ನವದೆಹಲಿ: ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 274 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ.
ಗುರುವಾರ ಮಧ್ಯಾಹ್ನ ಅಹಮದಾಬಾದ್ನಿಂದ ಲಂಡನ್ನ ಗ್ಯಾಟ್ವಿಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಾನಿ ನಗರದಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನವಾಗಿ ಘನಘೋರ ದುರಂತ ಸಂಭವಿಸಿತ್ತು. ವಿಮಾನದಲ್ಲಿದ್ದ ಏಕೈಕ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದರು.
#WATCH | #AirIndiaPlaneCrash | Maharashtra: Father of Captain Sumeet Sabharwal, Pushkaraj pays emotional tribute to his son outside their residence in Powai, Mumbai.
Captain Sabharwal was flying the ill-fated London-bound Air India flight that crashed soon after take off in… pic.twitter.com/NStRiMM6BY
— ANI (@ANI) June 17, 2025
ಇನ್ನೂ ಏರ್ ಇಂಡಿಯಾ ವಿಮಾನದ ಪೈಲಟ್ ಆಗಿದ್ದ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ ಅಂತ್ಯಕ್ರಿಯೆ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಜರುಗಿತು. ಮುಂಬೈನ ಪೊವಾಯಿಯ ಜಲ ವಾಯು ವಿಹಾರ್ನಲ್ಲಿರುವ ಮನೆಗೆ ಸುಮೀತ್ ಸಭರ್ವಾಲ್ ಅವರ ಮೃತದೇಹ ತಲುಪುತ್ತಿದ್ದಂತೇ, ತಂದೆ ಪುಷ್ಕರಾಜ್ ಸಭರ್ವಾಲ್ ಅವರ ದುಃಖದ ಕಟ್ಟೆ ಒಡೆಯಿತು. ಮಗನ ಪಾರ್ಥಿವ ಶರೀರದ ಮುಂದೆ ಕಣ್ಣೀರುಡುತ್ತಿದ್ದ ತಂದೆ, ಕೈಮುಗಿದು ಅಂತಿಮ ನಮನ ಸಲ್ಲಿಸಿದರು.
ಡಿಎನ್ಎ ಪರೀಕ್ಷೆಯ ಮೂಲಕ ಸುಮೀತ್ ಸಭರ್ವಾಲ್ ಅವರ ಗುರುತು ದೃಢಪಟ್ಟ ನಂತರ, ವಿಮಾನದ ಮೂಲಕ ಅವರ ಮೃತದೇಹವನ್ನು ಮುಂಬೈಗೆ ತರಲಾಯಿತು. ಅಲ್ಲಿಂದ ಶವವನ್ನು ಹೊತ್ತಿದ್ದ ಶವಪೆಟ್ಟಿಗೆಯನ್ನು ಪೊವಾಯಿಗೆ ಕೊಂಡೊಯ್ಯಲಾಯಿತು.
ಪುತ್ರನ ಮೃತದೇಹ ಇರಿಸಿದ ಶವ ಪೆಟ್ಟಿಗೆಯನ್ನು ಪದೇ ಪದೇ ಮುಟ್ಟಿ ಪ್ರೀತಿ ತೋರುತ್ತಿದ್ದ ತಂದೆ ಪುಷ್ಕರಾಜ್ ಸಭರ್ವಾಲ್, ಮಗ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಸಿದ್ಧರಿರಲಿಲ್ಲ. ಈ ವೇಳೆ ಸಂಬಂಧಿಕರು ಪುಷ್ಕರಾಜ್ ಸಭರ್ವಾಲ್ ಅವರನ್ನು ಸಂತೈಸಿದ್ದಾರೆ.