ಬೆಂಗಳೂರು:- ಆರ್ಸಿಬಿ ತಂಡದ ವಿಜಯೋತ್ಸವದಲ್ಲಿ ನಡೆದ ಅವ್ಯವಸ್ಥೆಗೆ ಬಿಸಿಸಿಐ ತೀವ್ರ ವಿಷಾದ ವ್ಯಕ್ತಪಡಿಸಿದೆ.
ಆಯೋಜಕರು ಕಾರ್ಯಕ್ರಮವನ್ನು ಉತ್ತಮ ಸಿದ್ಧತೆಯೊಂದಿಗೆ ಮಾಡಬೇಕಾಗಿತ್ತು. ಇದು ತುಂಬಾ ದುರದೃಷ್ಟಕರ, ಆರ್ಸಿಬಿಯ ಗೆಲುವಿನ ನಂತರ ಸಂಘಟಕರು ಕಾರ್ಯಕ್ರಮವನ್ನು ಸರಿಯಾಗಿ ಯೋಜಿಸಬೇಕಾಗಿತ್ತು. ಅಂತಹ ವಿಜಯೋತ್ಸವ ನಡೆದಾಗ, ಸರಿಯಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ‘ಈ ವಿಜಯೋತ್ಸವದ ಮೆರವಣಿಗೆಯ ಬಗ್ಗೆ ತಿಳಿದಿರಲಿಲ್ಲ. ಈ ಅಪಘಡ ದುಃಖಕರವಾಗಿದೆ. ಆದರೆ ಇದರ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಆರ್ಸಿಬಿ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದೇನೆ ಎಂದರು.
ಆದಾಗ್ಯೂ ಈ ಅಪಘಡದ ನಂತರ, ಆರ್ಸಿಬಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಈ ದುರಂತದ ನಡುವೆಯೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ನಡೆಸಿರುವುದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ.