ರಾಯಚೂರು: ರಾಯಚೂರು ತಾಲೂಕಿನ ಗೋನಾಳ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ರೈತರ ಹೊಲಗಳಿಗೆ ಭೇಟಿ ನೀಡಿ ಬರಗಾಲ ಬೆಳೆ ಸಮೀಕ್ಷೆ ನಡೆಸಿದರು. ರಾಯಚೂರು ತಾಲ್ಲೂಕು ಸೇರಿದಂತೆ ಜಿಲ್ಲೆಯ ಬೆಳೆ ನಾಶದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ರೈತರ ಹೊಲದಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ಇನ್ನೂ ಹತ್ತಿ, ತೊಗೆರಿ ಮತ್ತು ಜೋಳ ಬೆಳೆ ವೀಕ್ಷಣೆ ಮಾಡಿದ ಸಚಿವರು..
Video Player
00:00
00:00
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಪಟ್ಟಾಭಿಷೇಕ ಹಿನ್ನೆಲೆ ಅದರ ಬಗ್ಗೆ ಪ್ರತಿಕ್ತಿಯೇ ನೀಡಿದರು. ಅದನ್ನ ತಗೊಂಡು ಏನ್ ಮಾಡೋದು, ಯಾವ ವಿಜೇಂದ್ರ ನನಗೆ ಗೊತ್ತಿಲ್ಲ. ನಾನು ಬರ ವೀಕ್ಷಣೆ ಮಾಡೋದಿಕ್ಕೆ ಬಂದಿದ್ದೇನೆ. ಆದ್ದರಿಂದ ಯಾವ ವಿಜೇಂದ್ರ ನನಗೆ ಗೊತ್ತಿಲ್ಲ, ಮುಂದೆ ನೋಡೋಣ ಅದು ಎಲೆಕ್ಷನ್ ಬಂದಾಗ ಮಾತಾಡೋಣ ಎಂದು ರಾಯಚೂರಿನಲ್ಲಿ ಸಚಿವ ಶರಣಪ್ರಕಾರ ಪಾಟೀಲ್ ಹೇಳಿದರು.
Video Player
00:00
00:00