ಟೀಮ್ ಇಂಡಿಯಾಗೆ ಕ್ರಿಕೆಟ್ ಲೋಕದ ಕಿಂಗ್ ಎಂದೇ ಖ್ಯಾತಿಗಳಿಸಿರುವ ವಿರಾಟ್ ಕೊಹ್ಲಿ ಲಾಸ್ ಮಾಡಿದ್ರಾ ಎಂಬ ಮಾತುಗಳು ಗುಸು ಗುಸು ಕೇಳಿ ಬರುತ್ತಿದೆ. ಕ್ರಿಕೆಟ್ ಲೋಕದಲ್ಲಿ ತನ್ನದೇ ಛಾಪು ಮೂಡಿಸಿರುವ ವಿರಾಟ್ ಮಾಡಿದ್ದೆಲ್ಲಾ ದಾಖಲೆಗಳೆ. ಚೇಸಿಂಗ್ ಮಾಸ್ಟರ್, ದಾಖಲೆಗಳ ಸರದಾರ ಎಂಬೆಲ್ಲಾ ಬಿರುದು ಪಡೆದಿರುವ ವಿರಾಟ್ ಕೊಹ್ಲಿ ಅವರು ಟೀಮ್ ಇಂಡಿಯಾಗೆ ದೊಡ್ಡ ಲಾಸ್ ಒಂದನ್ನು ಮಾಡಿದ್ದಾರೆ. ಅದೇನು ಅಂತ ಹೇಳ್ತೀವಿ ಈ ಸುದ್ದಿ ಪೂರ್ತಿ ಓದಿ https://ainkannada.com/rain-news-moderate-rain-likely-in-bangalore-today/ ಟಿ20 ವಿಶ್ವಕಪ್ ಫೈನಲ್ ಮ್ಯಾಚ್. ಸೌತ್ ಆಫ್ರಿಕಾ ಎದುರಿನ ಪಂದ್ಯ.. ಈ ಪಂದ್ಯದಲ್ಲಿ ಗೆದ್ದ ಟೀಮ್ ಇಂಡಿಯಾ ಟಿ20 ವಿಶ್ವ ಚಾಂಪಿಯನ್ ಆಗಿ ಮೆರೆದಾಡಿತ್ತು. ಗೆದ್ದ ಖುಷಿಯಲ್ಲಿ ತೇಲಾಡುತ್ತಿದ್ದ ಫ್ಯಾನ್ಸ್ಗೆ ಒಂದು ಬರ ಸಿಡಲ ಆಘಾತ ಎದುರಾಗಿತ್ತು. ಅದೇ ಆ ಪಂದ್ಯದ ಮ್ಯಾಚ್ ವಿನ್ನರ್ ವಿರಾಟ್ ಕೊಹ್ಲಿಯ ನಿವೃತ್ತಿ. ಮ್ಯಾಚ್ ಗೆಲ್ಲಿಸಿದ್ದ ಕಿಂಗ್ ಕೊಹ್ಲಿ, ಪಂದ್ಯದ ಬಳಿಕ ಸೈಲೆಂಟ್ ಆಗಿಯೇ ನಿವೃತ್ತಿಯ ಶಾಕ್ ನೀಡಿದ್ದರು. ವಯಸ್ಸಾಯ್ತು. ಟಿ20 ಕ್ರಿಕೆಟ್ನಿಂದ ದೂರವಾಗಲು ಇದೇ…
Author: AIN Author
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/hyderabads-play-off-dream-shattered-match-against-delhi-called-off-due-to-rain-hyderabad-knocked-out-in-the-league-stage/ ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಕೋಲಾರ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಬೆಳಗಾವಿ, ಧಾರವಾಡದಲ್ಲಿ ಒಣಹವೆ ಇರಲಿದೆ. ಸೋಮವಾರ ಪೊನ್ನಂಪೇಟೆಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ…
2025ರ ಐಪಿಎಲ್ ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಹೈದರಾಬಾದ್ಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಅದರಂತೆ ಹೈದರಾಬಾದ್ ಕೂಡ ಡೆಲ್ಲಿ ತಂಡವನ್ನು 133 ರನ್ಗಳಿಗೆ ಕಟ್ಟಿಹಾಕಿ ಗೆಲ್ಲುವ ವಿಶ್ವಾಸ ಮೂಡಿಸಿತ್ತು. ಆದರೆ ಹೈದರಾಬಾದ್ನ ಈ ಗೆಲುವಿನ ಕನಸಿಗೆ ಅಡ್ಡಿಯಾದ ಮಳೆ ಪಂದ್ಯವನ್ನು ರದ್ದುಗೊಳಿಸುವಲ್ಲಿ ಯಶಸ್ವಿಯಾಯಿತು. ಹೀಗಾಗಿ ಸನ್ರೈಸರ್ಸ್ ಹೈದರಾಬಾದ್ ತಂಡ ಈ ಸೀಸನ್ನಲ್ಲಿ ಲೀಗ್ ಹಂತದಲ್ಲೇ ತನ್ನ ಪ್ರಯಾಣವನ್ನು ಅಧಿಕೃತವಾಗಿ ಅಂತ್ಯಗೊಳಿಸಿದೆ. https://ainkannada.com/sorry-karnataka-i-love-you-so-much-sonu-nigam-finally-apologizes/ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತು. ಆದರೆ, ಮಳೆಯಿಂದಾಗಿ ಹೈದರಾಬಾದ್ ತಂಡದ ಇನಿಂಗ್ಸ್ ಆರಂಭವಾಗಲಿಲ್ಲ. ಇದರೊಂದಿಗೆ, ಪ್ಯಾಟ್ ಕಮ್ಮಿನ್ಸ್ ತಂಡವು ಪ್ಲೇಆಫ್ ರೇಸ್ನಿಂದ ಹೊರಬಿದ್ದಿದ್ದು, ಅಕ್ಷರ್ ಪಟೇಲ್ ತಂಡದ ಭರವಸೆ ಇನ್ನೂ ಜೀವಂತವಾಗಿದೆ. ಪಂದ್ಯದಲ್ಲಿ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 7…
ಬೆಂಗಳೂರು:- ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡಿಗರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದ ಖ್ಯಾತ ಗಾಯಕ ಸೋನು ನಿಗಮ್ ಅವರು ಕೊನೆಗೂ ಕನ್ನಡಿಗರ ಬಳಿ ಕ್ಷಮೆ ಕೋರಿದ್ದಾರೆ. https://ainkannada.com/i-am-a-minister-i-will-give-more-grants-if-needed-dcm-dk-shivakumar/ ಈಗಾಗಲೇ ಕರ್ನಾಟಕದಲ್ಲಿ ಸೋನು ನಿಗಮ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಬೆಂಗಳೂರಿನಲ್ಲಿ ಈಗಾಗಲೇ FIR ಕೂಡ ದಾಖಲಾಗಿದೆ. ಅಷ್ಟೇ ಅಲ್ಲದೇ ಗಾಯಕನ ಮೇಲೆ ಕಠಿಣ ಕ್ರಮ ಕೈಗೊಂಡಿರುವ ಫಿಲ್ಮ್ ಚೇಂಬರ್ ಕನ್ನಡ ಚಿತ್ರರಂಗದಿಂದ ಬ್ಯಾನ್ ಕೂಡ ಮಾಡಿದೆ. ʻಕನ್ನಡ ಹಾಡು ಹಾಡಿʼ ಅಂದಿದ್ದಕ್ಕೆ ಉಗ್ರರ ದಾಳಿಗೆ ಹೋಲಿಕೆ ಮಾಡಿ ವಿವಾದಕ್ಕೀಡಾಗಿದ್ದ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಆಕ್ರೋಶಕ್ಕೆ ಮಣಿದಿದ್ದಾರೆ. ಕನ್ನಡ ಸಿನಿಮಾಗಳಲ್ಲಿ ಹಾಡು ಹಾಡಿಸದಿರಲು ಫಿಲ್ಮ್ ಚೇಂಬರ್ ತೀರ್ಮಾನ ಕೈಗೊಂಡ ಬೆನ್ನಲ್ಲೇ ಕನ್ನಡಿಗರ ಮತ್ತು ಕರ್ನಾಟಕಕ್ಕೆ ಕ್ಷಮೆ ಕೋರಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾ ಖಾತೆಯಲ್ಲಿ ಪೋಸ್ಟನ್ನೂ ಹಂಚಿಕೊಂಡಿದ್ದಾರೆ. ಕ್ಷಮಿಸಿ ಕರ್ನಾಟಕ, ನನ್ನ ಪ್ರತಿಷ್ಠೆಗಿಂತ ನಿಮ್ಮ ಪ್ರೀತಿ ದೊಡ್ಡದು.. ನಿಮ್ಮನ್ನ ಯಾವಾಗಲೂ ಪ್ರೀತಿಸುತ್ತೇನೆ ಅಂತ ಕ್ಷಮೆ ಕೋರಿದ್ದಾರೆ.
ಚನ್ನಪಟ್ಟಣ, ಮೇ.05: ನನ್ನ ಇಲಾಖೆಯಿಂದಲೇ ರೂ.158 ಕೋಟಿ ಅನುದಾನವನ್ನು ಚನ್ನಪಟ್ಟಣಕ್ಕೆ ನೀಡಿದ್ದೇನೆ. ಮೂರು ದಿನಗಳ ಹಿಂದೆಯಷ್ಟೇ ಒಂದಷ್ಟು ಅನುದಾನ ನೀಡಿದ್ದೇನೆ. ನಾನೇ ಸಚಿವನಿದ್ದೇನೆ. ಅಗತ್ಯ ಬಿದ್ದರೇ ಇನ್ನಷ್ಟು ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. https://ainkannada.com/there-are-so-many-grooms-to-see-but-no-one-agrees-to-see-tuesdays-fate-is-06-may-2025/ ಚನ್ನಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದರು. “ನೀಡಿದ ಅನುದಾನದಲ್ಲಿ ರಸ್ತೆ, ಸೇತುವೆಗಳನ್ನು ಚೆನ್ನಾಗಿ ನಿರ್ಮಾಣ ಮಾಡಲಾಗಿದೆ. ಇದನ್ನು ಶಾಸಕರಾದ ಯೋಗೇಶ್ವರ್ ಅವರೂ ಒಪ್ಪಿದ್ದಾರೆ. ನನ್ನ ಕ್ಷೇತ್ರಕ್ಕೇ ರೂ.500 ಕೋಟಿಯೂ ಕೊಟ್ಟಿರಲಿಲ್ಲ. ಇಂತಹ ಸದಾವಕಾಶ ಚನ್ನಪಟ್ಟಣಕ್ಕೆ ಸಿಕ್ಕಿದೆ. ಕ್ಷೇತ್ರಕ್ಕೆ ಸಿಕ್ಕಿರುವ ಎಲ್ಲಾ ಯೋಜನೆಗಳು ಜಾರಿಯಾಗುವಂತೆ ನೋಡಿಕೊಳ್ಳಲಾಗುವುದು” ಎಂದು ತಿಳಿಸಿದರು. “ಚನ್ನಪಟ್ಟಣ ಉಪಚುನಾವಣೆಗೆ ಮುಂಚಿತವಾಗಿ ಸುಮಾರು ರೂ.500 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಇದರಲ್ಲಿ ಒಂದಷ್ಟು ಕೆಲಸಗಳು ನೆನೆಗುದಿಗೆ ಬಿದ್ದಿದ್ದವು. ಯಾವ ಕಾರಣಕ್ಕೆ ಕಾಮಗಾರಿಗಳು ಹಿಂದುಳಿದಿವೆ ಎಂದು ಪರಿಶೀಲನೆ ಮಾಡಲಾಯಿತು” ಎಂದರು. “ರಾಜ್ಯ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿ…
ಸೂರ್ಯೋದಯ – 5:51ಬೆ. ಸೂರ್ಯಾಸ್ತ – 6:34ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ನವಮಿ ನಕ್ಷತ್ರ – ಮಖೆ ಯೋಗ – ಧ್ರುವ ಕರಣ – ಕೌಲವ ಮಳೆ ನಕ್ಷತ್ರ: ಭರಣಿ ರಾಹು ಕಾಲ – 03:00 ದಿಂದ 04:30 ವರೆಗೆ ಯಮಗಂಡ -09:00 ದಿಂದ 10:30 ವರೆಗೆ ಗುಳಿಕ ಕಾಲ – 12:00 ದಿಂದ 01:30 ವರೆಗೆ ಬ್ರಹ್ಮ ಮುಹೂರ್ತ – 4:15 ಬೆ. ದಿಂದ 5:03 ಬೆ. ವರೆಗೆ ಅಮೃತ ಕಾಲ – 1:15 ಮ. ದಿಂದ 2:58 ಮ. ವರೆಗೆ ಅಭಿಜಿತ್ ಮುಹುರ್ತ – 11:47 ಬೆ. ದಿಂದ 12:38 ಮ. ವರೆಗೆ ಮೇಷ ರಾಶಿ: ಜರೂರಿ ಕೆಲಸಗಳು ಅತಿ ಶೀಘ್ರದಲ್ಲಿ ಯಶಸ್ವಿ ಕಾಣಲಿವೆ, ಬರತಕ್ಕಂತಹ ಹಣ ಬಂದು ಕೈ ಸೇರಲಿದೆ, ಉದ್ಯೋಗದಲ್ಲಿ ಆರ್ಥಿಕ ಚೇತರಿಕೆ, ರಿಯಲ್…
