Author: AIN Author

2025ರ ಐಪಿಎಲ್ ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಹೈದರಾಬಾದ್​ಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಅದರಂತೆ ಹೈದರಾಬಾದ್‌ ಕೂಡ ಡೆಲ್ಲಿ ತಂಡವನ್ನು 133 ರನ್​ಗಳಿಗೆ ಕಟ್ಟಿಹಾಕಿ ಗೆಲ್ಲುವ ವಿಶ್ವಾಸ ಮೂಡಿಸಿತ್ತು. ಆದರೆ ಹೈದರಾಬಾದ್​ನ ಈ ಗೆಲುವಿನ ಕನಸಿಗೆ ಅಡ್ಡಿಯಾದ ಮಳೆ ಪಂದ್ಯವನ್ನು ರದ್ದುಗೊಳಿಸುವಲ್ಲಿ ಯಶಸ್ವಿಯಾಯಿತು. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಸೀಸನ್‌ನಲ್ಲಿ ಲೀಗ್ ಹಂತದಲ್ಲೇ ತನ್ನ ಪ್ರಯಾಣವನ್ನು ಅಧಿಕೃತವಾಗಿ ಅಂತ್ಯಗೊಳಿಸಿದೆ. https://ainkannada.com/sorry-karnataka-i-love-you-so-much-sonu-nigam-finally-apologizes/ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತು. ಆದರೆ, ಮಳೆಯಿಂದಾಗಿ ಹೈದರಾಬಾದ್ ತಂಡದ ಇನಿಂಗ್ಸ್ ಆರಂಭವಾಗಲಿಲ್ಲ. ಇದರೊಂದಿಗೆ, ಪ್ಯಾಟ್ ಕಮ್ಮಿನ್ಸ್ ತಂಡವು ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದ್ದು, ಅಕ್ಷರ್ ಪಟೇಲ್ ತಂಡದ ಭರವಸೆ ಇನ್ನೂ ಜೀವಂತವಾಗಿದೆ. ಪಂದ್ಯದಲ್ಲಿ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 7…

Read More

ಬೆಂಗಳೂರು:- ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡಿಗರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದ ಖ್ಯಾತ ಗಾಯಕ ಸೋನು ನಿಗಮ್ ಅವರು ಕೊನೆಗೂ ಕನ್ನಡಿಗರ ಬಳಿ ಕ್ಷಮೆ ಕೋರಿದ್ದಾರೆ. https://ainkannada.com/i-am-a-minister-i-will-give-more-grants-if-needed-dcm-dk-shivakumar/ ಈಗಾಗಲೇ ಕರ್ನಾಟಕದಲ್ಲಿ ಸೋನು ನಿಗಮ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಬೆಂಗಳೂರಿನಲ್ಲಿ ಈಗಾಗಲೇ FIR ಕೂಡ ದಾಖಲಾಗಿದೆ. ಅಷ್ಟೇ ಅಲ್ಲದೇ ಗಾಯಕನ ಮೇಲೆ ಕಠಿಣ ಕ್ರಮ ಕೈಗೊಂಡಿರುವ ಫಿಲ್ಮ್ ಚೇಂಬರ್ ಕನ್ನಡ ಚಿತ್ರರಂಗದಿಂದ ಬ್ಯಾನ್ ಕೂಡ ಮಾಡಿದೆ. ʻಕನ್ನಡ ಹಾಡು ಹಾಡಿʼ ಅಂದಿದ್ದಕ್ಕೆ ಉಗ್ರರ ದಾಳಿಗೆ ಹೋಲಿಕೆ ಮಾಡಿ ವಿವಾದಕ್ಕೀಡಾಗಿದ್ದ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್‌ ಕೊನೆಗೂ ಕನ್ನಡಿಗರ ಆಕ್ರೋಶಕ್ಕೆ ಮಣಿದಿದ್ದಾರೆ. ಕನ್ನಡ ಸಿನಿಮಾಗಳಲ್ಲಿ ಹಾಡು ಹಾಡಿಸದಿರಲು ಫಿಲ್ಮ್ ಚೇಂಬರ್ ತೀರ್ಮಾನ ಕೈಗೊಂಡ ಬೆನ್ನಲ್ಲೇ ಕನ್ನಡಿಗರ ಮತ್ತು ಕರ್ನಾಟಕಕ್ಕೆ ಕ್ಷಮೆ ಕೋರಿದ್ದಾರೆ. ಈ ಕುರಿತು ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟನ್ನೂ ಹಂಚಿಕೊಂಡಿದ್ದಾರೆ. ಕ್ಷಮಿಸಿ ಕರ್ನಾಟಕ, ನನ್ನ ಪ್ರತಿಷ್ಠೆಗಿಂತ ನಿಮ್ಮ ಪ್ರೀತಿ ದೊಡ್ಡದು.. ನಿಮ್ಮನ್ನ ಯಾವಾಗಲೂ ಪ್ರೀತಿಸುತ್ತೇನೆ ಅಂತ ಕ್ಷಮೆ ಕೋರಿದ್ದಾರೆ.

Read More

ಚನ್ನಪಟ್ಟಣ, ಮೇ.05: ನನ್ನ ಇಲಾಖೆಯಿಂದಲೇ ರೂ.158 ಕೋಟಿ ಅನುದಾನವನ್ನು ಚನ್ನಪಟ್ಟಣಕ್ಕೆ ನೀಡಿದ್ದೇನೆ. ಮೂರು ದಿನಗಳ ಹಿಂದೆಯಷ್ಟೇ ಒಂದಷ್ಟು ಅನುದಾನ ನೀಡಿದ್ದೇನೆ. ನಾನೇ ಸಚಿವನಿದ್ದೇನೆ. ಅಗತ್ಯ ಬಿದ್ದರೇ ಇನ್ನಷ್ಟು ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು  ಹೇಳಿದರು. https://ainkannada.com/there-are-so-many-grooms-to-see-but-no-one-agrees-to-see-tuesdays-fate-is-06-may-2025/ ಚನ್ನಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದರು. “ನೀಡಿದ ಅನುದಾನದಲ್ಲಿ ರಸ್ತೆ, ಸೇತುವೆಗಳನ್ನು ಚೆನ್ನಾಗಿ ನಿರ್ಮಾಣ ಮಾಡಲಾಗಿದೆ. ಇದನ್ನು ಶಾಸಕರಾದ ಯೋಗೇಶ್ವರ್ ಅವರೂ ಒಪ್ಪಿದ್ದಾರೆ. ನನ್ನ ಕ್ಷೇತ್ರಕ್ಕೇ ರೂ.500 ಕೋಟಿಯೂ ಕೊಟ್ಟಿರಲಿಲ್ಲ. ಇಂತಹ ಸದಾವಕಾಶ ಚನ್ನಪಟ್ಟಣಕ್ಕೆ ಸಿಕ್ಕಿದೆ. ಕ್ಷೇತ್ರಕ್ಕೆ ಸಿಕ್ಕಿರುವ ಎಲ್ಲಾ ಯೋಜನೆಗಳು ಜಾರಿಯಾಗುವಂತೆ ನೋಡಿಕೊಳ್ಳಲಾಗುವುದು” ಎಂದು ತಿಳಿಸಿದರು. “ಚನ್ನಪಟ್ಟಣ ಉಪಚುನಾವಣೆಗೆ ಮುಂಚಿತವಾಗಿ ಸುಮಾರು ರೂ.500 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಇದರಲ್ಲಿ ಒಂದಷ್ಟು ಕೆಲಸಗಳು ನೆನೆಗುದಿಗೆ ಬಿದ್ದಿದ್ದವು. ಯಾವ ಕಾರಣಕ್ಕೆ ಕಾಮಗಾರಿಗಳು ಹಿಂದುಳಿದಿವೆ ಎಂದು ಪರಿಶೀಲನೆ ಮಾಡಲಾಯಿತು” ಎಂದರು. “ರಾಜ್ಯ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿ…

Read More

ಸೂರ್ಯೋದಯ – 5:51ಬೆ. ಸೂರ್ಯಾಸ್ತ – 6:34ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ನವಮಿ ನಕ್ಷತ್ರ – ಮಖೆ ಯೋಗ – ಧ್ರುವ ಕರಣ – ಕೌಲವ ಮಳೆ ನಕ್ಷತ್ರ: ಭರಣಿ ರಾಹು ಕಾಲ – 03:00 ದಿಂದ 04:30 ವರೆಗೆ ಯಮಗಂಡ -09:00 ದಿಂದ 10:30 ವರೆಗೆ ಗುಳಿಕ ಕಾಲ – 12:00 ದಿಂದ 01:30 ವರೆಗೆ ಬ್ರಹ್ಮ ಮುಹೂರ್ತ – 4:15 ಬೆ. ದಿಂದ 5:03 ಬೆ. ವರೆಗೆ ಅಮೃತ ಕಾಲ – 1:15 ಮ. ದಿಂದ 2:58 ಮ. ವರೆಗೆ ಅಭಿಜಿತ್ ಮುಹುರ್ತ – 11:47 ಬೆ. ದಿಂದ 12:38 ಮ. ವರೆಗೆ ಮೇಷ ರಾಶಿ: ಜರೂರಿ ಕೆಲಸಗಳು ಅತಿ ಶೀಘ್ರದಲ್ಲಿ ಯಶಸ್ವಿ ಕಾಣಲಿವೆ, ಬರತಕ್ಕಂತಹ ಹಣ ಬಂದು ಕೈ ಸೇರಲಿದೆ, ಉದ್ಯೋಗದಲ್ಲಿ ಆರ್ಥಿಕ ಚೇತರಿಕೆ, ರಿಯಲ್…

