ಹುಬ್ಬಳ್ಳಿ: ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿವೆ. ಕಳೆದ ತಿಂಗಳು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಸಂದೇಶ ಬಂದಿತ್ತು. ಇದರ ಬೆನ್ನಲ್ಲೇ ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬೆದರಿಕೆ ಸಂದೇಶ ಬಂದಿದ್ದು,
ಮುಂಜಾಗ್ರತಾ ಕ್ರಮವಾಗಿ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಪ್ರವೇಶಿಸುವ ಪ್ರಯಾಣಿಕರ ತಪಾಸಣೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?
ಬಾಂಬ್ ನಿಷ್ಕ್ರಿಯಗೊಳಿಸುವ ದಳ , ಶ್ವಾನ ದಳ, ಆಂತರಿಕ ಭದ್ರತಾ ಸಿಬ್ಬಂದಿ, ಗುಪ್ತಚರ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರನ್ನು ಒಳಗೊಂಡಂತೆ ವಿವಿಧ ತಂಡಗಳು ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ಸಂಪೂರ್ಣ ತಪಾಸಣೆ ನಡೆಸಿವೆ.
ಪ್ರಯಾಣಿಕರ ಸುರಕ್ಷತೆಯನ್ನು ಖಾತರಿಪಡಿಸಲು ಪ್ರವೇಶ ದ್ವಾರಗಳಲ್ಲಿ ತೀವ್ರ ತಪಾಸಣೆಯನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರ ಓಡಾಟವನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಬಾಂಬ್ ತಪಾಸಣಾ ದಳವು ವಿಮಾನ ನಿಲ್ದಾಣದ ಎಲ್ಲಾ ಪ್ರದೇಶಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದೆಯಾದರೂ, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಬೆದರಿಕೆಯನ್ನು ತಾತ್ಕಾಲಿಕವಾಗಿ ಕಿಡಿಗೇಡಿಗಳ ಕೃತ್ಯ ಎಂದು ಗುರುತಿಸಲಾಗಿದೆ.