ಬೈಕ್ ಗೆ ಕಾರು ಡಿಕ್ಕಿ: ಸವಾರ ದುರ್ಮರಣ!
ಚಾಮರಾಜನಗರ:- ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಸಮೀಪ ಜರುಗಿದೆ. ಚಿತ್ರದುರ್ಗ: ಕುರಿ ಮೈ ತೊಳೆಯಲು ಹೋಗಿ ದಂಪತಿ ಸಾವು! ಸಕಲೇಶಪುರ ಮೂಲದ ಜಗದೀಶ್ ಸಾವಿಗೀಡಾದ ದುರ್ದೈವಿ. ಕೇರಳ ಮೂಲದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆ ಪಟ್ಟಣದತ್ತ ತೆರಳುವಾಗ ದುರ್ಘಟನೆ ಸಂಭವಿಸಿದೆ. ತೆರಕಣಾಂಬಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Copy and paste this URL into your WordPress site to embed
Copy and paste this code into your site to embed