟಿಂಗ್ ಹೇಗೆ ಅನೇಕ ಸಂದರ್ಭಗಳಲ್ಲಿ ಜನ ಹೆಚ್ಚು ಹೊತ್ತು ಮೂತ್ರವನ್ನು ತಡೆದಿಟ್ಟುಕೊಳ್ಳುತ್ತಾರೆ. ಆದರೆ ಹೀಗೆ ಮಾಡುವುದರಿಂದ ಏನೆಲ್ಲಾ ಸಮಸ್ಯೆಗಳು ಎದುರಾಗುತ್ತೆ ಗೊತ್ತಾ? ಆ ಕ್ಷಣಕ್ಕೆ ಇದರ ಪರಿಣಾಮ ನಿಮ್ಮ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ ಮುಂದೆ ಇದರಿಂದ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ದೀರ್ಘಕಾಲದವರೆಗೆ ಮೂತ್ರವನ್ನು ತಡೆದಿಟ್ಟುಕೊಳ್ಳುವುದರಿಂದ ಆಗುವ ಪರಿಣಾಮಗಳೇನು ಎಂಬುವುದರ ಬಗ್ಗೆ ಯೋಚಿಸುವ ಬದಲು, ಮೂತ್ರ ವಿಸರ್ಜನೆಯು ನಿಜವಾಗಿ ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ನೀವು ಮೂತ್ರವನ್ನು ತಡೆದಿಟ್ಟುಕೊಳ್ಳುವುದರಿಂದ ಏನಾಗುತ್ತದೆ ಎಂಬುದರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ಮೂತ್ರ…
Author: AIN Author
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನಧಿಕೃತ ಪಿಜಿಗಳಿಗೆ ಬ್ರೇಕ್ ಹಾಕಲು ಪಾಲಿಕೆ ಸಜ್ಜಾಗಿದೆ. ನಗರದ ಪಿಜಿಗಳಿಗೆ ಕಡಿವಾಣ ಹಾಕುವುದಕ್ಕೆ ಹೊರಟಿರುವ ಬಿಬಿಎಂಪಿ, ಇದೀಗ ರೂಲ್ಸ್ ಪಾಲಿಸದ ಪಿಜಿಗಳನ್ನ ಬಂದ್ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. https://ainkannada.com/government-orders-to-provide-tight-security-to-karnatakas-reservoirs/ ಇತ್ತೀಚೆಗಷ್ಟೇ ಹೆಚ್ಎಸ್ಆರ್ ಲೇಔಟ್ನ ಲೇಡೀಸ್ ಪಿಜಿಯಲ್ಲಿ ಯುವತಿ ನಗ್ನವಾಗಿ ಓಡಾಡುವ ವಿಷಯ ಸಖತ್ ಸದ್ದುಮಾಡಿತ್ತು. ಅಲ್ಲದೇ ಪಿಜಿಯಿಂದ ಅಕ್ಕಪಕ್ಕದ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದೆ ಅನ್ನೋ ದೂರುಗಳು ಕೂಡ ಕೇಳಿಬಂದಿತ್ತು. ಸದ್ಯ ಈ ಘಟನೆ ಬಳಿಕ ಎಚ್ಚೆತ್ತ ಪಾಲಿಕೆ ಇದೀಗ ರಾಜಧಾನಿಯ ಅನಧಿಕೃತ ಪಿಜಿಗಳಿಗೆ ಬಿಸಿಮುಟ್ಟಿಸೋಕೆ ಸಜ್ಜಾಗಿದೆ. ರಾಜಧಾನಿಯ ಪಿಜಿಗಳಿಗೆ ಈಗಾಗಲೇ ಕೆಲ ಮಾರ್ಗಸೂಚಿಗಳನ್ನ ಹೊರಡಿಸಿದ್ದ ಪಾಲಿಕೆ, ಇದೀಗ ರೂಲ್ಸ್ ಬ್ರೇಕ್ ಮಾಡುತ್ತಿರುವ ಪಿಜಿಗಳನ್ನ ಬಂದ್ ಮಾಡಿಸುವುದಕ್ಕೆ ಸಜ್ಜಾಗಿವೆ. ಇನ್ನು ಬಿಬಿಎಂಪಿಯ ವಿವಿಧ ವಲಯಗಳಲ್ಲಿ ಈಗಾಗಲೇ ನಿಯಮ ಮೀರಿದ ಪಿಜಿಗಳಿಗೆ ಬೀಗ ಜಡಿಯೋ ಎಚ್ಚರಿಕೆ ಪಾಲಿಕೆ ನೀಡಿದೆ. ಇತ್ತ ಪಿಜಿಗಳಿಂದ ಏರಿಯಾ ನಿವಾಸಿಗಳು, ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಗಮನಹರಿಸೋಕೆ ತಯಾರಿ ನಡೆಸಿದೆ. ಸದ್ಯ ಈಗಾಗಲೇ ಪಿಜಿಗಳಿಗೆ ಹೊರಡಿಸಿದ್ದ ಕೆಲ ರೂಲ್ಸ್ಗಳನ್ನ…
ಹಿಂದಿನ ಕಾಲದಲ್ಲೆಲ್ಲಾ ಮಡಕೆ ನೀರನ್ನು ಬಳಸುತ್ತಿದ್ದ ಬಗ್ಗೆ ನೀವು ಕೇಳಿರುವಿರಿ. ಈಗಿನ ಕಾಲದಲ್ಲೂ ಕೆಲವರು ಮಣ್ಣಿನ ಮಡಕೆಯ ನೀರನ್ನು ಕುಡಿಯಲು ಇಷ್ಟಪಡುತ್ತಾರೆ. ಮಣ್ಣಿನ ಮಡಕೆಯಲ್ಲಿಟ್ಟ ನೀರು ಬಹಳ ತಂಪಾಗಿರುತ್ತದೆ, ಜೊತೆಗೆ ಉತ್ತಮ ರುಚಿಯನ್ನೂ ಹೊಂದಿರುತ್ತದೆ. ಇನ್ನು ಬೇಸಿಗೆಯಲ್ಲಿ ಎಷ್ಟು ನೀರು ಕುಡಿದರೂ ಸಾಕಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಮಡಕೆಯ ನೀರು ನಿಮಗೆ ಉತ್ತಮ ಆಯ್ಕೆಯಾಗಿದೆ. https://ainkannada.com/gold-prices-rise-again-here-are-todays-silver-and-gold-prices-in-major-cities-of-the-state/ ಬೇಸಿಗೆಯ ಬಿರು ಬಿಸಿಲು ಜನರ ನೆತ್ತಿ ಸುಡುತ್ತದೆ, ಮನೆಯೊಳಗಿದ್ದರೂ ಧಗೆ ಬೇಗೆ ಹೆಚ್ಚಾಗುತ್ತದೆ. ಹೀಗಾಗಿ ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಹಲವು ಮಾರ್ಗಗಳನ್ನು ಹುಡುಕುತ್ತಿರುತ್ತಾರೆ. ಇಂತಹ ಸಮಯದಲ್ಲಿ ಜನರಿಗೆ ಮೊದಲು ನೆನಪಾಗುವುದು ಮೊದಲು ತಣ್ಣನೆಯ ಆಹಾರ ಪದಾರ್ಥ. ಅದರಲ್ಲೂ ಸುಡುವ ಬಿಸಿಲಿನಲ್ಲಿ ಕೋಲ್ಡ್ ಆಗಿರುವ ನೀರು ಕುಡಿದಾಗ ಗಂಟಲು ಮತ್ತು ದೇಹಕ್ಕೆ ಅದೆಷ್ಟೋ ತಂಪೆನಿಸುತ್ತದೆ. ಇಂತಹ ವಾತಾವರಣದಲ್ಲಿ ಅನೇಕ ಮಂದಿ ಫ್ರಿಡ್ಜ್ನ ತಣ್ಣೀರನ್ನು ಕುಡಿಯಲು ಬಯಸುವುದಿಲ್ಲ. ಆದರೆ ವಾಸ್ತವವಾಗಿ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹೀಗಾಗಿ ಅನೇಕ ಮಂದಿ ಮಡಿಕೆ ಖರೀದಿಸಿ ಅದರಲ್ಲಿ ನೀರು ತುಂಬಿಸಿ ಕುಡಿಯುತ್ತಾರೆ. ಆದರೆ…
ಜೀರಿಗೆಯು ಸಾಮಾನ್ಯ ಭಾರತೀಯ ಮಸಾಲೆಯಾಗಿದ್ದು, ಇದನ್ನು ಭಕ್ಷ್ಯಗಳ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸಲು ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದನ್ನು ಪ್ರಬಲವಾದ ಆರೋಗ್ಯ ಪ್ರಯೋಜನಗಳಿಗಾಗಿ ಹಲವಾರು ಸಾಂಪ್ರದಾಯಿಕ ಔಷಧಿಗಳಲ್ಲಿ ಬಳಸಲಾಗುತ್ತದೆ. ಆದರೆ ಹಲವು ವರ್ಷಗಳಿಂದ ಜೀರಿಗೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇದರಿಂದ ಯಾವೆಲ್ಲಾ ಪ್ರಯೋಜನಗಳಿವೆ ತಿಳಿಯೋಣ. https://ainkannada.com/increased-anxiety-in-pakistan-suicide-drone-attacks-in-karachi-lahore-26-people-killed/ ಜೀರಿಗೆ ನೀರನ್ನು ತಯಾರಿಸುವುದು ತುಂಬಾ ಸುಲಭ. ಜೀರಿಗೆ ನೀರನ್ನು ತಯಾರಿಸಲು, ಒಂದು ಚಮಚ ಜೀರಿಗೆ ಮತ್ತು ಒಂದು ಲೋಟ ನೀರು ಸಾಕು. ಮೊದಲನೆಯದಾಗಿ ಜೀರಿಗೆಯನ್ನು ನೀರಿಗೆ ಸೇರಿಸಿ ಮತ್ತು ಸುಮಾರು 5 ರಿಂದ 10 ನಿಮಿಷಗಳ ಕಾಲ ಕುದಿಸಿ. ಈಗ ಈ ನೀರನ್ನು ತಣ್ಣಗಾಗಲು ಬಿಡಿ. ಉತ್ತಮ ಫಲಿತಾಂಶವನ್ನು ಪಡೆಯಲು ನೀವು ಖಾಲಿ ಹೊಟ್ಟೆಯಲ್ಲಿ ಬೆಳಗ್ಗೆ ಈ ನೀರನ್ನು ಫಿಲ್ಟರ್ ಮಾಡಿ ಕುಡಿಯಬಹುದು. ಜೀರಿಗೆ ನೀರನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸಬಹುದು. ಇದಲ್ಲದೆ ಜೀರಿಗೆ ನೀರು ನಿಮ್ಮ ತೂಕ ನಷ್ಟದ ಪ್ರಯಾಣವನ್ನು ಸುಲಭಗೊಳಿಸುತ್ತದೆ…
