ಮಂಡ್ಯ :-ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆಸಿದೆ. ಇದರ ಬೆನ್ನಲ್ಲೆ, ಕರ್ನಾಟಕ ಸರ್ಕಾರವು ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ ಮತ್ತು ಸಂಕಲ್ಪ ಮಾಡಲು ಆದೇಶಿಸಿದೆ. https://ainkannada.com/muda-case-against-siddaramaiah-lokayukta-seeks-time-to-submit-investigation-report/ ಆದೇಶದ ಬೆನ್ನಲ್ಲೇ ಗಂಜಾಮ್ ನ ನಿಮಿಷಾಂಭ ದೇಗುಲದಲ್ಲಿ ಸೈನಿಕರಿಗಾಗಿ ಸಿಂಧೂರ ಹೆಸರಲ್ಲಿ ಪೂಜೆ ಸಲಿಕೆ ಮಾಡಲಾಗಿದೆ. ರಾಜ್ಯದ ಪ್ರಸಿದ್ದ ದೇಗುಲದಲ್ಲಿ ಒಂದಾದ ಮಂಡ್ಯ ಜಿಲ್ಲೆಯ ನಿಮಿಷಾಂಭ ದೇಗುಲದಲ್ಲಿ ಇಂದು ಮುಂಜಾನೆ ಸೈನಿಕರಿಗಾಗಿ ದೇವಿಗೆ ಮೊದಲ ಪೂಜೆ ಸಲ್ಲಿಕೆ ಮಾಡಲಾಗಿದೆ. ದೇಶ ಕಾಯುವ ಯೋಧರಿಗೆ ಯಾವುದೇ ತೊಂದರೆ ಆಗದಂತೆ ದೇವಿಯಲ್ಲಿ ಪ್ರಾರ್ಥಿಸಿ ಸಂಕಲ್ಪ ಮಾಡಿದ್ದಾರೆ. ಭಾರತಮಾತೆಯನ್ನು ಕಾಯುವ ಯೋಧರಿಗಾಗಿ ಇಂದು ದೇವಿಗೆ ಮೊದಲ ಪೂಜೆ ಸಲ್ಲಿಕೆ ಮಾಡಲಾಗಿದೆ.
Author: AIN Author
ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಕೆಗೆ ಲೋಕಾಯುಕ್ತ ಕಾಲಾವಕಾಶ ಕೋರಿದೆ. https://ainkannada.com/operation-sindoor-emergency-declaration-in-pakistan/ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ನಡೆಯಿತು. ಕೋರ್ಟ್ ಸೂಚನೆಯಂತೆ ಬುಧವಾರ ಅಂತಿಮ ತನಿಖಾ ವರದಿ ಸಲ್ಲಿಸಬೇಕಿದ್ದ ಲೋಕಾಯುಕ್ತ ಪೊಲೀಸರು ಕಾಲಾವಕಾಶ ಕೋರಿ ಮನವಿ ಸಲ್ಲಿಸಿದರು. ಕೋರ್ಟ್ಗೆ ಹಾಜರಾಗಿದ್ದ ಲೋಕಾಯುಕ್ತ ತನಿಖಾಧಿಕಾರಿ ಕೋರ್ಟ್ಗೆ ಮನವಿ ಸಲ್ಲಿಸಿ ಕೆಲವು ಅಧಿಕಾರಿಗಳ ವಿರುದ್ಧ ತನಿಖೆಗೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆ.17ಎ ಅಡಿ ಅನುಮತಿ ಕೇಳಿದರು. ಅನುಮತಿ ಬರಬೇಕಾಗಿರುವುದರಿಂದ ತನಿಖೆ ಪೂರ್ಣಗೊಳಿಸಲು ಮತ್ತಷ್ಟು ಕಾಲಾವಕಾಶ ಬೇಕೆಂದು ಕೋರ್ಟ್ಗೆ ಮನವಿ ಮಾಡಿದರು. ಈ ಬಗ್ಗೆ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಲೋಕಾಯುಕ್ತ ಪರ ಎಸ್ಪಿಪಿ ವೆಂಕಟೇಶ್ ಅರಬಟ್ಟಿ ಕೋರ್ಟ್ಗೆ ಸಲ್ಲಿಸಿದರು. ಇದಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಆಕ್ಷೇಪಿಸಿ, ಡಿ.ಬಿ.ನಟೇಶ್ ವಿರುದ್ಧ ಈಗಾಗಲೇ ಅನುಮತಿ ಪಡೆದಿದ್ದಾರೆ. ತನಿಖೆ ವಿಳಂಬಗೊಳಿಸಲು ಅರ್ಜಿ ಸಲ್ಲಿಸುತ್ತಿದ್ದಾರೆಂದು ಆಕ್ಷೇಪ…
ಇಸ್ಲಾಮಾಬಾದ್:- ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ಪಾಕ್ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸೇಡು ತೀರಿಸಿಕೊಂಡಿದೆ. ಭಾರತದ ವಾಯುದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ. ಹೀಗಾಗಿ ಪಾಕ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಆದರೆ ಈ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯಿಸಿದ್ದು, ಈ ದಾಳಿಯಲ್ಲಿ ಅಮಾಯಕ ಪಾಕಿಸ್ತಾನಿಗಳ ಜೀವಹಾನಿಯಾಗಿದೆ. ಪಾಕಿಸ್ತಾನಿಗಳ ಆತ್ಮರಕ್ಷಣೆಗಾಗಿ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. https://ainkannada.com/the-3rd-win-for-chennai-the-losing-kolkata-playoffs/ ಇನ್ನೂ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕ್ ಉಗ್ರರು 26 ಭಾರತೀಯ ನಾಗರೀಕರನ್ನು ಹತ್ಯೆ ಮಾಡಿದ್ದು, ಇದೀಗ ಭಾರತವು ಪ್ರತೀಕಾರ ತೀರಿಸಿಕೊಂಡಿದೆ. ಹೌದು, ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ 9 ಪ್ರದೇಶಗಳ ಮೇಲೆ ವಾಯು ದಾಳಿ ನಡೆಸಿ ಪಾಕಿಸ್ತಾನದ ವಿರುದ್ದ ಸೇಡು ತೀರಿಸಿಕೊಂಡಿದೆ. ಆದರೆ ಇತ್ತ ಪಾಕ್ ಭಾರತದ ದಾಳಿಯಿಂದ ನಲುಗಿ ಹೋಗಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 2 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು. ಬುಧವಾರ ಕೋಲ್ಕತ್ತಾ ಈಡನ್ ಗಾರ್ಡನ್ನಲ್ಲಿ ನಡೆದ ಐಪಿಎಲ್ ಟೂರ್ನಿಯ 57ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿತು, https://ainkannada.com/does-these-piles-get-married-in-a-relationship-or-get-married-in-a-distant-relationship/ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. ಕೆಕೆಆರ್ ನೀಡಿದ್ದ 180 ರನ್ಗಳ ಗುರಿ ಹಿಂಬಾಲಿಸಿದ ಚೆನ್ನೈ 19.4 ಓವರ್ಗಳಿಗೆ 8 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿ ಟೂರ್ನಿಯಲ್ಲಿ 3 ಜಯ ಗಳಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಹಾನೆ ಪಡೆ 20 ಓವರ್ಗೆ 6 ವಿಕೆಟ್ ನಷ್ಟಕ್ಕೆ 179 ರನ್ ಕಲೆ ಹಾಕಿತು. 180 ರನ್ ಗುರಿ ಬೆನ್ನತ್ತಿದ ಸಿಎಸ್ಕೆ 19.4…
