ಕೊಲೆಸ್ಟ್ರಾಲ್ ಒಂದು ಕೊಬ್ಬಿನ ಎಣ್ಣೆಯುಕ್ತ ಸ್ಟೀರಾಯ್ಡ್ ಆಗಿದ್ದು, ಜೀವಕೋಶದ ಪೊರೆಗಳಲ್ಲಿ ಕಂಡುಬರುವ ರಕ್ತದಲ್ಲಿರುತ್ತದೆ. ಸಂಶೋಧನೆಯ ಪ್ರಕಾರ ಬೆಳಿಗ್ಗೆ 9 ಗಂಟೆಗೆ ಹೀಗೆ ಮಾಡಿದರೆ ಕೇವಲ 1 ತಿಂಗಳಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದು ವೈಜ್ಞಾನಿಕವಾಗಿ ಸಾಬೀತಾಗಿದೆ. https://ainkannada.com/you-are-a-terrorist-to-whom-did-polar-sarja-say-so/ ಭಾರತೀಯ ಪಾಕಪದ್ಧತಿಯಲ್ಲಿ, ಇಂಗು ಸೇವನೆಯು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಅನಿಲ, ಅಜೀರ್ಣ ಮತ್ತು ಹೊಟ್ಟೆ ನೋವಿನಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ ಇಂಗು ವಾತ ಮತ್ತು ಕಫ ದೋಷಗಳನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಇದನ್ನು ಪ್ರಾಚೀನ ಕಾಲದಿಂದಲೂ ಹೊಟ್ಟೆಯ ಕಾಯಿಲೆಗಳು, ಶೀತ ಮತ್ತು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಗಳಿಗೆ ಬಳಸಲಾಗುತ್ತಿದೆ. ಇಂಗು ಆಹಾರದ ರುಚಿಯನ್ನು ಹೆಚ್ಚಿಸಲು ಮಾತ್ರವಲ್ಲದೆ ಅನೇಕ ರೋಗಗಳನ್ನು ಗುಣಪಡಿಸಲು ಸಹ ಬಳಸಲಾಗುತ್ತದೆ. ಇಂಗು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದರಲ್ಲಿ ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಕಾರ್ಬೋಹೈಡ್ರೇಟ್ಗಳು ಸಹ ಇದ್ದು, ಇದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇಂಗು ನೀರು ಔಷಧಿಯಂತೆಯೇ ಕೆಲಸ ಮಾಡುತ್ತದೆ. ಇಂಗು ನೀರು ಉತ್ತಮ ಆರೋಗ್ಯ ಔಷಧಿ…
Author: AIN Author
ಪಹಲ್ಗಾಮ್ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿದ್ದು, ತನ್ನ ಸೇಡು ತೀರಿಸಿಕೊಂಡಿದೆ. ಆಪರೇಷನ್ ಸಿಂಧೂರವನ್ನು ಸೆಲೆಬ್ರಿಟಿಗಳು ಸೇರಿ ರಾಜಕೀಯ ಗಣ್ಯರು ಬೆಂಬಲ ಸೂಚಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದು, ದೇಶದಲ್ಲಿರುವ ಹಿತಶತ್ರುಗಳಿಗೆ ನಟ ಎಚ್ಚರಿಕೆ ನೀಡಿದ್ದಾರೆ. ಉಗ್ರರ ಬಗ್ಗೆ ಕರುಣೆ ಹೊಂದಿದ್ದರೆ ನೀವು ಕೂಡ ಭಯೋತ್ಪಾದಕರೇ ಆಗುತ್ತೀರಿ. ಭಾರತಕ್ಕೆ ದ್ರೋಹಿಗಳಾಗಬೇಡಿ ಎಂದಿದ್ದಾರೆ. https://ainkannada.com/bad-news-for-rohit-fans-the-hit-man-announces-retirement-from-test-cricket/ ಭಾರತದಲ್ಲಿ ವಾಸಿಸುವ ಪಾಕಿಸ್ತಾನಿಗರೇ, ನೀವು ಉಗ್ರರ ಬಗ್ಗೆ ಕರುಣೆ ಹೊಂದಿದ್ದರೆ ನೀವು ಕೂಡ ಭಯೋತ್ಪಾದಕರೇ ಆಗುತ್ತೀರಿ. ಭಾರತಕ್ಕೆ ದ್ರೋಹಿಗಳಾಗಬೇಡಿ. ಭಾರತದಲ್ಲಿರುವವರು ಮೊದಲು ಭಾರತವನ್ನು ನಂಬಿ, ನೀವು ವಾಸಿಸುವ ದೇಶವನ್ನು ಪ್ರೀತಿಸಿ ಎಂದು ನಟ ತಿಳಿಸಿದ್ದಾರೆ. ಇಲ್ಲದಿದ್ದರೆ ಶೀಘ್ರದಲ್ಲೇ ನಾವು ನಿಮ್ಮನ್ನು ಭಾರತದಿಂದ ಹೊರಹಾಕುತ್ತೇವೆ ಎಂದು ಧ್ರುವ ಸರ್ಜಾ ಎಚ್ಚರಿಕೆ ನೀಡಿದ್ದಾರೆ. ಜೈ ಹಿಂದ್, ಜೈ ಶ್ರೀರಾಮ್, ಜೈ ಹನುಮಾನ್ ಎಂದು ಬರೆದುಕೊಂಡಿದ್ದಾರೆ.
