ಬೆಂಗಳೂರು:- ಕೆಆರ್ ಪುರದ ಹಳೆ ಪೊಲೀಸ್ ಠಾಣೆ ರಸ್ತೆಯಲ್ಲಿ ಹೆಚ್.ಎಂ.ಸಿ ಗ್ರೂಪ್ನ ಫೈರೋಜ್ ಅವರ ನೇತೃತ್ವದಲ್ಲಿ ಹಾಗೂ ಸ್ವಾತಿ ಮಹಿಳಾ ಸಂಘ ಮತ್ತು ನೇತಾಜಿ ಸ್ವಯಂಪ್ರೇರಿತ ನಿಧಿ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು.
ಇನ್ನು ಮುಂದೆ ಸಾರಿಗೆ ಇಲಾಖೆ ಮಾದರಿಯಲ್ಲಿ ಕುಡಿಯುವ ನೀರಿನ ದರ ಪರಿಷ್ಕರಣೆ; ಡಿ.ಕೆ. ಶಿವಕುಮಾರ್!
200ಕ್ಕೂ ಅಧಿಕ ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆ ಪ್ರಯೋಜನ ಪಡೆದುಕೊಂಡರು.
ಬಳಿಕ ಮಾತನಾಡಿದ ಸ್ವಾತಿ ಮಹಿಳಾ ಸಂಘದ ವ್ಯವಸ್ಥಾಪಕ ಮಲ್ಲೇಶ್ ಅವರು ನಗರದ ಹಲವೆಡೆ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರ ಇದರ ಸದುಪಯೋಗ ಪಡಿಸಿಕೊಂಡು ಆರೋಗ್ಯವಂತರಾಗಿ ಬದುಕಲು ಸಲಹೆ ನೀಡಿದರು. ಅಷ್ಟೇ ಅಲ್ಲದೆ ಇಂದು ಮೂವತ್ತಕ್ಕೂ ಅಧಿಕ ಜನರು ರಕ್ತದಾನ ಮಾಡಿದ್ದಾರೆ.
ಈ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಶುಗರ್, ಬಿಪಿ, ಸೇರಿದಂತೆ ಅನೇಕ ಬಗೆಯ ರೋಗಗಳಿಗೆ ತಪಾಸಣೆ ನಡೆಸಲಾಗಿದೆ ಎಂದು ಹೆಚ್.ಎಂ.ಸಿ. ಗ್ರೂಪ್ನ ಫೈರೋಜ್ ಅವರ ಕಾರ್ಯವನ್ನು ಶ್ಲಾಘಿಸಿದರು.