Read More

ದಾವಣಗೆರೆ:- ನಗರದ ಖಾಸಗಿ ಆಸ್ಪತ್ರೆಯೊಂದರ ಮುಂಭಾಗದಲ್ಲಿ ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. https://ainkannada.com/permanent-drinking-water-project-for-these-four-taluks-to-be-completed-by-the-end-of-this-year-what-are-they/ ಹತ್ಯೆಗೀಡಾದ ರೌಡಿಶೀಟರ್ ನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ. ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳು ಸಂತೋಷ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದಾವಣಗೆರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ತನಿಖೆ ಕೈಗೊಂಡಿದ್ದಾರೆ

Read More

ಮಂಡ್ಯ:- ಕರ್ನಾಟಕದ ಉಪಮುಖ್ಯಮಂತ್ರಿಗಳಾಗಿರುವ DCM ಡಿಕೆ ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ನಾಲ್ಕು ತಾಲೂಕುಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. https://ainkannada.com/rain-disaster-nadakacheri-building-which-was-repaired-just-a-year-ago-collapses/ ಇಂದು ಸತ್ತೇಗಾಲ ಅಣೆಕಟ್ಟಿನ ಬಳಿ ಯೋಜನೆಯ ಆರಂಭಿಕ ಘಟ್ಟದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸ್ಥಳ ಪರಿಶೀಲನೆ ಮಾಡಿ ಮಾತನಾಡಿದರು. 540 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ರಾಮನಗರ ಜಿಲ್ಲೆಗೆ ಕುಡಿಯುವ ನೀರು ಒದಗಿಸುತ್ತೇವೆ ಎಂದು ಚನ್ನಪಟ್ಟಣ ಉಪಚುನಾವಣೆ ವೇಳೆ ಮಾತುಕೊಟ್ಟಿದ್ದೆವು. ಈ ಮಾತಿಗೆ ನಾವು ಬದ್ಧರಾಗಿದ್ದೇವೆ. ಈ ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಚಾಲನೆ ನೀಡಲಾಯಿತು. ಆದರೂ ಏಕೆ ವಿಳಂಬವಾಗುತ್ತಿದೆ ಎಂದು ಪರಿಶೀಲನೆ ನಡೆಸಲು ಬಂದಿದ್ದೇನೆ. ಅತ್ಯಂತ ಕಡಿಮೆ ಮೊತ್ತದಲ್ಲಿ 3.30 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದರು. ಈ ವರ್ಷದ ಡಿಸೆಂಬರ್ ವೇಳೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ,‌ ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದರು. ಏಕೆ ಕೆಲಸ ವಿಳಂಬವಾಗುತ್ತಿದೆ ಏನಾದರೂ…

Read More

ಚಿಕ್ಕಮಗಳೂರು:- ಇಲ್ಲಿನ ಕೊಪ್ಪ ತಾಲೂಕಿನ ಜಯಪುರದಲ್ಲಿ ಸುರಿದ ಭಾರೀ ಮಳೆಗೆ ನಾಡಕಚೇರಿ ಕಟ್ಟಡ ಕುಸಿದಿದ್ದು, ಮಹತ್ತರ ದಾಖಲೆಗಳು ನಾಶವಾಗಿದೆ. https://ainkannada.com/crime-rate-increases-whenever-siddaramaiah-comes-to-power-shobha-karandlaje/ ಎಸ್, ಕಳೆದ ಒಂದು ವಾರದಿಂದ ಸುರಿದ ಮಳೆಗೆ ವರ್ಷದ ಹಿಂದಷ್ಟೇ 5 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಮಾಡಿದ್ದ ನಾಡಕಚೇರಿ ಕಟ್ಟಡ ಕುಸಿದು ಬಿದ್ದಿದೆ. ಕಚೇರಿಯಲ್ಲಿ ಅಧಿಕಾರಿಗಳು, ಜನಸಾಮಾನ್ಯರು ಇದ್ದಾಗಲೇ ಕಟ್ಟಡ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದ್ದರಿಂದ ಕಚೇರಿಯಲ್ಲಿದ್ದ ದಾಖಲೆಗಳು ನಾಶವಾಗಿವೆ. ಸುಮಾರು 50 ವರ್ಷ ಹಿಂದಿನ ಹಳೇಯ ಪಾಳುಬಿದ್ದ ಶಾಲೆಯನ್ನು ನಾಡಕಚೇರಿಯನ್ನಾಗಿ ಮಾಡಿದ್ದರು. ಕಳೆದ 1 ವರ್ಷದ ಹಿಂದಷ್ಟೆ 5 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿಯನ್ನೂ ಮಾಡಲಾಗಿತ್ತು. ಆದರೆ ವಾರದ ಮಳೆಗೆ ಕುಸಿದಿದ್ದು, ಕಳಪೆ ಕಾಮಗಾರಿ ಎಂಬ ಆರೋಪ ಕೇಳಿ ಬಂದಿದೆ.

