ಉತ್ತರ ಕರ್ನಾಟಕ ಭಾಗ ಸೇರಿದಂತೆ ಈ ಭಾಗದಲ್ಲಿ ನಿರುದ್ಯೋಗ ಯುವಕ ಹಾಗೂ ಯುವತಿರಿಗೆ ಉದ್ಯೋಗ ಸೃಷ್ಟಿಸುವ ಹೊಸ ಹೊಸ ಕೋರ್ಸ್ ಪರಿಚಯಿಸುವ ನಿಟ್ಟಿನಲ್ಲಿ ಬೋಸ್ಟನ್ಇನ್ಸ್ಟಿಟ್ಯೂಟ್ ಆಫ್ ಅನಾಲಿಟಿಕ್ಸ್, ವಿದ್ಯಾನಗರದಲ್ಲಿ ತನ್ನ ಫ್ರಾಂಚೈಸ್ ಕ್ಯಾಂಪಸ್ ಅನ್ನು ತೆರೆಯುತ್ತಿದ್ದೇವೆ ಎಂದು ಸಂಸ್ಥೆಯ ನಿರ್ದೇಶಕರಾದ ಶ್ರೀನಿವಾಸ ಪ್ರಕಾಶ ಕ್ಯಾರಕಟ್ಟಿ ಹೇಳಿದರು.
ನಿಮ್ಮ ಮನೆಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಹೀಗೆ ಮಾಡಿ!
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡೇಟಾ ಸೈನ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಜನರೇಟಿವ್ ಎಐ (Al) ಮತ್ತು ಏಜೆಂಟ್ Al ಅಭಿವೃದ್ಧಿ ಸೈಬರ್ ಸೆಕ್ಯುರಿಟಿ ಮತ್ತು ಎಥಿಕಲ್ ಹ್ಯಾಕಿಂಗ್, ಕ್ಲೌಡ್ ಕಂಪ್ಯೂಟಿಂಗ್ ಮತ್ತು ಡೆವೊಪ್ಸ್ ಮತ್ತು ಇನ್ನೂ ಹೆಚ್ಚಿನವುಗಳಲ್ಲಿ ವಿಶ್ವ ದರ್ಜೆಯ ತರಬೇತಿಯನ್ನ ಆನ್ ಲೈನ್ ಹಾಗೂ ಆಪ್ ಲೈನ್ ವ್ಯವಸ್ಥೆಯಲ್ಲಿ ನೀಡಲಾಗುವುದು.
ಬಿಐಎಯ ಫ್ರಾಂಚೈಸ್ ಕ್ಯಾಂಪಸ್ ಆಗಿರುವ ಈ ಹೊಸ ಕೇಂದ್ರವು ಸಂಸ್ಥೆಯ ಅಂತರರಾಷ್ಟ್ರೀಯ ಶೈಕ್ಷಣಿಕ ಮಾನದಂಡಗಳ ಜೊತೆಗೆ ವಿದ್ಯಾರ್ಥಿಗಳ ವ್ಯತ್ತಿ ಬದುಕಿಗೆ ಅನುಕೂಲ ಆಗಲು ಇಲ್ಲಿ ಶಿಕ್ಷಣವನ್ನು ನೀಡಲಾಗುತ್ತದೆ. ಡಿಪ್ಲೊಮಾ ಮತ್ತು ಮಾಸ್ಟರ್ ಡಿಪ್ಲೊಮಾ ಕೋರ್ಸ್ಗಳು ಸೇರಿದಂತೆ ಬಿಐಎಯ ಡ್ಯುಯಲ್ ಪ್ರಮಾಣೀಕರಣ ಕಾರ್ಯ ಕ್ರಮಗಳು ಕಲಿಯುವವರಿಗೆ ಉದ್ಯೋಗ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕವಾಗಿ ಎದುರಿಸಲು ಇದು ಸಹಕಾರಿಯಾಗುತ್ತದೆ ಎಂದ ಅವರು
ಇದೇ ಜೂನ್ 15 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಕ್ಯಾಂಪಸ್ ಉದ್ಘಾಟನೆ ಮಾಡಲಿದ್ದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ, ನಿವೃತ್ತ ಡಿಸಿಪಿ ಬಸವರಾಜ ಮಾಲಗತ್ತಿ, ಆಗಮಿಸಲಿದ್ದು ಸಾನ್ನಿಧ್ಯವನ್ನ ಮೂರುಸಾವಿರ ಮಠದ ಶ್ರೀ ಗುರುಸಿದ್ಧರಾಜಯೋಂದ್ರ ಮಹಾಸ್ವಾಮಿಗಳು ವಹಿಸುವರು ಎಂದರು.