ದಾವಣಗೆರೆ:- ನಗರದ ಖಾಸಗಿ ಆಸ್ಪತ್ರೆಯೊಂದರ ಮುಂಭಾಗದಲ್ಲಿ ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. https://ainkannada.com/permanent-drinking-water-project-for-these-four-taluks-to-be-completed-by-the-end-of-this-year-what-are-they/ ಹತ್ಯೆಗೀಡಾದ ರೌಡಿಶೀಟರ್ ನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ. ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳು ಸಂತೋಷ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದಾವಣಗೆರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ತನಿಖೆ ಕೈಗೊಂಡಿದ್ದಾರೆ
ಮಂಡ್ಯ:- ಕರ್ನಾಟಕದ ಉಪಮುಖ್ಯಮಂತ್ರಿಗಳಾಗಿರುವ DCM ಡಿಕೆ ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ನಾಲ್ಕು ತಾಲೂಕುಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. https://ainkannada.com/rain-disaster-nadakacheri-building-which-was-repaired-just-a-year-ago-collapses/ ಇಂದು ಸತ್ತೇಗಾಲ ಅಣೆಕಟ್ಟಿನ ಬಳಿ ಯೋಜನೆಯ ಆರಂಭಿಕ ಘಟ್ಟದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸ್ಥಳ ಪರಿಶೀಲನೆ ಮಾಡಿ ಮಾತನಾಡಿದರು. 540 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ರಾಮನಗರ ಜಿಲ್ಲೆಗೆ ಕುಡಿಯುವ ನೀರು ಒದಗಿಸುತ್ತೇವೆ ಎಂದು ಚನ್ನಪಟ್ಟಣ ಉಪಚುನಾವಣೆ ವೇಳೆ ಮಾತುಕೊಟ್ಟಿದ್ದೆವು. ಈ ಮಾತಿಗೆ ನಾವು ಬದ್ಧರಾಗಿದ್ದೇವೆ. ಈ ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಚಾಲನೆ ನೀಡಲಾಯಿತು. ಆದರೂ ಏಕೆ ವಿಳಂಬವಾಗುತ್ತಿದೆ ಎಂದು ಪರಿಶೀಲನೆ ನಡೆಸಲು ಬಂದಿದ್ದೇನೆ. ಅತ್ಯಂತ ಕಡಿಮೆ ಮೊತ್ತದಲ್ಲಿ 3.30 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದರು. ಈ ವರ್ಷದ ಡಿಸೆಂಬರ್ ವೇಳೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ, ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದರು. ಏಕೆ ಕೆಲಸ ವಿಳಂಬವಾಗುತ್ತಿದೆ ಏನಾದರೂ…
