ಬೆಂಗಳೂರು:- ಸುಹಾಸ್ ಶೆಟ್ಟಿ ಹತ್ಯೆಗೆ ಕಾಂಗ್ರೆಸ್ನ ಓಲೈಕೆ ರಾಜಕೀಯ ಕಾರಣ ಎಂದು CT ರವಿ ಹೇಳಿದ್ದಾರೆ. https://ainkannada.com/power-will-not-be-available-in-all-parts-of-kodagu-tomorrow-where-here-are-the-complete-details/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ನವ್ರು ದನಗಳ್ಳರು ಸತ್ತಾಗ ಅವರ ಮನೆಗೆ ಹೋಗಿ ಸಾಂತ್ವನ ಹೇಳಿ ಪರಿಹಾರ ಕೊಟ್ಟಿದ್ರು ಎಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಭೇಟಿ ಕೊಡದ ಕಾಂಗ್ರೆಸ್ ನಾಯಕರ ನಡೆಗೆ ಪರಿಷತ್ ಸದಸ್ಯ ಸಿಟಿ ರವಿ ಕಿಡಿಕಾರಿದ್ದಾರೆ. ದನಗಳ್ಳರಾಗಿದ್ದ ಇದ್ರಿಸ್ ಪಾಷ ಹಾಗೂ ಕಬೀರ್ ಸತ್ತಾಗ ಕಾಂಗ್ರೆಸ್ ನಾಯಕರು ಅವರ ಮನೆಗಳಿಗೆ ಹೋಗಿ ಸಾಂತ್ವನ ಹೇಳಿ, ಒಬ್ರಿಗೆ 10 ಲಕ್ಷ ರೂ. ಇನ್ನೊಬ್ಬರಿಗೆ 25 ಲಕ್ಷ ರೂ. ಪರಿಹಾರವನ್ನೂ ಕೊಟ್ಟು ಬಂದ್ರು. ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ಕೇಸ್ಗಳನ್ನು ವಾಪಸ್ ಪಡೆದ್ರಲ್ಲ, ಅವ್ರೇನು ದೇಶ ಭಕ್ತರಾಗಿದ್ರಾ? ಅವರ ಮೇಲೆ ದೊಂಬಿ ಗಲಭೆ, ಠಾಣೆಗೆ ಬೆಂಕಿ ಹಾಕಿದ ಕೇಸ್ಗಳಿವೆ. ಯಾರ್ಯಾರು ಯಾವ್ಯಾವ ಕಾರಣಕ್ಕೆ ರೌಡಿಶೀಟ್ ಓಪನ್ ಮಾಡಿದ್ದಾರೆ ಅಂತ ಬಿಚ್ಚಿ ಹೇಳಬೇಕಾ ಎಂದು ತಿರುಗೇಟು ನೀಡಿದರು. ಸುಹಾಸ್ ಶೆಟ್ಟಿ ಹತ್ಯೆ ನಂತರ…
Author: AIN Author
ಕೊಡಗು:- ಕೊಡಗಿನ ವಿವಿಧ ಭಾಗಗಳಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ https://ainkannada.com/drink-tomato-juice-on-an-empty-stomach/ ಅವರದಾಳು, ಕಣ್ಣಾರಳ್ಳಿ, ಕೊಡ್ಲಿಪೇಟೆ, ಬ್ಯಾಡಗೊಟ್ಟ, ನೀರುಗುಂದ, ಹೆಮ್ಮನೆ, ಬೆಸ್ಸೂರು, ಕಟ್ಟೆಪುರ, ನಿಲುವಾಗಿಲು, ಕೂಡ್ಲೂರು, ದೊಡ್ಡಬಂಡಾರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಆದ್ದರಿಂದ ಕನ್ನಂಡಬಾಣೆ, ಗೌಡಸಮಾಜ, ಜೂನಿಯರ್ ಕಾಲೇಜು ರಸ್ತೆ, ದಾಸವಾಳ ರಸ್ತೆ, ಗಣಪತಿ ಬೀದಿ, ಓಂಕಾರೇಶ್ವರ ದೇವಸ್ಥಾನ, ಓಂಕಾರೇಶ್ವರ ರಸ್ತೆ, ಬ್ರಾಹ್ಮಿನ್ಸ್ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಬೆಳ್ಳಾರಳ್ಳಿ, ಸಂಪಿಗೆದಾಳು, ಕಿತ್ತೂರು, ಮಣಗಲಿ, ಮೂದ್ರವಳ್ಳಿ, ದುಂಡಳ್ಳಿ, ಬಿಳಹ(ಬೆಂಬಳೂರು) ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಈರುಳ್ಳಿ ಬೆಲೆ ಹೆಚ್ಚಾದರೆ ಇನ್ನೊಮ್ಮೆ ಟೊಮೆಟೊ ಬೆಲೆ ಗಗನಕ್ಕೇರುತ್ತದೆ. ಒಟ್ಟಿನಲ್ಲಿ ಅಡುಗೆ ಪ್ರಪಂಚದಲ್ಲಿ ಈ ಎರಡು ತರಕಾರಿಗಳು ಮಾತ್ರ ಒಳ್ಳೆ ಹೆಸರನ್ನು ಮಾಡಿವೆ. ಈಗ ಟೊಮೇಟೊದ ವಿಚಾರಕ್ಕೆ ಬರುವುದಾದರೆ ವರ್ಷದ ಸಾಕಷ್ಟು ಸಮಯ ಇದು ಜನರಿಗೆ ಕಡಿಮೆ ಬೆಲೆಗೆ ಸಿಗುತ್ತದೆ. https://ainkannada.com/ipl-2025-rohit-sharma-presents-a-diamond-ring-to-mohammed-siraj/ ಸಿಕ್ಕಂತಹ ಸಮಯದಲ್ಲಿ ಇದನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳುವ ಜಾಣ್ಮೆ ನಮಗೆ ಬರಬೇಕು. ಟೊಮೆಟೊ ಹಣ್ಣುಗಳು ಇಂದು ಬಹುತೇಕ ನಮ್ಮ ಅಡುಗೆಗಳಲ್ಲಿ ಒಗ್ಗರಣೆಗಾಗಿ ಮತ್ತು ಇನ್ನಿತರ ಉಪಯೋಗಗಳಿಗಾಗಿ ಬಳಕೆಯಾಗುತ್ತಿವೆ. ಖಾಲಿ ಹೊಟ್ಟೆಯಲ್ಲಿ ಟೊಮೆಟೊ ರಸವನ್ನು ಸೇವಿಸುವುದರಿಂದ ಅಗತ್ಯವಾದ ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ. ಇತರ ಆಹಾರಗಳ ಅನುಪಸ್ಥಿತಿಯು ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಂತೆ ಟೊಮೆಟೊಗಳಲ್ಲಿ ಸಮೃದ್ಧವಾಗಿರುವ ಜೀವಸತ್ವಗಳು ಮತ್ತು ಖನಿಜಗಳ ಸಮೃದ್ಧ ಶ್ರೇಣಿಯನ್ನು ಸಮರ್ಥವಾಗಿ ಸಮೀಕರಿಸಲು ದೇಹಕ್ಕೆ ಅನುವುಮಾಡಿಕೊಡುತ್ತದೆ ಟೊಮ್ಯಾಟೋ ಜೀರ್ಣಕಾರಿ ಕಿಣ್ವಗಳು ಮತ್ತು ಫೈಬರ್ನಲ್ಲಿ ಸಮೃದ್ಧವಾಗಿದೆ. ಟೊಮೆಟೊ ರಸವು ಜೀರ್ಣಾಂಗ ವ್ಯವಸ್ಥೆಗೆ ಅತ್ಯುತ್ತಮವಾದ ಟಾನಿಕ್ ಆಗಿ ಕೆಲಸ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ಇದನ್ನು…
