ಸೂರ್ಯೋದಯ – 5:51ಬೆ. ಸೂರ್ಯಾಸ್ತ – 6:34 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಅಷ್ಟಮಿ ನಕ್ಷತ್ರ – ಆಶ್ಲೇಷ ಯೋಗ – ವೃದ್ಢಿ ಕರಣ – ಬವ 7:37 ಮಳೆ ನಕ್ಷತ್ರ ಭರಣಿ ರಾಹು ಕಾಲ – 07:30 ದಿಂದ 09:00 ವರೆಗೆ ಯಮಗಂಡ – 10:30 ದಿಂದ 12:00 ವರೆಗೆ ಗುಳಿಕ ಕಾಲ – 01:30 ದಿಂದ 03:00 ವರೆಗೆ ಬ್ರಹ್ಮ ಮುಹೂರ್ತ – 4:15 ಬೆ. ದಿಂದ 5:03 ಬೆ. ವರೆಗೆ ಅಮೃತ ಕಾಲ – 12:19 ಮ.ದಿಂದ 2:00 ಮ. ವರೆಗೆ ಅಭಿಜಿತ್ ಮುಹುರ್ತ – 11:47 ಬೆ. ದಿಂದ 12:38 ಮ. ವರೆಗೆ ಮೇಷ ರಾಶಿ ( ಅಶ್ವಿನಿ ಭರಣಿ ಕೃತಿಕ 1) ವಿದೇಶ ಭಾಗ್ಯ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಯ, ಎಣ್ಣೆ,, ನೀರು, ಮಾರಾಟಗಾರರಿಗೆ ಧನ…
Author: AIN Author
ಚಾಮರಾಜನಗರ:- ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಜಿ.ಎಸ್.ಬೆಟ್ಟ ವಲಯ ಹಿರಿಕೆರೆ ಅರಣ್ಯ ಪ್ರದೇಶದಲ್ಲಿ ಗಂಡು ಕಾಡಾನೆಯೊಂದರ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. https://ainkannada.com/if-there-is-a-war-i-will-flee-to-england-pakistani-leader/ ಮೃತ ಗಂಡಾನೆಗೆ ಅಂದಾಜು 35 ರಿಂದ 40 ವರ್ಷ ವಯಸ್ಸಾಗಿದ್ದು, ಅರಣ್ಯ ಸಿಬಂದಿ ಜಿ.ಎಸ್.ಬೆಟ್ಟ ವಲಯದ ಹಂಗಳ ಸೌತ್ ಶಾಖೆಯ, ಸೋಮನಾಥಪುರ ಸ್ಯಾಂಡಲ್ ರಿಸರ್ವನ ಹಿರಿಕೆರೆ ಅರಣ್ಯ ಪ್ರದೇಶದ ಬಳಿ ಗಸ್ತು ತಿರುಗುತ್ತಿದ್ದಾಗ ಕಂಡು ಬಂದಿದೆ ಕಾಡಾನೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಲಾಖಾ ಪಶು ವೈದ್ಯಾಧಿಕಾರಿಯವರಿಂದ ಮರಣೋತ್ತರ ಶವ ಪರೀಕ್ಷೆ ನಡೆಸಿ ಮಾದರಿ ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಎಸಿಎಫ್ ನವೀನ್ ಕುಮಾರ್ ಮಾಹಿತಿ ನೀಡಿದರು. ಮರಣೋತ್ತರ ಪರೀಕ್ಷೆ ನಂತರ ಮೃತ ಕಾಡಾನೆಯ ಕಳೆಬರಹವನ್ನು ಅರಣ್ಯ ಇಲಾಖೆ ನಿಯಮಾನುಸಾರ ಅಂತ್ಯಕ್ರಿಯೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾರ್, ಜಿ.ಎಸ್.ಬೆಟ್ಟ ವಲಯ ಅರಣ್ಯಾಧಿಕಾರಿ ಮಲ್ಲೇಶ್, ವನ್ಯಜೀವಿ ಪರಿಪಾಲಕ ನಂಜುಂಡರಾಜೆ ಅರಸ್…
ಇಸ್ಲಾಮಾಬಾದ್:- ಒಂದು ವೇಳೆ ಯುದ್ಧ ನಡೆದರೆ ಇಂಗ್ಲೆಂಡ್ ಗೆ ಪಲಾಯನ ಆಗುತ್ತೇನೆ ಎಂದು ಪಾಕ್ ಮುಖಂಡ ಸಂಸದ ಶೇರ್ ಅಫ್ಜಲ್ ಖಾನ್ ಮಾರ್ವತ್ ಹೇಳಿದ್ದಾರೆ. https://ainkannada.com/hadonahalli-panchayat-pdo-who-insulted-the-chief-ministers-office-officer-public-outrage-over-the-officers-action/ ಇದೀಗ ಪಾಕ್ ಸಂಸದ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ವೇಳೆ ಯುದ್ಧ ನಡೆದರೆ ಗನ್ ಹೊತ್ತುಕೊಂಡು ಗಡಿಗೆ ಹೋಗುತ್ತೀರಾ ಎಂದು ಸಂಸದ ಶೇರ್ ಅಫ್ಜಲ್ ಖಾನ್ ಮಾರ್ವತ್ ಅವರಿಗೆ ಪತ್ರಕರ್ತರು ಪ್ರಶ್ನೆ ಕೇಳಿದ್ದಾರೆ. ಈ ಪ್ರಶ್ನೆಗೆ, ಒಂದು ವೇಳೆ ಯುದ್ಧ ನಡೆದರೆ ನಾನು ಇಂಗ್ಲೆಂಡ್ಗೆ ಪಲಾಯನ ಮಾಡುತ್ತೇನೆ ಎಂದು ಉತ್ತರಿಸಿದರು. ಎರಡು ದೇಶಗಳ ಮಧ್ಯೆ ಇರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನರೇಂದ್ರ ಮೋದಿ ಹಿಂದೆ ಸರಿಯಬೇಕು ಎಂದು ಭಾವಿಸುತ್ತೀರಾ ಎಂದು ಕೇಳಿದ್ದಕ್ಕೆ, ನಾನು ಹೇಳಿದ್ದಕ್ಕೆ ಅವರು ಹಿಂದೆ ಸರಿಯಲು ಮೋದಿ ನನ್ನ ಚಿಕ್ಕಮ್ಮನ ಮಗನೇ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.
ದೊಡ್ಡಬಳ್ಳಾಪುರ:ತಾಲೂಕಿನ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿಯನ್ನೆ ಯಾಮಾರಿಸಿರುವ ಘಟನೆ ಬೆಳಕಿಗೆ ಬಂದಿದೆ.. ಕಳೆದ ಎರಡು ತಿಂಗಳಿನಿಂದ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಗ್ರಾಮಸ್ಥರು ಚರಂಡಿ ,ಕುಡಿಯುವ ನೀರು ಇನ್ನು ಹಲವಾರು ಸಮಸ್ಯೆಗಳನ್ನು ಕುರಿತು ಸಾರ್ವಜನಿಕ ಸಂಪರ್ಕ ಇಲಾಕೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ್ದರು. ಕೂಡಲೇ ಹೆಚ್ಚೆತ್ತ ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಮಸ್ಯೆಯನ್ನು ನೋಡಿ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಆದರೆ ಪಂಚಾಯ್ತಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡದೆ ಎರಡು ತಿಂಗಳಿನ ಹಿಂದೆಯೆ ನೀರಿನ ಸಮಸ್ಯೆ ಬಗೆಹರಿಸಿದ್ದೇವೆ ಗ್ರಾಮದಲ್ಲಿ ಯವುದೇ ಸಮಸ್ಯೆ ಇಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಗೆ ವರದಿ ನೀಡಿ ಕ್ಲೀನ್ ಚಿಟ್ ನೀಡಿ ಹಾಡೋನಹಳ್ಳಿ ಪಂಚಾಯ್ತಿ ಪಿಡಿಓ ಅಧಿಕಾರಿಗಳನ್ನೇ ಯಾಮರಿಸಿದ್ದಾರೆ ಎಂದು ಗ್ರಾಮಸ್ತರು ಆರೋಪ ಮಾಡಿದ್ದಾರೆ. ಗ್ರಾಮಸ್ಥ ಹರ್ಷ AIN…
ಹಾಸನ:- ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಪೊಲೀಸ್ ಕಾನ್ಸ್ಟೇಬಲ್ ನನ್ನು 38 ವರ್ಷದ ಪ್ರಕಾಶ್ ಎಂದು ಗುರುತಿಸಲಾಗಿದೆ. https://ainkannada.com/bollywood-star-couple-watched-rcb-vs-csk-match/ ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕಾನ್ಸ್ಟೇಬಲ್ ಪ್ರಕಾಶ್ ಅವರು ಹಾಸನ ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸಿಎಸ್ ಕೆ ವಿರುದ್ಧ ನಿನ್ನೆ ಆರ್ ಸಿಬಿ ರಣರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಪಾಯಿಂಟ್ ಟೇಬಲ್ ನಲ್ಲಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತು. ಆರ್ ಸಿಬಿ ನೀಡಿದ ರನ್ ಬೆನ್ನತ್ತಿದ ಸಿಎಸ್ಕೆ ಎರಡು ರನ್ ಗಳಲ್ಲಿ ಸೋಲು ಕಂಡಿತು. ಥೇಟ್ ಸಿನಿಮಾ ರೀತಿಯೇ ಈ ಎರಡು ಪಂದ್ಯಗಳನ್ನು ಅಭಿಮಾನಿಗಳು ಕೂಡ ಎಂಜಾಯ್ ಮಾಡಿದ್ದಾರೆ. ಬಾಲಿವುಡ್ನ ಅತ್ಯಂತ ಜನಪ್ರಿಯ ಜೋಡಿ ಕೂಡ ಆರ್ ಸಿಬಿ, ಚೆನ್ನೈ ಪಂದ್ಯ ವೀಕ್ಷಿಸಿದ್ದಾರೆ. ಬಾಲಿವುಡ್ ಸ್ಟಾರ್ ಕಪಲ್: ನಟ ರಿತೇಶ್ ದೇಶಮುಖ್ ಮತ್ತು ನಟಿ ಜೆನಿಲಿಯಾ ದೇಶಮುಖ್ ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಫ್ಯಾಮಿಲಿ ಕುಳಿತು ಮ್ಯಾಚ್ ನೋಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಿತೇಶ್ ಜೆನಿಲಿಯಾ ಮುಂಬೈನಲ್ಲಿ ನೆಲೆಸಿದ್ದು, ಅವರು ಹೈವೋಲ್ಟೇಜ್ ಆರ್ ಸಿಬಿ ಹಾಗೂ ಚೆನ್ನೈ ಪಂದ್ಯ ವೀಕ್ಷಣೆಗಾಗಿ ಬೆಂಗಳೂರಿಗೆ…
ಚಿಕ್ಕೋಡಿ:- ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಜನರಿಗೆ ಭಯ ಹುಟ್ಟಿಸಿದ್ದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainkannada.com/home-minister-parameshwara-explains-the-reason-for-not-visiting-suhas-house/ ಬಂಧಿತರನ್ನು ಕಾಟಾಬಳಿ(೨೫), ನಾಗರಾಜ ದ್ಯಾಮಪ್ಪ ಕಟಾಬಳಿ(೨೧) ಎಂದು ಗುರುತಿಸಲಾಗಿದೆ. ಆರೋಪಿಗಳು, ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದ ಬಳಿ, ತಲ್ವಾರ್ ಕೈಯಲ್ಲಿ ಹಿಡಿದು ಓಡಾಡಿದ್ದರು. ಅಲ್ಲದೇ ಜನರನ್ನ ನಿಂದಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದರು. ವಿಷಯ ತಿಳಿದ ಯಮಕನಮರಡಿ ಪೊಲೀಸರು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು:- ಇತ್ತೀಚೆಗೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಹೀಡಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಮನೆಗೆ ಭೇಟಿ ನೀಡದಿರುವ ಬಗ್ಗೆ ಗೃಹ ಸಚಿವರು ಇಂದು ಕಾರಣ ತಿಳಿಸಿದ್ದಾರೆ. https://ainkannada.com/lorry-catches-fire-as-if-it-was-on-fire-driver-escapes/ ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದರು. ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್ಗಳಿವೆ, ಐದು ಕೇಸ್ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು. ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಹೇಗೆ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು. ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರೇ ಬಂದು ನನ್ನ ಭೇಟಿ ಮಾಡಿದ್ರು. ಬರೋರಿಗೆ ಬೇಡ ಅನ್ನೋಕ್ಕಾಗುತ್ತಾ? ಬೇರೆ ಸಮುದಾಯದವರೂ…
ತುಮಕೂರು:-ತುಮಕೂರಿನ ಕ್ಯಾತಸಂದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಯೊಂದು ನಡುರೋಡಲ್ಲಿ ಹೊತ್ತಿ ಉರಿದಿದ್ದು, ಚಾಲಕ ಗ್ರೇಟ್ ಎಸ್ಕೇಪ್ ಆಗಿರುವ ಘಟನೆ ಜರುಗಿದೆ. https://ainkannada.com/two-arrested-for-passing-information-about-the-indian-army-to-pakistan/ ಡಾಬಸ್ ಪೇಟೆಯಿಂದ ವಸಂತ ನರಸಾಪುರ ಕಡೆಗೆ ಕಾರಿಯು ತೆರಳುತ್ತಿತ್ತು. ಈ ವೇಳೆ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಲಾರಿಯನ್ನು ಬಿಟ್ಟು ಚಾಲಕ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಕಿ ಕೆನ್ನಾಲಿಗೆಗೆ ಲಾರಿ ಸುಟ್ಟು ಭಸ್ಮವಾಗಿದೆ.
ನವದೆಹಲಿ/ ಇಸ್ಲಾಮಾಬಾದ್:- ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಭಾರತ ಪ್ರತೀಕಾರ ತೀರಿಸಿಕೊಳ್ಳಲು ಸಿದ್ಧತೆ ನಡೆಸಿದೆ. ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ಬಿಗುವಾಗಿದೆ. ಈ ನಡುವೆ ಪಾಕ್ನ ನಾಯಕರಲ್ಲಿ ಆತಂಕಕ್ಕೆ ಹೆಚ್ಚಾಗುತ್ತಿದೆ. https://ainkannada.com/demand-for-bribe-waqf-official-falls-into-loka-trap/ ಈ ಮಧ್ಯೆಯೇ ,ಪಾಕ್ ಗುಪ್ತಚರ ಸಂಸ್ಥೆಪರ ಕೆಲಸ ಮಾಡುತ್ತಿದ್ದ ಇಬ್ಬರನ್ನು ಪಂಜಾಬ್ ನ ಅಮೃತಸರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಅಮೃತಸರದಲ್ಲಿರುವ ಸೇನಾ ಅಂಟಾನ್ಮೆಂಟ್ ಪ್ರದೇಶ, ವಾಯುನೆಲೆಗಳ ಸೂಕ್ಷ್ಮ ಮಿಲಿಟರಿ ಮಾಹಿತಿ ಮತ್ತು ಫೋಟೋಗಳನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಕಳುಹಿಸಿದ್ದರು. ಶನಿವಾರ ಶೇರ್ ಮಾಸಿಹ್ ಮತ್ತು ಸೂರಜ್ ಮಾಸಿಹ್ ಬಂಧನ ಮಾಡಲಾಗಿದ್ದು ಸದ್ಯ ಇವರನ್ನು ಅಮೃತಸರ ಕೇಂದ್ರ ಜೈಲಿಗೆ ಕಳುಹಿಸಲಾಗಿದೆ. ಪಂಜಾಬ್ ಡಿಜಿಪಿ ಗೌರವ್ ಯಾದವ್ ಪ್ರತಿಕ್ರಿಯಿಸಿ, ಪ್ರಾಥಮಿಕ ತನಿಖೆಯ ವೇಳೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಜೊತೆ ಇವರು ಸಂಪರ್ಕ ಹೊಂದಿದ್ದರು. ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ…