Author: AIN Author

ಬೆಂಗಳೂರು, ಮೇ 5: ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://ainkannada.com/jameer-said-he-is-ready-for-war-against-pakistan-siddaramaiah-scolded-journalists-for-asking-questions/ ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಭೆಗೆ ಪೂರಕವಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ನಿಲುವು ಏನಿರಬೇಕೆಂದು ಚರ್ಚಿಸಲಾಗಿದೆ ಎಂದರು. ಕೃಷ್ಣಾ ಜಲವಿವಾದ ನ್ಯಾಯಮಂಡಳಿ -2 ದಿನಾಂಕ 30-12- 2010 ರಲ್ಲಿ ತೀರ್ಪು ನೀಡಿದ ನಂತರ 2013 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ತದನಂತರ ಈವರೆಗೆ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರದ ನೀರಾವರಿ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ ನಂತರ ಸಭೆಯನ್ನು ಕರೆಯಲಾಗಿದೆ. ಎರಡನೇ ನ್ಯಾಯಾಧಿಕರಣದ ಆದೇಶದಲ್ಲಿ 173 ಟಿ.ಎಂ.ಸಿ ನೀರನ್ನು ಬಳಸಿಕೊಳ್ಳಲು ಸೂಚಿಸಿದೆ. 519 ಮೀಟರ್ ಗಳಿಂದ 524 ಮೀಟರ್ ಗಳಿಗೆ…

Read More

ಯಲಹಂಕ:- ಕೇಂದ್ರ ಅನುಮತಿ ಕೊಟ್ರೆ ಪಾಕ್ ವಿರುದ್ಧ ಯುದ್ಧ ಮಾಡಲು ಸಿದ್ಧ ಎಂಬ ಜಮೀರ್ ಅಹಮ್ಮದ್ ಖಾನ್ ಇಂದು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ಕೊಟ್ಟಿದ್ದರು. ಈ ವೇಳೆ ಸಿಎಂ ಪತ್ರಕರ್ತರನ್ನು ಗದರಿದ್ದಾರೆ. https://ainkannada.com/ipl-2025-these-6-teams-are-praying-for-rcbs-defeat/ ಕೃಷ್ಣಾ ನ್ಯಾಯಾಧೀಕರಣ ವಿಚಾರವಾಗಿ ಮಾತನಾಡಿ, ಕೇಂದ್ರ ಜಲಶಕ್ತಿ ಸಚಿವರು ಒಂದು ಸಭೆ ಕರೆದಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಈ ಸಭೆಯಲ್ಲಿ ಸೇರಲಿವೆ. ಇದರ‌ ಪೂರ್ವಭಾವಿಯಾಗಿ ಸಭೆ ನಡೆಸಿದ್ದೇವೆ. ಸಭೆಯಲ್ಲಿ ನಮ್ಮ ನಿಲುವುಗಳ ಬಗ್ಗೆ ಚರ್ಚೆ ಮಾಡಲಾಗಿದೆ. 2010 ಮತ್ತು 2013 ರ ನಂತರ ನ್ಯಾಯಧೀಕರಣ ವಿಚಾರವಾಗಿ ಯಾವುದೇ ನೋಟಿಫಿಕೇಷನ್ ಆಗಿಲ್ಲ. ಅಣೆಕಟ್ಟು ವಿಚಾರವಾಗಿ ಗೆಜೆಟ್ ನೋಟಿಫಿಕೇಷನ್ ಆಗಬೇಕು. ಆಂದ್ರಪ್ರದೇಶ, ತೆಲಂಗಾಣ ರಾಜ್ಯ ವಿಭಾಗ ಆದ ನಂತರ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ನಮಗೆ ಬೇಕಾದ ಪಾಲು ನಮಗೆ ಬೇಕಲ್ಲಾ. ಈಗಾಗಲೇ ಅನೇಕ ಸಾರಿ ಒತ್ತಾಯ ಮಾಡಿದದ್ದೇವೆ‌ ಎಂದರು.

Read More

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. https://ainkannada.com/zameer-will-do-a-great-service-to-the-country-if-he-stays-calm-union-minister-prahlad-joshi/ ಪ್ಲೇಆಫ್‌ಗೆ ಅರ್ಹತೆ ಪಡೆಯಲು ಆರ್‌ಸಿಬಿಗೆ ಈ ಪಂದ್ಯ ಅತ್ಯಂತ ಮುಖ್ಯ. ಆರ್‌ಸಿಬಿ ಗೆದ್ದರೆ, ಪ್ಲೇಆಫ್‌ನಲ್ಲಿ ಅದರ ಸ್ಥಾನ ಖಚಿತವಾಗುತ್ತದೆ. ಆದರೆ, ಆರ್‌ಸಿಬಿ ಸೋತರೆ, ಉಳಿದ 6 ತಂಡಗಳಿಗೆ ಪ್ಲೇಆಫ್‌ಗೆ ಹೋಗಲು ಅವಕಾಶವಿದೆ. ಆದ್ದರಿಂದ ಈ ಪಂದ್ಯದ ಫಲಿತಾಂಶದ ಮೇಲೆ ಅನೇಕ ತಂಡಗಳ ಭವಿಷ್ಯ ಅವಲಂಬಿತವಾಗಿದೆ. ಇಲ್ಲಿಯವರೆಗೆ, ಸಿಎಸ್‌ಕೆ, ರಾಜಸ್ಥಾನ ಮತ್ತು ಹೈದರಾಬಾದ್ ತಂಡಗಳು ಐಪಿಎಲ್ 2025 ರ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿವೆ. ಆರ್‌ಸಿಬಿ ಹೊರತುಪಡಿಸಿ, ಗುಜರಾತ್ ಟೈಟನ್ಸ್, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇನ್ನೂ ಪ್ಲೇಆಫ್ ರೇಸ್‌ನಲ್ಲಿವೆ. ಅಂತಹ ಪರಿಸ್ಥಿತಿಯಲ್ಲಿ, ಆರ್‌ಸಿಬಿ ತಂಡ ಈ ಪಂದ್ಯವನ್ನು ಗೆದ್ದರೆ, ಅದು ಪ್ಲೇಆಫ್‌ಗೆ ಅರ್ಹತೆ ಪಡೆಯುವುದು ಬಹುತೇಕ ಖಚಿತ. ಇದರಿಂದಾಗಿ ಪ್ಲೇಆಫ್‌ಗೆ ಕೇವಲ 3 ಸ್ಥಾನಗಳು ಖಾಲಿ ಉಳಿಯಲಿದ್ದು, ಉಳಿದ…

Read More

ವಿಜಯಪುರ: ಬಾಂಬ್ ಕಟ್ಟಿಕೊಂಡು ಪಾಕ್ ಗಡಿಗೆ ಹೋಗ್ತೀನಿ ಎಂದ ಸಚಿವ ಜಮೀರ್ ಅಹ್ಮದ್‌ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟಾಂಗ್‌ ನೀಡಿದರು. ವಿಜಯಪುರದ ಲಕ್ಷ್ಮೀ ನರಸಿಂಹ ದೇಗುಲಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ್ ಶಾಂತವಾಗಿದ್ದರೇ ಸಾಕು. ನೀವೆನೂ ಮಾಡೋದು ಬೇಡ,  ಸುಮ್ಮನಿದ್ದರೆ ಸಾಕು. ಮಿಲಿಟರಿಯನ್ನ ನಂಬಿ ಸುಮ್ಮನಿರಿ ಸಾಕು. ನಿಮ್ಮ ಭಾಷಣ ಬೇಡ, ನೀವು  ಹೋಗೋದು ಬೇಡ ಸೈನ್ಯದ ಶಕ್ತಿ, ಸೈನಿಕರು, ಇಂಟಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ. ಜಮೀರ್ ಶಾಂತವಾಗಿರೋದೆ ದೇಶಕ್ಕೆ ಮಾಡೋ ದೊಡ್ಡ ಸೇವೆ ಎಂದು ವ್ಯಂಗ್ಯವಾಡಿದ್ದಾರೆ. https://ainkannada.com/ready-to-go-to-war-against-pakistan-minister-zameer-ahmed-khan/ ಇನ್ನೂ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ಹಾಡುಹಗಲೇ ಈ ಪರಿಯಾಗಿ ಹೊಡೆದು ಕೊಲ್ಲುತ್ತಾರೆ. ಆ ಪರಿಯಾಗಿ ಹೊಡೆದು ಕೊಲ್ಲುತ್ತಾರೆ. ಇದು ನಿಮ್ಮ (ರಾಜ್ಯ ಸರ್ಕಾರ) ಇಂಟೆಲಿಜೆನ್ಸ್ ವೈಫಲ್ಯ ಅಲ್ವೆ. ಮೊದಲಿಗೆ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದಾರೆ. ಮತ್ತೆ ಅವನನ್ನು ಆರೋಪಿ ಮಾಡಿದ್ರು. ಕಾಂಗ್ರೆಸ್ ಸರ್ಕಾರ ಬೇಕಂತೆ ಆರೋಪಿ ಮಾಡಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯ…

