Author: AIN Author

ಹಾಸನ:- ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಇಂಜಿನ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ ಅವರ ಆಪ್ತರೊಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ. 52 ವರ್ಷದ ಜಗದೀಶ್ ಮೃತ ವ್ಯಕ್ತಿ. https://ainkannada.com/ipl-2025-i-am-the-reason-for-this-what-did-dhoni-say-after-losing-to-rcb/ ಅವರು ಪತ್ನಿ ಜೊತೆ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್‌ನಲ್ಲಿ ಮಣ್ಣು ಸಾಗಿಸುವಾಗ ಇಂಜಿನ್ ಪಲ್ಟಿಯಾದ್ದು, ಕೆಳಗೆ ಸಿಲುಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಗಂಡಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ CSK ವಿರುದ್ಧ RCB ಗೆದ್ದು ಬೀಗಿದೆ. https://ainkannada.com/explosive-fifty-in-14-balls-romario-shepherd-breaks-records-for-udinese/ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಎರಡು ರನ್‌ಗಳ ಸೋಲಿನ ನಂತರ, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ತಮ್ಮ ಬ್ಯಾಟ್ಸ್‌ಮನ್‌ಗಳು ಇನ್ನೂ ಕೆಲವು ದೊಡ್ಡ ಹೊಡೆತಗಳನ್ನು ಹೊಡೆಯುವ ಮೂಲಕ ಒತ್ತಡವನ್ನು ಕಡಿಮೆ ಮಾಡಬೇಕಾಗಿತ್ತು ಎಂದು ಹೇಳಿದ್ದಾರೆ. ಅಲ್ಲದೆ ತಂಡದ ಸೋಲಿಗೆ ಧೋನಿ ತನ್ನನ್ನೇ ಹೊಣೆ ಮಾಡಿಕೊಂಡಿದ್ದಾರೆ. ನಾವು ಇನ್ನೂ ಕೆಲವು ದೊಡ್ಡ ಹೊಡೆತಗಳನ್ನು ಆಡುವ ಮೂಲಕ ಒತ್ತಡವನ್ನು ಕಡಿಮೆ ಮಾಡಬೇಕಾಗಿತ್ತು ಎಂದು ನಾನು ಭಾವಿಸುತ್ತೇನೆ. ಇದಕ್ಕಾಗಿ ನಾನು ನನ್ನ ತಪ್ಪನ್ನು ಸಹ ಒಪ್ಪಿಕೊಳ್ಳುತ್ತೇನೆ. ಶೆಫರ್ಡ್ ಡೆತ್ ಓವರ್‌ಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ಹಲವು ರನ್ ಗಳಿಸಿದರು’’ ಎಂದು ಹೇಳಿದ್ದಾರೆ. ಆರ್‌ಸಿಬಿ ಪರ ರೊಮಾರಿಯೊ ಶೆಫರ್ಡ್ 14 ಎಸೆತಗಳಲ್ಲಿ ಅಜೇಯ 53 ರನ್ ಸಿಡಿಸಿದರು, ಇದು ಐಪಿಎಲ್‌ನಲ್ಲಿ ಜಂಟಿಯಾಗಿ ಎರಡನೇ ವೇಗದ ಅರ್ಧಶತಕವಾಗಿದೆ. ಕೊನೆಯ ಎರಡು ಓವರ್‌ಗಳಲ್ಲಿ ಚೆನ್ನೈ ಬೌಲರ್‌ಗಳು ಬರೋಬ್ಬರಿ 54…