ಚಿಕ್ಕಮಗಳೂರು:- ಇಲ್ಲಿನ ಕೊಪ್ಪ ತಾಲೂಕಿನ ಜಯಪುರದಲ್ಲಿ ಸುರಿದ ಭಾರೀ ಮಳೆಗೆ ನಾಡಕಚೇರಿ ಕಟ್ಟಡ ಕುಸಿದಿದ್ದು, ಮಹತ್ತರ ದಾಖಲೆಗಳು ನಾಶವಾಗಿದೆ. https://ainkannada.com/crime-rate-increases-whenever-siddaramaiah-comes-to-power-shobha-karandlaje/ ಎಸ್, ಕಳೆದ ಒಂದು ವಾರದಿಂದ ಸುರಿದ ಮಳೆಗೆ ವರ್ಷದ ಹಿಂದಷ್ಟೇ 5 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಮಾಡಿದ್ದ ನಾಡಕಚೇರಿ ಕಟ್ಟಡ ಕುಸಿದು ಬಿದ್ದಿದೆ. ಕಚೇರಿಯಲ್ಲಿ ಅಧಿಕಾರಿಗಳು, ಜನಸಾಮಾನ್ಯರು ಇದ್ದಾಗಲೇ ಕಟ್ಟಡ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದ್ದರಿಂದ ಕಚೇರಿಯಲ್ಲಿದ್ದ ದಾಖಲೆಗಳು ನಾಶವಾಗಿವೆ. ಸುಮಾರು 50 ವರ್ಷ ಹಿಂದಿನ ಹಳೇಯ ಪಾಳುಬಿದ್ದ ಶಾಲೆಯನ್ನು ನಾಡಕಚೇರಿಯನ್ನಾಗಿ ಮಾಡಿದ್ದರು. ಕಳೆದ 1 ವರ್ಷದ ಹಿಂದಷ್ಟೆ 5 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿಯನ್ನೂ ಮಾಡಲಾಗಿತ್ತು. ಆದರೆ ವಾರದ ಮಳೆಗೆ ಕುಸಿದಿದ್ದು, ಕಳಪೆ ಕಾಮಗಾರಿ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರು :- ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲ್ಲ ಕ್ರೈಂ ರೇಟ್ ಹೆಚ್ಚಳವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. https://ainkannada.com/clean-drinking-water-should-not-be-a-problem-in-a-single-village-in-the-state/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕದ ನವ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ. ನವ ಟಿಪ್ಪು ಸುಲ್ತಾನ್ ದರ್ಬಾರ್ ರಾಜ್ಯದಲ್ಲಿ ನಡೀತಿದೆ. ನಿಮಗೆ 135 ಸೀಟ್ ಕೇವಲ ಮುಸ್ಲಿಮರಿಂದ ಬಂದಿಲ್ಲ, ಹಿಂದೂಗಳು ಸಹ ವೋಟ್ ಹಾಕಿದ್ದಾರೆ. ಹಿಂದೂಗಳ ರಕ್ಷಣೆ ಯಾರು ಮಾಡ್ತಾರೆ? ಉತ್ತರದಲ್ಲಿ ಒಬ್ಬ ಪಪ್ಪು, ದಕ್ಷಿಣದಲ್ಲಿ ಒಬ್ಬ ಟಿಪ್ಪು ಇದ್ದಾರೆ. ಅಲ್ಲಿ ಪಾಕಿಸ್ತಾನ ಪರ ಮಾತನಾಡ್ತಾರೆ. ಇಲ್ಲಿ ಒಂದು ವರ್ಗದ ಪರ ಮಾತನಾಡ್ತಾರೆ ಎಂದು ಆಕ್ರೋಶ ಹೊರಹಾಕಿದರು ಬಿಹಾರದಲ್ಲೇ ಅಪರಾಧ ಸಂಖ್ಯೆಗಳು ಕಮ್ಮಿಯಾಗ್ತಿವೆ. ಆದ್ರೆ ನಮ್ಮ ರಾಜ್ಯದಲ್ಲಿ ಹೆಚ್ಚಾಗ್ತಿವೆ. ಪಿಎಫ್ಐ, ಕೆಎಫ್ಡಿಗಳಂಥ ಸಂಘಟನೆ ಕಾರ್ಯಕರ್ತರ ಕೇಸ್ಗಳ ವಾಪಸ್, ಮುಸ್ಲಿಂ ಓಲೈಕೆಗಳೇ ಇದಕ್ಕೆ ಕಾರಣ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲ್ಲ ಕ್ರೈಂ ರೇಟ್ ಹೆಚ್ಚಾಗುತ್ತದೆ. ಉಗ್ರರನ್ನು, ಠಾಣೆಗೆ ಬೆಂಕಿ ಹಾಕಿದವರನ್ನು ಫ್ರೀಯಾಗಿ ರಸ್ತೇಲಿ ಓಡಾಡಲು ಸಿಎಂ ಅವಕಾಶ ಕೊಟ್ಟರು. ಇದರ ಪರಿಣಾಮ…