Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bigg Twist: ಬೆಂಗಳೂರಿನ ಡಬಲ್‌ ಮರ್ಡರ್‌ ಕೇಸ್‌ʼಗೆ ಬಿಗ್‌ ಟ್ವಿಸ್ಟ್:‌ ಹೀಗೂ ಮಾಡ್ತಾಳಾ ಸೊಸೆ ಅಂತೀರಾ?

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು ಗ್ರಾಮಾಂತರ: ತೀವ್ರ ಸಂಚಲನ ಮೂಡಿಸಿದ ಸೂಲಿಬೆಲೆಯಲ್ಲಿ ನಡೆದ ಜೋಡಿ ಕೊಲೆಗೆ ಬಿಗ್ ಟ್ವಿಸ್ಟ್​ ಸಿಕ್ಕಿದೆ.

    ಹೌದು,ಜೋಡಿ ಕೊಲೆಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರು ಸೈಲೆಂಟ್ ಆಗಿಯೇ ವಿಚಾರಣೆ ನಡೆಸಿ ಕೊಲೆ ಪ್ರಕರಣಕ್ಕೆ ರೋಚಕ ತಿರುವೊಂದನ್ನು ಕೊಟ್ಟಿದ್ದಾರೆ.

    ಸೂಲಿಬೆಲೆ ಗ್ರಾಮದಲ್ಲಿ ಕಳೆದ 10ರಂದು ರಾಮಕೃಷ್ಣಪ್ಪ ಮತ್ತು ಮುನಿರಾಮಕ್ಕ ಎಂಬ ವೃದ್ಧ ದಂಪತಿ ಬರ್ಬರವಾಗಿ ಕೊಲೆಯಾಗಿದ್ದರು. ಜತೆಗೆ ಕೊಲೆ ವಿಚಾರ ತಿಳಿದು ಬಂದಿದ್ದ ವೃದ್ಧರ ಹೆಣ್ಮಕ್ಕಳು ಆಸ್ತಿಗಾಗಿ ಅಣ್ಣನೇ ಕೊಲೆ ಮಾಡಿದ್ದಾನೆ ಎಂದು ನರಸಿಂಹಮೂರ್ತಿ ಮನೆ ಮೇಲೆ ದಾಳಿ ನಡೆಸಿ ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಕೊಲೆಯಾದ ವೃದ್ಧ ದಂಪತಿಯ ಮಗ ನರಸಿಂಹಮೂರ್ತಿಯನ್ನು ವಶಕ್ಕೆ ಪಡೆದಿದ್ದರು.
    ವಿಚಾರಣೆ ನಡೆಸಿದ ಪೊಲೀಸರಿಗೆ ಕೊಲೆ ಕೇಸ್‌ನಲ್ಲಿ ತಿರುವು ಸಿಕ್ಕಿದೆ. ಆ ವೃದ್ಧ ದಂಪತಿಯನ್ನು ಕೊಲೆ ಮಾಡಿದ್ದು ನರಸಿಂಹಮೂರ್ತಿ ಅಲ್ಲ ಬದಲಾಗಿ ಆತನ ಪತ್ನಿ ಭಾಗ್ಯಮ್ಮ, ಮಗಳು ವರ್ಷಾ ಹಾಗೂ ಅಪ್ರಾಪ್ತ ಮಗ ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

    ನರಸಿಂಹಮೂರ್ತಿ ಟೂರರ್ಸ್ ಆ್ಯಂಡ್‌ ಟ್ರಾವೇಲ್ಸ್, ಫೈನಾನ್ಸ್ ಎಂದು ಸಿಕ್ಕ ಸಿಕ್ಕ ಕೆಲಸ ಮಾಡಲು ಹೋಗಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಇತ್ತ ನಿತ್ಯ ಮನೆ ಬಳಿ ಸಾಲಗಾರರು ಬಂದು ಹಣ ‌ನೀಡುವಂತೆ ಕಿರುಕುಳ‌ ನೀಡುತ್ತಿದ್ದರು. ಹೀಗಾಗಿ ಹಲವು ಸಲ ನರಸಿಂಹಮೂರ್ತಿ ನಾನು ಎಲ್ಲಾದರೂ ದೂರ ಹೋಗಿ ಸತ್ತು ಹೋಗುತ್ತೀನಿ ಎಂದು ಪತ್ನಿ ಬಳಿ ಹೇಳಿಕೊಂಡಿದ್ದ.

