ರಾಮನಗರ : ರಾಮನಗರ ಜಿಲ್ಲೆಯಲ್ಲಿ ದಿನೇ ದಿನೇ ಬೈಕ್ ವೀಲ್ಹಿಂಗ್ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಬೈಕ್ ವೀಲ್ಹಿಂಗ್ ಮಾಡುತ್ತಿದ್ದ ಪುಂಡರನ್ನ ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದೆ.
ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸ್ ಪೇದೆಗಳಾದ ಜಯಕುಮಾರ್ ಹಾಗೂ ಬಸವರಾಜ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಬೀಡಿಕಾಲೋನಿ ನಿವಾಸಿ ಸೈಫ್ ಖಾನ್ ಮತ್ತವನ ತಂಡ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿತ್ತು. ಈ ಹಿನ್ನೆಲೆ ಚನ್ನಪಟ್ಟಣ ಪೊಲೀಸರ ಪ್ರಕರಣ ದಾಖಲಿಸಿಕೊಂಡು ಸೈಫ್ ಖಾನ್ ಬಂಧಿಸಿ, ಬೈಕ್ ಸೀಜ್ ಮಾಡಲು ತೆರಳಿದ್ದರು. ಈ ವೇಳೆ ಪೊಲೀಸ್ ಪೇದೆಗಳ ಮೇಲೆ ಹಲ್ಲೆ ಮಾಡಿ ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಸದ್ಯ ಈ ಸಂಬಂಧ ರಾಮನಗರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸೈಫ್ ಖಾನ್, ಅತನ ತಂದೆ ಯುಸೂಫ್ ಖಾನ್ ಸೇರಿ ಆರು ಮಂದಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಬಿಎನ್ ಎಸ್ 132, 352, 310 ರ ಕಾಯ್ದೆಅಡಿ ಕೇಸ್ ದಾಖಲಿಸಿದ್ದು, ಯುಸೂಫ್ ಖಾನ್ ಬಂಧಿಸಲಾಗಿತ್ತು.