ಚೆಟ್ಟಳ್ಳಿ: ರೈತರು ಬೆಳೆದ ವಿವಿಧ ಬಗೆಯ ಬೆಣ್ಣೆಹಣ್ಣುಗಳು ಹಾಗು ವಿವಿಧ ರೀತಿಯ ಖಾದ್ಯಗಳ ಪ್ರದರ್ಶನವು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಅಯೋಜಿಸಿದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕ್ರಷಿಕರ ಗಮನ ಸೆಳೆದವು.
ಮಂಗಳವಾರ ಸಂಜೆ ಹೀಗೆ ಮಾಡಿದ್ರೆ ಕಷ್ಟಗಳೆಲ್ಲಾ ಕ್ಷಣಾರ್ಧದಲ್ಲಿ ಮಾಯವಾಗತ್ತೆ!
ವಿದೇಶಿ ಹಣ್ಣಿನ ತಳಿಗಳಾದ ಫೀರೈಟೆ,ಪಿಂಕ್ ಕರ್ಟನ್, ಕ್ಯಾರ್ಮೆನ್ ಹ್ಯಾಸ್,ಡಿಗಾನಿಯಾ, ದೇಶೀಯ 78 ವಿಧದ ಹಣ್ಣುಗಳು ಹಾಗು ಕೇಂದ್ರದ ಸಂಶೋದಿತ ತಳಿಗಳಾದ ಅರ್ಕಾ ಸುಪ್ರೀಮ್,ಅರ್ಕಾ ಕೂರ್ಗ್ ರವಿ ಹಾಗು ಟಿಕೆಡಿ ಪ್ರದರ್ಶನಗೊಂಡರೆ ಮಹಿಳೆಯರು ತಯಾರಿಸಿದ ಬೆಣ್ಣೆ ಹಣ್ಣಿನ ಸೂಫ್ಲೆ, ಕೇಕ್, ಇಡ್ಲಿ,ಕಾಫಿ, ಸ್ಯಾಂಡ್ವಿಚ್, ಚಟ್ನಿ, ಬ್ರೆಡ್ ಸ್ಪೆಡ್,ಸ್ಟಾಟರ್ ಹೀಗೆ ಹಲವು ಬಗೆಯ ಖಾದ್ಯಗಳು ಪ್ರದರ್ಶನಗೊಂಡವು. ಪೊನ್ನಂಪೇಟೆಯ ಸಿಇಟಿ ಕಾಲೇಜಿನ ನಿರ್ದೇಶಕರು ಹಾಗು ಪ್ರಗತಿಪರ ಬೆಳೆಗಾರರಾದ ಕುಪ್ಪಂಡ ಎ.ಚಿಣ್ಣಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೊಡಗಿನವರು ಕಾಫಿ ಹಾಗು ಕರಿಮೆಣಸು ಬೆಳೆಯನ್ನು ಆದಾಯದ ಮೂಲವಾಗಿ ರೂಪಿಸಿ ಕೊಂಡಿದ್ದರೂ ಆದರೆ ಕೊಡಗಿನ ಕಿತ್ತಳೆಗೆ ಹೆಚ್ಚಿನ ಒತ್ತುನೀಡಿ ದಿದ್ದರೆ ಕಿತ್ತಳೆಬೆಳೆಯನ್ನು ಅಭಿವ್ರದ್ದಿಪಡಿಸ ಬಹುದಿತೆಂದರು.
ಇಂತಹ ವೈವಿದ್ಯತಾ ಮೇಳಗಳು ಕೃಷಿಕರಿಗೆ ಪ್ರಯೋಜನ ಕಾರಿಯಾಗಲಿದೆಂದರು.