Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೀದರ್: ಅದ್ಧೂರಿಯಾಗಿ ನಡೆದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ

    By Author AINJuly 4, 2025
    Share
    Facebook Twitter LinkedIn Pinterest Email
    Demo

    ಬೀದರ್: ಜೆಡಿಎಸ್ ಪಕ್ಷದ ಯುವ ಜನತಾದಳದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು, ಮಾಜಿ ಸಚಿವರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ನೇತೃತ್ವದಲ್ಲಿ ಗುರುವಾರ ನಡೆದ, ‘ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ’ಯೂ ಅದ್ಧೂರಿಯಾಗಿ, ಯಶಸ್ವಿಯಾಗಿ ನಡೆಯಿತು.
    ಬೆಂಗಳೂರಿನಿಂದ ಬೀದರ್ ನಗರಕ್ಕೆ ವಿಮಾನದ ಮೂಲಕ ಆಗಮಿಸಿದ್ದ ನಿಖಿಲ್ ಕುಮಾರಸ್ವಾಮಿರವರನ್ನು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬೀದರ್ ವಿಮಾನ ನಿಲ್ದಾಣದ ಆವರಣದಲ್ಲಿ ಸನ್ಮಾನಿಸಿ, ಗೌರವದಿಂದ ಬರಮಾಡಿಕೊಂಡರು.

    ಬಳಿಕ ನಿಖಿಲ್ ಕುಮಾರಸ್ವಾಮಿರವರು, ಬೀದರ್ ನಗರದ ಗುರುನಾನಕ್ ಗೆ ಭೇಟಿ ನೀಡಿ, ಪ್ರಾರ್ಥಿಸಿದರು. ನಂತರ ಜೆಡಿಎಸ್ ಪಕ್ಷದ ಪ್ರಮುಖರಾಗಿರುವ ಸೂರ್ಯಕಾಂತ್ ನಾಗಮಾರಪಳ್ಳಿರವರ ಮನೆಗೆ ಭೇಟಿ ನೀಡಿ ಉಪಹಾರ ಸೇವಿಸಿದರು.
    ನಂತರ ಅವರು, ನಗರದ ಗುಂಪಾದಲ್ಲಿರುವ ಸಿದ್ದಾರೂಡ ಮಠದ ಚಿದಂಬರಂ ಆಶ್ರಮಕ್ಕೆ ಭೇಟಿ ನೀಡಿ, ಸದ್ಗುರು ಡಾ. ಶಿವಕುಮಾರ್ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಇದೇ ವೇಳೆ ಅಭಿಮಾನಿಗಳು, ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಕ್ರೇನ್, ಜೆಸಿಬಿಗಳ ಮೂಲಕ ದೊಡ್ಡದೊಡ್ಡ ಹಾರ ಹಾಕಿ ಹೂಮಳೆ ಸುರಿಸಿ, ಹರ್ಷ ವ್ಯಕ್ತಪಡಿಸಿದರು.

    ಬಳಿಕ ನಿಖಿಲ್ ಕುಮಾರಸ್ವಾಮಿರವರು, ಬೀದರ್ ನಗರದ ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಹಣ್ಣು ನೀಡಿ, ಆರೋಗ್ಯ ವಿಚಾರಿಸಿದರು. ನಂತರ ಜೆಡಿಎಸ್ ಪಕ್ಷದ ಬೀದರ್ ಉತ್ತರ ತಾಲೂಕು ಅಧ್ಯಕ್ಷರಾದ ಬಸವರಾಜ ಪಾಟೀಲ್ ಹಾರೂರಗೇರಿ, ನಗರ ಘಟಕದ ಅಧ್ಯಕ್ಷ ಸುದರ್ಶನ್ ಸುಂದದರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲ್ಪೂರ್ ರವರ ಮನೆಗಳಿಗೆ ಭೇಟಿ ನೀಡಿದರು. ನಂತರ ಬೀದರ್ ನಗರದ ಲಾವಣ್ಯ ಕನ್ವೆನ್ಷನ್ ಹಾಲ್ ನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು.

    ಈ ಸಂದರ್ಭದಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್, ಮಾಜಿ ಶಾಸಕರಾದ ಸುರೇಶ್ ಗೌಡ, ಮಲ್ಲಿಕಾರ್ಜುನ ಖೂಬಾ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲ್ಪೂರ್, ಪ್ರಮುಖರಾದ ಸೂರ್ಯಕಾಂತ್ ನಾಗಮಾರಪಳ್ಳಿ, ಉಮಕಾಂತ್ ನಾಗಮಾರಪಳ್ಳಿ, ಬಸವರಾಜ ಪಾಟೀಲ್ ಹಾರೂರಗೇರಿ, ಶಾಂತಲಿಂಗ ಸಾವಳಗಿ, ರಾಜಶೇಖರ ಜವಳೆ, ಅಶೋಕ್ ಕೊಡ್ಗೆ, ರಾಜು ಕಡ್ಯಾಳ, ಸುದರ್ಶನ್ ಸುಂದರರಾಜ್, ಸಿದ್ರಾಮಪ್ಪ ವಂಕ್ಕೆ, ಐಲಿಂಜಾನ್ ಮಠಪತಿ, ಬಸವರಾಜ ಪಾಟೀಲ್ ಹಾರೂರಗೇರಿ, ಮಲ್ಲಿಕಾರ್ಜುನ ನೆಳ್ಗೆ, ಅಭಿ ಕಾಳೆ, ಜಾಫೇಡ್ ಕಡ್ಯಾಳ, ಪ್ರಶಾಂತ್ ವಿಶ್ವಕರ್ಮರವರು ಸೇರಿದಂತೆ ಅನೇಕರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಅವಹೇಳನಕಾರಿ ಹೇಳಿಕೆ ಆರೋಪ: ಪೋಕ್ಸೋ ಅತ್ಯಾಚಾರಿಗಳು ಬಿಜೆಪಿಯಲ್ಲೇ ಇದ್ದಾರೆ – ಪ್ರಿಯಾಂಕ್ ಖರ್ಗೆ

    July 4, 2025

    ಸಣ್ಣಪುಟ್ಟ ಹೇಳಿಕೆಯಿಂದ ಸಿಎಂ ಬದಲಾವಣೆ ಚರ್ಚೆಯಾಗಲ್ಲ: ಶಿವರಾಜ್ ತಂಗಡಗಿ

    July 4, 2025

    ಹೃದಯ ಜೋಪಾನ ; ಮಿಮ್ಸ್ ನಲ್ಲಿ ಹೃದಯ ವೈದ್ಯರೇ ಇಲ್ಲ

    July 4, 2025

    ಕಾರು ಹರಿದು ಮೂರು ವರ್ಷದ ಬಾಲಕಿ ಮೃತ್ಯು

    July 4, 2025

    ಹೃದಯ ಜೋಪಾನ – ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ

    July 4, 2025

    ತುಮಕೂರು ಜಿಲ್ಲೆಯಲ್ಲಿ ಸರ್ಕಾರಿ ಹಾರ್ಟ್ ಸ್ಪೆಷಲಿಸ್ಟೇ ಇಲ್ಲ..!?

    July 4, 2025

    ಬೆಳಗಾವಿಯ ಬಿಮ್ಸ್‌ನಲ್ಲಿ ಇರೋದು ಒಬ್ಬರೇ ಹೃದಯ ವೈದ್ಯರು

    July 4, 2025

    ಕಾವೇರಿ ನದಿ ಪ್ರವಾಹಕ್ಕೆ ಸಿಲುಕಿದ್ದ ಮಹಿಳೆ ರಕ್ಷಣೆ

    July 4, 2025

    ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕನ ಕಾಲು ಕಟ್

    July 4, 2025

    ನಾವೆಲ್ಲರೂ ಜನರೊಂದಿಗೆ ಬೆರೆತು ಕೆಲಸ ಮಾಡೋಣ: ನಿಖಿಲ್ ಕುಮಾರಸ್ವಾಮಿ

    July 4, 2025

    ಕಿಮ್ಸ್ ಆಸ್ಪತ್ರೆಗೆ ನೂತನ ಡೈರೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ ಡಾ. ಈಶ್ವರ ಹೊಸಮನಿ

    July 4, 2025

    ವಿವಾಹಿತ ಮಹಿಳೆಯೊಂದಿಗೆ ಸಹಜೀವನ, ಕಲಹ : ವಿಡಿಯೋ ಮಾಡಿಟ್ಟು ಆತ್ಮಹತ್ಯೆ

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.