ಚಿತ್ರದುರ್ಗ:- ಚಾಲಕನ ನಿಯಂತ್ರಣ ತಪ್ಪಿ ಹೈವೇ ಬೋರ್ಡ್ ಗೆ ಬಸ್ ಡಿಕ್ಕಿ ಹೊಡೆದು ಪಲ್ಟಿಯಾಗಿ ಓರ್ವ ಮೃತಪಟ್ಟು 30 ಕ್ಕು ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆಯಿಂದ ಚಳ್ಳಕೆರೆ ಗೊಲ್ಲರ ಹಟ್ಟಿ ಗೇಟ್ ಬಳಿ ನಡೆದಿದೆ. https://ainkannada.com/have-you-ever-eaten-mangoes-because-they-taste-so-good-if-so-watch-the-news-first/ ಮೃತನನ್ನು ಶಹಾಪುರದ ಶಿವಪ್ಪ ಎಂದು ಗುರುತಿಸಿದೆ. ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿದೆ. ಬಸ್ ಯಾದಗಿರಿಯಿಂದ ಬೆಂಗಳೂರಿಗೆ ಹೊರಟಿತ್ತು. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿದ್ದಾರೆ
ಬೇಸಿಗೆಯಲ್ಲಿ ಅತಿ ಹೆಚ್ಚು ಸಿಗುವ ಹಣ್ಣುಗಳಲ್ಲಿ ಮಾವು ಕೂಡಾ ಒಂದು. ಹಣ್ಣಿನ ರಾಜ ಎಂದು ಕರೆಸಿಕೊಳ್ಳೋ ಮಾವು ತಿನ್ನಲು ಬಲುರುಚಿ. ಹಣ್ಣಿನ ರಾಜನಾದ ಮಾವಿನಹಣ್ಣನ್ನು ಇಷ್ಟಪಡದೇ ಇರುವವರು ವಿರಳ. ಬೇಸಿಗೆಯಲ್ಲಿ ಆರಂಭವಾಗುವ ಇದರ ಅಬ್ಬರ ಮಳೆ ಶುರುವಾದ ಮೇಲೂ ಇರುತ್ತೆ. ಮಾವಿನ ಹಣ್ಣಿನ ಸೀಸನ್ ಆರಂಭವಾಯಿತೆಂದರೆ ಉಳಿದ ಹಣ್ಣನ್ನು ಯಾರೂ ಇಷ್ಟಪಡುವುದಿಲ್ಲ. ಮಾರುಕಟ್ಟೆ, ಹಣ್ಣಿನ ಅಂಗಡಿ ಸೇರಿದಂತೆ ಎಲ್ಲೆಡೆ ಮಾವಿನ ಹಣ್ಣಿನದ್ದೇ ಘಮ ತುಂಬಿಹೋಗುತ್ತದೆ. https://ainkannada.com/kannada-is-being-ignored-in-karnataka-english-hindi-and-marathi-are-mandatory-for-a-job-at-vega-helmet-company/ ಮಾವಿನ ಹಣ್ಣಿನಲ್ಲಿ ಹೇರಳವಾದ ಫೈಬರ್ ಅಂಶವಿದೆ. ಅದೇ ರೀತಿ ವಿಟಮಿನ್ ಎ, ಬಿ, ಸಿ, ಕೆ, ಇ ಗಳಿದೆ. ಆರೋಗ್ಯವನ್ನು ಉತ್ತಮಗೊಳಿಸುವ ಹಣ್ಣಾದ ಇದು ಪರಿಪೂರ್ಣ ಹಣ್ಣು ಎಂದೇ ಹೇಳಬಹುದು. ಆದರೆ ಅತಿಯಾದರೆ ಅಮೃತವೂ ವಿಷ ಎನ್ನುತ್ತಾರೆ. ಈ ಮಾತು ಮಾವಿನ ಹಣ್ಣಿಗೂ ಅನ್ವಯವಾಗುತ್ತದೆ. ಮಾವಿನಹಣ್ಣು ಎಷ್ಟು ರುಚಿಯೋ ಅಷ್ಟೇ ಅಧಿಕ ಸೇವನೆಯಿಂದ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹೀಗಾಗಿ ಇಷ್ಟ ಎಂದು ಹೆಚ್ಚು ಮಾವಿನ ಹಣ್ಣನ್ನು ಸೇವಿಸಿದರೆ ಅನಾರೋಗ್ಯ ಕಾಡುವುದು ಪಕ್ಕಾ. ಹಾಗಾದರೆ ಮಾವಿನ ಹಣ್ಣಿನ…
