ಇತ್ತೀಚೆಗೆ ಪಹಲ್ಗಾಮ್ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಇಂದು ಭಾರತೀಯ ಸೇನೆ ಪಾಕಿಸ್ತಾನಕ್ಕೆ ದೊಡ್ಡ ಶಾಕ್ ಕೊಟ್ಟಿದೆ. ಕಾಶ್ಮೀರದ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ʻOperation Sindoorʼ ಹೆಸರಿನಲ್ಲಿ ಏರ್ಸ್ಟ್ರೈಕ್ ನಡೆಸಿದೆ. ತಡರಾತ್ರಿ ಕೇವಲ 23 ನಿಮಿಷಗಳ ಕಾಲ ನಡೆಸಿದ ದಾಳಿಯಲ್ಲಿ ಪಾಕ್ನ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್ ಆಗಿದ್ದಾರೆ https://ainkannada.com/bharat-mata-ki-jai-rajnath-singh-tweets-in-the-wake-of-operation-sindoor/ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತೀಯ ಸೇನೆ ಹಾಗೂ ಭಾರತೀಯ ವಾಯುಪಡೆ ಜಂಟಿಯಾಗಿ ಆಪರೇಷನ್ ಸಿಂಧೂರ್ ಆರಂಭಿಸಿವೆ. ಮುರೀದ್ಕೆ, ಮುಜಾಫರ್ಬಾದ್, ಬಹಾವಲ್ಪುರ್, ಕೋಟ್ಲಿ, ಚಾಕ್ಅಮ್ರು, ಗುಲ್ಪುರ್, ಭಿಂಬರ್ ಪ್ರದೇಶಗಳಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿಯಾಗಿದೆ. ಇನ್ನು ಭಾರತೀಯ ವಾಯುಪಡೆಯು ರಫೇಲ್ ಜೆಟ್ ಯುದ್ಧ ವಿಮಾನ ಬಳಿಕ ಸ್ಕಲ್ಪ್ ಕ್ಷಿಪಣಿಯನ್ನು ಉಡಾಯಿಸಿದೆ. ವಿಶೇಷ ಅಂದರೆ ಹಫೀಜ್ ಸಯೀದ್ ಅಡಗುತಾಣದ ಮೇಲೆ ಅಟ್ಯಾಕ್ ಮಾಡಲಾಗಿದೆ. ಪಾಕಿಸ್ತಾನಕ್ಕೆ ಚೀನಾ ನೀಡಿದ್ದ ಜೆಫ್-17 ಯುದ್ಧ ವಿಮಾನವನ್ನೂ ಹೊಡೆದುರುಳಿಸಲಾಗಿದೆ. ಇನ್ನೂ…
Author: AIN Author
ನವದೆಹಲಿ:- ಪಹಲ್ಗಾಮ್ ದಾಳಿಯ ಪ್ರತೀಕವಾಗಿ ತಡರಾತ್ರಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ 9 ನೆಲೆಗಳ ಮೇಲೆ ದಾಳಿ ನಡೆಸಿದ್ದು, ಸೇಡು ತೀರಿಸಿಕೊಂಡಿದೆ. https://ainkannada.com/this-operation-sindoor-is-revenge-for-erasing-the-tilak-of-innocent-girls/ ಇನ್ನೂ ಆಪರೇಷನ್ ಸಿಂಧೂರ್ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಭಾರತ್ ಮಾತಾಕೀ ಜೈ ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ. ಕಳೆದ ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಈ ವೇಳೆ ಒಟ್ಟು 26 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತವು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ- ತೈಯ್ಬಾ (ಎಲ್ಇಟಿ)ಗೆ ಸಂಬಂಧವಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಎಂಬ ಗುಂಪು ಕಾರಣ ಎಂದು ಹೇಳಿತ್ತು. ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭಾರತ ಹೇಳಿತ್ತು. ಅಂತೆಯೇ ಇಂದು ರಾತ್ರಿಯಿಂದ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಆರಂಭಿಸಿದೆ.
ನವದೆಹಲಿ:- ಕಳೆದ ಏಪ್ರಿಲ್ 22..ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಗೆ ಸುಮಾರು 28 ಭಾರತೀಯರು ಅಸುನೀಗಿದರು. ಈ ಕರಾಳ ದಿನ ಎಂದೂ ಮರೆಯುವಂತದಲ್ಲ. ಹಿಂದೂಗಳ ಮೇಲೆ ಉಗ್ರರು ತೋರಿದ ಕ್ರೌರ್ಯ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುವಂತೆ ಮಾಡಿದೆ. ಈ ದಾಳಿ ಅನೇಕರ ಕುಂಕುಮವನ್ನು ಅಳಿಸಿತ್ತು. ಮಹಿಳೆಯರ ಕಣ್ಣೀರಿಗೆ ಸಾಕ್ಷಿ ಆಗಿತ್ತು. ಪ್ರತಿ ಕಣ್ಣೀರಿಗೂ ಲೆಕ್ಕ ನೀಡಲಾಗುವುದು ಎಂದು ಭಾರತ ಪ್ರತಿಜ್ಞೆ ಮಾಡಿತ್ತು. https://ainkannada.com/india-retaliates-for-pahalgam-massacre-9-pakistani-terrorist-bases-in-odisha/ ಗುರುಗ್ರಾಮದ ಹಿಮಾಂಶಿ ನರ್ವಾಲ್ ಏಪ್ರಿಲ್ 16ರಂದು ವಿವಾಹ ಆಗಿದ್ದ ತಮ್ಮ ಪತಿ ಲೆಫ್ಟಿನೆಂಟ್ ವಿನಯ್ ಜೊತೆ ಹನಿಮೂನ್ ಗೆ ಬಂದಿದ್ದರು. ಈ ವೇಳೆ ವಿನಯ್ ಅವರನ್ನು ಭೀಕರವಾಗಿ ಉಗ್ರರು ಕೊಂದು ಹಾಕಿದ್ದರು. ಜೈಪುರದ ಪ್ರಿಯಾಂಕಾ ಶರ್ಮಾ ಕೂಡ ಪತಿ ರೋಹಿತ್ ಜೊತೆ ಹನಿಮೂನ್ ಗೆ ಬಂದು ಕುಂಕುಮ ಕಳೆದುಕೊಂಡಿದ್ದರು. ಶಿಮ್ಲಾ ನಿವಾಸಿ ಅಂಜಲಿ ಠಾಕೂರ್ ಅವರು ತಮ್ಮ ಪತಿ ವಿವೇಕ್ ಠಾಕೂರ್ ಜೊತೆ ಪ್ರವಾಸಕ್ಕೆಂದು ತೆರಳಿದ್ದರು, ಅವರು ಸಹ ಇದೇ ವರ್ಷದ ಏಪ್ರಿಲ್ 12…
ನವದೆಹಲಿ:- ಇತ್ತೀಚೆಗೆ ಪಹಲ್ಗಾಮ್ ನಲ್ಲಿ ಹಿಂದುಗಳ ಮೇಲೆ ಉಗ್ರರು ನಡೆಸಿದ ಕ್ರೌರ್ಯ ಅದು ಭಾರತ ಮರೆಯುವಂತದ್ದಲ್ಲ. ಇದೇ ಪ್ರತೀಕಾರದ ಜ್ವಾಲೆಯಲ್ಲಿ ಉರಿಯುತ್ತಿರುವ ಭಾರತ ಪಾಕಿಸ್ತಾನದ ಮೇಲೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೇ ಯಾವುದೇ ಕ್ಷಣದಲ್ಲಾದರೂ ಎರಡು ದೇಶಗಳ ಮಧ್ಯೆ ಯುದ್ಧ ನಡೆಯುವ ಸಾಧ್ಯತೆ ಇದೆ. https://ainkannada.com/mock-drill-across-the-country-today-siran-of-the-war-heres-a-complete-information/ ಅದರ ಭಾಗವಾಗಿ ತಡರಾತ್ರಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರ ತೀರಿಸಿದೆ. ಉಗ್ರರ 9 ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಳಗಡೆ ನುಗ್ಗಿ ಏರ್ಸ್ಟ್ರೈಕ್ ಮಾಡಿ ಧ್ವಂಸ ಮಾಡಿದೆ. ಭಾರತ ಪಾಕಿಸ್ತಾನದ ಯಾವುದೇ ಮಿಲಿಟರಿ ನೆಲೆಗಳನ್ನು ಗುರಿಯಾಗಿಸದೇ ಕೇವಲ ಉಗ್ರರ ನೆಲೆಗಳನ್ನು ಮಾತ್ರ ಗುರಿಯಾಗಿಸಿ ದಾಳಿ ನಡೆಸಿದ್ದು ವಿಶೇಷ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರಬಲ ಪ್ರತಿಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಇಂದು ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ 9 ಭಯೋತ್ಪಾದಕ…
ಮಂಡ್ಯ:- ಚಲಿಸುತ್ತಿದ್ದಾಗಲೇ ಕಾರೊಂದು ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕುಟುಂಬವೊಂದು ಬಚಾವ್ ಆಗಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದ ಬಳಿ ಜರುಗಿದೆ. https://ainkannada.com/mock-drill-across-the-country-today-siran-of-the-war-heres-a-complete-information/ ಬೆಂಗಳೂರಿನಿಂದ ಆದಿಚುಂಚನಗಿರಿಗೆ ಕುಟುಂಬವೊಂದು ಕಾರಿನಲ್ಲಿ ಹೊರಟಿತ್ತು. ಕಾರನ್ನು ಮಹಿಳೆ ಚಲಾಯಿಸುತ್ತಿದ್ದರು. ಕಾರು ಆದಿಚುಂಚನಗಿರಿ ಸಮೀಪ ಬಂದಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಮಹಿಳೆ, ಹಾಗೂ ಆಕೆಯ ಪತಿ ಮಗುವನ್ನು ಕರೆದುಕೊಂಡು ಕಾರಿನಿಂದ ಇಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಕುಟುಂಬ ಪಾರಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ನವದೆಹಲಿ/ ಬೆಂಗಳೂರು:- ಭಾರತ-ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ದಟ್ಟವಾಗಿ ಆವರಿಸ್ತಿದೆ. ಉಗ್ರರು ಪಹಲ್ಗಾಮ್ನಲ್ಲಿ 26 ಹಿಂದೂಗಳ ನರಮೇಧ ಮಾಡ್ತಿದ್ದಂತೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಸತತ 11ನೇ ರಾತ್ರಿಯೂ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಸ್ಟೇಷನ್ಗಳ ಮೇಲೆ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತ ಪ್ರತಿದಾಳಿ ಕೂಡ ನಡೆಸಿದೆ. ಈಗ ಮತ್ತೊಂದು ಲೆವೆಲ್ಗೆ ಪ್ರತೀಕಾರವನ್ನು ಕೊಂಡೊಯ್ಯಲು ಭಾರತ ಸರ್ಕಾರ ಮುಂದಾಗಿದೆ. ಇಂದು ದೇಶಾದ್ಯಂತ ಮಾಕ್ ಡ್ರಿಲ್ ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ https://ainkannada.com/mock-drill-around-the-country-power-is-not-in-bangalore-this-evening/ ಎಸ್, ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಭಾರತ ಹಾಗೂ ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಆವರಿಸಿದೆ. ಪಾಪಿ ಪಾಕಿಸ್ತಾನದ ವಿರುದ್ಧ ಸಮರ ಸಾರಲು ಭಾರತ ಸರ್ವ ಸನ್ನದ್ಧವಾಗಿದ್ದು, ಇಂದು ದೇಶಾದ್ಯಂತ 259 ಸ್ಥಳಗಳಲ್ಲಿ ಮಾಕ್ ಡ್ರಿಲ್ಗೆ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಾಕ್ ಡ್ರಿಲ್ಗೆ ಸಿದ್ಧತೆಗಳು ನಡೆದಿವೆ.…
