ಗದಗ : ಗದಗ ಹೊರವಲಯದಲ್ಲಿ ನಡುರಸ್ತೆಯಲ್ಲೇ ಕಾರೊಂದು ಧಗಧಗನೇ ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಬಚಾವ್ ಆಗಿದ್ದಾರೆ.
ಈರಣ್ಣ ಜಾಲಿಹಾಳ ಅವರು ತಮ್ಮ ಕುಟುಂಬದವರೊಂದಿಗೆ ಕಾರಿನಲ್ಲಿ ಗದಗನಿಂದ ಹನುಮಸಾಗರಕ್ಕೆ ಹೊರಟಿದ್ದರು. ಕಾರು ಚಲಿಸುತ್ತಿರುವ ವೇಳೆ ಇಂಜಿನ್ನಲ್ಲಿ ಸ್ವಲ್ಪ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಈರಣ್ಣ ಅವರ ಕುಟುಂಬ ತಕ್ಷಣವೇ ಕಾರಿನಿಂದ ಕೆಳಗಿಳಿದಿದೆ.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸಾವರ ಸಾವು: ಘಟನೆ ಖಂಡಿಸಿ ಪ್ರತಿಭಟನೆ
ಬಳಿಕ ಕಾರು ಏಕಾಏಕಿ ಹೊತ್ತು ಉರಿದಿದ್ದು, ಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.