ಬೆಳಗಾವಿ : ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದ ಆರೋಪಿ ಬಂಧನ ವಿಚಾರವಾಗಿ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ನಿದ್ದೆಗಣ್ಣಲ್ಲಿ ಇದ್ದೆ ಬಂದು ಅಪಘಾತ ಮಾಡಿದ್ದಾರೆ. ಮೂರು ತಿಂಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬೆಳಗಾವಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ನನಗೆ ಆರೋಪಿಯನ್ನು ಹಿಡಿಯುತ್ತಾರೆ ಅಂತ ಅನಿಸರಲಿಲ್ಲ. ಕಲರ್ ಮ್ಯಾಚ್ ಮಾಡಲು ಎಫ್ ಎಸ್ ಎಲ್ ಮೊರೆ ಸಹ ಹೋಗಿದರು. ಹಿಟ್ ಅಂಡ್ ರನ್ ಕೇಸ್ ಬಹುತೇಕ ಪತ್ತೆ ಆಗಲ್ಲ. ಅಪಘಾದ ಬಗ್ಗೆ ನನಗೆ ಯಾವುದೇ ಅನುಮಾನ ಇಲ್ಲ ಎಂದರು.
ಜಾತಿಗಣತಿ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಜಾತಿ ಗಣತಿ ಬಗ್ಗೆ ಚರ್ಚೆ ಆಗಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಿದೆ. ಸಂಪುಟದಲ್ಲಿ ಯಾರು ವಿರೋಧ ಮಾಡಿಲ್ಲ. ಚರ್ಚೆಯ ಅಪೂರ್ಣವಾಗಿದೆ. ನಾನು ಸಂಪುಟದಲ್ಲಿ ಪೂರ್ಣ ಪ್ರಮಾಣ ಚರ್ಚೆ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಇನ್ನು ಶಿವಾನಂದ ಪಾಟೀಲ್ ಹಾಗೂ ಎಂ ಬಿಪಿ ನಡುವೆ ವಾದ ವಿವಾದ ನಡೆದಿಲ್ಲ. ಮುಸ್ಲಿಂ ಸಮುದಾಯ ಹೆಚ್ಚಿನ ಸಂಖ್ಯೆಯ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಯಾವುದೇ ಸಮಾಜಕ್ಕೆ ಹಾನಿಯಾಗಬಾರದು ಎಂಬ ರೀತಿಯಲ್ಲಿ ತೀರ್ಮಾನ ತೆಗೆದುಕೊಂಡು, ಎಲ್ಲರಿಗೂ ನ್ಯಾಯ ಕೊಡಿಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.