ಬೆಂಗಳೂರು:- ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಅಣೆಕಟ್ಟುಗಳು ಮತ್ತು ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ತುರ್ತು ಆದೇಶ ಹೊರಡಿಸಿದೆ. ರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರಸ್ತುತ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯದ ಜಲ ಸಂಪನ್ಮೂಲಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. https://ainkannada.com/crime-news-8-year-old-boy-murdered-over-a-fight-between-neighbors/ ರಾಜ್ಯ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ, ಎಲ್ಲಾ ಅಣೆಕಟ್ಟುಗಳಿಗೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ತಕ್ಷಣ ನೇಮಿಸಲು ಆದೇಶಿಸಲಾಗಿದೆ. ರಾಜ್ಯದ ಜಲಾಶಯಗಳು, ವಿಶೇಷವಾಗಿ ಕಾವೇರಿ, ಕೃಷ್ಣ, ತುಂಗಭದ್ರಾ ಸೇರಿದಂತೆ ಪ್ರಮುಖ ಅಣೆಕಟ್ಟುಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಯೋಜನಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರದ ಆದೇಶದ ಪ್ರಮುಖ ಅಂಶಗಳು: ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ತಕ್ಷಣವೇ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವುದು. ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಲ್ಲಿ 24/7 ಗಸ್ತು ಮತ್ತು ಕಣ್ಗಾವಲು ವ್ಯವಸ್ಥೆ. ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯ ಅಣೆಕಟ್ಟುಗಳ ಸುರಕ್ಷತೆಗೆ ಸಂಬಂಧಪಟ್ಟ ಅಧಿಕಾರಿಗಳು ನೇರ ಹೊಣೆಗಾರರಾಗಿರುತ್ತಾರೆ. ಭದ್ರತೆಯಲ್ಲಿ ಯಾವುದೇ ಚ್ಯುತಿಯಾದಲ್ಲಿ, ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳ ವಿರುದ್ಧ ಕಠಿಣ…
ಬೆಂಗಳೂರು:- ಪಕ್ಕದ ಮನೆಯವರ ಜಗಳಕ್ಕೆ 8 ವರ್ಷದ ಬಾಲಕನ ಕೊಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ರಾಯಸಂದ್ರ ಕೆರೆ ಬಳಿ ಜರುಗಿದೆ. ವತ್ತೂರು ಬಂಧಿತ ಆರೋಪಿ. https://ainkannada.com/ipl-2025-another-kannadiga-entry-for-rcb-devdutt-padikkal-out/ ರಮಾನಂದ (8) ಕೊಲೆಯಾದ ಬಾಲಕ. ಆರೋಪಿ ಮತ್ತೂರು ಎಂಬಾತನಿಂದ ಕೃತ್ಯ ನಡೆದಿದೆ. ಬಾಲಕ ರಮಾನಂದ ಕುಟುಂಬ ಮತ್ತು ಮತ್ತೂರು ಕುಟುಂಬ್ ಮಧ್ಯೆ ಗಲಾಟೆ ಆಗ್ತಿತ್ತು. ಇದರಿಂದ ಬಾಲಕನ ಕಿಡ್ನಾಪ್ ಮಾಡಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿ ಮೃತದೇಹ ಚೀಲದಲ್ಲಿ ಕಟ್ಟಿ ಆರೋಪಿ ಬಿಸಾಡಿದ್ದ. ನಿನ್ನೆ ರಾತ್ರಿ ರಾಯಸಂದ್ರ ಕೆರೆ ಬಳಿ ಮೃತದೇಹ ಪತ್ತೆಯಾಗಿದೆ. ಆರೋಪಿಯನ್ನು ಮತ್ತೂರು ಬಂಧಿಸಿ ವಿಚಾರಣೆ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2025ರ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಗಾಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಬಲ ತೊಡೆಯ ಸ್ನಾಯುವಿನ ಗಾಯದಿಂದ ಬಳಲುತ್ತಿರುವ ಪಡಿಕ್ಕಲ್ ಈ ಋತುವಿನಲ್ಲಿ 10 ಪಂದ್ಯಗಳಲ್ಲಿ ಎರಡು ಅರ್ಧಶತಕಗಳ ಸಹಾಯದಿಂದ 247 ರನ್ ಗಳಿಸಿದ್ದರು. ಅವರ ಬದಲಿಗೆ ಆರ್ಸಿಬಿ ಈಗ ಅನುಭವಿ ಬ್ಯಾಟರ್ ಮಯಾಂಕ್ ಅಗರವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ https://ainkannada.com/moderate-rain-in-many-parts-of-karnataka-today-where/ ಇದೀಗ ಅವರ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ. ಮಯಾಂಕ್ ಅಗರ್ವಾಲ್ 12 ವರ್ಷಗಳ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. ಅದರಲ್ಲೂ ಅವರು ಐಪಿಎಲ್ ಕೆರಿಯರ್ ಆರಂಭಿಸಿದ್ದು ಆರ್ಸಿಬಿ ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. 2011 ರಲ್ಲಿ ಮಯಾಂಕ್ ಅಗರ್ವಾಲ್ ಆರ್ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಮೊದಲ ಸೀಸನ್ನಲ್ಲಿ 8 ಪಂದ್ಯಗಳನ್ನಾಡಿದ್ದ ಮಯಾಂಕ್ 141 ರನ್ ಕಲೆಹಾಕಿದ್ದರು. ಹೀಗಾಗಿ ಅವರನ್ನು 2012 ರಲ್ಲೂ ತಂಡದಲ್ಲೇ ಉಳಿಸಲಾಗಿತ್ತು. ಅದರಂತೆ 2012 ರಲ್ಲಿ 16 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಅವರು ಒಟ್ಟು 216…
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/pakistan-attack-indian-soldier-martyred-in-poonch/ ಅದರಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ನವದೆಹಲಿ:- ಜಮ್ಮು- ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಪಡೆಗಳು ನಡೆಸಿದ ಭಾರೀ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ ಭಾರತೀಯ ಸೇನಾ ಸೈನಿಕನೊಬ್ಬ ಹುತಾತ್ಮನಾಗಿದ್ದಾನೆ. https://ainkannada.com/rcbs-explosive-batter-is-out-of-the-tournament-bengaluru-suffers-a-shock-right-before-the-playoffs/ ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಪ್ರಕಾರ, 5 ಫೀಲ್ಡ್ ರೆಜಿಮೆಂಟ್ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಪಾಕಿಸ್ತಾನ ಸೇನೆಯ ಶೆಲ್ ದಾಳಿಯ ಸಮಯದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದರು. ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಪಾಕ್ ಸೇನೆ ನಡೆಸಿದ ಶೆಲ್ ದಾಳಿಗೆ ಭಾರತೀಯ ಯೋಧ ದಿನೇಶ್ ಕುಮಾರ್ ಶರ್ಮಾ ಹುತಾತ್ಮರಾಗಿದ್ದಾರೆ. ಬುಧವಾರ ಅಂದ್ರೆ ನಿನ್ನೆ ತಡರಾತ್ರಿ ಆರಂಭವಾದ ಶೆಲ್ ದಾಳಿಯು ಭಾರತದ ಮುಂಚೂಣಿ ಠಾಣೆಗಳು ಮತ್ತು ಹತ್ತಿರದ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆದಿದೆ. ಮೋರ್ಟರ್ ಗುಂಡುಗಳು ಮತ್ತು ಫಿರಂಗಿ ಗುಂಡಿನ ದಾಳಿಗಳು ಹಳ್ಳಿಗಳ ಬಳಿ ಅಪಾಯಕಾರಿಯಾಗಿ ಬಿದ್ದವು. ಭಾರತದ ಇತ್ತೀಚಿನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗೆ ಪ್ರತಿಕ್ರಿಯೆಯಾಗಿ ಈ ಕೃತ್ಯವನ್ನು ಸ್ಪಷ್ಟ ಕದನ ವಿರಾಮ ಉಲ್ಲಂಘನೆ ಮತ್ತು ಉದ್ದೇಶಪೂರ್ವಕ ಪ್ರಚೋದನೆ ಎಂದು ಭಾರತೀಯ ಅಧಿಕಾರಿಗಳು ಖಂಡಿಸಿದ್ದಾರೆ. ಹುತಾತ್ಮರಾದ…
ತಂಡ 18ನೇ ಆವೃತ್ತಿಯ ಐಪಿಎಲ್ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು ಪ್ಲೇ ಆಫ್ ಹತ್ತಿರದಲ್ಲಿ ನಿಂತಿದೆ. ಈ ವೇಳೆ ತಂಡಕ್ಕೆ ದೊಡ್ಡ ಪೆಟ್ಟೊಂದು ಬಿದ್ದಿದೆ. ತಂಡದ ಸ್ಟಾರ್ ಆಟಗಾರ ಗಾಯದ ಕಾರಣದಿಂದ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಔಟ್ ಆಗಿದ್ದಾರೆ. ಇವರಗೆ ಬದಲಿ ಆಟಗಾರನನ್ನು ಸಹ ಆರ್ಸಿಬಿ ಘೋಷಿಸಿದೆ. ಹಾಗಿದ್ರೆ ಆ ಬದಲಿ ಆಟಗಾರ ಯಾರು? ಯಾರು ಟೂರ್ನಿಯಿಂದ ಹೊರ ನಡೆದಿದ್ದಾರೆ ಎಂಬ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.. https://ainkannada.com/operation-sindoor-a-success-prayers-offered-at-nimishambha-temple-for-soldiers/ ಎಸ್, RCB ತಂಡದ ಪ್ರಮುಖ ಬ್ಯಾಟರ್ ದೇವದತ್ ಪಡಿಕ್ಕಲ್ ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಯಾಗಿ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಆರ್ಸಿಬಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದೆ. ಪ್ಲೇ ಆಫ್ ಸನಿಹವಾಗುತ್ತಿರುವಾಗ ಆರ್ಸಿಬಿಗೆ ಆಟಗಾರರ ಇಂಜುರಿ ಸಮಸ್ಯೆ ಬೆಂಬಿಡದಂತೆ ಕಾಡುತ್ತಿದೆ. ಈ ಮೊದಲು ಆರಂಭಿಕ ಆಟಗಾರ ಫಿಲ್ ಸಾಲ್ಟ್ ಜ್ವರದಿಂದಾಗಿ ಪಂದ್ಯದಿಂದ ಹೊರಗುಳಿದಿದ್ದಾರೆ. ಪ್ರಮುಖ ವೇಗಿ ಜೋಶ್…