ಬೆಂಗಳೂರು:- ಹೆಬ್ಬಾಳದ ರಿಂಗ್ ರಸ್ತೆಯಲ್ಲಿರುವ ಕಲ್ಯಾಣ ನಗರದ ಬಳಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಜರುಗಿದೆ.
ಆಲಮಟ್ಟಿ ಜಲಾಶಯ ಎತ್ತರಕ್ಕೆ ‘ಮಹಾ’ ಕ್ಯಾತೆ: ವಿಜಯಪುರ ರೈತರ ಪ್ರತಿತಂತ್ರ: ಹೋರಾಟಕ್ಕೆ ವೇದಿಕೆ ಸಿದ್ದ!
ಮೊಹಮ್ಮದ್ ಜಮೀರ್ ಮೃತ ವ್ಯಕ್ತಿ. ಸ್ಕೂಟರ್ನಲ್ಲಿ ಪತ್ನಿ, ಇಬ್ಬರು ಮಕ್ಕಳು ತೆರಳುತ್ತಿದ್ದಾಗ ಬಿಎಂಟಿಸಿ ಬಸ್ಸು ಡಿಕ್ಕಿ ಹೊಡೆದಿದೆ.
ಪತ್ನಿ , ಮಕ್ಕಳಿಗೆ ಚಿಕ್ಕಪುಟ್ಟ ಗಾಯ, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.