ಸೂರ್ಯೋದಯ – 5:50 ಬೆ. ಸೂರ್ಯಾಸ್ತ – 6:34 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಏಕಾದಶಿ ನಕ್ಷತ್ರ – ಉತ್ತರೆ ಯೋಗ – ಹರ್ಷಣ ಕರಣ – ವಿಷ್ಟಿ ಮಳೆ ನಕ್ಷತ್ರ :ಭರಣಿ ರಾಹು ಕಾಲ – 01:30 ದಿಂದ 03:00 ವರೆಗೆ ಯಮಗಂಡ – 06:00 ದಿಂದ 07:30 ವರೆಗೆ ಗುಳಿಕ ಕಾಲ -09:00 ದಿಂದ 10:30 ವರೆಗೆ ಬ್ರಹ್ಮ ಮುಹೂರ್ತ – 4:14 ಬೆ. ದಿಂದ 5:02 ಬೆ. ವರೆಗೆ ಅಮೃತ ಕಾಲ – 1:03 ಮ. ದಿಂದ 2:50 ಮ. ವರೆಗೆ ಅಭಿಜಿತ್ ಮುಹುರ್ತ – 11:47 ಬೆ. ದಿಂದ 12:38 ಮ.ವರೆಗೆ ನಿಮ್ಮ ಹೆಸರು, ಜನ್ಮ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು ಅದರ ಜೊತೆಗೆ ಭಾವ ಚಿತ್ರ ಹಾಗೂ ಹಸ್ತಸಾಮುದ್ರಿಕೆ…
ಶ್ರೀನಗರ:- ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ 9 ಕಡೆಗಳಲ್ಲಿ ದಾಳಿ ನಡೆಸಿತು. ಈ ಬೆನ್ನಲ್ಲೇ ಪಾಕ್ ಭಾರತೀಯರ ಮೇಲೆ ಗುಂಡಿನ ದಾಳಿ ನಡೆಸಿದೆ. https://ainkannada.com/ipl-2025-rcb-which-is-close-to-the-playoffs-suffers-a-blow-four-players-have-given-up/ ಎಸ್, ಪಾಕ್ ಗುಂಡಿನ ದಾಳಿಗೆ 15 ಭಾರತೀಯರು ಸಾವನ್ನಪ್ಪಿದ್ದು, 43 ಮಂದಿಗೆ ಗಾಯವಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ತಂಗ್ಧರ್ನಲ್ಲಿ ಜರುಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿರಿಸಿಕೊಂಡು ಭಾರತ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ನಡೆಸಿದೆ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿತ್ತು. ಮಂಗಳವಾರ ತಡರಾತ್ರಿ 1:45ರ ಸುಮಾರಿಗೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಹೆಸರಲ್ಲಿ ಪ್ರಮುಖ ಉಗ್ರರ ತಾಣಗಳನ್ನು ಗುರಿಯಾಗಿಸಿ ಏರ್ಸ್ಟ್ರೈಕ್ ನಡೆಸಿತು.…
