ವಿಜಯಪುರ: ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆಯನ್ನು ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆಯನ್ನು ಬಿಜೆಪಿ ನಾಯಕರು ಕಳೆದುಕೊಂಡಿದ್ದಾರೆ, ವಿಜಯೇಂದ್ರ ಪ್ರತಿಭಟನೆ ಮುಂದಾದರೆ ಸಿಎಂ ಮತ್ತು ಡಿಸಿಎಂ; ನಿಮ್ಮ ತಂದೆಯ ಪೋಕ್ಸೋ ಕೇಸ್, ನಿನ್ನ ಫೋರ್ಜರಿ ಕೇಸ್ ಓಪನ್ ಮಾಡುತ್ತೇವೆ ಎಂದು ಹೆದರಿಸಿ ಸುಮ್ಮನಾಗಿಸುತ್ತಾರೆ ಎಂದು ಯತ್ನಾಳ್ ಹೇಳಿದರು.
ಯಡ್ಡಿಯೂರಪ್ಪ ಕುಟುಂಬವನ್ನ ಬಿಜೆಪಿಯಿಂದ ಮುಕ್ತ ಮಾಡಬೇಕು. ಪ್ರತಿನಿತ್ಯ ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ಇವರು ಸಿದ್ದರಾಮಯ್ಯ, ಡಿಕೆಶಿ, ಜಮೀರ್ ಅಹ್ಮದ್ ಜೊತೆ ಸಂತೋಷವಾಗಿದ್ದಾರೆ. ಇದು ಕಾರ್ಯಕರ್ತರಿಗೆ ಏನು ಸಂದೇಶ ಕೊಡುತ್ತದೆ. ಅವರೊಂದಿಗೆ ನಿಮಗೆ ಅಷ್ಟೊಂದು ಆತ್ಮೀಯತೆ ಇದ್ದರೆ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಿ. ಹಿಂದೂ ಕಾರ್ಯಕರ್ತರನ್ನು ಬಲಿ ತಗೆದುಕೊಳ್ಳಬೇಡಿ ಎಂದು ಕಿಡಿಕಾರಿದರು.