ಬೆಂಗಳೂರು: ಹಾಲು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿನ್ನೆಯಿಂದ ಆರಂಭವಾಗಿದ್ದ ರಾಜ್ಯ ಬಿಜೆಪಿ ಬಿಜೆಪಿಯ ಅಹೋರಾತ್ರಿ ಧರಣಿ ಮುಕ್ತಾಯವಾಗಿದೆ.
ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್ ಅಶೋಕ್ ಸೇರಿದಂತೆ ಹಲವು ನಾಯಕರು ಅಹೋರಾತ್ರಿ ಧರಣಿ ನಡೆಸಿದ್ದರು.
ಇಂದು ಬೆಳಿಗ್ಗೆ ಧರಣಿ ಅಂತ್ಯಗೊಳಿಸಿದ ಬಿಜೆಪಿ ನಾಯಕರು ಸಿಎಂ ಮನೆ ಮುತ್ತಿಗೆ ಹಾಕಲು ಹೊರಟರು. ಬಿಜೆಪಿ ನಾಯಕರ ಜೊತೆ ನೂರಾರು ಕಾರ್ಯಕರ್ತರು ಸಿಎಂ ಮನೆ ಮುತ್ತಿಗೆಗೆ ಹೊರಟರು. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿ ಎಲ್ಲಾ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು, ಬಸ್ ಗೆ ಹತ್ತಿಸಿ ಸ್ಥಳದಿಂದ ಕರೆದೊಯ್ದಿದ್ದಾರೆ.
ಬ್ಯಾರಿಕೇಡ್ ಹಾಕಿ ತಡೆದ ಪೊಲೀಸರ ವಿರುದ್ಧ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ಮೇಲೆ ಹತ್ತಿ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.