IPL 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅತ್ಯದ್ಭುತ ಪ್ರದರ್ಶನ ತೋರಿದ್ದು, ಬಹುತೇಕ ಪ್ಲೇ ಆಫ್ ಟಿಕೆಟ್ ಖಚಿತವಾಗಿದೆ. ಈಗಿರುವಾಗಲೇ RCBಗೆ ಬಿಗ್ ಶಾಕ್ ಎದುರಾಗಿದೆ. https://ainkannada.com/indian-army-attacks-on-pakistani-terrorists-what-did-parishad-mla-t-a-sharavana-say/ ಈ ಸೀಸನ್ನಲ್ಲಿ ಆರ್ಸಿಬಿಯ ಪ್ರದರ್ಶನ ಇಲ್ಲಿಯವರೆಗೆ ಅತ್ಯುತ್ತಮವಾಗಿದೆ. ತಂಡವು ಆಡಿರುವ 11 ಪಂದ್ಯಗಳಲ್ಲಿ 8 ರಲ್ಲಿ ಜಯಗಳಿಸಿದ್ದು, ಕೇವಲ ಮೂರರಲ್ಲಿ ಸೋಲನ್ನು ಎದುರಿಸಿದೆ. ಹೀಗಾಗಿ ತಂಡವು ಪ್ಲೇಆಫ್ಗೆ ಬಹುತೇಕ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ನಾಲ್ವರು ಆಟಗಾರರ ಅನುಪಸ್ಥಿತಿ ಕಪ್ ಗೆಲ್ಲುವ ಕನಸಿಗೆ ಅಡ್ಡಿಯಾಗಬಹುದು. ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಯಾಣವು ಇಲ್ಲಿಯವರೆಗೆಅಮೋಘವಾಗಿದೆ. ತಂಡವು ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಏತನ್ಮಧ್ಯೆ, ಈ ಸೀಸನ್ ಅಂತಿಮ ಹಂತದಲ್ಲಿ ಆರ್ಸಿಬಿ ನಾಲ್ಕು ಪ್ರಮುಖ ಹಿನ್ನಡೆಗಳನ್ನು ಅನುಭವಿಸಿದೆ. ನಾಯಕ ರಜತ್ ಪಾಟಿದಾರ್, ಆರಂಭಿಕ ಆಟಗಾರ ಫಿಲ್ ಸಾಲ್ಟ್, ವೇಗದ ಬೌಲರ್ ಜೋಶ್ ಹೇಜಲ್ವುಡ್ ಮತ್ತು ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ರೂಪದಲ್ಲಿ ಈ ಹಿನ್ನಡೆ ಎದುರಾಗಿದೆ. ಈ ಎಲ್ಲಾ ಆಟಗಾರರು…
ಬೆಂಗಳೂರು: ವಾಸವಿ ಜಯಂತಿ ಪ್ರಯುಕ್ತ ಶಾಸಕರು , ಕರ್ನಾಟಕ ವಿಧಾನ ಪರಿಷತ್ ಹಾಗು ಕರ್ನಾಟಕ ಆರ್ಯ ವೈಶ್ಯ ಮಹಾಮಂಡಳಿ ರಾಜ್ಯಾಧ್ಯಕ್ಷರಾದ ಟಿ. ಎ. ಶರವಣ ಅವರು ಬೆಂಗಳೂರು ನಗರದ ಹಲವೆಡೆ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ, ರಾಜ್ಯದ ಜನ ಸುಖ ನೆಮ್ಮದಿ ಮತ್ತು ಶಾಂತಿಯುತವಾಗಿ ಬದುಕಲು ಪ್ರಾರ್ಥಿಸಿದರು. https://ainkannada.com/you-are-a-terrorist-to-whom-did-polar-sarja-say-so/ ಈ ವೇಳೆ ಇಂದು ನಡೆದ ‘ಆಪರೇಷನ್ ಸಿಂಧೂರ’ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ದೇಶದ ಸೇನಾ ಪಡೆ ಪರಾಕ್ರಮ ಮೆರೆದಿದೆ. ಆದ್ದರಿಂದ ಭಯೋತ್ಪಾದಕರನ್ನು ಮಟ್ಟಹಾಕುವ ಯುದ್ಧದಲ್ಲಿ ಭಾರತಕ್ಕೆ ಜಯ ಸಿಗಲಿ ಎಂದು ಪೂಜೆ ಸಲ್ಲಿಸಲಾಯಿತು ಹೇಳಿದ್ದಾರೆ. ಇನ್ನೂ ಇಂದು ಜಸ್ಟ್ 23 ನಿಮಿಷದಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಏಕಕಾಲಕ್ಕೆ ಧ್ವಂಸ ಮಾಡಿರುವ ಆಪರೇಷನ್ ಸಿಂಧೂರ ಭಾರತೀಯರ ಮೈ ಜುಮ್ಮೆನ್ನುವಂತೆ ಮಾಡಿದೆ. ಕೇವಲ 23 ನಿಮಿಷಗಳಲ್ಲೇ ಪಾಕಿಸ್ತಾನದ ರಕ್ತಪಿಪಾಸುಗಳ ‘ಉಗ್ರ’ ನೆಲೆ ನಾಮಾವಶೇಷವಾಗಿವೆ.
ಕೊಲೆಸ್ಟ್ರಾಲ್ ಒಂದು ಕೊಬ್ಬಿನ ಎಣ್ಣೆಯುಕ್ತ ಸ್ಟೀರಾಯ್ಡ್ ಆಗಿದ್ದು, ಜೀವಕೋಶದ ಪೊರೆಗಳಲ್ಲಿ ಕಂಡುಬರುವ ರಕ್ತದಲ್ಲಿರುತ್ತದೆ. ಸಂಶೋಧನೆಯ ಪ್ರಕಾರ ಬೆಳಿಗ್ಗೆ 9 ಗಂಟೆಗೆ ಹೀಗೆ ಮಾಡಿದರೆ ಕೇವಲ 1 ತಿಂಗಳಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದು ವೈಜ್ಞಾನಿಕವಾಗಿ ಸಾಬೀತಾಗಿದೆ. https://ainkannada.com/you-are-a-terrorist-to-whom-did-polar-sarja-say-so/ ಭಾರತೀಯ ಪಾಕಪದ್ಧತಿಯಲ್ಲಿ, ಇಂಗು ಸೇವನೆಯು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಅನಿಲ, ಅಜೀರ್ಣ ಮತ್ತು ಹೊಟ್ಟೆ ನೋವಿನಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ ಇಂಗು ವಾತ ಮತ್ತು ಕಫ ದೋಷಗಳನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಇದನ್ನು ಪ್ರಾಚೀನ ಕಾಲದಿಂದಲೂ ಹೊಟ್ಟೆಯ ಕಾಯಿಲೆಗಳು, ಶೀತ ಮತ್ತು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಗಳಿಗೆ ಬಳಸಲಾಗುತ್ತಿದೆ. ಇಂಗು ಆಹಾರದ ರುಚಿಯನ್ನು ಹೆಚ್ಚಿಸಲು ಮಾತ್ರವಲ್ಲದೆ ಅನೇಕ ರೋಗಗಳನ್ನು ಗುಣಪಡಿಸಲು ಸಹ ಬಳಸಲಾಗುತ್ತದೆ. ಇಂಗು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದರಲ್ಲಿ ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಕಾರ್ಬೋಹೈಡ್ರೇಟ್ಗಳು ಸಹ ಇದ್ದು, ಇದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇಂಗು ನೀರು ಔಷಧಿಯಂತೆಯೇ ಕೆಲಸ ಮಾಡುತ್ತದೆ. ಇಂಗು ನೀರು ಉತ್ತಮ ಆರೋಗ್ಯ ಔಷಧಿ…
ಪಹಲ್ಗಾಮ್ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿದ್ದು, ತನ್ನ ಸೇಡು ತೀರಿಸಿಕೊಂಡಿದೆ. ಆಪರೇಷನ್ ಸಿಂಧೂರವನ್ನು ಸೆಲೆಬ್ರಿಟಿಗಳು ಸೇರಿ ರಾಜಕೀಯ ಗಣ್ಯರು ಬೆಂಬಲ ಸೂಚಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದು, ದೇಶದಲ್ಲಿರುವ ಹಿತಶತ್ರುಗಳಿಗೆ ನಟ ಎಚ್ಚರಿಕೆ ನೀಡಿದ್ದಾರೆ. ಉಗ್ರರ ಬಗ್ಗೆ ಕರುಣೆ ಹೊಂದಿದ್ದರೆ ನೀವು ಕೂಡ ಭಯೋತ್ಪಾದಕರೇ ಆಗುತ್ತೀರಿ. ಭಾರತಕ್ಕೆ ದ್ರೋಹಿಗಳಾಗಬೇಡಿ ಎಂದಿದ್ದಾರೆ. https://ainkannada.com/bad-news-for-rohit-fans-the-hit-man-announces-retirement-from-test-cricket/ ಭಾರತದಲ್ಲಿ ವಾಸಿಸುವ ಪಾಕಿಸ್ತಾನಿಗರೇ, ನೀವು ಉಗ್ರರ ಬಗ್ಗೆ ಕರುಣೆ ಹೊಂದಿದ್ದರೆ ನೀವು ಕೂಡ ಭಯೋತ್ಪಾದಕರೇ ಆಗುತ್ತೀರಿ. ಭಾರತಕ್ಕೆ ದ್ರೋಹಿಗಳಾಗಬೇಡಿ. ಭಾರತದಲ್ಲಿರುವವರು ಮೊದಲು ಭಾರತವನ್ನು ನಂಬಿ, ನೀವು ವಾಸಿಸುವ ದೇಶವನ್ನು ಪ್ರೀತಿಸಿ ಎಂದು ನಟ ತಿಳಿಸಿದ್ದಾರೆ. ಇಲ್ಲದಿದ್ದರೆ ಶೀಘ್ರದಲ್ಲೇ ನಾವು ನಿಮ್ಮನ್ನು ಭಾರತದಿಂದ ಹೊರಹಾಕುತ್ತೇವೆ ಎಂದು ಧ್ರುವ ಸರ್ಜಾ ಎಚ್ಚರಿಕೆ ನೀಡಿದ್ದಾರೆ. ಜೈ ಹಿಂದ್, ಜೈ ಶ್ರೀರಾಮ್, ಜೈ ಹನುಮಾನ್ ಎಂದು ಬರೆದುಕೊಂಡಿದ್ದಾರೆ.