ಬೆಂಗಳೂರು: ನಿನ್ನೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದರು. ನಾಲ್ವರು ಭ್ರಷ್ಟಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಬೆಳ್ಳಗ್ಗೆ ಏಳು ಗಂಟೆಗಳಿಂದ್ಲೂ ಪರಿಶೀಲನೆ ನಡೆಸಿದ್ದರು. ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಮಂಗಳೂರಿನ 25ಕಡೆ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಭೇಟಿಯಾಡಿದ್ದಾರೆ.. ಇನ್ನು ಯಲಹಂಕದಲ್ಲಿರೋ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆಯಲ್ಲೂ ಕೂಡ ಕ್ಯಾಶ್, ಚಿನ್ನಾಭರಣ, ಆಸ್ತಿ ಪತ್ರಗಳು ಸಿಕ್ಕಿವೆ.. ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿರೋ ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. https://ainlivenews.com/do-you-know-blood-sugar-will-become-normal-if-you-drink-the-water-soaked-in-this-seed/ ಮಂಗಳೂರಿನ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಅವರ ಬಳಿ 11.93 ಕೋಟಿ ಮೌಲ್ಯದ ಆಸ್ತಿ ಇರುವುದು ಪತ್ತೆಯಾಗಿದೆ. ಅವರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧ ನಡೆಸಲಾಯಿತು. 3 ನಿವೇಶನಗಳು, ಬೆಂಗಳೂರಿನ ಯಲಹಂಕದಲ್ಲಿ 1 ಫ್ಲಾಟ್ಸ್, ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಸಂಕೀರ್ಣ, 26 ಎಕರೆ ಕೃಷಿ ಜಮೀನು (ಕಾಫಿ ಪ್ಲಾಂಟೇಷನ್) ಆಸ್ತಿಯನ್ನು ಕೃಷ್ಣವೇಣಿ…
Author: AIN Admin
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ಗೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಮಧ್ಯಂತರ ಜಾಮೀನಲ್ಲಿರುವ ದರ್ಶನ್ ಖಾಯಂ ಬೇಲ್ ನಿರೀಕ್ಷೆಯಲ್ಲಿದ್ದಾರೆ.. ಆದ್ರೆ ಪೊಲೀಸರು ಕೊಲೆ ಕೇಸ್ಗೆ ಸಂಬಂಧಿಸಿದಂತೆ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಿಸೋಕ್ಕೆ ರೆಡಿಯಾಗಿದ್ದಾರೆ. ಈ ಚಾರ್ಜ್ಶೀಟ್ನಲ್ಲಿ ಮತ್ತೆರಡು ಫೋಟೋ ಸಾಕ್ಷಿಗಳನ್ನು ಸೇರಿಸಿದಂತೆ ಹಲವು ಪ್ರಮುಖ ಸಾಕ್ಷಿಗಳನ್ನು ಕೋರ್ಟ್ಗೆ ಸಲ್ಲಿಸಲಿದ್ದಾರೆ ಎನ್ನಲಾಗ್ತಿದೆ. ಈ ಕುರಿತ ಡಿಟೇಲ್ ರಿಪೋರ್ಟ್ ಇಲ್ಲಿದೆ ನೋಡಿ . ಈಗಾಗಲೇ ಮಧ್ಯಂತರ ಜಾಮೀನಿನ ಮೇಲೆ ಹೊರಗೆ ಬಂದು ಚಿಕಿತ್ಸೆ ಪಡೆದುಕೊಳ್ಳುತ್ತಿರುವ ನಟ ದರ್ಶನ್ ನ ಅರ್ಧದಷ್ಟು ಜಾಮೀನಿನ ಅವಧಿ ಕೂಡ ಮುಗಿಯುತ್ತಾ ಬಂದಿದೆ. ಈ ಮಧ್ಯೆ ರೆಗ್ಯುಲರ್ ಬೇಲ್ ಗೂ ಕೂಡ ಅರ್ಜಿ ಹಾಕಿಕೊಂಡಿದ್ದಾರೆ. ಆದ್ರೆ ದರ್ಶನ್ ಗೆ ಮತ್ತೊಂದು ಟೆನ್ಷನ್ ಶುರುವಾಗಿದೆ… ಅದಕ್ಕೆ ಕಾರಣ ಪೊಲೀಸರು ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ಸಲ್ಲಿಸೋಕೆ ರೆಡಿಯಾಗಿರೋದು… ಹೆಚ್ಚುವರಿ ಚಾರ್ಜ್ ಶೀಟ್ ಅನ್ನು ಪೊಲೀಸರು ನಾಳೆ ನ್ಯಾಯಾಲಯಕ್ಕೆ ಸಲ್ಲಿಕೆ ಸಾಧ್ಯತೆ ಇದೆ. 20ಕ್ಕೂ ಹೆಚ್ಚು ಸಾಕ್ಷಿಗಳು, ಹಲವು ಎಫ್…
ತುಮಕೂರು : ನೂತನವಾಗಿ ಬೆಳಗುಂಬ ಗ್ರಾಮ ಪಂಚಾಯ್ತಿ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಮಂಗಳಮ್ಮ ಚೌಡಪ್ಪ (ಕುಂದೂರು) ರವರು ಸನ್ಮಾನ್ಯ ಜನಪ್ರಿಯ ನಿಕಟಪೂರ್ವ ಶಾಸಕರಾದ ಶ್ರೀ ಡಿ ಸಿ ಗೌರಿಶಂಕರ್ ಅಣ್ಣ ನವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸನ್ಮಾನ್ಯ ಗೌರಿಶಂಕರಣ್ಣನವರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಮಂಗಳಮ್ಮ ಚೌಡಪ್ಪ ನವರಿಗೆ ಸನ್ಮಾನ ಮಾಡಿ ಸಾರ್ವಜನಿಕರ ಪರವಾಗಿ ಕೆಲಸ ಮಾಡಬೇಕು ಎಂದು ಹಾರೈಸಿದರು ಇದೇ ಸಂದರ್ಭದಲ್ಲಿ ಹಲವಾರು ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರುಗಳು ಭಾಗವಹಿಸಿದ್ದರು.
ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ವಿಷಯ ಕರ್ನಾಟಕದಲ್ಲಿ ಭಾರೀ ಗದ್ದಲ ಸೃಷ್ಟಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಜನರಿಗೆ ಅಭಯದ ಹಸ್ತ ಚಾಚಿದ್ದಾರೆ. ಬಡವರಿಗೆ ಅನ್ಯಾಯ ಆಗದಂತೆ ಖಡಕ್ ಸೂಚನೆಯೊಂದನ್ನ ರವಾನಿಸಿದ್ದಾರೆ. ಇದರ ಬೆನ್ನಲ್ಲೇ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರ ಪೈಕಿ ಯಾರು ತೆರಿಗೆ ಕಟ್ಟುವುದಿಲ್ಲವೋ ಅಂತವರಿಗೆ ಗೃಹಲಕ್ಷ್ಮಿ ಹಣ ಬರುತ್ತೆ. 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡೋ ಬದಲು ಎಪಿಎಲ್ಗೆ ವರ್ಗವಾಣೆ ಮಾಡಿದ್ದಾರೆ. ವರ್ಗವಣೆ ಮಾಡಿರೋದರಿಂದ ಯಾವುದೇ ಗೊಂದಲ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ರಾಜ್ಯದಲ್ಲಿ ಬಿಪಿಎಲ್’ಗೆ ಅರ್ಹವಲ್ಲದ ಸುಮಾರು 80,000 ಕಾರ್ಡ್ಗಳನ್ನು ರದ್ದು ಮಾಡುವ ಬದಲು ಎಪಿಎಲ್ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್, ಬಿಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ. ಈ ಬಗ್ಗೆ ಗೊಂದಲ ಬೇಡ. ಆದರೆ, ಸರ್ಕಾರಿ ನೌಕರರು, ತೆರಿಗೆ ಪಾವತಿದಾರರಿಗೆ ಎಪಿಎಲ್ ಇರಲಿ,…
ಕರಿಮೆಣಸು ಅಥವಾ ಕಾಳು ಮೆಣಸನ್ನು ನಾವು ನಾನಾ ರೀತಿಯಿ ಅಡುಗೆಯಲ್ಲಿ ಬಳಸುತ್ತೆವೆ. ಅಷ್ಟೇ ಅಲ್ಲದೆ ಕೆಲವೊಮ್ಮೆ ಆಯುರ್ವೇದಿಕ್ ಔಷಧಿಗಳಲ್ಲೂ ಇದನ್ನು ಬಳಸುತ್ತಾರೆ. ಕಷಾಯದಲ್ಲಂತೂ ಕಾಳುಮೆಣಸು ಇರಲೇಬೇಕು. ಶೀತ ನೆಗಡಿಗಳಿಗೆ ಕಾಳುಮೆಣಸಿನ ಕಷಾಯ ಅತ್ಯುತ್ತಮ ಔಷಧಿಯಾಗಿದೆ. ಆದರೆ, ಈ ಪುಡಿಯನ್ನು ನಿತ್ಯವೂ ಆಹಾರದೊಂದಿಗೆ ಬೆರೆಸಿ ಅಥವಾ ಬೆರೆಸದೇ ಸೇವಿಸುವ ಅಭ್ಯಾಸ ಮಾಡಿಕೊಂಡರೆ ದೇಹಕ್ಕೆ ಕೆಲವು ಪ್ರಯೋಜನಗಳ ಜೊತೆಗೇ ಅಪಾಯಗಳೂ ಎದುರಾಗಬಹುದು. ಕೆಲವರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಹೆಚ್ಚು ಹೆಚ್ಚು ಮೆಣಸು ತೆಗೆದುಕೊಳ್ಳಲು ಪ್ರಾರಂಭಿಸುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ದುಷ್ಪರಿಣಾಮವನ್ನು ಉಂಟುಮಾಡುತ್ತದೆ. ಗರ್ಭಾವಸ್ಥೆಯಲ್ಲಿ ಹಾನಿ: ನೀವು ಗರ್ಭಿಣಿಯಾಗಿದ್ದರೆ, ನೀವು ಒಣ/ ಹೆಚ್ಚು ತಾಪ ಬೀರುವ ಯಾವುದನ್ನೂ ತಿನ್ನಬಾರದು. ಕಾಳುಮೆಣಸನ್ನು ಅತಿಯಾಗಿ ತಿನ್ನುವುದರಿಂದ ಹಾಲುಣಿಸುವಲ್ಲಿ ತೊಂದರೆ ಉಂಟಾಗುತ್ತದೆ. ಇದರಿಂದ ಹಾಲು ಕುಡಿಸುವುದರಿಂದ ಮಕ್ಕಳು ಮುಂದೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೊಟ್ಟೆ ಹುಣ್ಣು: ಕಾಳುಮೆಣಸನ್ನು ಹೆಚ್ಚು ತಿನ್ನುವವರು ಹೊಟ್ಟೆಯ ಸಮಸ್ಯೆಗೆ ತುತ್ತಾಗುತ್ತಾರೆ. ಇದು ಹೊಟ್ಟೆಯ ಹುಣ್ಣುಗಳನ್ನು ಉಂಟುಮಾಡುತ್ತದೆ. ಈ ಮೆಣಸು ಮಸಾಲೆಯನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಿದರೆ ಉತ್ತಮ ಎನ್ನುತ್ತಾರೆ…
ಬೆಂಗಳೂರು: ಮೋದಿ ಸರಕಾರ ರೈತರಿಗಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಯೋಜನೆಯನ್ನು ತಂದಿದೆ. ಪ್ರಧಾನ ಮಂತ್ರಿ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು, ಭಾರತೀಯ ರೈತರಿಗೆ ಟ್ರ್ಯಾಕ್ಟರ್ಗಳನ್ನು ಖರೀದಿಸಲು ಸಾಲವನ್ನು ನೀಡುತ್ತದೆ. ಈ ಯೋಜನೆಯು ರೈತರ ಕೃಷಿಗೆ ಅವಶ್ಯವಿರುವ ಟ್ರ್ಯಾಕ್ಟರ್ಗಳನ್ನು ಬಳಸಲು ಧನ ಸಹಾಯ ಮಾಡಿಕೊಡುತ್ತದೆ. ಈ ಯೋಜನೆಯಿಂದ ರೈತರ ಜೀವನವನ್ನು ಸುಧಾರಿಸುತ್ತದೆ. ಟ್ರಾಕ್ಟರ್ ಅನ್ನು ಸರಿಯಾಗಿ ಬಳಸುವುದರಿಂದ ಉತ್ಪನ್ನದ ಗುಣಮಟ್ಟ, ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಈ ಯೋಜನೆಯು ಸಹಾಯ ಮಾಡುತ್ತದೆ. ಪಿಎಂ ಕಿಸಾನ್ ಟ್ರಾಕ್ಟರ್ ಯೋಜನಯಡಿ ಟ್ರಾಕ್ಟರ್ ಖರೀದಿಸಲು ಇಚ್ಚಿಸುವ ರೈತರು ಆನ್ಲೈನ್ ಅಥವಾ ಸಂಬಂಧ ಪಟ್ಟ ಸ್ಛಳೀಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ರೈತರು ಟ್ರಾಕ್ಟರ್ ಬೆಲೆಯ ಅರ್ಧದಷ್ಟು ಮಾತ್ರ ಪಾವತಿ ಮಾಡಿದರೆ ಸಾಕು. ಇನ್ನುಳಿದ ಅರ್ಧದಷ್ಟು ಹಣವನ್ನು ಕೇಂದ್ರ ಸರ್ಕಾರ ಪಾವತಿಸಲಿದೆ. https://ainlivenews.com/do-you-know-blood-sugar-will-become-normal-if-you-drink-the-water-soaked-in-this-seed/ ಶೇಕಡಾ 50 ರಷ್ಟು ಸಬ್ಸಡಿ ಇರುವುದರಿಂದ ರೈತರು ಅರ್ಧದಷ್ಟು ಹಣ ಪಾವತಿಸಿದರೆ ಟ್ರಾಕ್ಟರ್ ಲಭ್ಯವಾಗಲಿದೆ. ಈ ಅರ್ಧ ಹಣಪಾವತಿಗೂ ಸಾಲ ಸೌಲಭ್ಯವಿದೆ. ಕೆಲ ರಾಜ್ಯಗಳು ಕೇಂದ್ರ…
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ಗುಡ್ ನ್ಯೂಸ್ ನೀಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ’ ಎಂದು ತಿಳಿಸಿದರು. ಹಿಂದಿನ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ 13,353 ಮಂದಿ ಅರ್ಹತೆ ಪಡೆದಿದ್ದರು. ಇದರಲ್ಲಿ ಪ್ರಮಾಣಪತ್ರ ವಿತರಣೆ ಮಾಡಲಾಗಿದೆ. ಉಳಿದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ಪ್ರಮಾಣಪತ್ರ ವಿತರಣೆ ಮಾಡಬೇಕಿದೆ. ಪ್ರಕರಣವು ಸುಪ್ರೀಂಕೋರ್ಟ್ನಲ್ಲಿ ಇರುವುದರಿಂದ ಉಳಿದ ಅಭ್ಯರ್ಥಿಗಳಿಗೆ ಇನ್ನಷ್ಟೇ ಪ್ರಮಾಣಪತ್ರ ವಿತರಣೆ ಮಾಡಬೇಕಿದೆ. ಸುಪ್ರೀಂಕೋರ್ಟ್ ಮತ್ತು ಆರ್ಥಿಕ ಇಲಾಖೆ ಅನುಮತಿ ನೀಡಿದ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಉಗುರುಗಳನ್ನು ಕತ್ತರಿಸುವುದು ಆರೋಗ್ಯಕರವಾದ ಅಭ್ಯಾಸ. ಬೆರಳು ಹಾಗೂ ಉಗುರಿನ ಸಂಧಿಯಲ್ಲಿ ಸಿಲುಕಿಕೊಳ್ಳುವ ಕೊಳಕು ಮತ್ತು ಸೂಕ್ಷ್ಮ ಜೀವಿಗಳು ಸಂಗ್ರಹವಾಗುವುದನ್ನು ಸುಲಭವಾಗಿ ತಡೆಗಟ್ಟಬಹುದು. ಹಿಂದೂ ನಂಬಿಕೆ ಹಾಗೂ ಕೆಲವು ಸಂಪ್ರದಾಯಗಳ ಪ್ರಕಾರ ಉಗುರು ಎಲ್ಲಾ ಸಮಯದಲ್ಲೂ ಮಾಡಬಾರದು. ಅದು ವ್ಯಕ್ತಿಗೆ ನಕಾರಾತ್ಮಕ ಫಲವನ್ನು ನೀಡುವುದು ಎಂದು ಹೇಳಲಾಗುವುದು. ಅದರಲ್ಲೂ ಶುಭಕರವಾದ ದಿನಗಳಲ್ಲಿ, ಹಬ್ಬ ಹರಿದಿನಗಳಲ್ಲಿ, ಕೆಲವು ತಿಥಿಗಳಲ್ಲಿ, ವಿಶೇಷವಾದ ವಾರಗಳಲ್ಲಿ ದಿನದ ಎಲ್ಲಾ ಸಮಯದಲ್ಲಿ ಉಗುರು ಕತ್ತರಿಸುವುದು