ರೋಹಿತ್ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್ ಸಿಕ್ಕಿದ್ದು, ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಹಿಟ್ ಮ್ಯಾನ್ ನಿವೃತ್ತಿ ಘೋಷಿಸಿದ್ದಾರೆ. https://ainkannada.com/mock-drill-in-raichur-awareness-for-the-protection-of-citizens/ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ದೀರ್ಘ ಸ್ವರೂಪದ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ವಾಸ್ತವವಾಗಿ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರನ್ನು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಿದೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ರೋಹಿತ್ ಶರ್ಮಾ ಈ ಮಾದರಿಗೆ ವಿದಾಯ ಹೇಳಿರುವುದು ಅನುಮಾನ ಹುಟ್ಟು ಹಾಕಿದೆ. ನಾನು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ನಿಮಗೆಲ್ಲರಿಗೂ ಹೇಳಲು ಬಯಸುತ್ತೇನೆ. ನನ್ನ ದೇಶವನ್ನು ಬಿಳಿ ಬಟ್ಟೆ ಧರಿಸಿ ಪ್ರತಿನಿಧಿಸುವುದು ನನಗೆ ದೊಡ್ಡ ಗೌರವವಾಗಿದೆ. ಇಷ್ಟು ವರ್ಷಗಳ ಕಾಲ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಏಕದಿನ ಮಾದರಿಯಲ್ಲಿ ದೇಶವನ್ನು ಪ್ರತಿನಿಧಿಸುವುದನ್ನು ಮುಂದುವರೆಸುತ್ತೇನೆ’ ಎಂದು ರೋಹಿತ್ ತಮ್ಮ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ರಾಯಚೂರು:- ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧದ ಕೊಂಡಿ ಕಳಚಿದೆ. ಅಲ್ಲದೇ ಯಾವುದೇ ಸಮಯದಲ್ಲಾದರೂ ಯುದ್ಧ ನಡೆಯುವ ಸಾಧ್ಯತೆ ಇದೆ. https://ainkannada.com/congress-anti-national-policy-has-increased-the-violence-of-extremists-by-vijayendra/ ಸೌತ್ ಸೆಂಟ್ರಲ್ ರೈಲ್ವೇ ಗುಂತಕಲ್ ವಲಯದಿಂದ ರಾಯಚೂರಿನ ರೈಲ್ವೇ ನಿಲ್ದಾಣದವರೆಗೆ ಸಿವಿಲ್ ಡಿಫೆನ್ಸ್ ತಂಡದಿಂದ ಮಾಕ್ ಡ್ರಿಲ್ ನಡೆಸಲಾಯಿತು. ಯುದ್ಧದ ದಾಳಿ ಸಂದರ್ಭಗಳಲ್ಲಿ ನಾಗರಿಕರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು 30ಕ್ಕೂ ಹೆಚ್ಚು ಜನರ ಸಿವಿಲ್ ಡಿಫೆನ್ಸ್ ತಂಡ ಅಣಕು ಕಾರ್ಯಾಚರಣೆ ಮಾಡಿತು. ಲಕ್ಷ್ಮೀ ಬಾಂಬ್, ಸ್ಮೋಕ್ ಬಾಂಬ್ಗಳನ್ನು ಬಳಸಿ ದಾಳಿ ವೇಳೆ ಜನ ಹೇಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು? ಅಧಿಕಾರಿಗಳು ಹೇಗೆ ಅಲರ್ಟ್ ಆಗಿರಬೇಕು? ಹಂತ ಹಂತವಾಗಿ ಗಾಯಾಳುಗಳನ್ನು ರಕ್ಷಿಸಿ ಹೇಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಬೇಕು ಎನ್ನುವುದರ ಬಗ್ಗೆ ಜಾಗೃತಿ ಮೂಡಿಸಲಾಯಿತು. ಡಿವಿಜನ್ ಸಿವಿಲ್ ಡಿಫೆನ್ಸ್ ಎಮರ್ಜೆನ್ಸಿ ಆಫಿಸರ್ ಕೆ.ಸುದರ್ಶನ ರೆಡ್ಡಿ ನೇತೃತ್ವದಲ್ಲಿ ಮಾಕ್ ಡ್ರಿಲ್ ನಡೆಸಲಾಯಿತು.
