ಬಾಗಲಕೋಟೆ: ಬಡವರ ಬೇಡಿಕೆಗಳಿಗೆ ಶೀಘ್ರ ಸ್ಪಂದನೆಯನ್ನು ಎಲ್ಲ ಇಲಾಖೆ ಅಧಿಕಾರಿಗಳು ಮಾಡಬೇಕು. ನಮ್ಮ ವ್ಯಾಪ್ತಿಯಲ್ಲಿ ಬರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ ಇದ್ದರಿಂದ ಬಡ ಜನತೆಗೆ ನ್ಯಾಯಕೊಡಿಸಲು ಅನುಕೂಲವಾಗುತ್ತದೆ ಅಧಿಕಾರಿಗಳಿಗೆ ಶಾಸಕ ಸಿದ್ದು ಸವದಿ ಹೇಳಿದರು.
ನಿಮ್ಮ ಈ ಒಂದು ತಪ್ಪು ಹೃದಯಾಘಾತಕ್ಕೆ ಕಾರಣವಾಗತ್ತೆ.. ಇದರ ಬಗ್ಗೆ ಇರಲಿ ಅರಿವು!
ಬಡವರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದನೆ ನೀಡದಿದ್ದರೆ ಬಡವರು ಎಲ್ಲಿ ಹೋಗಬೇಕು ನಾನು ಅಧಿಕಾರಿಗಳಿಗೆ ಹೇಳುತ್ತೇನೆ ಕೂಡಲೇ ತಮ್ಮ ತಮ್ಮ ಇಲಾಖೆಗಳಲ್ಲಿ ಬಡಜನರ ಯಾವುದೇ ಕಷ್ಟದ ಸಮಯದಲ್ಲಿ ಬಂದರೂ ಅವರ ಕೆಲಸಗಳನ್ನು ಸಲೀಸಾಗಿ ಮಾಡಿಕೊಡುವ ಜವಾಬ್ದಾರಿ ನಿಮ್ಮ ಮೇಲಿದೆ ಹಾಗಾಗಿ ಬಡವರ ಕೆಲಸಗಳನ್ನು ಮಾಡಿ ಎಂದು ಸಲಹೆ ನೀಡಿದರು. ಅರಣ್ಯ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಬಡವರ ಕೆಲಸಗಳಿಗೆ ಸರಿಯಾಗಿ ಸ್ಪಂದಿಸಿ ಅರಣ್ಯ ಉಳಿಸುವುದರ ಜೊತೆಗೆ ಸಾಮಾಜದ ಕೆಲಸಗಳನ್ನು ಸರಿಯಾಗಿ ಮಾಡಿ. ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳನ್ನು ಸುವ್ಯವಸ್ಥಿತವಾಗಿ ಕ್ರಮವಹಿಸಿ ಮುಂದಿನ ಸಭೆಯಲ್ಲಿ ಎಲ್ಲ ಸಮಸ್ಯೆಗಳು ಬಗೆ ಹರಿಯುವಂತೆ ಮಾಡಬೇಕು.
ಬಾಕಿ ಉಳಿದಿರುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಅವುಗಳಿಗೆ ಸೂಕ್ತ ಪರಿಹಾರ ಕಂಡು ಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಕಾನೂನು ಬಾಹೀರ ಕೆಲಸ ಯಾರು ಹೇಳಿದರು ಮಾಡಬೇಡಿ. ಕಾನೂನಿನ ನಿಯಮಗಳನ್ನು ಅಧಿಕಾರಿಗಳು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.
ಇದೇ ಸಂದರ್ಭದಲ್ಲಿ ರಬಕವಿ ಬನಹಟ್ಟಿ ತಹಶೀಲ್ದಾರ ಗಿರೀಶ ಸ್ವಾದಿ, ತೇರದಾಳ ತಹಶೀಲ್ದಾರ ವಿಜಯಕುಮಾರ ಕಡಕೋಳ, ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಎ. ಕೆ. ಬಸಣ್ಣವರ, ಪೌರಾಯುಕ್ತ ಜಗದೀಶ ಈಟಿ, ತಾಲೂಕು ಆರೋಗ್ಯ ಅಧಿಕಾರಿ ಜಿ. ಎಚ್.ಗಲಗಲಿ, ಶಿರಸ್ತೆದಾರರಾದ ಆರ್. ಎಸ್. ಸಾತಿಹಾಳ, ಪ್ರಕಾಶ ಮಠಪತಿ, ಸುರೇಶ ನೀಲನೂರ ಸೇರಿದಂತೆ ಮುಂತಾದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