Read More

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕವಾಗಿ ಗೆದ್ದು ಬೀಗಿದೆ. ಪಂದ್ಯದಲ್ಲಿ ಅಬ್ಬರದ ಆಟವಾಡಿದ ರೊಮಾರಿಯೊ ಶೆಫರ್ಡ್‌ ಕೇವಲ 14 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. https://ainkannada.com/be-aware-these-people-should-not-eat-gourds-why/ ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಮತೀಶ ಪಥಿರಣ ಬೌಲಿಂಗ್‌ಗೆ 20 ರನ್‌ ಚಚ್ಚಿದ ಶೆಫರ್ಡ್‌ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ವೇಗದ ಅರ್ಧಶತಕ ಸಿಡಿಸಿದ 2ನೇ ಆಟಗಾರ ಎಂಬ ಹೆಗ್ಗಳಿಗೆಕೆ ಪಾತ್ರರಾದರು. ಜೊತೆಗೆ ಈ ಸಾಧನೆ ಮಾಡಿದ ಕನ್ನಡಿಗ ಕೆ.ಎಲ್‌ ರಾಹುಲ್‌, ಪ್ಯಾಟ್‌ ಕಮ್ಮಿನ್ಸ್‌ ಅವರ ದಾಖಲೆಗಳನ್ನೂ ಸರಿಗಟ್ಟಿದರು ವೇಗದ ಫಿಫ್ಟಿ ಬಾರಿಸಿದ ಟಾಪ್‌-5 ಪ್ಲೇಯರ್ಸ್‌ ಯಶಸ್ವಿ ಜೈಸ್ವಾಲ್‌ – ರಾಜಸ್ಥಾನ್‌ ರಾಯಲ್ಸ್‌ 13 ಎಸೆತ (2023) ರೊಮಾರಿಯೊ ಶೆಫರ್ಡ್‌ – ಆರ್‌ಸಿಬಿ – 14 ಎಸೆತ (2025) ಕೆ.ಎಲ್‌ ರಾಹಿಲ್‌ – ಪಿಬಿಕೆಎಸ್‌ – 14 ಎಸೆತ (2018) ಪ್ಯಾಟ್‌…

Read More

ತರಕಾರಿಗಳು ಪ್ರತಿಯೊಂದು ಗುಣ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯಕವಾಗಿರುತ್ತವೆ. ಅದಕ್ಕೆ ಹಿರಿಯರು ಹೇಳುವುದು ಅದು ಕಹಿ, ಅದು ಒಗರು ಎಂದು ಮೂಗು ಮುರಿಯುವ ಬದಲು ಎಲ್ಲಾ ರೀತಿಯ ತರಕಾರಿಗಳನ್ನು ತಿನ್ನಬೇಕು ಎಂದು. https://ainkannada.com/rcb-vs-csk-match-ticket-sale-in-block-four-arrested/ ಸೋರೆಕಾಯಿ ಕೂಡ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ತರಕಾರಿ. ಇದು ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ ಎಂದರೆ ನೀವು ನಂಬಲೇಬೇಕು. ಸೋರೆಕಾಯಿ ಅಥವಾ ಘಿಯಾ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಖನಿಜಗಳಿವೆ. ಈ ತರಕಾರಿ ತೂಕ ಇಳಿಸಲು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದನ್ನು ರಸವನ್ನಾಗಿಯೂ ಸೇವಿಸಲಾಗುತ್ತದೆ. ಪಲ್ಯ, ಜ್ಯೂಸ್, ಸಾಂಬಾರ್​ ರೀತಿಯಲ್ಲಿ ಮಾಡಿಕೊಂಡು ತಿನ್ನಬಹುದಾಗಿದೆ. ಆದರೆ ಸೋರೆಕಾಯಿ ತರಕಾರಿ ಸೇವನೆಯು ಕೆಲವು ಜನರಿಗೆ ಹಾನಿಕಾರಕ ಎಂದು ನಿಮಗೆ ಗೊತ್ತಾ? ಹೌದು, ನಿಮಗೇನಾದರೂ ಅಲರ್ಜಿ ಇದ್ದರೆ, ಸೋರೆಕಾಯಿ ಸೇವಿಸುವುದು ಹಾನಿಕಾರಕ ಎಂದು ಸಾಬೀತುಪಡಿಸಬಹುದು. ನಿಮಗೆ ಆಹಾರ ಅಲರ್ಜಿ ಇದ್ದರೆ, ನೀವು ಸೋರೆಕಾಯಿ ಸೇವಿಸುವುದನ್ನು…

Read More

ಬೆಂಗಳೂರು:- ಬ್ಲಾಕ್‌ನಲ್ಲಿ RCB vs CSK ಪಂದ್ಯದ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚರಣ್ ರಾಜ್, ಹರ್ಷವರ್ಧನ ಸಕ್ಲೇಚ, ವಿನಯ್, ವೆಂಕಟಸಾಯಿ ಬಂಧಿತ ಆರೋಪಿಗಳು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಪಂದ್ಯದ ಟಿಕೆಟ್‌ನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 32 ಟಿಕೆಟ್‌ಗಳು ಹಾಗೂ 1 ಲಕ್ಷ ನಗದನ್ನು ಜಪ್ತಿ ಮಾಡಿದ್ದಾರೆ. ಪ್ರೇಕ್ಷಕರ ಅಗತ್ಯತೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಿಂತು 1,200 ರೂ. ಬೆಲೆಯ ಟಿಕೆಟ್‌ ಅನ್ನು 10,000 ರೂ.ಗೆ ಮಾರಾಟ ಮಾಡುತ್ತಿದ್ದರು. ಮಾಹಿತಿ ತಿಳಿದ ಸಿಸಿಬಿ ವಿಶೇಷ ತಂಡ ಟಿಕೆಟ್‌ ಖರೀದಿಸುವ ನೆಪದಲ್ಲಿ ಬಂದು ದಂಧೆಕೋರರನ್ನ ಬಂಧಿಸಿದ್ದಾರೆ

Read More

ಈಗ ಎಳೆಯ ಮಕ್ಕಳಲ್ಲೂ ಕೂದಲು ಉದುರುವಿಕೆಯ ಸಮಸ್ಯೆ ಕಾಣುತ್ತಿದೆ.ಕೂದಲ ಆರೈಕೆಗಾಗಿ ಯಾವುದ್ಯಾವುದೋ ಕೆಮಿಕಲ್ಯುಕ್ತ ಶ್ಯಾಂಪೂ, ಕಂಡೀಷನರ್ ಬಳಸುತ್ತೇವೆ. ಆದರೆ ಇದರಿಂದ ನಿರೀಕ್ಷಿತ ಫಲಿತಾಂಶ ಸಿಗುವುದಿಲ್ಲ. ಇನ್ನು ಕೆಲವೊಮ್ಮೆ ಒತ್ತಡ. ನಾವು ಸೇವಿಸುವ ಆಹಾರ, ಅನುಸರಿಸುವ ಜೀವನಶೈಲಿಯಿಂದ ಕೂಡ ಈ ಕೂದಲು ಉದುರುವ ಸಮಸ್ಯೆ ಕಾಡುತ್ತದೆ. ಕೆಲವೊಂದು ಸರಳ ಮನೆಮದ್ದುಗಳ ಮೂಲಕ ಸುಲಭವಾಗಿ ಕೂದಲ ಉದುರುವಿಕೆ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು. https://ainkannada.com/heavy-rains-in-bengaluru-for-7-8-days-meteorological-department-issues-orange-alert/ ಸಾಕಷ್ಟು ಮಹಿಳೆಯರ ಜೀವನ ಹೆರಿಗೆ ನಂತರ ಬದಲಾಗುತ್ತದೆ. ಇದು ಮಹಿಳೆಯ ಜೀವನವನ್ನು ಬದಲಾಯಿಸುವುದಲ್ಲದೆ, ಆಕೆಯ ದೈಹಿಕ ಆರೋಗ್ಯದ ಮೇಲೂ ಆಳವಾದ ಪರಿಣಾಮ ಬೀರುತ್ತದೆ. ಹೆರಿಗೆಯ ನಂತರ ಮಹಿಳೆಯರು ಎದುರಿಸುವ ಸಾಮಾನ್ಯ ಸಮಸ್ಯೆ ಕೂದಲು ಉದುರುವುದು. ಈ ಸಮಸ್ಯೆ ನಿಧಾನವಾಗಿ ಪ್ರಾರಂಭವಾಗುತ್ತದೆ ಮತ್ತು ಇದ್ದಕ್ಕಿದ್ದಂತೆ ಬಹಳಷ್ಟು ಹೆಚ್ಚಾಗುತ್ತದೆ. ಸ್ವಲ್ಪ ಸಮಯದ ನಂತರ, ಮಹಿಳೆಯರಿಗೆ ತಾವು ಬೋಳಾಗುತ್ತೇವೆ ಎಂದು ಅನ್ನಿಸಲು ಪ್ರಾರಂಭಿಸುತ್ತದೆ. ಆದರೆ ಈ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ ಮತ್ತು ಪ್ರತಿಯೊಬ್ಬ ಹೊಸ ತಾಯಿಯೂ ಇದನ್ನು ಎದುರಿಸಬೇಕಾಗುತ್ತದೆ. ಗರ್ಭಾವಸ್ಥೆಯಲ್ಲಿ ಮಹಿಳೆಯರ ದೇಹದಲ್ಲಿ ಈಸ್ಟ್ರೊಜೆನ್ ಹಾರ್ಮೋನ್…

Read More

ಬೆಂಗಳೂರು:- ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ. ಮೇ 4ರಂದು ಮಳೆ ಪ್ರಮಾಣ ತುಸು ಹೆಚ್ಚಿರಲಿದ್ದು, ಮೇ 7 ಮತ್ತು ಮೇ 8ರಂದು ಗುಡುಗು-ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. https://ainkannada.com/csk-vs-rcb-rcb-wins-in-a-thrilling-match-bangalore-tops-the-table/ ಪೂರ್ವ ಮುಂಗಾರು ನಗರದಲ್ಲಿ ನೀರಿನ ಅಭಾವ ತಗ್ಗಿಸುವುದು ಮಾತ್ರವಲ್ಲದೆ, ತಾಪಮಾನ ಕಡಿಮೆ ಮಾಡುವುದಕ್ಕೂ ಸಹಕಾರಿಯಾಗಿದೆ. ವಾಯುಮಾಲಿನ್ಯ ಗಣನೀಯವಾಗಿ ಕಡಿಮೆಯಾಗುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ ಮುಂಗಾರು ಮಳೆಯ ನೀರನ್ನು ಸಮರ್ಪಕವಾಗಿ ಹಿಡಿದಿಟ್ಟುಕೊಳ್ಳುವುದಕ್ಕೂ ಅನುಕೂಲವಾಗಲಿದೆ. ಇದರಿಂದ ಬೋರ್‌ವೆಲ್‌ಗಳು ಬಹುಬೇಗ ಮರುಪೂರಣಗೊಳ್ಳುತ್ತವೆ. ವಿದ್ಯುತ್‌ ಅಭಾವ ನೀಗುತ್ತದೆ. ಎಸಿ, ಫ್ಯಾನ್‌ ಬಳಕೆ ಕೂಡ ಕಡಿಮೆಯಾಗಲಿದೆ. ಉದ್ಯಾನಗಳಿಗೆ ನೀರಿನ ಅಗತ್ಯ ಕಂಡುಬರುವುದಿಲ್ಲ ಎಂದು ಹವಾಮಾನ ತಜ್ಞ ಶ್ರೀನಿವಾಸ್‌ ರೆಡ್ಡಿ ಹೇಳಿದ್ದಾರೆ. ವಾಡಿಕೆ ಪ್ರಕಾರ ಬೆಂಗಳೂರಿನಲ್ಲಿ ಪೂರ್ವ ಮುಂಗಾರಿನ ಮಳೆಯ ಪ್ರಮಾಣ 156 ಮಿ.ಮೀ ಇರುತ್ತದೆ. 2024 ರಲ್ಲಿ ಶೇ. 03 ರಷ್ಟು ಮಳೆಯಾಗಿದೆ. ಈ ವರ್ಷ ಜನವರಿಯಿಂದ ಮೇ 2ರವರೆಗೆ ವಾಡಿಕೆ ಪ್ರಕಾರ 64.3 ಮಿ.ಮೀ ಮಳೆಯಾಗಬೇಕಿತ್ತು. ಈವರೆಗೆ…

Read More

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಎರಡು ರನ್ ಗಳಿಂದ ರೋಚಕವಾಗಿ ಗೆದ್ದು ಬೀಗಿದೆ. https://ainkannada.com/the-family-life-of-this-pile-is-very-melodious-but-suddenly-bursting-sundays-future-is-04-may-2025/ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಸಿಎಸ್‌ಕೆ ನಿಗದಿತ ಓವರ್‌ಗಳಲ್ಲಿ ಐದು ವಿಕೆಟ್‌ಗಳನ್ನು ಕಳೆದುಕೊಂಡು 211 ರನ್ ಗಳಿಸಲು ಶಕ್ತವಾಯಿತು. ಸಿಎಸ್​ಕೆ ಪರ ಆಯುಷ್ ಮ್ಹಾತ್ರೆ 94 ಮತ್ತು ರವೀಂದ್ರ ಜಡೇಜಾ 77* ರನ್ ಗಳಿಸಿದರೆ, ಆರ್‌ಸಿಬಿ ಪರ ಲುಂಗಿ ಎನ್‌ಗಿಡಿ ಮೂರು ವಿಕೆಟ್ ಪಡೆದರೆ, ಕೃನಾಲ್ ಪಾಂಡ್ಯ ಮತ್ತು ಯಶ್ ದಯಾಳ್ ತಲಾ ಒಂದು ವಿಕೆಟ್ ಪಡೆದರು. ರೋಚಕ ಪಂದ್ಯದಲ್ಲಿ ಬೆಂಗಳೂರು ತಂಡ ಚೆನ್ನೈ ತಂಡವನ್ನು ಸೋಲಿಸಿತು. ಕೊನೆಯ ಓವರ್‌ನಲ್ಲಿ ಚೆನ್ನೈಗೆ 15 ರನ್‌ಗಳು ಬೇಕಾಗಿದ್ದವು. ಆದರೆ ಯಶ್ ದಯಾಳ್ ಮೊದಲು ಧೋನಿಯನ್ನು ಔಟ್ ಮಾಡಿ ನಂತರ ಕೇವಲ 12 ರನ್ ನೀಡುವ…

Read More

ಸೂರ್ಯೋದಯ – 5:52 ಬೆ ಸೂರ್ಯಾಸ್ತ – 6:33 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಸಪ್ತಮಿ ನಕ್ಷತ್ರ – ಪುಷ್ಯ ಯೋಗ – ಗಂಡ ಕರಣ – ವಣಿಜ ಮಳೆ ನಕ್ಷತ್ರ :ಭರಣಿ ರಾಹು ಕಾಲ -04:30 ದಿಂದ 06:00 ವರೆಗೆ ಯಮಗಂಡ – 12:00 ದಿಂದ 01:30 ವರೆಗೆ ಗುಳಿಕ ಕಾಲ – 03:00 ದಿಂದ 04:30 ವರೆಗೆ ಬ್ರಹ್ಮ ಮುಹೂರ್ತ – 4:16 ಬೆ. ದಿಂದ 5:04 ಬೆ. ವರೆಗೆ ಅಮೃತ ಕಾಲ – 6:23 ಬೆ. ದಿಂದ 8:00 ಬೆ.ವರೆಗೆ ಅಭಿಜಿತ್ ಮುಹುರ್ತ – 11:47 ಬೆ. ದಿಂದ 12:38 ಮ.ವರೆಗೆ ಮೇಷ ರಾಶಿ: ವಾಹನ ಬದಲಾಯಿಸಿ ಹೊಸ ವಾಹನ ಖರೀದಿ,ರಾಶಿಯ ಕೌಟುಂಬಿಕ ಜೀವನ ತುಂಬಾ ಮಧುರ,ವ್ಯಾಪಾರ ಮಧ್ಯಮ,ಹಣದ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ. ಕೆಲವೊಮ್ಮೆ ಅಪಾಯಕಾರಿ…

Read More

ಬೆಂಗಳೂರು: ತಿರುಪತಿಗೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್‌ ಬಳಿ ಅಪಘಾತಕ್ಕೀಡಾಗಿದ್ದು, ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ತಿರುಪತಿಯ ರುಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಚಂದ್ರಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://ainkannada.com/man-gives-cinematic-chase-to-thief-who-was-fleeing-after-stealing-bag-worth-rs-2-lakh/ ಬೆಂಗಳೂರು ಮತ್ತು ತಮಿಳುನಾಡಿನ ಹೊಸೂರು ಮೂಲದ ಸಂತ್ರಸ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಎರ್ಟಿಗಾದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ನಿವಾಸಿಗಳಾದ ವಿಜಯಲಕ್ಷ್ಮಿ (50), ಸಹನಾ ಬಿ ಎಸ್ (34), ರಜನಿ ಎಸ್ ಆರ್ (27), ಮತ್ತು ಆರ್ ಲೇಖನ್ ಗೌಡ (11) ಮತ್ತು ಹೊಸೂರಿನ ಚಾಲಕ ತ್ಯಾಗರಾಜನ್ (48) ಎಂದು ಗುರುತಿಸಲಾಗಿದೆ.

Read More