Read More

ಬೆಂಗಳೂರು, ಮೇ 03: “ಕೃಷ್ಣಾ ನದಿ ನೀರಿನ ಹಂಚಿಕೆ ವಿಚಾರವಾಗಿ ನ್ಯಾಯಾಧಿಕರಣದ ತೀರ್ಪಿನ ಅನ್ವಯ ರಾಜ್ಯದ ಪಾಲಿನ ನೀರು ಬಳಕೆಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಇದೇ ತೀಂಗಳು 7ರಂದು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಸಭೆಯಲ್ಲಿ ಒತ್ತಡ ಹಾಕಲಾಗುವುದು. ಈ ಸಭೆಯ ನಂತರ ರಾಜ್ಯದಲ್ಲಿ ಸರ್ವಪಕ್ಷ ಸಭೆ ಕರೆದು ಚರ್ಚಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. https://ainkannada.com/ramanagara-rowdy-sheeter-attacked-and-brutally-murdered-in-broad-daylight/ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “2010ರಲ್ಲಿ ಕೃಷ್ಣಾ ನದಿ ನ್ಯಾಯಾಧಿಕರಣ ತೀರ್ಪಿನ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸುವ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಒತ್ತಡ ಹಾಕಿದ್ದೇವೆ. ಹೀಗಾಗಿ ಕೇಂದ್ರ ಸಚಿವರು ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳ ಸಚಿವರ ಕರೆದಿದ್ದು, ಈ ಸಭೆಯಲ್ಲಿ ರಾಜ್ಯದ ನಿಲುವನ್ನು ಮಂಡಿಸುವ ಮುನ್ನ ಇಂದು ಪೂರ್ವಭಾವಿ ಸಭೆ ನಡೆಸಿದ್ದೇವೆ” ಎಂದರು. “ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಇಂದಿನ ಸಭೆಯಲ್ಲಿ ಕಾನೂನು ಸಚಿವರು, ಸಂಬಂಧ ಪಟ್ಟ…

Read More

ರಾಮನಗರ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್‌ ಸುಹಾಶ್‌ ಶೆಟ್ಟಿ ಹತ್ಯೆ ಪ್ರಕರಣ ಮಾಸುವ ಮುನ್ನವೇ ರಾಮನಗರದಲ್ಲಿ ಮತ್ತೊಬ್ಬ ರೌಡಿಶೀಟರ್‌ ಹತ್ಯೆ ನಡೆದಿದೆ.  ರೌಡಿಶೀಟರ್‌ವೊಬ್ಬನನ್ನ ಲಾಂಗು, ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾರೋಹಳ್ಳಿ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಬಳಿ ನಡೆದಿದೆ. ರೌಡಿಶೀಟರ್ ಸಂತೋಷ್ (33) ಅಲಿಯಾಸ್ ಕರಡಿ ಹತ್ಯೆಯಾದ ವ್ಯಕ್ತಿಯಾಗಿದ್ದು, ಈತ ಬೆಂಗಳೂರಿನ ನಿವಾಸಿಯಾಗಿದ್ದು,  ಬೆಂಗಳೂರಿನ ಹಲವು ಠಾಣೆಗಳಲ್ಲಿ ಮೃತ ವ್ಯಕ್ತಿ ಮೇಲೆ ಕ್ರಿಮಿನಲ್ ಕೇಸ್ ಗಳಿದ್ದವು. ಹಳೇ ವೈಷಮ್ಯಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೊದಲಿಗೆ  ಕಾರಿನಿಂದ ಬೈಕ್‌ಗೆ ಗುದ್ದಿ ಆಕ್ಸಿಡೆಂಟ್‌ ಮಾಡಿ, ಆತ ಕೆಳಗೆ ಬಿದ್ದ ಬಳಿಕ ಲಾಂಗು ಮಚ್ಚು ಹಿಡಿದು ಅಟ್ಟಾಡಿಸಿ ಹತ್ಯೆ ಮಾಡಿಲಾಗಿದೆ. ನಾಲ್ವರು ದುಷ್ಕರ್ಮಿಗಳು ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. https://ainkannada.com/hindu-activist-suhash-shetty-murder-case-what-is-the-background-of-the-arrested-persons/ ಘಟನಾ ಸ್ಥಳಕ್ಕೆ ಎಸ್ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿದ್ದು,, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಹಾರೋಹಳ್ಳಿ ಠಾಣಾ ಪೊಲೀಸರು, ಸಿಸಿಟಿವಿ ವಿಡಿಯೋ ಆಧರಿಸಿ ಆರೋಪಿಗಳ ಬಂಧನಕ್ಕೆ…

Read More

ಬೀದರ್‌ : ಬಾಲಕನ ತಲೆಗೆ ಏರ್‌ ಗನ್ ಇಟ್ಟು ಮನೆಯವರನ್ನು ಹೆದರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿದ್ದ ಖತರ್ನಾಕ್ ಖದೀಮರ ಗ್ಯಾಂಗ್‌‌ನ್ನು ಪೊಲೀಸರು ಬಂಧಿಸಿದ್ದಾರೆ.   ಏಫ್ರಿಲ್‌ 26 ರಂದು ಬೀದರ್‌ನ‌ ಓಲ್ಡ್ ಆದರ್ಶ ಕಾಲೋನಿಯಲ್ಲಿರುವ ಡಿಡಿಎಲ್‌ಆ‌ರ್ ಸೂಪರಿಟೆಂಡೆಂಟ್ ಆಗಿರುವ ಜ್ಯೋತಿಲತಾ ಎಂಬುವರ ಮನೆಗೆ ಅಂದು ಬೆಳ್ಳಂಬೆಳಗ್ಗೆ  ನುಗ್ಗಿದ್ದ 5 ಜನ ಮುಸುಕುದಾರಿಗಳು ಬಾಲಕನ ತಲೆಗೆ ಏರ್ ಗನ್ ಹಿಡಿದು ಮಾರಕಾಸ್ತ್ರಗಳಿಂದ ಕುಟುಂಬಸ್ಥರನ್ನ ಬೆದರಿಸಿದ್ರು. ಬಳಿಕ 280 ಗ್ರಾಮ ನಷ್ಟು ಚಿನ್ನಾಭರಣಗಳನ್ನು ಡಕಾಯಿತಿ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳ ಬೆನ್ನು ಬಿದ್ದಿದ್ದ ಪೊಲೀಸರು  ಖಚಿತ ಸುಳಿವು ಆಧರಿಸಿ, ಖದೀಮರ ಬಂಧನಕ್ಕೆ ತೆರಳಿದ್ದಾರೆ. https://ainkannada.com/man-gives-cinematic-chase-to-thief-who-was-fleeing-after-stealing-bag-worth-rs-2-lakh/ ಈ ವೇಳೆ ಕರ್ತಾರ್ ಸಿಂಗ್ ತನ್ನ ಬಳಿಯಿದ್ದ ಹರಿತವಾದ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಹೆಡ್ ಕಾನ್‌ಸ್ಟೆಬಲ್ ಮನ್ಸೂದ್ ಅವರ ಭುಜಕ್ಕೆ ಗಂಭೀರ ಗಾಯವಾಗಿ ಕುಸಿದು ಬಿದ್ದಿದ್ದಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಗ್ರಾಮೀಣ…

Read More

ಬೆಂಗಳೂರು, ಮೇ 3: ಸಂವಿಧಾನ ರಕ್ಷಣೆ ಆದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಯಲಹಂಕದಲ್ಲಿ 14 ಅಡಿಗಳ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ನಮ್ಮ ದೇಶ, ನಮ್ಮ ಸಮಾಜಕ್ಕೆ ಅವಶ್ಯವಾಗಿದ್ದಂತಹ ಅತ್ಯುತ್ತಮ ಸಂವಿಧಾನವನ್ನು ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರ್. ಈ ದೇಶದ ಸಾಮಾಜಿಕ ಪರಿಸ್ಥಿತಿ, ಜಾತಿ ವ್ಯವಸ್ಥೆ ಅಂಬೇಡ್ಕರ್ ಅವರಿಗೆ ಅರ್ಥ ಆದಷ್ಟು ಬೇರೆಯವರಿಗೆ ಆಗಿರಲಿಲ್ಲವೆಂದರೆ ಅದು ಅತಿಶಯೋಕ್ತಿಯಲ್ಲ. ಜಾತಿ ವ್ಯವಸ್ಥೆ ಇದ್ದಷ್ಟೂ ಕಾಲ ಮೀಸಲಾತಿ ಇರಲೇಬೇಕು ಎಂಬುದನ್ನು ಅವರು ಬಲವಾಗಿ ನಂಬಿದ್ದರು ಎಂದರು. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ನಮ್ಮ ದೇಶದ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಆದರೆ ವರ್ಗಕ್ಕೆ ಚಲನೆಯಿದೆ. ನಮ್ಮ ಸಮಾಜದಲ್ಲಿ ಶ್ರೀಮಂತ ಬಡವನಾದರೂ, ಬಡವ ಶ್ರೀಮಂತನಾದರೂ ಕಡೆಯವರೆಗೂ ಉಳಿದು ಕೊಳ್ಳುವುದು ಹುಟ್ಟಿದ ಜಾತಿಯಲ್ಲಿ ಮಾತ್ರ. ಆದ್ದರಿಂದ ಈ ಜಾತಿ…

