ಮೈಸೂರು: ದೇವಸ್ಥಾನದಲ್ಲಿ ಪ್ಲಾಸ್ಟಿಕ್ ಸಮೇತ ಬಿಸಾಡಿದ್ದ ಪ್ರಸಾದ ತಿಂದು ಹೋರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ದೇವಸ್ಥಾನದಲ್ಲಿ ಹರಕೆಯ ಹೋರಿಯು ಸಾವನ್ನಪ್ಪಿದ್ದು, ಗ್ರಾಮಸ್ಥರು, ಕಪಿಲಾ ನದಿ ತೀರದಲ್ಲಿ ಹೋರಿಯ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.
ವೈದ್ಯರ ನಿರ್ಲಕ್ಷಕ್ಕೆ ಮೂರು ತಿಂಗಳ ಹಸುಗೂಸು ಸಾವು ; ಸರ್ಕಾರಿ ವೈದ್ಯರ ವಿರುದ್ಧ ದೂರು
ʻನಂಜುಂಡಪ್ಪನ ಗೂಳಿʼ ಅಂತಲೇ ಪ್ರಸಿದ್ಧಯಾಗಿದ್ದ ಹೋರಿಯು ಪ್ರತಿ ನಿತ್ಯ ಅಂಗಡಿ ಮನೆಗಳಿಗೆ ತೆರಳುತ್ತಿತ್ತು. ಇಲ್ಲಿನ ಜನರು ಪ್ರತಿದಿನ ನಂಜುಂಡಪ್ಪನ ಗೂಳಿಗೆ ಹಣ್ಣು, ಬೆಲ್ಲ, ಕಲಗಚ್ಚು, ನೀರು, ತರಕಾರಿ ನೀಡುತ್ತಿದ್ದರು. ಆದರೆ ಇದೀಗ ಈ ಹೋರಿ ಪ್ಲಾಸ್ಟಿಕ್ ಸಮೇತ ಬಿದಿದ್ದ ಪ್ರಸಾದ ತಿಂದು ಸಾವನ್ನಪ್ಪಿದ್ದು, ಘಟನೆಯಿಂದ ಮರುಗಿದ ಸುತ್ತಮುತ್ತಲ ಜನರು, ಪ್ರವಾಸಿಗರು, ಭಕ್ತರು ಹೆಚ್ಚಾಗಿ ಪ್ಲಾಸ್ಟಿಕ್ ಬಳಸದಂತೆ ಮನವಿ ಮಾಡಿದ್ದಾರೆ.