ಬೆಂಗಳೂರು:- ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕುಟುಂಬವೊಂದು ಕೂದಲೆಳೆ ಅಂತರದಲ್ಲಿ ಬಚಾವ್ ಆಗಿರುವ ಘಟನೆ ನಗರದ ಶಿವಾನಂದ ಸರ್ಕಲ್ ಬಳಿ ಬೆಳಗಿನ ಜಾವ 4:30 ರ ಸುಮಾರಿಗೆ ಜರುಗಿದೆ.
ನಿಮ್ಮ ಮನೆಯಲ್ಲೂ ಜಿರಳೆ ಕಾಟ ಜಾಸ್ತಿ ಆಗಿದ್ಯಾ!? ಡೋಂಟ್ ವರಿ, ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ!
ಇಬ್ಬರು ಮಕ್ಕಳು ಸೇರಿದಂತೆ ಯುಸೂಫ್ ಕುಟುಂಬದ 4 ಜನ ಭದ್ರಪ್ಪ ಲೇ ಔಟ್ ನಿಂದ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಕಡೆ ತೆರಳ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದೆ. KA 15 M 4280 ನೋಂದಣಿ ಸಂಖ್ಯೆಯ ಮಹೀಂದ್ರ ಕ್ಸೈಲೋ ಕಾರು ಇದಾಗಿದ್ದು, ಘಟನೆಯಲ್ಲಿ ನಾಲ್ವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರು ಡಿಕ್ಕಿ ಹೊಡೆದ ತೀವ್ರತೆಗೆ ಡಿವೈಡರ್ ಬ್ಲಾಕ್ ಪುಡಿಯಾಗಿ ಪಲ್ಟಿಯಾಗಿದೆ. ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಕಾರು ತಳ್ಳಿ ಪೊಲೀಸರು,ಸ್ಥಳೀಯರು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.