ಬೆಂಗಳೂರು:- ಯೋಗೇಶ್ ಗೌಡ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿನಯ್ ಜಾಮೀನು ಅರ್ಜಿ ವಜಾ ಹಿನ್ನೆಲೆ ಇನ್ನು ಎರಡು ದಿನಗಳಲ್ಲಿ ನ್ಯಾಯಾಲಯದ ಮುಂದೆ ಶಾಸಕ ವಿನಯ್ ಕುಲಕರ್ಣಿ ಶರಣಾಗುವ ಸಾಧ್ಯತೆ ಇದೆ.
ಈ 5 ದಿನಗಳು ನಂದಿಬೆಟ್ಟದ ಪ್ರವೇಶ ನಿಷೇಧ.. ಪ್ರವಾಸಿಗಳು ನೋಡಲೇಬೇಕಾದ ಸುದ್ದಿ!
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇನ್ನೆರಡು ದಿನಗಳಲ್ಲಿ ಶರಣಾಗಲಿದ್ದಾರೆ. ಯೋಗೇಶ್ ಗೌಡ ಕೇಸ್ ನಲ್ಲಿ ಸಿಬಿಐನಿಂದ ಯಾವುದೇ ಸಮಯದಲ್ಲಾದರೂ ಅರೆಸ್ಟ್ ಸಾಧ್ಯತೆ ಇದೆ.
ಇನ್ನೂ ಸುಪ್ರೀಂ ಕೋರ್ಟ್ ಸೂಚನೆಯಂತೆ ಶುಕ್ರವಾರ ನ್ಯಾಯಾಲಯಕ್ಕೆ ಶರಣಾಗುವುದಾಗಿ ಶಾಸಕ ವಿನಯ್ ಕುಲಕರ್ಣಿ ಹೇಳಿದ್ದಾರೆ. ನಿನ್ನೆ ವಿನಯ್ ಕುಲಕರ್ಣಿ ಬೆಳಗಾವಿಯ ಪ್ರವಾಸಿ ಮಂದಿರಲ್ಲಿ ಧಾರವಾಡ ಜಿಲ್ಲೆಯ ಅಧಿಕಾರಿಗಳ ಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಅಚ್ಚರಿ ಎಂಬಂತೆ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹಾಜರಾಗಿದ್ದರು.
ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರಿಗೆ ತೊಂದರೆ ಆಗುವುದು ಬೇಡ ಎಂಬ ಕಾರಣಕ್ಕೆ ಇಲ್ಲಿ ಸಭೆ ಮಾಡುತ್ತಿದ್ದೇನೆ. ಅಧಿಕಾರಿಗಳು ನನ್ನ ಪತ್ನಿಗೆ ಸಾಥ್ ನೀಡಿ ಎಂದು ಮನವಿ ಮಾಡಿಕೊಂಡರು.