    ಪತ್ನಿ ಭಾಗ್ಯಮ್ಮಳಿದು ಇದು ಚಿಂತೆ ಕಾಡುತಿತ್ತು.ಇನ್ನೂ ಪತಿ ಏನಾದರೂ ಹೆಚ್ಚು ಕಡಿಮೆ ಮಾಡಿಕೊಂಡರೆ ಏನು ಗತಿ ಎಂದುಕೊಂಡಳು. ಹೀಗಾಗಿ ಜಮೀನು ಮಾರಾಟ ಮಾಡಿ ಸಾಲ ತೀರಿಸುವಂತೆ ಸಲಹೆ ನೀಡಿದ್ದಳು. ಅದೇ ರೀತಿ ನರಸಿಂಹಮೂರ್ತಿ ತಂದೆ-ತಾಯಿ ಬಳಿ ತನ್ನ ಭಾಗದ ಜಮೀನು ನೀಡುವಂತೆ ಕೇಳಿದ್ದಾನೆ. ಅದಕ್ಕೆ ವೃದ್ಧ ದಂಪತಿ ಜಮೀನನನ್ನು ಆರು ಭಾಗ ಮಾಡಿ ಹೆಣ್ಣು ಮಕ್ಕಳು ಮತ್ತು ಮಗನಿಗೆ ಸಮನಾಗಿ ನೀಡುವುದಾಗಿ ಹೇಳಿದ್ದಾರೆ. ಹೀಗೆ ಮಾಡಿದರೆ ಬರುವ ಹಣದಿಂದ ಸಾಲ ತೀರಿಸಲು ಆಗಲ್ಲ ಎಂದು ನರಸಿಂಹಮೂರ್ತಿ ಸಿಟ್ಟಾಗಿ ವಾಪಸ್ ಮನೆಗೆ ಬಂದಿದ್ದ.

    ಗಂಡನ ಸಾಲ ತೀರಿಸಲು ಏನಾದರೂ ಮಾಡಲೆಬೇಕು ಎಂದು ಪಣ ತೊಟ್ಟ ಪತ್ನಿ ಭಾಗ್ಯಮ್ಮ, ಮಗಳ ಜತೆ ಗೂಡಿ ಅತ್ತೆ- ಮಾವನನ್ನು ಕೊಲೆ ಮಾಡುವ ಸ್ಕೆಚ್‌ ಹಾಕಿದ್ದಾಳೆ. ಅದರಂತೆ ಕಳೆದ 09ರ ಸಂಜೆ ವೃದ್ಧ ದಂಪತಿ ಮನೆಯಲ್ಲಿರುವಾಗಲೇ ಎಂಟ್ರಿ ಕೊಟ್ಟ ಸೊಸೆ-ಮೊಮ್ಮಕ್ಕಳಿಗೆ ಅತ್ತೆ ಎದುರಾಗಿದ್ದಾರೆ. ಕೂಡಲೇ ಅತ್ತೆ ಮುನಿರಾಮಕ್ಕರ ತಲೆಗೆ ಬಲವಾಗಿ ಹೊಡೆದು ಸಾಯಿಸಿದ್ದಾರೆ. ಬಳಿಕ ಮಾವ ರಾಮಕೃಷ್ಣಪ್ಪ ಬರುವವರೆಗೂ ಕಾದು, ಬರುತ್ತಿದ್ದಂತೆ ಆತನ ತಲೆಗೂ ಬಲವಾಗಿ ರಾಡ್‌ನಿಂದ ಹೊಡೆದು ರಕ್ತವನ್ನೇ ಹರಿಸಿದ್ದಾರೆ.

    ವೃದ್ಧ ಅತ್ತೆ-ಮಾವರನ್ನು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಅಮ್ಮ-ಮಗಳು ಹಾಗೂ ಮಗ ಮನೆಗೆ ಬೀಗ ಜಡಿದು ವಾಪಸ್‌ ಆಗಿದ್ದಾರೆ. ಇತ್ತ ರಾತ್ರಿ ಪತಿ ನರಸಿಂಹಮೂರ್ತಿ ಮ‌ನೆಗೆ ಬಂದು ಊಟ ಮಾಡಿ ಮಲಗುವಾಗ ವೇಳೆ ನಿಮ್ಮ ಅಪ್ಪ-ಅಮ್ಮನ್ನ ಕೊಲೆ ಮಾಡಿದ್ದಾಗಿ ಪತ್ನಿ ಹಾಗೂ ಮಗಳು ಹೇಳಿದ್ದಾರೆ.

