Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Street Dog Effect: ಬೀದಿನಾಯಿಗಳ ಉಪಟಳಕ್ಕೆ ಬೆಂಗಳೂರಿಗರು ಗಢಗಢ: ಪಾಲಿಕೆ ಜನರನ್ನ ಹೇಗೆ ರಕ್ಷಣೆ ಮಾಡುತ್ತೆ..?

    By AIN AuthorDecember 12, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಪೋಷಕರೇ, ರಾಜಧಾನಿಯ ಬೀದಿಯಲ್ಲಿ ನಿಮ್ಮ ಮಕ್ಕಳನ್ನು ಆಡಲು ಬಿಡುವವರು ನೀವಾದರೆ ಕಟ್ಟೆಚ್ಚರ ವಹಿಸಿ. ಯಾಕೆಂದ್ರೆ ರಸ್ತೆಯಲ್ಲಿ ಬರೋರನ್ನ ಹರಿದು ಮುಕ್ಕೋಕೆ ಬೀದಿನಾಯಿಗಳು ಕಾಯ್ತಾ ಇರರ್ತವೆ. ಹೌದು ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ದಿನಕ್ಕೆ ಸರಾಸರಿ 60 ರಿಂದ 70 ಮಂದಿ ಮೇಲೆ ಅಟ್ಯಾಕ್ ಮಾಡುತ್ತಿವೆ ಅಂತೆ ಪಾಲಿಕೆಯೇ ರಿಪೋರ್ಟ್ ಬಿಡುಗಡೆ ಮಾಡಿದೆ.ಇವರಲ್ಲೂ ಮಕ್ಕಳೇ ಅಧಿಕವಾಗಿರೋದು ಆತಂಕ ಹುಟ್ಟಿಸಿದೆ. ಹಾಗಾದ್ರೆ ಕಳೆದ ಕೆಲ ವರ್ಷಗಳಲ್ಲಿ ನಗರದಲ್ಲಿ ನಾಯಿಗಳಿಂದ ಅಟ್ಯಾಕ್ ಆದವರ ಸಂಖ್ಯೆ ಎಷ್ಟಿದೆ ಗೊತ್ತಾ, ಇಷ್ಟು ಇದ್ರೂ ಪಾಲಿಕೆ ಏನ್ಮಾಡ್ತಿದೆ ಬನ್ನಿ ತೋರಿಸ್ತಿವಿ..

    ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಬೀದಿನಾಯಿಗಳ ಹಾವಳಿ ಹೆಚ್ಚಾಗ್ತಿದೆ. ಬೀದಿನಾಯಿಗಳ ಹಾವಳಿಯಿಂದ ಎಷ್ಟೋ ಮಕ್ಕಳು ಬಲಿಯಾಗಿದ್ದಾರೆ. ಆದ್ರೂ ಬಿಬಿಎಂಪಿ ಈ ಬಗ್ಗೆ ತಲೆನೇ ಕೆಡೆಸಿಕೊಂಡಿಲ್ಲ. ನಗರದ ಪಾರ್ಕ್ ನಲ್ಲೂ ನಾಯಿ ಕಾಟ.. ಬೀದಿಯಲ್ಲೂ ಶ್ವಾನಗಳ ಹಾವಾಳಿ ಮಿತಿ ಮೀರಿದೆ. ಬೀದಿನಾಯಿಗಳ ಉಪಟಳಕ್ಕೆ ಈಗಾಗಲೇ ಬೆಂಗಳೂರಿಗರು ಬೆದರಿ ಹೋಗಿದ್ದಾರೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಿರೋ ಈ ಸಂತತಿಯ ವೇಗ ಕಡಿಮೆ ಮಾಡಲು ಪಾಲಿಕೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತೆ. ಆದ್ರೆ ಆ ಕೋಟಿ ಕೋಟಿ ಹಣ ಯಾರ ಜೇಬು ಸೇರುತ್ತಿದೆ ಅನ್ನೋ ಪ್ರಶ್ನೆ ಶುರುವಾಗಿದೆ.

    ಹೌದು..ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 59285 ಮಂದಿಗೆ ನಾಯಿ ಕಚ್ಚಿದೆ. ಇತ್ತೀಚಿಗೆ ಅಂತೂ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಸ್ತೆಯಲ್ಲಿ ನಡೆದು ಹೋಗುವವರ ಮೇಲೆ ಎರಗುವ ಶ್ವಾನಗಳಿಂದ ಜನರು ಭಯಭೀತರಾಗಿದ್ದಾರೆ. ಬೀದಿ ನಾಯಿಗಳ ಹಾವಳಿ ತಪ್ಪಿಸಲು ಬಿಬಿಎಂಪಿ ಎಷ್ಟೇ ಸರ್ಕಸ್ಸ್ ಮಾಡಿದ್ರೂ ಜನರ ಮೇಲೆ ನಾಯಿಗಳು ಅಟ್ಯಾಕ್ ಮಾಡ್ತಿವೆ. ಹಾಗಾದ್ರೆ ಯಾವೆಲ್ಲಾ ವರ್ಷದಲ್ಲಿ ಎಷ್ಟೆಷ್ಟು ಮಂದಿಗೆ ನಾಯಿ ಕಚ್ಚಿದೆ ಅನ್ನೋದನ್ನ ನೋಡೋದಾದ್ರೆ..