ಕೋಲಾರ:- ಕಾಂಗ್ರೆಸ್ ನ ದೇಶ ವಿರೋಧಿ ನೀತಿಯಿಂದ ಉಗ್ರಗಾಮಿಗಳ ಅಟ್ಟಹಾಸ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. https://ainkannada.com/no-matter-how-hard-you-try-your-marriage-is-still-not-going-well-so-do-this-this-week/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೋದಿಯವರ ದಿಟ್ಟ ನಾಯಕತ್ವದಿಂದ ನಮ್ಮ ದೇಶದ ಯೋಧರಿಗೆ ದೊಡ್ಡ ಶಕ್ತಿ ತಂದುಕೊಟ್ಟಿದೆ. ಹಾಗಾಗಿ ಇಂದು ಯೋಧರು ನಿರ್ಭೀತಿಯಿಂದ ಉಗ್ರರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್ನ ಈ ನೀತಿಯಿಂದಲೇ ಜಮ್ಮು ಕಾಶ್ಮೀರದಲ್ಲಿ ಸಾವಿರಾರು ಹಿಂದೂ ಕುಟುಂಬಗಳು ಮನೆ ಮಠ ಕಳೆದುಕೊಂಡಿದ್ದಾರೆ. ಯೋಧರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.
ವಿವಾಹವಾಗಬೇಕು ಎನ್ನುವ ಬಯಕೆ ಸಾಮಾನ್ಯವಾಗಿ ಎಲ್ಲರಲ್ಲೂ ಇದ್ದೇ ಇರುತ್ತದೆ. ಆದರೆ ಕೆಲವರಿಗೆ ಕಂಕಣ ಬಲ ಬೇಗನೇ ಕೂಡಿ ಬಂದರೆ, ಇನ್ನೂ ಕೆಲವರಿಗೆ ವಯಸ್ಸು ದಾಟಿದರೂ ಕಂಕಣ ಬಲ ಕೂಡಿ ಬರುವುದಿಲ್ಲ. ಶೀಘ್ರ ಕಂಕಣ ಬಲ ಕೂಡಿ ಬರಲು ಹುಡುಗರು ಏನು ಮಾಡಬೇಕು? ಹುಡುಗಿಯರು ಏನು ಮಾಡಬೇಕು? ಕೆಲವು ಕಾರಣಗಳಿಂದ ನೀವು ಮದುವೆಯಾಗದಿದ್ದರೆ, ಮದುವೆಯಾಗಲು ಹಲವು ಅಡೆತಡೆಗಳಿವೆ ಎಂದು ನೀವು ಭಾವಿಸುತ್ತಿದ್ದರೆ, ನೀವು ಖಂಡಿತವಾಗಿ ವಿವಾಹವಾಗಲೇಬೇಕೆಂದು ಬಯಸುತ್ತಿದ್ದರೆ ಈ ಕೆಲಸ ಮೊದಲು ಮಾಡಿ.. https://ainkannada.com/operation-sindoor-mumbai-punjab-match-doubt-cause/ ಹಿಂದೂ ಧರ್ಮದಲ್ಲಿ, ವಾರದ ಪ್ರತಿ ದಿನವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಪ್ರತಿ ದಿನವನ್ನೂ ಯಾವುದದರೂ ಒಂದು ದೇವರಿಗೆ ಸಮರ್ಪಿಸಲಾಗಿರುತ್ತದೆ. ಅದೇ ರೀತಿ ಮಂಗಳವಾರ ಆಂಜನೇಯನಿಗೆ ಅರ್ಪಣೆ. ಹನುಮಂತನ ಆಶೀರ್ವಾದಕ್ಕಾಗಿ ಮಂಗಳವಾರ ಅತ್ಯುತ್ತಮ ದಿನ. 9 ಗ್ರಹಗಳಲ್ಲಿ ಒಂದಾದ ಮಂಗಳ ಗ್ರಹಕ್ಕೂ ಮಂಗಳವಾರಕ್ಕೂ ಸಂಬಂಧವಿದೆ. ಮಂಗಳ ಗ್ರಹವು ಧೈರ್ಯ, ಶೌರ್ಯ, ಭೂಮಿ, ಸಹೋದರ ಮತ್ತು ವಿವಾಹದ ಅಂಶವಾಗಿದೆ. ಜಾತಕದಲ್ಲಿ ಮಂಗಳ ಗ್ರಹವು ದುರ್ಬಲವಾಗಿದ್ದರೆ ಅಥವಾ ಅಶುಭವಾಗಿದ್ದರೆ, ಮದುವೆಯಲ್ಲಿ…
