ವಿಜಯಪುರ: ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಮೇಲೆ ತಮ್ಮನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಬಗ್ಗೆ ಮಾತನಾಡಿದ್ದಾರೆ.
ವಿಜಯೇಂದ್ರ ಒಬ್ಬ ಮಹಾ ಭ್ರಷ್ಟ. ಇವನನ್ನು ನಮ್ಮ ಮೇಲೆ ಏಕೆ ಹೇರುತ್ತಿರಿ? ಇವನಿಂದಾಗಿ ಬಿಎಸ್ವೈ ಜೈಲಿಗೆ ಹೋಗಬೇಕಾಯಿತು. ನಕಲಿ ಸಹಿ ಮಾಡಿದ ಆರೋಪ ವಿಜಯೇಂದ್ರ ಮೇಲೆ ಇದೆ. 40% ಸೇರಿದಂತೆ ಸಾಕಷ್ಟು ಹಗರಣಗಳಲ್ಲಿ ವಿಜಯೇಂದ್ರ ಹೆಸರಿದೆ.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ಹೀಗೆ ಹಗರಣ ಮಾಡಿರುವ ಒಂದು ಕುಟುಂಬವನ್ನ ಪಕ್ಷದಲ್ಲಿ ಮುಂದುವರೆಸುದಾದರೆ ಹಿಂದುತ್ವವಾದಿಗಳು ಹಿಂದೂ ಜನತೆ ಒಂದು ನಿರ್ಣಯ ಕೈಗೊಳ್ಳಬೇಕಾಗುತ್ತೆ. ಆ ಬಗ್ಗೆ ಇಂದಿನಿಂದಲೇ ಆ ಬಗ್ಗೆ ಜಾಗೃತಿ ಮೂಡಿಸಲು ಆರಂಭಿಸುತ್ತೇವೆ ಎಂದು ಹೇಳಿದರು.
ಜನರ ಅಭಿಪ್ರಾಯ ಸಂಗ್ರಹಿಸಿ ಒಂದು ಹಿಂದೂ ಪಕ್ಷ ಆಸ್ತಿತ್ವ ತರಬೇಕಾಗುತ್ತೆ. ಬಹಳಷ್ಟು ಜನರು ಬಿಜೆಪಿಯಿಂದ ಹಿಂದೂ ರಕ್ಷಣೆ ಮಾಡುತ್ತಿಲ್ಲವೆಂದು ಆಳಲು ತೋಡಿಕೊಂಡಿದ್ದಾರೆ. ಹಲವು ಹಿಂದೂ ಕಾರ್ಯಕರ್ತರು ಸಾವನಪ್ಪಿದ್ದರು ಎನ್ಕೌಂಟರ್ ಮಾಡುವಂತಹ ದಿಟ್ಟ ಕ್ರಮ ಕೈಗೊಂಡಿಲ್ಲ. ಇವರ ಕುಟುಂಬ ಹೊಂದಾಣಿಕೆ ರಾಜಕೀಯ ಮಾಡಿ ಪಕ್ಷವನ್ನ ದುರ್ಬಲ ಮಾಡಿದ್ದಾರೆ.
ಹಿಂದೂಗಳ ರಕ್ಷಣೆ, ದೇಶಕ್ಕಾಗಿ ಹಿಂದೂ ಪಕ್ಷ ಆಸ್ವಿತ್ವ ತರಬೇಕಾಗಿದೆ. ನಾವು, ಬಿಜೆಪಿ-ಪ್ರಧಾನಿ ನರೇಂದ್ರ ಮೋದಿ ವಿರೋಧಿಗಳಲ್ಲ. ಆದ್ರೆ ಇದೇ ಕಟುಂಬದ ಮೇಲೆ ವರಿಷ್ಟರು ನಿರ್ಭಲವಾದರೆ ನಮ್ಮ ದಾರಿ ನಾವು ಕಂಡುಕೊಳ್ಳಬೇಕಾಗುತ್ತೆ.
ಹಿಂದೂ ಪಕ್ಷ ಕಟ್ಟುವ ಬಗ್ಗೆ ಬೀದರ್ ನಿಂದ ಹಿಡಿದು ಚಾಮರಾಜವರೆಗೂ ಒತ್ತಾಯಿಸಿದ್ದಾರೆ. ಹೊಸ ಪಕ್ಷದ ಬಗ್ಗೆ ನಾವು ಜನಾಭಿಪ್ರಾಯ ಸಂಗ್ರಹಿಸುತ್ತೇವೆ. ಒಂದು ವೇಳೆ ಹೊಸ ಪಕ್ಷದ ಪರವಾಗಿ ಅಭಿಪ್ರಾಯ ಬಂದ್ರೆ ಖಂಡಿತ ನಾವು ಹೊಸ ಪಕ್ಷವನ್ನ ವಿಜಯದಶಮಿ ವೇಳೆಗೆ ರಚನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.