ಗದಗ:- ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಾಜಿ ಪ್ರೇಮಿ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಮರ್ಯಾದೆಗೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ. ಸಾಯಿರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಕೊಹ್ಲಿ ಕಿರಿಕ್ ಮಾಡಿದ್ರೂ, ದೊಡ್ಡತನ ಮೆರೆದ ಶ್ರೇಯಸ್: ವಿರಾಟ್ ಬಗ್ಗೆ ಹೇಳಿದ್ದೇನು?
ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೇ 8ರಂದು ಸಾಯಿರಾಬಾನು ನದಾಫ್ ಮದುವೆ ನಿಗದಿಯಾಗಿತ್ತು. ಹಾಗಾಗಿ ಇತ್ತ ಮನೆಯಲ್ಲಿ ಅದ್ಧೂರಿ ಮದುವೆಗೆ ಭರ್ಜರಿ ತಯಾರಿ ಕೂಡ ನಡೆದಿತ್ತು. ಸಾಯಿರಾಬಾನು ಖುಷಿಯಿಂದಲೇ ತಾಳಿ, ಬಟ್ಟೆ ಎಲ್ಲವನ್ನು ಖರಿಸಿದ್ದರು. ಇಂದು ಪೋಷಕರು ಮದುವೆ ವಸ್ತುಗಳ ಖರೀದಿಗೆ ಹೋದಾಗ ಸಾಯಿರಾಬಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಬಾಗಿಲು ತೆರೆದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮಗಳ ಸ್ಥಿತಿ ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಮದುವೆ ಸಂಭ್ರಮದಲ್ಲಿ ಇದ್ದ ಮನೆಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ
ಐದು ವರ್ಷಗಳ ಹಿಂದೆ ಮೈಲಾರಿ ಜೊತೆ ಸಾಯಿರಾಬಾನು ನದಾಫ್ ಲವ್ ಬ್ರೇಕಪ್ ಆಗಿತ್ತು. ನಿನಗೆ ತೊಂದರೆ ಕೊಡಲ್ಲ ಅಂತ ಮಾಜಿ ಪ್ರೇಮಿ ಬರ್ತಡೇ ಆಚರಿಸಿದ್ದ. ಆದರೆ ಐದು ವರ್ಷಗಳ ಬಳಕ ಮತ್ತೆ ಎಂಟ್ರಿಕೊಟ್ಟ ಪಾಗಲ್ ಪ್ರೇಮಿ, ಬಳಿಕ ವಿಡಿಯೋ, ಫೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಹೀಗಾಗಿ ಮರ್ಯಾದೆಗೆ ಹೆದರಿ ಸಾಯಿರಾಬಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.