ಇಂಡಿಯನ್ ಪ್ರೀಮಿಯರ್ 2025 ರ ಲೀಗ್ ಅಂತಿಮ ಘಟ್ಟ ತಲುಪಿದ್ದು, ಕೆಲವೇ ದಿನಗಳಲ್ಲಿ ಮುಕ್ತಾಯ ಆಗಲಿದೆ. ಮೇ 11 ರಂದು ನಡೆಯಲಿರುವ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಸ್ಥಳವನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗುತ್ತಿದೆ. https://ainkannada.com/do-you-know-how-many-benefits-there-are-if-you-eat-soaked-almonds-your-body-will-become-strong/ ಪಂಜಾಬ್ ಮತ್ತು ಮುಂಬೈ ನಡುವಿನ ಪಂದ್ಯವು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಮೇ 11 ರಂದು ನಡೆಯಬೇಕಿತ್ತು. ಆದರೆ ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಅನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದ ನಂತರ, ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನದಿಂದ ಪ್ರತಿದಾಳಿಯ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರವು ಮುಂದಿನ ಕೆಲವು ಗಂಟೆಗಳ ಕಾಲ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳು ಮತ್ತು ನಗರಗಳ ವಿಮಾನ ನಿಲ್ದಾಣಗಳನ್ನು ಮುಚ್ಚಿದೆ. ಈ ವಿಮಾನ ನಿಲ್ದಾಣಗಳಿಂದ ಎಲ್ಲಾ ರೀತಿಯ ನಾಗರಿಕ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಐಪಿಎಲ್ ಪಂದ್ಯಗಳು ನಡೆಯುತ್ತವೆಯೇ ಅಥವಾ ಇಲ್ಲವೇ ಎಂಬುದರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಧರ್ಮಶಾಲಾ ನಗರವು ಅಂತರರಾಷ್ಟ್ರೀಯ ಗಡಿಯಿಂದ ಕೇವಲ 150 ಕಿಲೋಮೀಟರ್ ದೂರದಲ್ಲಿರುವ…
ಆರೋಗ್ಯಕಾರಿ ತೂಕದ ವಿಚಾರಕ್ಕೆ ಬಂದರೆ ಆಗ ಅದರಲ್ಲಿ ಬಾದಾಮಿಯು ಪ್ರಮುಖ ಸ್ಥಾನ ಪಡೆಯುವುದು ಎನ್ನುವುದರಲ್ಲಿ ಸಂಶಯವೇ ಇಲ್ಲ. ಯಾಕೆಂದರೆ ಇದರಲ್ಲಿ ಹಲವಾರು ಬಗೆಯ ಪೋಷಕಾಂಶಗಳಿದ್ದು, ಆರೋಗ್ಯವನ್ನು ರಕ್ಷಿಸಲು ಸಹಕಾರಿ ಆಗಿದೆ. ಹೀಗಾಗಿ ನಿತ್ಯವೂ ಬೆಳಗ್ಗೆ ಮೂರು ಬಾದಾಮಿ ತಿಂದರೆ ಅದರಿಂದ ಹಲವಾರು ರೀತಿಯ ಆರೋಗ್ಯ ಲಾಭಗಳು ದೇಹಕ್ಕೆ ಸಿಗುವುದು. ಮೂರು ಬಾದಾಮಿ ನಿತ್ಯವೂ ಸೇವನೆ ಮಾಡಿದರೆ ಆಗ ದೇಹಕ್ಕೆ ಯಾವೆಲ್ಲಾ ಲಾಭಗಳು ಸಿಗುವುದು ಎಂದು ನಾವು ನಿಮಗೆ ತಿಳಿಯದೆ ಇರುವ ವಿಚಾರಗಳನ್ನು ತಿಳಿಸಿಕೊಡಲಿದ್ದೇವೆ. https://ainkannada.com/pm-modi-named-operation-sindhura/ ದೇಹವನ್ನು ಸದೃಢವಾಗಿ ಮತ್ತು ಆರೋಗ್ಯಕರವಾಗಿಡಲು ಜನರು ಅನೇಕ ರೀತಿಯ ಆರೋಗ್ಯಕರ ಆಹಾರವನ್ನು ಸೇವಿಸುತ್ತಾರೆ. ಅದರಲ್ಲಿಯೂ ಹಸಿ ತರಕಾರಿ, ತಾಜಾ ಹಣ್ಣುಗಳು ಮತ್ತು ಒಣ ಹಣ್ಣುಗಳನ್ನು ಸೇವಿಸುತ್ತಾರೆ.ಅವುಗಳಲ್ಲಿ ಡ್ರೈ ಫ್ರೂಟ್ಸ್ನಲ್ಲಿ ಒಂದಾದ ಬಾದಾಮಿ ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ನೀವು ಬಾದಾಮಿಯನ್ನು ಒಣಗಿಸಿ, ನೆನೆಸಿ ಅಥವಾ ಒಣಗಿಸದೇ ಸಹ ತಿನ್ನಬಹುದು. ಆದರೆ ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಡಬಲ್ ಆರೋಗ್ಯ ಪ್ರಯೋಜನ ಸಿಗುತ್ತದೆ.…
ಬೆಂಗಳೂರು: ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದ ಭಯೋತ್ಪಾದಕರು ಭಾರತೀಯ 26 ಮಂದಿಯ ಜೀವ ತೆಗೆದಿದ್ದರು. ಅದರಲ್ಲಿ ಬೆಂಗಳೂರಿನ ಭರತ್ ಭೂಷಣ್ ಕೂಡ ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಉಡೀಸ್ ಮಾಡಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟಿದ್ದ ಭರತ್ ಅವರ ಅಣ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/junior-artist-dies-on-the-sets-of-kantara-movie-2/ ನಾವು ಸರ್ಕಾರದ ಜೊತೆ ಇದ್ದೇವೆ. ಸರ್ಕಾರ ಏನ್ ಮಾಡ್ಬೇಕು ಅದನ್ನ ಡಿಟೇಲ್ ಆಗಿ ಮಾಡ್ತಿದ್ದಾರೆ. ನನ್ನ ತಮ್ಮ ಅಂತೂ ವಾಪಸ್ ಬರೋದಿಲ್ಲ. ನಮಗೆ ಬೆಳಗ್ಗೆ ಎದ್ದಾಗಲೇ ವಿಷಯ ಗೊತ್ತಾಗಿದ್ದು. ಅಲ್ಲಿಯವರೆಗೂ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಆರ್ಮಿ ಕಾರ್ಯಾಚರಣೆ ಮಾಡಿ ಎಲ್ಲಾ ಪ್ರಯತ್ನ ಮಾಡಿದ್ರು. ಸಿಕ್ಕಿದ್ದವನೊಬ್ಬ ಮೊದಲು ನದಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಆದರೂ ನಮ್ಮವರು ಪತ್ತೆಹಚ್ಚಿ ದಾಳಿ ಮಾಡಿದ್ದಾರೆ. ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಳ್ತಿದ್ದಾರೆ ಅನ್ನೋ ಭರವಸೆ ಇದೆ. ಯಾರ ಮನೆಯವರಿಗೂ ಈತರನಾದ ಸಮಸ್ಯೆ ಆಗಬಾರದು…
ಉಡುಪಿ:- ರಿಷಬ್ ಶೆಟ್ಟಿ ನಾಯಕ ನಟನಾಗಿ ನಟಿಸಿ ನಿರ್ದೇಶಿಸುತ್ತಿರುವ ಕಾಂತಾರಾ-1 ಸಿನಿಮಾ ಸೆಟ್ ನಲ್ಲಿ ಜೂನಿಯರ್ ಆರ್ಟಿಸ್ಟ್ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಜರುಗಿದೆ. https://ainkannada.com/pakistan-shakes-in-just-23-minutes-how-was-indias-attack-what-happened-here-are-the-complete-details/ ಕೇರಳ ಮೂಲದ ಕಪಿಲ್ ಕೊಲ್ಲೂರು ಸಾವನ್ನಪ್ಪಿರುವ ಜೂನಿಯರ್ ಆರ್ಟಿಸ್ಟ್. ಇವರು ಇಲ್ಲಿನ ಸೌಪರ್ಣಿಕಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಹಿಂದೆ ದೈವ ನುಡಿದಂತೆ ಕಾಂತಾರಾ -1 ಚಿತ್ರೀಕರಣಕ್ಕೆ ಸಂಕಷ್ಟ ಎದುರಾದಂತಾಗಿದೆ.