Read More

ನಮ್ಮ ಸೌಂದರ್ಯ ಬೇರೆಯವರಿಗೆ ಚೆನ್ನಾಗಿ ಕಾಣಬೇಕು ಎಂದರೆ ಅದಕ್ಕೆ ನಮ್ಮ ತ್ವಚೆ ಮತ್ತು ನಮ್ಮ ತಲೆ ಕೂದಲು ಪ್ರಮುಖ ಕಾರಣವಾಗುತ್ತದೆ. ನಮ್ಮ ಸೌಂದರ್ಯಕ್ಕೆ ನಾವು ಎಷ್ಟು ಪ್ರಾಮುಖ್ಯತೆ ಕೊಡುತ್ತೇವೆ ಅಷ್ಟೇ ನಮ್ಮ ತಲೆ ಕೂದಲಿನ ಆರೋಗ್ಯಕ್ಕೂ ಕೂಡ ಮಾನ್ಯತೆ ಕೊಡಬೇಕು. ಉತ್ತಮ ಆಹಾರ ಪದ್ಧತಿಯನ್ನು ಮೈಗೂಡಿಸಿಕೊಂಡರೆ ನಮ್ಮ ತಲೆ ಕೂದಲಿನ ಆರೋಗ್ಯ ಉತ್ತಮವಾಗಿರುತ್ತದೆ ನಿಜ. ನಾವು ಆರೋಗ್ಯಕರ ಎಂದು ತಿಳಿದುಕೊಂಡು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ನಮ್ಮ ತಲೆ ಕೂದಲಿಗೆ ಸಕಾರಾತ್ಮಕವಾಗಿ ಕೆಲಸ ಮಾಡುತ್ತವೆ. ಇವುಗಳಿಂದ ನಮ್ಮ ತಲೆ ಕೂದಲಿನ ಆರೋಗ್ಯ ಉತ್ತೇಜಿಸುತ್ತದೆ. ಚಿಕ್ಕ ವಯಸ್ಸಿಗೆ ತಲೆ ಕೂದಲು ಉದುರಿ ಹೋಗುವುದು, ತಲೆ ಕೂದಲು ಬಿಳಿ ಬಣ್ಣಕ್ಕೆ ತಿರುಗುವುದು ಇಂತಹ ಎಲ್ಲವೂ ಪರಿಹಾರವಾಗುತ್ತದೆ. ಕೆಲವರ ಕೂದಲು ಎಷ್ಟು ಉದುರುತ್ತದೆಯೆಂದರೆ ಸಣ್ಣ ವಯಸ್ಸಿನಲ್ಲಿಯೇ ಬೋಳು ತಲೆ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಕೂದಲು ಯಾವ ಕಾರಣದಿಂದ ಹಾನಿಗೊಳಗಾದರೂ ಅದು ಡ್ರೈ ಆಗಲು ಶುರುವಾಗುತ್ತದೆ. ಪರಿಣಾಮ ಕೂದಲು ಉದುರುತ್ತದೆ. ಕೂದಲ ಬೆಳವಣಿಗೆ ನಿಲ್ಲುತ್ತದೆ. ಹೀಗಾಗುತ್ತಿದ್ದಾಗ ಕೆಮಿಕಲ್ ಬಳಸುವ…

Read More

ಬೆಂಗಳೂರು:- ಸುಹಾಸ್ ಶೆಟ್ಟಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದು ತಾಜಾ ಉದಾಹರಣೆ ಎಂದು ಸದಾನಂದ ಗೌಡ ಹೇಳಿದ್ದಾರೆ. https://ainkannada.com/man-gives-cinematic-chase-to-thief-who-was-fleeing-after-stealing-bag-worth-rs-2-lakh/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ ಅನ್ನು ಎನ್‌ಐಎಗೆ ವಹಿಸಬೇಕು. ಇದೊಂದು ಟೋಟಲ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿ. ಒಂದೆರೆಡು ಕೇಸ್ ಅಲ್ಲ. ಬ್ಯಾಂಕ್ ದರೋಡೆ ಸೇರಿ ಅನೇಕ ಕೇಸ್ ಆಗಿವೆ. ಸರ್ಕಾರ ಕೊಲೆ ಮಾಡೋ ಇಂತಹವರಿಗೆ ಬೆಂಬಲ ಕೊಡುವ ರಾಜನೀತಿ ಮಾಡುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆ ರೀತಿ ನೋಡುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಯುದ್ಧ ಮಾಡಬೇಡಿ ಎನ್ನುತ್ತಾರೆ. ಇವತ್ತು ಹೋಗಿ ಗೃಹ ಸಚಿವರು ಸಭೆ ಮಾಡುತ್ತಿದ್ದಾರೆ. ಕೇವಲ ಮುಸ್ಲಿಂ ಸಂಘಟನೆಗಳನ್ನು ಕರೆದು ಸಭೆ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರನ್ನು ಕರೆದಿಲ್ಲ. ಇದು ಯಾವ ಸರ್ಕಾರದ ನೀತಿ ಎಂದು ಕಿಡಿಕಾರಿದರು. ಸುಹಾಸ್ ಕೇಸ್‌ನಲ್ಲಿ 8 ಜನರ ಬಂಧನ ಆಗಿದೆ. ಆದರೆ…

Read More