ಬೆಂಗಳೂರು:- ಜಾತಿ ಗಣತಿ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ನಾಳೆ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಮಹತ್ವದ ಸಭೆ ಕರೆದಿದ್ದು, ಅವರೊಂದಿಗೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಹೇಳಿದ್ದಾರೆ.
ನೀವು CET ಪರೀಕ್ಷೆ ಬರೆಯುತ್ತೀರಾ!? ಹಾಗಿದ್ರೆ ಡ್ರೆಸ್ ಕೋಡ್ ಹೀಗಿರಲಿ!
ಸದ್ಯ ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಟಾಪಟಿ ಭುಗಿಲೆದ್ದಿದೆ. ಜಾತಿಗಣತಿ ಅನ್ನೋ ಜೇನುಗೂಡಿಗೆ ಕಲ್ಲೊಡೆದಿರುವ ಸರ್ಕಾರ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿದ್ದು, ಪರ ವಿರೋಧ ಚರ್ಚೆ ಜೋರಾಗುತ್ತಿದೆ. ಹೀಗಿರುವಾಗಲೇ ಡಿಸಿಎಂನ ಈ ನಡೆ ಕುತೂಹಲ ಕೆರಳಿಸಿದೆ.
ಈ ಸಂಬಂಧ ಮಾತನಾಡಿದ ಡಿಕೆಶಿ, ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡಿ ಯಾರ ಮನಸ್ಸಿಗೂ ನೋವಾಗದಂತೆ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ ಎಂದಿದ್ದಾರೆ.
ಬೆಂಗಳೂರಿನ ಕುಮಾರ ಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಸರ್ಕಾರಿ ನಿವಾಸದಲ್ಲಿ ದಿನಾಂಕ ನಾಳೆ ಸಂಜೆ 6.00 ಗಂಟೆಗೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಸಭೆ ಕರೆಯಲಾಗಿದೆ.