ಬೆಂಗಳೂರು:- ಯುದ್ಧ.. ಭಾರತ-ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ದಟ್ಟವಾಗಿ ಆವರಿಸ್ತಿದೆ. ಉಗ್ರರು ಪಹಲ್ಗಾಮ್ನಲ್ಲಿ 26 ಹಿಂದೂಗಳ ನರಮೇಧ ಮಾಡ್ತಿದ್ದಂತೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಸತತ 11ನೇ ರಾತ್ರಿಯೂ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಸ್ಟೇಷನ್ಗಳ ಮೇಲೆ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತ ಪ್ರತಿದಾಳಿ ಕೂಡ ನಡೆಸಿದೆ. ಈಗ ಮತ್ತೊಂದುಲೆವೆಲ್ಗೆ ಪ್ರತೀಕಾರವನ್ನು ಕೊಂಡೊಯ್ಯಲು ಭಾರತ ಸರ್ಕಾರ ಮುಂದಾಗಿದೆ. https://ainkannada.com/if-you-get-nervous-pain-when-you-go-to-bed-at-night-dont-neglect-do-these-3-tests/ ಅದರಂತೆ ಕೇಂದ್ರ ಗೃಹ ಸಚಿವಾಲಯ ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್ ನಡೆಸಲು ರಾಜ್ಯಗಳಿಗೆ ಸೂಚನೆ ಕೊಟ್ಟಿದೆ. ಅದರಂತೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಮಾಕ್ ಡ್ರಿಲ್ ಸಂಬಂಧ ಬೆಂಗಳೂರು ನಗರದಾದ್ಯಂತ ಇಂದು ಸಂಜೆ 6.40ರ ಸುಮಾರಿಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ. ಬೆಂಗಳೂರಿನಲ್ಲಿ ಸಂಜೆ 5.30ರಿಂದ ಸಂಜೆ 7 ಗಂಟೆಯವರೆಗೆ ಮಾಕ್ ಡ್ರಿಲ್ ನಡೆಯುವ ಸಾಧ್ಯತೆ ಇದೆ. ಸಂಜೆ 6.40ರ ಸುಮಾರಿಗೆ ನಗರದಾದ್ಯಂತ ವಿದ್ಯುತ್ ಸ್ಥಗಿತಗೊಳ್ಳಲಿದೆ. ದೊಡ್ಡ ದೊಡ್ಡ ಕಟ್ಟಡಗಳನ್ನು ರಕ್ಷಣೆ…
ಅನೇಕ ಜನರು ನರನೋವು ನೋವಿನಿಂದ ಬಳಲುತ್ತಿದ್ದಾರೆ. ಸಾಮಾನ್ಯವಾಗಿ ಈ ನೋವು 30 ರಿಂದ 50ವರ್ಷದ ಮಧ್ಯ ವಯಸ್ಸಿನವರಲ್ಲಿ ಕಾಣಬಹುದು. ನಮ್ಮ ಶರೀರದಲ್ಲಿ ಅತಿ ದೊಡ್ಡ ನರವಾದ ಸಯಾಟಿಕಾ ನರವು ಬೆನ್ನುಮೂಳೆಯಿಂದ ಪ್ರಾರಂಭವಾಗಿ ತೊಡೆಗಳ ಹಿಂಭಾಗದೊಳಗೆ ಅಲ್ಲಿಂದ ಮೊಣಕಾಲು ಸ್ನಾಯುಗಳಿಗೆ ಹಾಗೂ ಪಾದಗಳಿಗೆ ಪ್ರಯಾಣಿಸುತ್ತದೆ. ಕಾಲುಗಳ ಮತ್ತು ಪಾದಗಳ ಸ್ಪರ್ಶ ಜ್ಞಾನವನ್ನು ಸಯಾಟಿಕಾ ನರವು ನಿಯಂತ್ರಿಸುತ್ತದೆ. ಸಯಾಟಿಕಾ ನರವು ಐದು ನರಗಳ ಸಮೂಹದಿಂದ ಏರ್ಪಟ್ಟಿದೆ. ಯಾವಾಗ ಈ ನರಗಳ ಮೇಲೆ ಒತ್ತಡ ಬೀಳುತ್ತದೋ ಅದನ್ನು ಸಯಾಟಿಕಾ ನೋವು ಎಂದು ಕರೆಯುತ್ತಾರೆ. ಸಯಾಟಿಕಾ ನರವು ಸಂಚರಿಸುವ ಮಾರ್ಗದಲ್ಲಿ ಎಲ್ಲಿಯಾದರೂ ನೋವಾಗಬಹುದು. https://ainkannada.com/the-number-of-enemies-for-these-piles-is-high-wednesdays-fate-07-may-2025/ ರಾತ್ರಿ ಮಲಗುವಾಗ ಕಾಲುಗಳು ಅಥವಾ ತೋಳುಗಳಲ್ಲಿ ರಕ್ತನಾಳಗಳು ಜುಮ್ಮೆನಿಸುವುದು ಅಥವಾ ಒಡಮೂಡುವಂತಹ ಸಮಸ್ಯೆಯನ್ನು ಅನೇಕರು ಎದುರಿಸಿರಬಹುದು. ಇದನ್ನು ಸಾಮಾನ್ಯವೆಂದು ಭಾವಿಸಿ ನಿರ್ಲಕ್ಷಿಸುವವರು ಸಾಕಷ್ಟಿದ್ದಾರೆ. ಆದರೆ, ತಜ್ಞರ ಪ್ರಕಾರ, ಈ ಲಕ್ಷಣವು ಕೇವಲ ಆಯಾಸ ಅಥವಾ ನಿರ್ಜಲೀಕರಣದಿಂದ ಮಾತ್ರವಲ್ಲ, ದೇಹದಲ್ಲಿ ಅಡಗಿರುವ ಗಂಭೀರ ಕಾಯಿಲೆಗಳ ಎಚ್ಚರಿಕೆಯ ಸಂಕೇತವಾಗಿರಬಹುದು. ರಕ್ತನಾಳಗಳ ಉಬ್ಬುವಿಕೆಯ ಹಿಂದಿನ ಕಾರಣಗಳು…
ಸೂರ್ಯೋದಯ – 5:51 ಬೆ ಸೂರ್ಯಾಸ್ತ – 6:34 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ದಶಮಿ ನಕ್ಷತ್ರ – ಪುಬ್ಬೆ ಯೋಗ – ವ್ಯಾಘಾತ ಕರಣ – ಗರಜೆ ಮಳೆ ನಕ್ಷತ್ರ :ಭರಣಿ ರಾಹು ಕಾಲ – 12:00 ದಿಂದ 01:30 ವರೆಗೆ ಯಮಗಂಡ – 07:30 ದಿಂದ 09:00 ವರೆಗೆ ಗುಳಿಕ ಕಾಲ – 10:30 ದಿಂದ 12:00 ವರೆಗೆ ಬ್ರಹ್ಮ ಮುಹೂರ್ತ – 4:15 ಬೆ. ದಿಂದ 5:03 ಬೆ. ವರೆಗೆ ಅಮೃತ ಕಾಲ – 11:14 ಬೆ. ದಿಂದ 12:59 ಮ. ವರೆಗೆ ಅಭಿಜಿತ್ ಮುಹುರ್ತ – ಇಲ್ಲ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403…
ಕಾರವಾರ:- ಪಹಲ್ಗಾಮ್ ದಾಳಿ ಖಂಡಿಸಿ ಕಾರವಾರದಲ್ಲಿ ನಾಳೆ ಕರ್ನಾಟಕ ರಾಜ್ಯ ಸನಾತನ ಧರ್ಮ ರಕ್ಷಣಾ ವೇದಿಕೆ ಕಾರವಾರ ಬಂದ್ ಗೆ ಕರೆ ನೀಡಿತ್ತು. ಆದರೆ, ಇದೀಗ ನಾಳೆ ಬಂದ್ ಇರುವುದಿಲ್ಲ ಎಂದು ಎಸ್.ಪಿ ಎಂ.ನಾರಾಯಣ್ ತಿಳಿಸಿದ್ದಾರೆ. https://ainkannada.com/a-huge-tree-fell-on-it-auto-car-damaged-drivers-hand-fractured/ ಕಾರವಾರದಲ್ಲಿ ನಾಳೆ ಬಂದ್ ಇರುವುದಿಲ್ಲ. ಸಂಘಟನೆಗಳು ಬಂದ್ಗೆ ಕರೆಕೊಟ್ಟಿದ್ದವು. ಸಂಘಟಕರ ಜೊತೆ ಮಾತನಾಡಲಾಗಿದ್ದು, ಬಂದ್ ಇರುವುದಿಲ್ಲ. ಬದಲಾಗಿ ಮೆರವಣಿಗೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಬಂದ್ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.