    ಈ ವಿಷಯ ಕೇಳಿ ಶಾಕ್ ಆದ ‌ನರಸಿಂಹಮೂರ್ತಿ, ಘಟನೆ ಬೆಳಕಿಗೆ ಬಂದಾಗ ಅವರೆ ಹೊಡೆದಾಡಿಕೊಂಡು ಸತ್ತಿದ್ದಾರೆ ಎಂದು ಹೇಳುವಂತೆ ಹೇಳಿದ್ದಾನೆ. ಹೆಂಡ್ತಿ-ಮಕ್ಕಳನ್ನು ಕಾಪಾಡಿಕೊಳ್ಳಲು ನಾಟಕವನ್ನೇ ಮಾಡಿದ್ದಾನೆ. ಆದರೆ ಪೊಲೀಸರು ತಮ್ಮದೆ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ತಾಯಿ- ಮಕ್ಕಳ ಕೊಲೆ ರಹಸ್ಯವನ್ನು ಬಾಯಿ ಬಿಚ್ಚಿಸಿದ್ದಾರೆ.

    ಇನ್ನೂ ಸತ್ಯ ಒಪ್ಪಿಕೊಳ್ಳುತ್ತಿದ್ದಂತೆ ಪತ್ನಿ ಭಾಗ್ಯಮ್ಮ, ಮಗಳು ವರ್ಷ, ಅಪ್ರಾಪ್ತ ಮಗ ಹಾಗೂ ಸತ್ಯವನ್ನು ಮುಚ್ಚಿಟ್ಟು ಕೊಲೆಗಾರರ ರಕ್ಷಣೆಗೆ ಮುಂದಾಗಿದ್ದ ನರಸಿಂಹಮೂರ್ತಿಯನ್ನು ಜೈಲಿಗಟ್ಟಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025

    1 ವರ್ಷದಿಂದ RR ನಗರ ಏರಿಯಾ ಮನೆಗಳೇ ಟಾರ್ಗೆಟ್..! ಪೊಲೀಸರ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳ ಅರೆಸ್ಟ್

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    Bengaluru: ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿಯ ರಂಪಾಟ..! ವಿಡಿಯೋ ವೈರಲ್

    July 1, 2025

    ವೇಶ್ಯಾವಾಟಿಕೆಗೆ ಒಪ್ಪದ ಪತ್ನಿಗೆ 6 ಬಾರಿ ತಲಾಖ್;ಸೈಕೋ ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025

    National Doctors Day.. ಇಂದು ರಾಷ್ಟ್ರೀಯ ವೈದ್ಯರ ದಿನ: ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

    July 1, 2025

    Heart Attack Symptoms: ಹೃದಯಾಘಾತಕ್ಕೂ ಮುನ್ನ ಈ ಲಕ್ಷಣಗಳು ಕಂಡು ಬರುತ್ತವೆ..! ನಿರ್ಲಕ್ಷಿಸಬೇಡಿ

    July 1, 2025

    Commercial Cylinder Price: ಗ್ರಾಹಕರಿಗೆ ಸಿಹಿ ಸುದ್ದಿ: ಸಿಲಿಂಡರ್ ಬೆಲೆಯಲ್ಲಿ ಇಳಿಕೆ..!

    July 1, 2025

    ಅಪ್ರಾಪ್ತೆ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಿದ ಆರೋಪ: ಪ್ರಿಯಕರ ಅರೆಸ್ಟ್!

    July 1, 2025

    ಚಿನ್ನಸ್ವಾಮಿ ಸ್ಟೇಡಿಯಂನ ಕರೆಂಟ್ ಕಟ್: ಸಂಪೂರ್ಣ ಪವರ್ ಕಟ್ ಮಾಡಿದ್ಯಾಕೆ ಬೆಸ್ಕಾಂ?

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.