ಬೆಳಗಾವಿ:- ಕರ್ನಾಟಕದಲ್ಲೇ ಇದ್ದು ಕನ್ನಡ ಭಾಷೆಯನ್ನು ಅಲ್ಲಗಳೆಯುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಅದರಂತೆ ಬೆಳಗಾವಿಯ ವೇಗಾ ಹೆಲ್ಮೆಟ್ ಕಂಪನಿ ತೋರಿರುವ ಉದ್ಧಟತನ ಕನ್ನಡಿಗರನ್ನು ಕೆರಳಿಸಿದೆ. https://ainkannada.com/karwar-fire-accident-at-axis-bank-machinery-gutted-in-fire/ ಎಸ್, ವೇಗಾ ಹೆಲ್ಮೆಟ್ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಇಂಗ್ಲಿಷ್, ಹಿಂದಿ, ಮರಾಠಿ ಭಾಷೆ ಕಡ್ಡಾಯವಾಗಿ ಬರ್ಬೇಕಂತೆ. ಕಂಪನಿಯ ಇನ್ಟಾಗ್ರಾಂ ಅಕೌಂಟ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದರಲ್ಲಿ ಕನ್ನಡ ಭಾಷೆ ಬಿಟ್ಟು ಇಂಗ್ಲಿಷ್, ಹಿಂದಿ, ಮರಾಠಿ ಮೂರು ಭಾಷೆ ಬರಬೇಕೆಂದು ಉದ್ಧಟತನ ತೋರಲಾಗಿತ್ತು. ಕನ್ನಡದ ನೆಲದಲ್ಲಿ ಇದ್ದುಕೊಂಡು ಕನ್ನಡ ಭಾಷೆ ಗೆ ವೇಗಾ ಹೆಲ್ಮೆಟ್ ಕಂಪನಿ ಅವಮಾನಿಸಿತ್ತು. ಕಂಪನಿಯ ಕನ್ನಡ ವಿರೋಧಿ ನೀತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ಹೊರ ಹಾಕಿದರು. ಕನ್ನಡಿಗರ ಬೆನ್ನಿಗೆ ಚೂರಿ ಹಾಕ್ತಿರೋ ಕಂಪನಿಗೆ ಕನ್ನಡ ಸಂಘಟನೆಗಳು ಬುದ್ಧಿ ಕಲಿಸುವಂತೆ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಕನ್ನಡಿಗರಿಗೆ ವೇಗಾ ಹೆಲ್ಮೆಟ್ ಕಂಪನಿ ಆಡಳಿತ ಮಂಡಳಿ ಕ್ಷಮೆ ಕೋರಿದೆ. ಇದು ಕಂಪನಿಗೆ ಹೊಸದಾಗಿ ಸೇರ್ಪಡೆಯಾದ ಕ್ಲರ್ಕ್…
ಕಾರವಾರ:- ಇಂದು ಬೆಳ್ಳಂ ಬೆಳಗ್ಗೆ ಎಕ್ಸಿಸ್ ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ಜರುಗಿದೆ. https://ainkannada.com/indias-aggressive-move-is-wrong-china-says-it-supports-pakistan/ ಕುಮಟಾ ಸನ್ಮಾನ ಹೊಟೆಲ್ ಪಕ್ಕ ಇರುವ ಎಕ್ಸಿಸ್ ಬ್ಯಾಂಕ್ ನಲ್ಲಿ ಇಂದು ಬೆಳಿಗ್ಗೆ ವಿದ್ಯುತ್ ಅವಘಡ ದಿಂದ ಬೆಂಕಿ ಹೊತ್ತಿಕೊಂಡಿದೆ. ಘಟನೆಯಿಂದ ಬ್ಯಾಂಕ್ ನ ಯಂತ್ರೋಪಕರಣಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಇಸ್ಲಾಮಾಬಾದ್:- ಪಹಲ್ಗಾಮ್ನಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಬಿಗಡಾಯಿಸುವ ಪರಿಸ್ಥಿತಿ ಉಂಟಾಗಿದೆ. ಒಂದು ಕಡೆ ಭಾರತಕ್ಕೆ ರಷ್ಯಾ, ಜಪಾನ್ ಬೆಂಬಲಿ ನೀಡಿದರೆ, ಇನ್ನೊಂದು ಕಡೆ ನೆರೆ ರಾಷ್ಟ್ರ ಚೀನಾ ಪಾಕ್ಗೆ ಬೆಂಬಲ ನೀಡುವುದಾಗಿ ಹೇಳಿದೆ. ದಕ್ಷಿಣ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗಾಗಿ ನಾವು ಸದಾ ಪಾಕಿಸ್ತಾನ ಬೆಂಬಲಿಸುತ್ತೇವೆ ಎಂದು ಹೇಳಿದೆ. https://ainkannada.com/even-though-they-are-table-toppers-is-it-doubtful-that-rcb-will-make-the-playoffs-if-so-they-will-be-out-of-the-tournament/ ಸೋಮವಾರ ಪಾಕ್ ಅಧ್ಯಕ್ಷ ಅಲಿ ಜರ್ದಾರಿ ಅವರನ್ನು ಪಾಕಿಸ್ತಾನದಲ್ಲಿನ ಚೀನಾ ರಾಯಭಾರಿ ಜಿಯಾಂಗ್ ಜೈಡಾಂಗ್ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಚೀನಾ ಮತ್ತು ಪಾಕಿಸ್ತಾನದ ಸ್ನೇಹ ಶಾಶ್ವತವಾಗಿದೆ. ಕಾಲ ಕಾಲಕ್ಕೆ ಪರೀಕ್ಷೆಗೆ ಒಳಗಾಗಿದ್ದರೂ ಯಾವಾಗಲೂ ಸವಾಲಿನ ಸಮಯದಲ್ಲಿ ಪರಸ್ಪರ ಬೆಂಬಲಿಸಿದ ಸ್ನೇಹ ನಮ್ಮದಾಗಿದೆ. ಹೀಗಾಗಿ ದಕ್ಷಿಣ ಏಷ್ಯಾ ಶಾಂತಿಗಾಗಿ ಪಾಕ್ಗೆ ನಮ್ಮ ಬೆಂಬಲವಿದೆ ಎಂದಿದ್ದಾರೆ. ಭಾರತವು ಬೇಜಾವಾಬ್ದಾರಿ ಮತ್ತು ಆಕ್ರಮಣಕಾರಿ ನಡೆಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದರು
IPL 2025ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ 11 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಶನಿವಾರ ನಡೆದ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ 2 ರನ್ಗಳ ರೋಚಕ ಗೆಲುವು ಸಾಧಿಸಿದ ಬಳಿಕ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. https://ainkannada.com/do-you-want-to-get-rid-of-gastric-problems-then-follow-these-tips/ ಆರ್ ಸಿಬಿ ಈ ಆವೃತ್ತಿಯಲ್ಲಿ ಈಗಾಗಲೇ ತವರಿನ ಹೊರಗೆ ಆಡಿರುವ 6 ಪಂದ್ಯಗಳಲ್ಲೂ ಗೆಲುವು ಸಾಧಿಸಿದೆ. ಇದೀಗ ತವರಿನ ಹೊರಗೆ 7ನೇ ಪಂದ್ಯ ಆಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಆರ್ ಸಿಬಿ ಇತಿಹಾಸ ಸೃಷ್ಟಿಸಲಿದೆ ಈ ಬಾರಿಯ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರಿರುವ RCB ಒಟ್ಟು 16 ಅಂಕಗಳನ್ನು ಕಲೆಹಾಕಿದರೂ, ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ. ಇದಕ್ಕೆ ಮುಖ್ಯ ಕಾರಣ ಇತರೆ 7 ತಂಡಗಳು ಪ್ಲೇಆಫ್ ರೇಸ್ನಲ್ಲಿರುವುದು. ಅದರಲ್ಲೂ 4 ತಂಡಗಳಿಗೆ ಆರ್ಸಿಬಿ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶವಿದೆ.…
ಅನೇಕ ಮಂದಿ ತಾವು ಆಗಾಗ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿರುವಾಗಿ ಹೇಳುತ್ತಾರೆ. ಇದರಿಂದ ಹೊಟ್ಟೆ ನೋವು, ತಲೆನೋವು ಮತ್ತು ಅಜೀರ್ಣವನ್ನು ಸಮಸ್ಯೆಗಳು ಉಂಟಾಗುತ್ತದೆ. ಜೀವನಶೈಲಿಯಲ್ಲಿನ ಬದಲಾವಣೆಗಳು ಮತ್ತು ಅನಿಯಮಿತ ಆಹಾರ ಪದ್ಧತಿಗಳಿಂದ ಈ ರೀತಿಯ ಹೊಟ್ಟೆಯ ಸಮಸ್ಯೆಗಳು ಉಂಟಾಗುತ್ತದೆ. ಅದರಲ್ಲೂ ಗ್ಯಾಸ್ಟ್ರಿಕ್ ದೊಡ್ಡ ಸಮಸ್ಯೆಯೇ ಆಗಿದೆ. ಏಕೆಂದರೆ ಇದು ಹೊಟ್ಟೆ ಉಬ್ಬುವಿಕೆಯಂತಹ ಮುಂತಾದ ಸಮಸ್ಯೆಗಳನ್ನು ಉಂಟು ಮಾಡುತ್ತದೆ. https://ainkannada.com/ipl-2025-virat-made-a-big-loss-for-team-india-what-did-he-do-fans-are-upset/ ಗ್ಯಾಸ್ಟ್ರಿಕ್ ಅನ್ನೋದು ಭಾರತೀಯರಲ್ಲಿ ಇದು ಸಾಮಾನ್ಯ ಮತ್ತು ದಿನನಿತ್ಯದ ಸಮಸ್ಯೆಯಾಗಿದೆ. ಇಲ್ಲಿನ ಜನರು ರುಚಿ ರುಚಿಯಾದ, ಮಸಾಲೆಯುಕ್ತ ಆಹಾರವನ್ನು ಹೆಚ್ಚು ತಿನ್ನುತ್ತಾರೆ. ಗ್ಯಾಸ್ಟ್ರಿಕ್ ಬಂದಾಗ ಹೊಟ್ಟೆನೋವು ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಲಕ್ಷಣವಾಗಿದೆ. ಆದರೆ, ಎಲ್ಲ ಹೊಟ್ಟೆನೋವೂ ಗ್ಯಾಸ್ಟ್ರಿಕ್ನ ಲಕ್ಷಣವಲ್ಲ ಎಂಬುದು ಕೂಡ ನಿಮಗೆ ತಿಳಿದಿರಬೇಕು. ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ನಿವಾರಿಸಲು ನೀವು ಕೆಲವು ಮನೆಮದ್ದುಗಳನ್ನು ಬಳಸಬಹುದು. ಗ್ಯಾಸ್ಟ್ರಿಕ್ ಸಮಸ್ಯೆಗಳು, ಲಕ್ಷಣಗಳು ಮತ್ತು ಪರಿಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ. ಗ್ಯಾಸ್ಟ್ರಿಕ್ ಸಮಸ್ಯೆಯನ್ನು ತಡೆಯಲು ಈ ಕೆಲವು ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಉತ್ತಮ. ಈ ಕೆಲವು ಸರಳ ಅಭ್ಯಾಸಗಳು ಗ್ಯಾಸ್ಟ್ರಿಕ್…