    2018-19- 38978
    2019-20-42818
    2020-21-18629
    2021-22-17610
    2022-23-22945

    ಬಿಬಿಎಂಪಿ ಪಶುಸಂಗೋಪನೆ ಇಲಾಖೆ ನೀಡಿರೋ ಮಾಹಿತಿ ಪ್ರಕಾರ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರತಿ ವರ್ಷವೂ ನಾಯಿ ದಾಳಿ ಪ್ರಕರಣ ಹೆಚ್ಚಾಗ್ತಿದೆ. 2018-19- ರಲ್ಲಿ 38978 ಮಂದಿಗೆ ನಾಯಿ ಕಚ್ಚಿದ್ರೆ 2019-20-42818 ಮಂದಿ, 2020-21-ರಲ್ಲಿ 18629, 2021-22-17610ಮಂದಿಗೆ ಹಾಗೂ 2022-23 ರಲ್ಲಿ 22945 ನಾಯಿ ಕಚ್ಚಿದೆ. 2022-23 ರ ಸಾಲಿನಲ್ಲಿ ಪಶ್ಚಿಮ ಹಾಗೂ ಪೂರ್ವ ವಲಯದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನರಿಗೆ ಕಚ್ಚಿದೆ ಅನ್ನೋದು ಬಿಬಿಎಂಪಿ ದಾಖಲೆಗಳು ಹೇಳ್ತಿವೆ. ಆದ್ರೆ ನಾಯಿಗಳ ಕಡಿತ ಬಗ್ಗೆ ಬಿಬಿಎಂಪಿ ಹೇಳೋದೇ ಬೇರೆ.

    ಪಾಲಿಕೆ ಹೇಳ್ತಿರೋ ಪ್ರಕಾರ ರಾತ್ರಿ ವೇಳೆಯೇ ಅತಿ ಹೆಚ್ಚು ದಾಳಿಗಳು ನಡೆದಿವೆ. ರಾತ್ರಿ ವೇಳೆ ಓಡಾಡುವ ಜನರ ಮೇಲೆ ನಾಯಿಗಳು ಎಗರುತ್ತಿದ್ದು, ರಸ್ತೆ ಬದಿಯಲ್ಲಿರುವ ನಿರ್ಗತಿಕರನ್ನೂ ಬಿಡದೆ ಕಾಡುತ್ತಿವೆ.ವಾಹನದಲ್ಲಿ ತೆರಳುವವರಿಗೂ ಇವು ಕಾಟ ಕೊಡುತ್ತಿದ್ದು, ದ್ವಿಚಕ್ರ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ. ನಾಯಿಗಳನ್ನು ತಪ್ಪಿಸಲು ಹೋಗಿ ಬೈಕ್ ಸವಾರರು ಬಿದ್ದು ಗಾಯ ಮಾಡಿಕೊಂಡ ಪ್ರಕರಣಗಳು ಸಾಕಷ್ಟು ನಡೆದಿವೆ. ನಾಯಿಗಳ ಕಾಟಕ್ಕೆ ಮುಕ್ತಿ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.ಬಿಬಿಎಂಪಿ ವ್ಯಾಪ್ತಿಯಲ್ಲಿ 3.09 ಲಕ್ಷಕ್ಕೂ ಅಧಿಕ ಬೀದಿ ನಾಯಿಗಳಿವೆ. ನಾಯಿಗಳ ಹಾವಳಿ ತಡೆಯಲು ವರ್ಷಕ್ಕೆ 3ರಿಂದ 5 ಕೋಟಿ ಖರ್ಚು ಮಾಡಲಾಗುತ್ತಿದೆ. ಇವುಗಳ ಸಂತಾನ‌ಹರಣ ಶಸ್ತ್ರಚಿಕಿತ್ಸೆ ಹಾಗೂ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕುವುದಕ್ಕೆಂದು ಕೋಟಿಗಟ್ಟಲೆ ಖರ್ಚು ತೋರಿಸಲಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ 1,81,585 ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂಬ ಲೆಕ್ಕವಿದೆ. ಆದರೂ ‌ನಾಯಿಗಳು ಮರಿ ಹಾಕುವ ಸಂಖ್ಯೆಯಲ್ಲಿ ಇಳಿಕೆಯಾಗಿಲ್ಲ.ಹೆಜ್ಜೆ ಹೆಜ್ಜೆಗೂ ಗುರ್‌ ಎನ್ನುವ ನಾಯಿಗಳು ಸಹಜವಾಗಿಯೇ ಸಾರ್ವಜನಿಕರಲ್ಲಿಭೀತಿ ಸೃಷ್ಟಿಸುತ್ತಿವೆ. ಬೀದಿ ನಾಯಿಗಳ ಹಾವಳಿಯಿಂದ ಜನರು ರೋಸಿ ಹೋಗಿದ್ದಾರೆ. ನಾಯಿ ದಾಳಿ ತಡೆಯೋಕೆ ಆಗದ ಪಾಲಿಕೆ ಜನರನ್ನ ಹೇಗೆ ರಕ್ಷಣೆ ಮಾಡುತ್ತೆ ಅನ್ನೋದು ಜನರ ಪ್ರಶ್ನೆ. ಇನ್ನಾದ್ರೂ ಇದಕ್ಕೆ ಕಡಿವಾಣ ಹಾಕುತ್ತಾ ಅನ್ನೋದನ್ನ ನೋಡಬೇಕು.

    Demo
    Share. Facebook Twitter LinkedIn Email WhatsApp

    Related Posts

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಭಯಾನಕ ಕೃತ್ಯ: ಮಹಿಳೆ ಕೊಂದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.