ಹುಬ್ಬಳ್ಳಿ:- ನವಲಗುಂದ ತಾಲ್ಲೂಕಿನಲ್ಲಿ ಬುಧವಾರ ಸುರಿದ ಮಳೆಯಿಂದಾಗಿ ಹಾಳಕುಸುಗಲ್ ಗ್ರಾಮ ಸಮೀಪದ ಗೌರಿ ಹಳ್ಳ ತುಂಬಿ ಹರಿಯಿತು. https://ainkannada.com/corona-fears-for-karunadhee-siddaramaiah-receives-information-on-the-death-toll-what-was-discussed-in-the-meeting/ ಹಳ್ಳ ತುಂಬಿದ್ದರಿಂದ ಗ್ರಾಮದಿಂದ ಜಮೀನಿಗೆ ಕೂಲಿ ಕೆಲಸಕ್ಕೆ ತೆರಳಿದ್ದ ಗ್ರಾಮಸ್ಥರು ವಾಪಸ್ ಮನೆಗೆ ಹೋಗಲು ಹರಸಾಹಸಪಟ್ಟರು. ಗೌರಿ ಹಳ್ಳ ತುಂಬಿದಾಗ ಪ್ರತಿ ವರ್ಷ ಜಮೀನುಗಳಿಗೆ ನೀರು ನುಗ್ಗುವುದರಿಂದ ಫಸಲು ಹಾಳಾಗುತ್ತದೆ. ಸಮಸ್ಯೆ ಬಗೆಹರಿಸುವಂತೆ ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೂಡಲೇ ಸಂಬಂಧಿಸಿದವರು ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕಿದೆ.
Author: AIN Author
ಬೆಂಗಳೂರು:- ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರುತ್ತಿರುವ ಕೊರೊನಾ ಸೋಂಕಿತರ ಹಾಗೂ ಮೃತರ ಅಂಕಿ-ಸಂಖ್ಯೆಗಳ ಮಾಹಿತಿ ಪಡೆದರು. https://ainkannada.com/preference-for-government-schools-increase-in-child-enrollment-goodbye-to-private-schools/ “ಕೊರೊನಾ ಹತೋಟಿಯಲ್ಲಿದ್ದು ಜನ ಭಯಪಡುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಈ 10 ಜನರು ಇತರ ಮಾರಕ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಅವರ ಸಾವಿಗೆ ಕೊರೊನಾ ಕಾರಣವಲ್ಲ. ಇನ್ನೊಬ್ಬರ ಡೆತ್ ಆಡಿಟ್ ವರದಿ ಬರುವುದು ಬಾಕಿ ಇದೆ” ಎಂದು ಸಚಿವ ದಿನೇಶ್ ಗುಂಡೂರಾವ್ ಸಿಎಂ ಸಿದ್ದರಾಮಯ್ಯರಿಗೆ ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು: • ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ…
ಬೆಂಗಳೂರು:- ಸರ್ಕಾರಿ ಶಾಲೆ ಅಂದ್ರೆ ದೂರ ಸರಿಯುತ್ತಿದ್ದ ಕಾಲ ಒಂದಿತ್ತು. ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯುವವರೇ ಹೆಚ್ಚಾಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಶಾಲೆಗಳಿಗೆ ಬೀಗ ಬಿದ್ದಿದೆ. ಆದರೆ ಈ ವರ್ಷ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಪಡೆದಿದ್ದಾರೆ. https://ainkannada.com/i-had-invited-the-governor-myself-to-the-rcb-felicitation-ceremony-held-at-vidhana-soudha/ ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮುಚ್ಚಿದ್ದವು. ಕಟ್ಟಡದ ಕೊರತೆ, ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯ ಕೊರತೆಯಿದೆ ಎಂದು ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದರು. ಆದರೆ, ಈ ಬಾರಿ ಪರಿಸ್ಥಿತಿ ಸ್ವಲ್ಪ ಬದಲಾಗಿದ್ದು, ಸರ್ಕಾರಿ ಶಾಲೆಗಳತ್ತ ಪೋಷಕರು ಸ್ವಲ್ಪ ಮಟ್ಟಿಗೆ ಒಲವು ತೋರಿದ್ದಾರೆ. ಸರ್ಕಾರಿ ಶಾಲೆಗಳತ್ತ ಮಕ್ಕಳು ಬರಲು, ಪೋಷಕರು ಒಲವು ತೋರಲು ಅನೇಕ ಕಾರಣಗಳಿಗಳಿವೆ. ಇದಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿರುವುದು ಪ್ರಮುಖ ಕಾರಣವಾಗಿದೆ. ಅಲ್ಲದೆ, ಸಾಕಷ್ಟು ಶಾಲೆಗಳನ್ನು ಸಿಆರ್ಎಸ್ ಫಂಡ್ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಶಿಕ್ಷಕರ ಕೊರತೆ ಕೂಡ ನೀಗಿಸುವ ಕೆಲಸವಾಗಿದೆ. ಶಾಲೆಗಳ ಕಟ್ಟಡ ದುರಸ್ತಿ ಪಡಿಸಿಕೊಡಲಾಗಿದೆ.…
ಗೌರಿಬಿದನೂರು, ಜೂನ್ 11: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. https://ainkannada.com/there-have-been-no-deaths-due-to-covid-in-the-state-health-minister-dinesh-gundu-rao-clarifies/ ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ ನೀಡಲಾಗಿತ್ತು. ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು. ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು…
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. https://ainkannada.com/i-cant-lie-as-an-mla-why-did-h-d-revanna-step-down/ ಕೋವಿಡ್ ಸೋಂಕು ಹತೋಟಿಯಲ್ಲಿದ್ದು ಜನರು ಆತಂಕಕ್ಕೆ ಒಳಗಾಗುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಬಂದವರಲ್ಲಿ ಸಾವಿಗೀಡಾಗಿರುವ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಡೆತ್ ಆಡಿಟ್ ರಿಪೋರ್ಟ್ ಪ್ರಕಾರ 10 ಜನರು ಇತರ ಮಾರಕ ಕಾಯಿಲೆಗಳಾದ ಹೃದಯಸಂಬಂಧಿ, ಕಿಡ್ನಿ, ಅಂಗಾಂಗ ವೈಫಲ್ಯದಂತಹ ಕಾರಣಗಳಿಂದ ಸಾವನ್ನಪ್ಪಿದ್ದು, ಕೋವಿಡ್ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಇನ್ನು ಒಬ್ಬರ ಡೆತ್ ಆಡಿಟ್ ರಿಪೋರ್ಟ್ ಬರುವುದು ಬಾಕಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಡೆತ್ ಆಡಿಟ್ ರಿಪೋರ್ಟ್ ಬಳಿಕವೇ ಕೋವಿಡ್ ಡೆತ್ ರಿಪೋರ್ಟ್ ಘೋಷಿಸುವಂತೆ ಇಂದು ನಡೆದ ಸಿಎಂ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೋವಿಡ್ ಡೆತ್ ಎಂದಾಕ್ಷಣ ಅನಗತ್ಯವಾಗಿ ಜನರು ಆತಂಕಕ್ಕೆ…
ಹಾಸನ:- ಗಲಾಟೆಗೆ ಕೇಸ್ ಇಲ್ಲದೇ ರೌಡಿಶೀಟರ್ ಓಪನ್, ಕೊಲೆಗಳಿಗೆ ಅದೆಷ್ಟು ರೌಡಿಶೀಟರ್ ತೆರೆದಿದ್ದೀರಿ? ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಿಡಿಕಾರಿದ್ದಾರೆ. https://ainkannada.com/heavy-rain-in-hubballi-riders-are-stranded-public-life-is-in-chaos/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾನು ಯಾರ ಮೇಲಾದ್ರೂ ಕೇಸ್ ಹಾಕಿ ಎಂದು ಫೋನ್ ಮಾಡಿದ್ರೆ ರಾಜಕೀಯ ಬಿಟ್ಟು ಹೋಗ್ತೇನೆ ಎಂದರು. ಈ ವೇಳೆ, ಪೊಲೀಸ್ ಇಲಾಖೆ ಬಗ್ಗೆ ನೀಡಿದ್ದ ಹೇಳಿಕೆ ವಿಚಾರವಾಗಿ ಸಂಸದ ಶ್ರೇಯಸ್ ಪಟೇಲ್ ನೀಡಿದ್ದ ಪ್ರತಿಕ್ರಿಯೆ ವಿರುದ್ಧ ಅವರು ಅಸಮಾಧಾನ ಹೊರಹಾಕಿದರು. ಇವರಿಗೆಲ್ಲಾ ಉತ್ತರ ಕೊಡಲು ಹೋದ್ರೆ ನಾನು ಪೊಳ್ಳೆದ್ದು ಹೋಗ್ತೇನೆ. ಅವರು ದೊಡ್ಡವರಿದ್ದಾರೆ, ಅವರಿಗೆ ಹೇಳಿಕೆ ಕೊಡುವ ಶಕ್ತಿ ನನಗಿಲ್ಲ. ನಾನು ಶಾಸಕನಾಗಿ ಸುಳ್ಳು ಹೇಳಲು ಆಗಲ್ಲ ಎಂದಿದ್ದಾರೆ. ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯ ಬಸವಘಟ್ಟ ಗ್ರಾಮದಲ್ಲಿ ಓರ್ವ ಗ್ರಾಪಂ ಸದಸ್ಯ, ಗುತ್ತಿಗೆದಾರ ಹಾಗೂ ಸದಸ್ಯನ ನಡುವೆ ಗಲಾಟೆಯಾಗಿದೆ. ಗಲಾಟೆ ಅದಾಗ ಏನು ಕ್ರಮ ಮಾಡಬೇಕು ಮಾಡಲಿ. ಅದು ಬಿಟ್ಟು ಯಾವುದೇ ಕೇಸ್ ಇಲ್ಲದೇ ರೌಡಿಶೀಟರ್ ಹಾಕಿದ್ದಾರೆ. ಹಾಗಿದ್ದರೆ ಕೊಲೆ,…