Read More

ಬೆಂಗಳೂರು :- ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲ್ಲ ಕ್ರೈಂ ರೇಟ್ ಹೆಚ್ಚಳವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. https://ainkannada.com/clean-drinking-water-should-not-be-a-problem-in-a-single-village-in-the-state/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕದ ನವ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ. ನವ ಟಿಪ್ಪು ಸುಲ್ತಾನ್ ದರ್ಬಾರ್ ರಾಜ್ಯದಲ್ಲಿ ನಡೀತಿದೆ. ನಿಮಗೆ 135 ಸೀಟ್ ಕೇವಲ ಮುಸ್ಲಿಮರಿಂದ ಬಂದಿಲ್ಲ, ಹಿಂದೂಗಳು ಸಹ ವೋಟ್ ಹಾಕಿದ್ದಾರೆ. ಹಿಂದೂಗಳ ರಕ್ಷಣೆ ಯಾರು ಮಾಡ್ತಾರೆ? ಉತ್ತರದಲ್ಲಿ ಒಬ್ಬ ಪಪ್ಪು, ದಕ್ಷಿಣದಲ್ಲಿ ಒಬ್ಬ ಟಿಪ್ಪು ಇದ್ದಾರೆ. ಅಲ್ಲಿ ಪಾಕಿಸ್ತಾನ ಪರ ಮಾತನಾಡ್ತಾರೆ. ಇಲ್ಲಿ ಒಂದು ವರ್ಗದ ಪರ ಮಾತನಾಡ್ತಾರೆ ಎಂದು ಆಕ್ರೋಶ ಹೊರಹಾಕಿದರು ಬಿಹಾರದಲ್ಲೇ ಅಪರಾಧ ಸಂಖ್ಯೆಗಳು ಕಮ್ಮಿಯಾಗ್ತಿವೆ. ಆದ್ರೆ ನಮ್ಮ ರಾಜ್ಯದಲ್ಲಿ ಹೆಚ್ಚಾಗ್ತಿವೆ. ಪಿಎಫ್‌ಐ, ಕೆಎಫ್‌ಡಿಗಳಂಥ ಸಂಘಟನೆ ಕಾರ್ಯಕರ್ತರ ಕೇಸ್‌ಗಳ ವಾಪಸ್, ಮುಸ್ಲಿಂ ಓಲೈಕೆಗಳೇ ಇದಕ್ಕೆ ಕಾರಣ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲ್ಲ ಕ್ರೈಂ ರೇಟ್ ಹೆಚ್ಚಾಗುತ್ತದೆ. ಉಗ್ರರನ್ನು, ಠಾಣೆಗೆ ಬೆಂಕಿ ಹಾಕಿದವರನ್ನು ಫ್ರೀಯಾಗಿ ರಸ್ತೇಲಿ ಓಡಾಡಲು ಸಿಎಂ ಅವಕಾಶ ಕೊಟ್ಟರು. ಇದರ ಪರಿಣಾಮ…

Read More

ಬೆಂಗಳೂರು ಮೇ 5: ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದರು. ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು… •ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. •ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ರ್ಸ್ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು. *ಅಗತ್ಯಬಿದ್ದರೆ…

Read More

ಹಾವೇರಿ:- ರಸ್ತೆ ಅಪಘಾತದಲ್ಲಿ ಹೊಸ ಬೈಕ್ ಖರೀದಿಸಿ ಮನೆಗೆ ಹೋಗುತ್ತಿದ್ದ ಸವಾರ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಗೌರಾಪುರ ಗ್ರಾಮದಲ್ಲಿ ಜರುಗಿದೆ. 35 ವರ್ಷದ ನಾಗರಾಜ್ ಮೃತ ಬೈಕ್ ಸವಾರ ಎನ್ನಲಾಗಿದೆ. https://ainkannada.com/necessary-assistance-for-the-construction-of-channapatna-stadium-cm-siddaramaiah-responds-positively-to-dcms-proposal/ ನಾಗರಾಜ್ ಎಂಬಾತ ತಾನು ಖರೀದಿಸಿದ ಹೊಸ ಬೈಕ್ ಅನ್ನು ಮನೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Read More