ಕೋಲಾರ : ರಾಜ್ಯ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಾಕಷ್ಟು ಹಿಂದೂ ಹೋರಾಟಗಾರರ ಕೊಲೆಗಳಿಗೆ ರಾಜ್ಯದ ಜನತೆ ತಕ್ಕ ಪಾಠವನ್ನು ಕಲಿಸಿದ್ದರು. ಕಳೆದ ಎರಡು ವರ್ಷಗಳಿಂದ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು, ಜಿಹಾದಿ ಮುಸ್ಲಿಂ ಯುವಕರನ್ನು ಬಳಸಿಕೊಂಡು, ಕೊಲೆಗಳು ನಡೆಯುತ್ತಿದ್ದು, ನಾವು ಕರ್ನಾಟಕ ರಾಜ್ಯದಲ್ಲಿ ಇದ್ದೇವಾ, ಇಲ್ಲ ಪಾಕಿಸ್ತಾನ ದೇಶದಲ್ಲಿ ಇದ್ದೇವೆ ಎಂದು ತಿಳಿಯುತ್ತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ನಗರದ ಡೂಂಲೈಟ್ ವೃತ್ತದಲ್ಲಿ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕೋಲಾರ ಜಿಲ್ಲಾ ಬಿಜೆಪಿ ವತಿಯಿಂದ ಮಾನವ ಸರಪಳಿ ನಿರ್ಮಿಸಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ನಂತರ ಮಾತಮಾಡಿದರು, ರಾಜ್ಯದಲ್ಲಿ ಬೆಳ ಗಾದರೆ, ಹಿಂದೂ ಯುವಕರ ಕೊಲೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸರ್ವೇ ಸಾಮಾನ್ಯವಾಗಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಬೆನ್ನಲ್ಲೇ ಮೂವರಿಗೆ ಚಾಕು ಇರಿತ
ಜಿಹಾದಿ ಕಾಂಗ್ರೆಸ್ ಸರಕಾರದಲ್ಲಿ ಸಾಮಾನ್ಯ ಜನರಿಗೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಯಾವುದೇ ರಕ್ಷಣೆ ಇಲ್ಲವಾಗಿದ್ದು, ಎಷ್ಟೇ ಕೊಲೆ ಗಳು ಆದರೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಸ್ಲಿಂಮರನ್ನು ಓಲೈಕೆ ಮಾಡಿಕೊಂಡು, ಅಸ್ತ್ರ ನೀಡಿ ಹಿಂದೂಗಳ ಕೊಲೆಗಳನ್ನು ಮಾಡಿಸುತ್ತಿದ್ದಾರೆ ಎಂದು ಹೇಳಿದರು.