ಹುಬ್ಬಳ್ಳಿ:- ನಗರದಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇಂದು bಅರ್ಧ ಗಂಟೆಗಳ ಕಾಲ ಭಾರೀ ಮಳೆ ಸುರಿದಿದ್ದರಿಂದ. ಹುಬ್ಬಳ್ಳಿ ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಭಾರಿ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. https://ainkannada.com/rain-news-heavy-rains-in-these-districts-of-karnataka-for-the-next-5-days/ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ, ಇಂದು ಮತ್ತೆ ಆರ್ಭಟಿಸಿದ್ದಾನೆ. ಇನ್ನೂ ಹುಬ್ಬಳ್ಳಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ಗುಡುಗು ಸಿಡಿಲು ಮಿಂಚು ಮಿಶ್ರಿತ ಮಳೆ ಹಿನ್ನೆಲೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/the-darkest-black-stains-need-to-be-white-so-mix-this-ingredient-for-the-shampoo/ ಜೂನ್ 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಕಂಕುಳಿನ ಭಾಗ ಕಪ್ಪಾಗಿದ್ದರೆ ಹುಡುಗಿಯರು ಸ್ಲಿವ್ಲೆಸ್ ಡ್ರೆಸ್ಗಳನ್ನು ಹಾಕಲು ಮುಜುಗರಪಟ್ಟುಕೊಳ್ಳುತ್ತಾರೆ. ಯಾಕೆಂದರೆ ಇದು ತುಂಬಾ ಅಸಹ್ಯವಾಗಿ ಕಾಣುತ್ತದೆ. ಆದರೆ ನೀವು ಚಿಂತಿಸುವ ಅಗತ್ಯವಿಲ್ಲ. ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸುವುದರಿಂದ ಕಂಕುಳು ಕಪ್ಪಾಗಿರುವುದನ್ನು ಸುಲಭವಾಗಿ ಹೋಗಲಾಡಿಸಬಹುದು. ಆದರೆ ಇದಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ತಾಳ್ಮೆಯಿಂದ ಕಾಯಬೇಕಾಗುತ್ತದೆ. https://ainkannada.com/heart-attack-19-year-old-death-of-a-heart-attack/ ಬೇಡದ ಕೂದಲನ್ನು ತೆಗೆಯಲು ಶೇವಿಂಗ್ ಮಾಡುವುದು, ಬೆವರಿನ ವಾಸನೆಯನ್ನು ತಡೆಯಲು ಡಿಯೋಡರೆಂಟ್ಗಳನ್ನು ಬಳಸುವುದು, ಡೆಡ್ ಸ್ಕಿನ್ನಿಂದ ಮತ್ತು ಹಾರ್ಮೋನುಗಳ ಅಸಮತೋಲನದಿಂದ ಕಂಕುಳಿನ ಭಾಗ ಕಪ್ಪಾಗುತ್ತದೆ. ಚರ್ಮರೋಗ ತಜ್ಞರು ತಿಳಿಸಿದ ಪ್ರಕಾರ ಈ ಸಮಸ್ಯೆಯನ್ನು ಸರಳ ಮನೆಮದ್ದುಗಳನ್ನು ಬಳಸಿ ಬಿಳುಪಾಗಿಸಬಹುದು. ಅನೇಕ ಯುವತಿಯರಿಗೆ ಸ್ಲೀವ್ಲೆಸ್ ಡ್ರೆಸ್ ಧರಿಸುವುದು ಎಂದರೆ ಬಹಳ ಇಷ್ಟ. ಆದರೆ ಈ ರೀತಿಯ ಬಟ್ಟೆಗಳನ್ನು ಧರಿಸಿದಾಗ ಕುಂಕುಳಿನ ಭಾಗದಲ್ಲಿ ಕಪ್ಪು ಕಲೆಗಳು ಎದ್ದು ಕಾಣುತ್ತದೆ. ಇದರಿಂದ ಎಷ್ಟೋ ಬಾರಿ ಕೈ ಎತ್ತಲು ಮುಜುಗರ ಪಡುತ್ತಾರೆ. ಅಲ್ಲದೇ ಇದನ್ನು ಬೇರೆಯವರು ಸಹ ಅಸಹ್ಯಕರ ರೀತಿಯಲ್ಲಿ ಕಾಣುತ್ತಾರೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಅನೇಕ ಉತ್ಪನ್ನಗಳನ್ನು…
ಹಾಸನ:- ಹೃದಯಾಘಾತದಿಂದ 19 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ಜರುಗಿದೆ. 19 ವರ್ಷದ ನಿಶಾಂತ್ ಮೃತಪಟ್ಟ ಯುವಕ. https://ainkannada.com/the-pot-of-mud-pot-is-good-why-do-you-know/ ನಿಶಾಂತ್ ಡಿಪ್ಲೋಮಾ ಮುಗಿಸಿ ಕೈಗಾರಿಕಾ ತರಬೇತಿ ಸಲುವಾಗಿ 15 ದಿನದ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಇಂದು ರೂಂನಲ್ಲಿದ್ದಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಹಾಸನಕ್ಕೆ ತರಲಾಗುತ್ತದೆ.