ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಸೇರಿದಂತೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಗಾಳಿ-ಮಳೆ ಸಾಧ್ಯತೆ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಒಂದು ದಿನಕ್ಕೆ ಸೀಮಿತವಾಗಿ ರಜೆ ಘೋಷಿಸಲಾಗಿದೆ.
ಅಂಗನವಾಡಿಗೆ ಸಂಬಂಧಿಸಿದಂತೆ ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು ಟಿಹೆಚ್ಆರ್ ರೂಪದಲ್ಲಿ ಫಲಾನುಭವಿಗಳಿಗೆ ಮನೆಗೆ ವಿತರಿಸಲು ಕ್ರಮ ವಹಿಸುವುದು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. ದ್ವಿತೀಯ ಪಿಯು ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