ಮಾಡಬಾರದು. ಮಂಗಳವಾರ ಮತ್ತು ಶನಿವಾರ ಮಂಗಳವಾರ, ಶನಿವಾರ ಮತ್ತು ಗುರುವಾರ ಉಗುರುಗಳನ್ನು ಕತ್ತರಿಸಬಾರದು. ಈ ದಿನ ನಿಮ್ಮ ಉಗುರುಗಳನ್ನು ಕತ್ತರಿಸಿದರೆ, ಅದರ ಕೆಟ್ಟ ಪರಿಣಾಮಗಳನ್ನು ನೀವು ಅನುಭವಿಸಬೇಕಾಗುತ್ತದೆ. ಇದರಿಂದಾಗಿ ಹಣ ಮತ್ತು ಮದುವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಮಂಗಳವಾರ ಕತ್ತರಿ, ನೇಲ್ ಕಟರ್ನಂಥ ಚೂಪು ವಸ್ತುಗಳ ಬಳಕೆಗೇ ಶಾಸ್ತ್ರದಲ್ಲಿ ನಿಷೇಧವಿದೆ. ಈ ದಿನ ಯುದ್ಧಕಾರಕ ಮಂಗಳನು ಇವುಗಳ ಬಳಕೆಗೆ ತೊಡಗಿದರೆ ಹೆಚ್ಚಿನ ದೈಹಿಕ ಹಾನಿಗೆ ಕಾರಣನಾಗುತ್ತಾನೆ. ಇದಲ್ಲದೇ ಅಮವಾಸ್ಯೆ ಮತ್ತು ಚತುರ್ದಶಿ ತಿಥಿಯಂದು…
ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ, ಶರದ ಋತು, ಕಾರ್ತಿಕ್ ಮಾಸ, ತಿಥಿ: ಸಪ್ತಮಿ ನಕ್ಷತ್ರ:ಆಶ್ಲೇಷ ರಾಹು ಕಾಲ: 10:30 ನಿಂದ 12:00 ತನಕ ಯಮಗಂಡ: 03:00 ನಿಂದ 04:30 ತನಕ ಗುಳಿಕ ಕಾಲ: 07:30 ನಿಂದ 09:00 ತನಕ ಅಮೃತಕಾಲ: ಮ.3:27 ನಿಂದ ಸಂ.5:10 ತನಕ ಅಭಿಜಿತ್ ಮುಹುರ್ತ: ಬೆ.11:40 ನಿಂದ ಮ.12:24 ತನಕ ಮೇಷ ರಾಶಿ ( ಅಶ್ವಿನಿ ಭರಣಿ ಕೃತಿಕ 1) ನಿರ್ವಹಣಾ ಅಧಿಕಾರಿಗಳಿಗೆ ಧನ ಲಾಭ ಮತ್ತು ಜಾಗ್ರತೆ ಇರಲಿ, ಪುರೋಹಿತರಿಗೆ ಧನ ಲಾಭ, ತಾತ್ಕಾಲಿಕ ಸಿಬ್ಬಂದಿ ಉದ್ಯೋಗಿಗಳಿಗೆ ಖಾಯಂ ಸೇವೆ ಆಗುವ ಸಮಯ ಬಂದಿದೆ, ವಕೀಲರಿಗೆ ಉನ್ನತ ಹುದ್ದೆ ದೊರೆಯಲಿದೆ, ಗ್ಲಾಸ್ ಪ್ರೇಮ ವರ್ಕರ್ ಉದ್ದಿಮೆದಾರರಿಗೆ ಆರ್ಥಿಕ ಚೇತರಿಕೆ,ಆಸ್ತಿ ದಾಖಲಾತಿಗಳ ಬಗ್ಗೆ ಗೊಂದಲ.ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರ ವಹಿವಾಟದಲ್ಲಿ ಕ್ರಿಯಾಶೀಲರಾಗಿರುವಿರಿ. ವ್ಯಾಪಾರಗಳಲ್ಲಿ ಹೆಚ್ಚು ಮುಂದಾಲೋಚನೆ ವಹಿಸಿ ಲಾಭದತ್ತ ಹೆಜ್ಜೆ ಹಾಕುವಿರಿ. ಸೃಜನಶೀಲ…
‘ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ’ ಎಂದ ವಿದ್ಯಾರ್ಥಿ ಮೇಲೆ ಕ್ರಮಕ್ಕೆ ಆದೇಶಿಸಿದ ಮಧು ಬಂಗಾರಪ್ಪ. ವಿಡಿಯೋ ಕಾನ್ಫರೆನ್ಸ್ ವೇಳೆ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಕ್ರಮ ಕೈಗೊಳ್ಳುವಂತೆ ಸಚಿವ ಮಧು ಬಂಗಾರಪ್ಪ ಆಗ್ರಹ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಶಿಕ್ಷಣ ಸಚಿವರ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. https://www.youtube.com/watch?v=v9xt5YNVgbA&t=55s